Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮನೆಯೊಳಗೆ ಯಾವ ಪಕ್ಷಿ, ಪ್ರಾಣಿ ಬಂದರೆ ಅಪಶಕುನ..! ಇಲ್ಲಿದೆ ಮಾಹಿತಿ
ಮನೆಯಲ್ಲಿ ಹುಳು, ಕೀಟ, ಹಲ್ಲಿ, ಹಾವು ಬರುವುದು ಸಾಮನ್ಯವೇ. ಅದರಲ್ಲೂ ಮಳೆಗಾಲದಲ್ಲಂತು ಕೀಟಗಳು ಆಶ್ರಯ ಅರಸಿ ಮನೆಯೊಳಗೆ ಬಂದು ಬಿಡುತ್ತವೆ. ಹಾಗೆ ಹಿಂದೂ ಧರ್ಮದಲ್ಲಿ ಹಾಗೂ ವಾಸ್ತು ಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವೊಂದು ಪ್ರಾಣಿ, ಪಕ್ಷಗಳು, ಮನೆಯೊಳಗೆ ಬಂದರೆ ಅಪಶಕುನ ಎನ್ನಲಾಗಿದೆ.
ಪ್ರಾಣಿ, ಪಕ್ಷಿಗಳು ಮನೆಯೊಳಗೆ ಬರುವುದು ಈ ಶಾಸ್ತ್ರಗಳ ಪ್ರಕಾರ ಅಪಶಕುನಕ್ಕೆ ದಾರಿಯಾಗುತ್ತದೆ. ಅದರಲ್ಲೂ ಕೆಲವೊಮ್ಮೆ ಪ್ರಾಣಿ ಅಥವಾ ಪಕ್ಷಿ ಮನೆಯಲ್ಲಿ ಅಶಾಂತಿಗೆ ಕಾರಣವಾಗುತ್ತದೆ ಎಂದು ವಿವರಿಸಲಾಗಿದೆ. ಶಕುನಗಳು ಎಂದರೆ ಅಲ್ಲಿ ಕೆಟ್ಟ ಶಕುನ ಹಾಗೂ ಶುಭ ಶಕುನ ಎಂಬುದಿದೆ. ಕೆಲವೊಮ್ಮೆ ನಾವು ಎಲ್ಲಿಯಾದರು ಹೋಗುವಾಗ ಕೆಲವೊಂದು ಪ್ರಾಣಿ, ಪಕ್ಷಿ ಎದುರಾದರೆ ಆ ಕೆಲಸ ಶುಭವಾಗಲೂ ಬಹುದು ಹಾಗೆ ಅಶುಭವೂ ಆಗಬಹುದು.

ಹಾಗಾದ್ರೆ ನಾವಿಂದು ಯಾವ ಪಕ್ಷ ಅಥವಾ ಪ್ರಾಣಿ ಮನೆಯೊಳಗೆ ಬರಬಾರದು ಎಂಬುದನ್ನು ತಿಳಿದುಕೊಳ್ಳೋಣ.
ಕಾಗೆ
ಕಾಗೆಯನ್ನು ಶನಿದೇವರ ವಾಹನ ಎಂದು ನಾವು ಪರಿಗಣಿಸಿದ್ದೇವೆ. ಕಾಗೆ ಶುಭ ಹಾಗೂ ಅಶುಭ ಸೂಚಕವೂ ಹೌದು. ಪಿಂಡ ಪ್ರಧಾನ ಕಾರ್ಯದಲ್ಲಿ ಕಾಗೆ ಶುಭ ಸೂಚಕವಾಗಿಯೂ ಶುಭ ಕಾರ್ಯಗಳಲ್ಲಿ ಅದು ಅಶುಭವಾಗಿಯೂ ಕಾಣಿಸಿಕೊಳ್ಳಲಿದೆ. ಆದರೆ ಮನೆಯ ಮುಂದೆ ಕಾಗೆ ಪದೇ ಪದೇ ಕೂಗುತ್ತಿದ್ದರೆ ಮನೆಗೆ ಯಾರಾದರು ಅತಿಥಿಗಳು ಬರುತ್ತಾರೆ ಎಂದು ನಂಬಲಾಗುತ್ತದೆ.
ಆದರೆ ಕಾಗೆ ಮನೆಯೊಳಗೆ ಬಂದು ಬಿಟ್ಟರೆ ಅದು ಅಶುಭದ ಸಂಕೇತವಂತೆ. ಅಲ್ಲದೆ ಆರ್ಥಿಕ ಸಂಕಷ್ಟ ಕಾದಿದೆ ಎಂಬ ಸೂಚಕವಂತೆ. ಇನ್ನು ನಿಮ್ಮ ವಾಹನದ ಮೇಲೆ ಪದೇ ಪದೇ ಕಾಗೆ ಕೂರುತ್ತಿದ್ದರೆ ಅದೇ ವಾಹನ ನಿಮಗೆ ಕಂಟಕವಾಗಬಹುದು. ಅದರಿಂದ ಹಾನಿ ಇರಬಹುದು ಎಂದು ಅಂದಾಜಿಸಲಾಗಿದೆ.
ಜೇನು ಗೂಡು
ಸಾಮಾನ್ಯವಾಗಿ ಜನರಿಂದ ದೂರವೇ ಉಳಿಯುವ ಜೇನುಗಳು ಕೆಲವೊಮ್ಮೆ ಮನೆಯೊಳಗೆ ಇಲ್ಲವೆ ಮನೆಗೆ ಅಂಟಿಕೊಂಡಂತೆ ಗೂಡು ಕಟ್ಟುತ್ತವೆ. ಅದರಲ್ಲೂ ಜೇನು ಹುಳುಗಳು ಈಶಾನ್ಯ ದಿಕ್ಕಿನಲ್ಲಿ ಕಟ್ಟಿದ್ದರೆ ಒಳ್ಖೆಯ ಸೂಚಕ, ಆದರೆ ಆಗ್ನೇಯ ದಿಕ್ಕಿನಲ್ಲಿ ಜೇನು ಕಟ್ಟಿದರೆ ಕಲಹಕ್ಕೆ ಕಾರಣವಾಗುತ್ತದೆ. ಹಾಗೆ ಜೇನು ಮನೆಯೊಳಗೆ ಸಾಯುತ್ತಿದ್ದರೆ ಅದು ಮನೆ ಯಜಮಾನನ ಆರೋಗ್ಯಕ್ಕೆ ಹಾಣಿಯಾಗುವ ಮುನ್ಸೂಚನೆಯಂತೆ.
ಹಾವು
ಸಾಮಾನ್ಯವಾಗಿ ಹಳ್ಳಿಗಳಲ್ಲಿ ಹಾವುಗಳು ಮನೆಯೊಳಗೆ ಬರುವುದು ನೋಡಬಹುದು. ಪದೇ ಪದೇ ಮನೆಯೊಳಗೆ ಹಾವುಗಳು ಬರುತ್ತಿದ್ದರೆ ಸರ್ಪದೋಷ ಇದೆ ಎಂಬ ಮುನ್ಸೂಚನೆ. ಹಾವುಗಳು ಬೆಚ್ಚಗಿರುವ ಜಾಗ ಹುಡುಕುವುದರಿಂದ ಮನೆಯೊಳಗೆ ಬರುವುದು ಕಾಮನ್, ಆದರೆ ನಾಗರಹಾವುಗಳು ಪದೇ ಪದೇ ಮನೆಯೊಳಗೆ ಬರಬಾರದು. ಇದು ಕಾಲ ಸರ್ಪ ದೋಷದ ಮುನ್ಸೂಚನೆಯಾಗಿರುತ್ತದೆ.
ಬಾವಲಿ
ಬಾವಲಿಗಳು ರಾತ್ರಿ ಸಂಚಾರಿಗಳು, ಆದರೆ ಅವು ನಿಮ್ಮ ಮನೆಯೊಳಗೆ ಬಂದು ಸೇರಿಕೊಳ್ಳುವುದು ಮನೆಗೆ ಶ್ರೇಯಸ್ಸಲ್ಲ. ಮನೆಯ ಮೇಲೆ ಕೆಟ್ಟ ರೀತಿಯ ಪ್ರಯೋಗ ನಡೆದಿದ್ದರೆ ಮಾತ್ರವೆ ಈ ಬಾವಲಿಗಳು ಮನೆಯೊಳಗೆ ಉಳಿಯುತ್ತವೆ. ಹಾಗೆ ಕೆಲವೊಮ್ಮೆ ಸತ್ತು ಬೀಳಬಹುದು. ಇದು ಕೆಟ್ಟದರ ಮುನ್ಸೂಚನೆಯಾಗಿರಲಿದೆ.



Click it and Unblock the Notifications
