Latest Updates
-
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ!
ಮನೆ ದ್ವಾರದ ಮೇಲೆ ಈ ಸಂಖ್ಯೆ ಬರೆದು ನೋಡಿ..! ಅದೃಷ್ಟ ಹುಡುಕಿ ಬರಲಿದೆ!!
ಎಲ್ಲರ ಮನೆಯೂ ವಾಸ್ತು ಪ್ರಕಾರವಾಗಿ ಕಟ್ಟಲು ಮುಂದಾಗುತ್ತಾರೆ. ಅದ್ರಲ್ಲೂ ಹಿಂದೂ ಸಂಪ್ರದಾಯದಲ್ಲಿ ವಾಸ್ತು ಪ್ರಕಾರವಾಗಿ ಮನೆಯನ್ನ ಕಟ್ಟುವುದು ಆಚರಣೆಯಾಗಿ ಬಂದಿದೆ. ಆದರೆ ಮನೆಯ ಪ್ರತಿಯೊಂದು ಮೂಲೆಯಲ್ಲೂ ವಾಸ್ತು ಹುಡುಕಿ ಅದರ ದೋಷವಿದ್ದರೆ ನಿವಾರಣೆ ಮಾಡುವುದು, ವಾಸ್ತು ಸಂಕಲ್ಪ, ಯಂತ್ರ, ಹೀಗೆ ಹಲವು ರೀತಿ ವಾಸ್ತು ಪರಿಹಾರ ಮಾಡುವುದನ್ನು ನಾವು ನೋಡಿರುತ್ತೇವೆ.
ಇನ್ನು ಮನೆಯ ಒಂದೊಂದು ಭಾಗಕ್ಕೂ ಒಂದೊಂದು ವಾಸ್ತುವಿದೆ. ಯಾವ ಮೂಲೆಯಲ್ಲಿ ಏನಿಡಬೇಕು, ಏನಿಡಬಾರದು ಎಂಬುದು ಸಹ ವಾಸ್ತು ಶಾಸ್ತ್ರದಲ್ಲಿ ಉಲ್ಲೇಖವಿದೆ. ಇದಕ್ಕಾಗಿ ಮನೆಯಲ್ಲಿ ಯಾವೆಲ್ಲಾ ಬದಲಾವಣೆ ಮಾಡಬೇಕು, ವಾಸ್ತು ದೋಷ ಕಂಡುಬಂದರೆ ಏನು ಮಾಡಬೇಕು ಎಂಬುದನ್ನು ಸಹ ಹೇಳಲಾಗಿದೆ.

ಈಗ ನಾವು ಮನೆಯ ದ್ವಾರ ಬಾಗಿಲಿನ ಕೆಲವು ವಾಸ್ತು ನಿಯಮಗಳು ಏನು ಎಂಬುದನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡೋಣ. ಅದರಲ್ಲೂ ಮನೆಯಲ್ಲಿ ಆರ್ಥಕ ನಷ್ಟ, ಸಂಬಂಧದಲ್ಲಿ ಬಿರುಕು, ಅದೃಷ್ಟ ಇಲ್ಲದಿರುವುದು, ಸಾಲ ಸೇರಿದಂತೆ ಅಶಾಂತಿ ಇದ್ದರೆ, ಮನೆಯಲ್ಲಿ ನೆಮ್ಮದಿ ಇಲ್ಲ, ಅಶಾಂತಿ, ಯಾವ ಕೆಲಸವು ಪ್ರಗತಿಯಾಗದೆ ಇದ್ದರೆ ಈ ರೀತಿ ಮಾಡಿ ನೋಡಿ. ಜೊತೆಗೆ ಮನೆಯ ದ್ವಾರ ಬಾಗಿಲ ವಾಸ್ತು ಕಡೆಗೆ ನಾವು ಗಮನ ಹರಿಸಬೇಕಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯ ದ್ವಾರ ಬಾಗಿಲು ಈ ರೀತಿ ಇರಬೇಕಂತೆ,
ತೋರಣ ಮತ್ತು ಮನೆ ದೇವರ ಫೋಟೋ
ಕೆಲವರ ಮನೆಯಲ್ಲಿ ತೋರಣ ಕಟ್ಟು ಅಭ್ಯಾಸ ಇರುವುದಿಲ್ಲ, ಮತ್ತೆ ಕೆಲವರು ಪ್ಲಾಸ್ಟಿಕ್ ತೋರಣ ಕಟ್ಟುತ್ತಾರೆ. ಆದ್ರೆ ಇದೆರಡು ಉತ್ತಮವಲ್ಲ, ಮನೆಯ ದ್ವಾರ ಬಾಗಿಲಿಗೆ ಮಾವಿನ ತೋರಣ ಕಟ್ಟಬೇಕು. ಅದು ಒಣಗಿದರು ತೊಂದರೆ ಇಲ್ಲ. 11 ಅಥವಾ 13 ಎಲಗಳ ಬಳಸಿ ತೋರಣ ಕಟ್ಟಿದರೆ ಬಹಳ ಉತ್ತಮ. ಮನೆಗೆ ಧನಾತ್ಮಕ ಶಕ್ತಿ ಬರಲು ಈ ತೋರಣ ಕಾರಣವಾಗುತ್ತೆ. ಇದರ ಜೊತೆಗೆ ನಿಮ್ಮ ಮನೆದೇವರ ಚಿಕ್ಕದಾದ ಒಂದು ಫೋಟೋವನ್ನು ದ್ವಾರ ಬಾಗಿಲ ಮಧ್ಯದಲ್ಲಿ ಇಡಬೇಕು. ಮೇಲ್ಭಾಗದಲ್ಲಿ ಮೊಳೆ ಹೊಡೆದು ಅದಕ್ಕೆ ನೇತುಹಾಕಬೇಕು.
ಮನೆ ಹಿರಿಯರೊಬ್ಬರ ಜನ್ಮ ದಿನಾಂಕ ಬರೆಯುವುದು
ಮನೆಯ ದ್ವಾರದ ಮೇಲ್ಭಾಗದಲ್ಲಿ ಆ ಮನೆಯ ಹಿರಿಯರ ಹುಟ್ಟಿದ ದಿನಾಂಕ , ಅದ್ರಲ್ಲೂ ದಿನಾಂಕ, ತಿಂಗಳು, ವರ್ಷವನ್ನು ಕೂಡಿದಾಗ ಬರುವಂತಹ ಸಂಖ್ಯೆಯನ್ನು ಅಲ್ಲಿ ಬರೆಯಬೇಕು, ನಂತರ ನೀವು ಓಡಾಡುವಾಗ ಆ ಸಂಖ್ಯೆ ನೋಡುವುದು, ಅಥವಾ ನಮಸ್ಕರಿಸುವ ಕಾರ್ಯ ಮಾಡಬೇಕು. ಇದನ್ನು ಭಾಗ್ಯಾಂಕ ಎಂದು ಕರೆಯಲಾಗುತ್ತದೆ.
ಮನೆ ಬಾಗಿಲ ಮುಂದೆ ಚಪ್ಪಲಿ ಬಿಡುವುದು
ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಮನೆ ಬಾಗಿಲ ಮುಂದೆಯೇ ಚಪ್ಪಲಿ ಬಿಡುವ ಕಾರ್ಯ ಮಾಡುತ್ತಾರೆ. ಆದರೆ ಈ ರೀತಿ ದ್ವಾರ ಬಾಗಿಲ ಬಳಿ ಅಥವಾ ನೇರವಾಗಿ ಚಪ್ಪಲಿಗಳ ಬಿಡಬಾರದಂತೆ. ಇದರಿಂದ ಮನೆಯಲ್ಲಿ ಲಕ್ಷ್ಮಿ ನೆಲೆಸುವುದಿಲ್ಲ ಎಂದು ವಾಸ್ತು ಶಾಸ್ತ್ರ ಹೇಳುತ್ತದೆ.
ಶುಭ-ಲಾಭ ಪಟ
ಮನೆಯ ಪ್ರಧಾನ ಬಾಗಿಲಿನ ಮೇಲೆ ಶುಭ ಲಾಭ ಎಂದು ಬರೆಸಿ ಅಥವಾ ಹೀಗೆ ಬರೆದ ಪಟವನ್ನು ಬಾಗಿಲ ಮೇಲೆ ಅಳವಡಿಸಿ. ಇದರಿಂದ ಮನೆಯಲ್ಲಿ ಅನಾರೋಗ್ಯ ನುಸುಳಲು ಅಸಾಧ್ಯವಾಗುತ್ತದೆ. ನೀರಿನಿಂದ ತುಂಬಿದ ಗಾಜಿನ ಅಥವಾ ಮಣ್ಣಿನ ಮಡಿಕೆಯಲ್ಲಿ ಹೂವು ಅಥವಾ ಹೂವಿನ ದಳಗಳನ್ನು ಹಾಕಿ ಮನೆಯ ಪ್ರವೇಶ ದ್ವಾರದ ಬಳಿ ಇಟ್ಟರೆ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚುತ್ತದೆ. ಹಾಗೆ ಈ ನೀರಿನಲ್ಲಿ ಆಮೆಯನ್ನು ಸಹ ಹಾಕಿಡುತ್ತಾರೆ. ಕೂರ್ಮಾವತಾರವಾದ ವಿಷ್ಣುವನ್ನು ನಿತ್ಯ ಪೂಜಿಸಲು ಹೀಗೆ ಮಾಡುತ್ತಾರೆ. ಆಮೆ ಗಾಜಿನಿಂದ ಅಥವಾ ತಾಮ್ರದ್ದಾಗಿದ್ದರೆ ಒಳಿತು.



Click it and Unblock the Notifications











