Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
2023ರಲ್ಲಿ ಮಂಗಳ ಗೌರಿ ವ್ರತ 9 ವಾರಗಳಿವೆ, ಯಾವಾಗ ಶುರುವಾಗಿ ಯಾವಾಗ ಮುಕ್ತಾಯ?
ಶ್ರಾವಣ ಮಾಸದಲ್ಲಿ ಮುತ್ತೈದೆಯರು ಮಂಗಳ ಗೌರಿ ವ್ರತ ಆರಂಭಿಸುತ್ತಾರೆ. ಕರ್ನಾಟಕ, ಆಂಧ್ರಪ್ರದೇಶ, ಮಹಾರಾಷ್ಟ್ರ, ಗೋವಾ, ತಮಿಳುನಾಡು ಈ ಭಾಗಗಳಲ್ಲಿ ಮಂಗಳ ಗೌರಿ ವ್ರತ ಆಚರಿಸಲಾಗುವುದು. ಶ್ರಾವಣ ಮಾಸದ ಪ್ರತಿ ಮಂಗಳವಾರದಂದು ಮಂಗಳ ಗೌರಿ ವ್ರತ ಆಚರಿಸಲಾಗುವುದು. ಪತಿಯ ಆಯುಸ್ಸು, ಆರೋಗ್ಯ ವೃದ್ಧಿಗಾಗಿ ಮನೆಯಲ್ಲಿ ಸಂಪತ್ತು, ಸಂತೋಷ ಹೆಚ್ಚಲಿ ಎಂಬ ಉದ್ದೇಶದಿಂದ ಈ ವ್ರತವನ್ನು ಮಾಡುತ್ತಾರೆ.
ಕರ್ನಾಟಕದಲ್ಲಿ ಮಂಗಳ ಗೌರಿ ವ್ರತವನ್ನು ಯಾವಾಗ ಆಚರಿಸಲಾಗುವುದು? ಈ ವ್ರತದ ಮಹತ್ವವೇನು? ಇದನ್ನು ಮಾಡುವುದು ಹೇಗೆ ಎಂದು ನೋಡೋಣ ಬನ್ನಿ:
ಈ ವರ್ಷ ನಿಮಗೆ ಮಂಗಳ ಗೌರಿ ವ್ರತ ಆಚರಣೆಗೆ 9 ಮಂಗಳವಾರ ಸಿಗಲಿದೆ
ಜುಲೈ 18ರಂದು ಮಂಗಳ ಗೌರಿ ವ್ರತ ಪ್ರಾರಂಭ
ಆಗಸ್ಟ್ 8
ಆಗಸ್ಟ್ 15
ಆಗಸ್ಟ್ 22
ಆಗಸ್ಟ್ 29
ಸೆಪ್ಟೆಂಬರ್ 5
ಸೆಪ್ಟೆಂಬರ್ 12ಕ್ಕೆ ಮಂಗಳ ಗೌರಿ ವ್ರತ ಮುಕ್ತಾಯ.
ಈ ವರ್ಷ ಶ್ರಾವಣ ಅಧಿಕ ಮಾಸ ಇರುವುದರಿಂದ 9 ವಾರ ಮಂಗಳ ಗೌರಿ ವ್ರತ ಮಾಡಬಹುದು.

ಪಾರ್ವತಿ ದೇವಿಯ ಕೃಪೆಗಾಗಿ ಮಂಗಳ ಗೌರಿ ವ್ರತ
ಮಂಗಳ ಗೌರಿ ವ್ರತದಲ್ಲಿ ದೇವಿ ಪಾರ್ವತಿಯ ಆರಾಧನೆ ಮಾಡಲಾಗುವುದು. ಇದನ್ನು ಪ್ರತಿ ಮಂಗಳವಾರ ಆಚರಣೆ ಮಾಡಲಾಗುವುದು. ಮುತ್ತೈದೆಯರು ವೈವಾಹಿಕ ಜೀವನ ಚೆನ್ನಾಗಿರಲಿ, ನನ್ನನ್ನು ಮುತ್ತೈದೆಯನ್ನಾಗಿ ಇಡು ತಾಯಿಯೇ ಎಂದು ಪ್ರಾರ್ಥಿಸುತ್ತಾ ಈ ವ್ರತವನ್ನು ಮಾಡಲಾಗುವುದು. ಈ ವ್ರತವನ್ನು ಹೊಸದಾಗಿ ಮದುವೆಯಾದವರು, ಮದುವೆಯಾಗಿ ಇನ್ನೂ ಐದು ವರ್ಷ ಪೂರ್ಣವಾಗಿರದವರು ಮಾಡಲಾಗುವುದು, ಮದುವೆಯಾಗದ ಹೆಣ್ಣು ಮಕ್ಕಳು ಕಂಕಣ ಭಾಗ್ಯ ಕೂಡಿ ಬರಲು ಈ ವ್ರತವನ್ನು ಆಚರಿಸುತ್ತಾರೆ.
ಮಂಗಳ ಗೌರಿ ವ್ರತದ ಪೂಜಾ ವಿಧಿಗಳೇನು?
- ಸೂರ್ಯೋದಯಕ್ಕೆ ಮೊದಲೇ ಎದ್ದೇಳಬೇಕು, ನಂತರ ಸ್ನಾನ ಮಾಡಿ ಒಳ್ಳೆಯ ಸಾಂಪ್ರದಾಯಕ ಬಟ್ಟೆ ಧರಿಸಿ ಲಕ್ಷಣವಾಗಿ ಅಲಂಕಾರ ಮಾಡಿಕೊಳ್ಳುತ್ತಾರೆ.
- ಈಗ ಮರದ ಮಣೆಯನ್ನು ಸ್ವಚ್ಛಗೊಳಿಸಿ ಅದರ ಮೇಲೆ ಕೆಂಪು ಬಟ್ಟೆ ಹರಡಿ, ಅರಿಶಿನದಿಂದ ಮಾಡಿದ ಗೌರಿಯ ಮೂರ್ತಿಯನ್ನು ಇಡುತ್ತಾರೆ.
- ಒಂದು ತಟ್ಟೆಗೆ ಅಕ್ಕಿ ಹಾಕಿ ಅದರಲ್ಲಿ ಮಾವಿನ ಎಲೆ, ವೀಳ್ಯೆದೆಲೆಯಿಂದ ಅಲಂಕರಿಸಿದ ಕಳಸ ಇಡಬೇಕು.
- ನಂತರ ಹಿಟ್ಟಿನಿಂದ ಮಾಡಿದ ದೀಪವನ್ನು ಹಚ್ಚಬೇಕು.
- ನಂತರ ದೇವಿಯ ಮುಂದೆ ಸಂಕಲ್ಪ ಮಾಡಿ ಪೂಜೆ ಮಾಡಬೇಕು. ಪೂಜೆಗೆ ಹಣ್ಣುಗಳು, ಹೂಗಳು, ನೈವೇದ್ಯ ಬಳಸಿ. ಪೂಜೆ ಮುಗಿದ ಬಳಿಕ ಆರತಿ ಎತ್ತಿ
- ಶಿವ ಮತ್ತು ಪಾರ್ವತಿಯ ಅಷ್ಠೋತ್ತರ ಪಠಿಸಿ
- ಈ ದಿನ ಉಪವಾಸವಿದ್ದು ಪೂಜೆ ಮಾಡಿದರೆ ತುಂಬಾ ಒಳ್ಳೆಯದು
- ನಂತರ ಪೂಜೆಗೆ ಬಂದ ಮುತ್ತೈದೆಯರಿಗೆ ತಾಂಬೂಲ ನೀಡಿ.
ಮಂಗಳ ಗೌರಿ ವ್ರತದ ಮಹತ್ವ
- ಯಾರು ಈ ವ್ರತವನ್ನು ಮಾಡುತ್ತಾರೋ ವೈವಾಹಿಕ ಜೀವನದಲ್ಲಿ ಇರುವ ಸಮಸ್ಯೆ ಬಗೆಹರಿಯಲಿದೆ.
- ಶಿವ-ಪಾರ್ವತಿಯಂತೆ ದಾಂಪತ್ಯ ಜೀವನ ತುಂಬಾನೇ ಸುಂದರವಾಗಿ ಇರಲಿದೆ.
- ಸಂತಾನ ಭಾಗ್ಯ ದೊರೆಯಲಿದೆ
- ಗಂಡನಿಗೆ ಒಳಿತಾಗಲಿದೆ.
ಯಾರಿಗೆ ಮಂಗಳವಾರ ಮಾಡಲು ಸಾಧ್ಯವಾಗುವುದಿಲ್ಲವೋ ಅವರು ಶುಕ್ರವಾರ ಮಾಡುತ್ತಾರೆ.



Click it and Unblock the Notifications