Latest Updates
-
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ! -
ಬಿಸಿಲಿನ ಬೇಗೆಗೆ ದಂಪತಿಗಳ ನಡುವೆ ಜಗಳವೇ? ಈ ಸಣ್ಣ ಬದಲಾವಣೆಗಳು ನಿಮ್ಮ ಸಂಬಂಧವನ್ನು ಬಿರುಕಿನಿಂದ ಕಾಪಾಡುತ್ತವೆ! -
ಉತ್ತರ ಭಾರತದಲ್ಲಿ ಸುಡುವ ಬಿಸಿಲು: ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಬಚಾವ್ ಮಾಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ನಿಮಗೆ ರಾಮಬಾಣ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಈ ಸಿಂಪಲ್ ಟಿಪ್ಸ್ ಪಾಲಿಸಿದ್ರೆ ಬೇಸಿಗೆಯಲ್ಲೂ ನೀವು ಕೂಲ್ ಆಗಿರಬಹುದು! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಹೃದಯದ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ!
ಶ್ರಾವಣ ಮಾಸದಲ್ಲಿ ಈ 5 ದೈವಿಕ ವಸ್ತುಗಳನ್ನು ಮನೆಗೆ ತಂದರೆ ಎಲ್ಲಾ ಕಷ್ಟಗಳು ದೂರಾಗುವುದು
ಶ್ರಾವಣ ಮಾಸ ಹಿಂದೂಗಳಿಗೆ ಪವಿತ್ರವಾದ ಮಾಸವಾಗಿದೆ. ಈ ಮಾಸದಲ್ಲಿ ಶಿವಭಕ್ತರು ಈ ತಿಂಗಳ ವ್ರತ ನಿಯಮಗಳನ್ನು ಪಾಲಿಸುತ್ತಾ ಶಿವನನ್ನು ಆರಾಧನೆ ಮಾಡಲಾಗುವುದು. ಈ ತಿಂಗಳಿನಲ್ಲಿ ಕೆಲವೊಂದು ವಸ್ತುಗಳನ್ನು ಮನೆಗೆ ತಂದರೆ ಒಳ್ಳೆಯದು ಎಂದು ಹೇಳಲಾಗುವುದು.
ಈ ವಸ್ತುಗಳನ್ನು ಶ್ರಾವಣದಲ್ಲಿ ಮನೆಗೆ ತಂದರೆ ಮನೆಗೆ ಅದೃಷ್ಟ ಬರಲಿದೆ ಎಂದು ನಂಬಲಾಗಿದೆ. ಈ ಶ್ರಾವಣದಲ್ಲಿ ಯಾವೆಲ್ಲಾ ವಸ್ತುಗಳನ್ನು ಮನೆಗೆ ತಂದರೆ ಒಳ್ಳೆಯದು ಎಂದು ನೋಡೋಣ ಬನ್ನಿ:

ನಾಗ- ನಾಗಿಣಿಯ ಮೂರ್ತಿ
ನಾಗ-ನಾಗಣಿಯ ಮೂರ್ತಿಯನ್ನು ಮನೆಗೆ ತಂದರೆ ಒಳ್ಳೆಯದು ಎಂದು ಹೇಳಲಾಗುವುದು. ಸರ್ಪ ಶಿವನ ಆಭರಣ. ಈ ಮೂರ್ತಿಗಳನ್ನು ಮನೆಗೆ ತಂದು ಹಾಲು, ಹೂ, ಹಣ್ಣುಗಳನ್ನು ಅರ್ಪಿಸಿ ದೀಪ ಹಚ್ಚಿದರೆ ಶುಭ ಉಂಟಾಗುವುದು. ಈ ಮೂರ್ತಿಯನ್ನು ನಾಗ ಪಂಚಮಿಯಂದು ಆರಾಧಿಸಿ.
ತ್ರಿಶೂಲ
ಶ್ರಾವಣ ತಿಂಗಳಿನಲ್ಲಿ ಮನೆಗೆ ಬೆಳ್ಳಿಯ ತ್ರಿಶೂಲ ತಂದರೆ ಒಳ್ಳೆಯದು, ಅದರಲ್ಲೂ ಬೆಳ್ಳಿಯ ತ್ರಿಶೂಲವನ್ನು ಸೋಮವಾರ ತರುವುದರಿಂದ ಜೀವನದಲ್ಲಿರುವ ಸಮಸ್ಯೆಗಳು ದೂರಾಗುವುದು.
ಗಂಗಾಜಲ
ಹಿಂದೂಧರ್ಮದಲ್ಲಿ ಯಾವುದೇ ಶುಭ ಕಾರ್ಯಕ್ರಮಗಳಿರಲಿ ಗಂಗಾಜಲ ಬಳಸುತ್ತೇವೆ. ಗಂಗಾಜಲ ಮನೆಯಲ್ಲಿ ಚಿಮುಕಿಸಿದರೆ ನೆಗೆಟಿವ್ ಎನರ್ಜಿ ದೂರಾಗುವುದು ಎಂದು ನಂಬಲಾಗಿದೆ. ಶ್ರಾವಣ ತಿಂಗಳಿನಲ್ಲಿ ಶಿವನಿಗೆ ಗಂಗಾಜಲದಿಂದ ಅಭಿಷೇಕ ಮಾಡಿದರೆ ನಿಮ್ಮ ಇಷ್ಟಾರ್ಥ ನೆರವೇರುವುದು.
ರುದ್ರಾಕ್ಷಿ
ರುದ್ರಾಕ್ಷಿ ತುಂಬಾ ಶಕ್ತಿಶಾಲಿಯಾದ ವಸ್ತುವಾಗಿದೆ. ಇದನ್ನು ಬಳಸುವುದಕ್ಕೂ ಒಂದು ಕ್ರಮವಿದೆ. ಶ್ರಾವಣ ಮಾಸದಲ್ಲಿ ರುದ್ರಾಕ್ಷಿ ಮನೆಗೆ ತಂದರೆ ಶುಭ ಎಂದು ಹೇಳಲಾಗುವುದು. ಶಿವನಿಗೆ ಪೂಜೆ ಮಾಡಿ ನಂತರ ರುದ್ರಾಕ್ಷಿ ಧರಿಸಬೇಕು.
ಭಸ್ಮ
ಶಿವನ ಪೂಜೆಗೆ ಕುಂಕುಮ ಬದಲಿಗೆ ಭಸ್ಮವನ್ನು ಬಳಸಲಾಗುವುದು. ನಂಬಿಕೆ ಪ್ರಕಾರ ಶಿವನು ಮೈ ತುಂಬಾ ಭಸ್ಮ ಲೇಪಿಸಿಕೊಂಡಿರುತ್ತಾನೆ ಎಂದು ಹೇಳಲಾಗುವುದು. ಭಸ್ಮವನ್ನು ತಂದು ಆ ಭಸ್ಮದಿಂದ ನಾಮ ಹಾಕಿದರೆ ಒಳ್ಳೆಯದು.



Click it and Unblock the Notifications