Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
ಶ್ರಾವಣ ಮಾಸದಲ್ಲಿ ಈ 5 ದೈವಿಕ ವಸ್ತುಗಳನ್ನು ಮನೆಗೆ ತಂದರೆ ಎಲ್ಲಾ ಕಷ್ಟಗಳು ದೂರಾಗುವುದು
ಶ್ರಾವಣ ಮಾಸ ಹಿಂದೂಗಳಿಗೆ ಪವಿತ್ರವಾದ ಮಾಸವಾಗಿದೆ. ಈ ಮಾಸದಲ್ಲಿ ಶಿವಭಕ್ತರು ಈ ತಿಂಗಳ ವ್ರತ ನಿಯಮಗಳನ್ನು ಪಾಲಿಸುತ್ತಾ ಶಿವನನ್ನು ಆರಾಧನೆ ಮಾಡಲಾಗುವುದು. ಈ ತಿಂಗಳಿನಲ್ಲಿ ಕೆಲವೊಂದು ವಸ್ತುಗಳನ್ನು ಮನೆಗೆ ತಂದರೆ ಒಳ್ಳೆಯದು ಎಂದು ಹೇಳಲಾಗುವುದು.
ಈ ವಸ್ತುಗಳನ್ನು ಶ್ರಾವಣದಲ್ಲಿ ಮನೆಗೆ ತಂದರೆ ಮನೆಗೆ ಅದೃಷ್ಟ ಬರಲಿದೆ ಎಂದು ನಂಬಲಾಗಿದೆ. ಈ ಶ್ರಾವಣದಲ್ಲಿ ಯಾವೆಲ್ಲಾ ವಸ್ತುಗಳನ್ನು ಮನೆಗೆ ತಂದರೆ ಒಳ್ಳೆಯದು ಎಂದು ನೋಡೋಣ ಬನ್ನಿ:

ನಾಗ- ನಾಗಿಣಿಯ ಮೂರ್ತಿ
ನಾಗ-ನಾಗಣಿಯ ಮೂರ್ತಿಯನ್ನು ಮನೆಗೆ ತಂದರೆ ಒಳ್ಳೆಯದು ಎಂದು ಹೇಳಲಾಗುವುದು. ಸರ್ಪ ಶಿವನ ಆಭರಣ. ಈ ಮೂರ್ತಿಗಳನ್ನು ಮನೆಗೆ ತಂದು ಹಾಲು, ಹೂ, ಹಣ್ಣುಗಳನ್ನು ಅರ್ಪಿಸಿ ದೀಪ ಹಚ್ಚಿದರೆ ಶುಭ ಉಂಟಾಗುವುದು. ಈ ಮೂರ್ತಿಯನ್ನು ನಾಗ ಪಂಚಮಿಯಂದು ಆರಾಧಿಸಿ.
ತ್ರಿಶೂಲ
ಶ್ರಾವಣ ತಿಂಗಳಿನಲ್ಲಿ ಮನೆಗೆ ಬೆಳ್ಳಿಯ ತ್ರಿಶೂಲ ತಂದರೆ ಒಳ್ಳೆಯದು, ಅದರಲ್ಲೂ ಬೆಳ್ಳಿಯ ತ್ರಿಶೂಲವನ್ನು ಸೋಮವಾರ ತರುವುದರಿಂದ ಜೀವನದಲ್ಲಿರುವ ಸಮಸ್ಯೆಗಳು ದೂರಾಗುವುದು.
ಗಂಗಾಜಲ
ಹಿಂದೂಧರ್ಮದಲ್ಲಿ ಯಾವುದೇ ಶುಭ ಕಾರ್ಯಕ್ರಮಗಳಿರಲಿ ಗಂಗಾಜಲ ಬಳಸುತ್ತೇವೆ. ಗಂಗಾಜಲ ಮನೆಯಲ್ಲಿ ಚಿಮುಕಿಸಿದರೆ ನೆಗೆಟಿವ್ ಎನರ್ಜಿ ದೂರಾಗುವುದು ಎಂದು ನಂಬಲಾಗಿದೆ. ಶ್ರಾವಣ ತಿಂಗಳಿನಲ್ಲಿ ಶಿವನಿಗೆ ಗಂಗಾಜಲದಿಂದ ಅಭಿಷೇಕ ಮಾಡಿದರೆ ನಿಮ್ಮ ಇಷ್ಟಾರ್ಥ ನೆರವೇರುವುದು.
ರುದ್ರಾಕ್ಷಿ
ರುದ್ರಾಕ್ಷಿ ತುಂಬಾ ಶಕ್ತಿಶಾಲಿಯಾದ ವಸ್ತುವಾಗಿದೆ. ಇದನ್ನು ಬಳಸುವುದಕ್ಕೂ ಒಂದು ಕ್ರಮವಿದೆ. ಶ್ರಾವಣ ಮಾಸದಲ್ಲಿ ರುದ್ರಾಕ್ಷಿ ಮನೆಗೆ ತಂದರೆ ಶುಭ ಎಂದು ಹೇಳಲಾಗುವುದು. ಶಿವನಿಗೆ ಪೂಜೆ ಮಾಡಿ ನಂತರ ರುದ್ರಾಕ್ಷಿ ಧರಿಸಬೇಕು.
ಭಸ್ಮ
ಶಿವನ ಪೂಜೆಗೆ ಕುಂಕುಮ ಬದಲಿಗೆ ಭಸ್ಮವನ್ನು ಬಳಸಲಾಗುವುದು. ನಂಬಿಕೆ ಪ್ರಕಾರ ಶಿವನು ಮೈ ತುಂಬಾ ಭಸ್ಮ ಲೇಪಿಸಿಕೊಂಡಿರುತ್ತಾನೆ ಎಂದು ಹೇಳಲಾಗುವುದು. ಭಸ್ಮವನ್ನು ತಂದು ಆ ಭಸ್ಮದಿಂದ ನಾಮ ಹಾಕಿದರೆ ಒಳ್ಳೆಯದು.



Click it and Unblock the Notifications
