Latest Updates
-
ಅಕ್ಷಯ ತೃತೀಯ ಮದುವೆ: ಬಾಲ್ಯ ವಿವಾಹ ತಡೆಯಲು ನೀವೇನು ಮಾಡಬೇಕು? -
ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ಈ ಟಿಪ್ಸ್ ಪಾಲಿಸಿ! -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ಆಹಾರಗಳೇ ನಿಮ್ಮ ರಕ್ಷಕ -
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ
ಶ್ರಾವಣ ಮಾಸದಲ್ಲಿ ಈ 5 ದೈವಿಕ ವಸ್ತುಗಳನ್ನು ಮನೆಗೆ ತಂದರೆ ಎಲ್ಲಾ ಕಷ್ಟಗಳು ದೂರಾಗುವುದು
ಶ್ರಾವಣ ಮಾಸ ಹಿಂದೂಗಳಿಗೆ ಪವಿತ್ರವಾದ ಮಾಸವಾಗಿದೆ. ಈ ಮಾಸದಲ್ಲಿ ಶಿವಭಕ್ತರು ಈ ತಿಂಗಳ ವ್ರತ ನಿಯಮಗಳನ್ನು ಪಾಲಿಸುತ್ತಾ ಶಿವನನ್ನು ಆರಾಧನೆ ಮಾಡಲಾಗುವುದು. ಈ ತಿಂಗಳಿನಲ್ಲಿ ಕೆಲವೊಂದು ವಸ್ತುಗಳನ್ನು ಮನೆಗೆ ತಂದರೆ ಒಳ್ಳೆಯದು ಎಂದು ಹೇಳಲಾಗುವುದು.
ಈ ವಸ್ತುಗಳನ್ನು ಶ್ರಾವಣದಲ್ಲಿ ಮನೆಗೆ ತಂದರೆ ಮನೆಗೆ ಅದೃಷ್ಟ ಬರಲಿದೆ ಎಂದು ನಂಬಲಾಗಿದೆ. ಈ ಶ್ರಾವಣದಲ್ಲಿ ಯಾವೆಲ್ಲಾ ವಸ್ತುಗಳನ್ನು ಮನೆಗೆ ತಂದರೆ ಒಳ್ಳೆಯದು ಎಂದು ನೋಡೋಣ ಬನ್ನಿ:

ನಾಗ- ನಾಗಿಣಿಯ ಮೂರ್ತಿ
ನಾಗ-ನಾಗಣಿಯ ಮೂರ್ತಿಯನ್ನು ಮನೆಗೆ ತಂದರೆ ಒಳ್ಳೆಯದು ಎಂದು ಹೇಳಲಾಗುವುದು. ಸರ್ಪ ಶಿವನ ಆಭರಣ. ಈ ಮೂರ್ತಿಗಳನ್ನು ಮನೆಗೆ ತಂದು ಹಾಲು, ಹೂ, ಹಣ್ಣುಗಳನ್ನು ಅರ್ಪಿಸಿ ದೀಪ ಹಚ್ಚಿದರೆ ಶುಭ ಉಂಟಾಗುವುದು. ಈ ಮೂರ್ತಿಯನ್ನು ನಾಗ ಪಂಚಮಿಯಂದು ಆರಾಧಿಸಿ.
ತ್ರಿಶೂಲ
ಶ್ರಾವಣ ತಿಂಗಳಿನಲ್ಲಿ ಮನೆಗೆ ಬೆಳ್ಳಿಯ ತ್ರಿಶೂಲ ತಂದರೆ ಒಳ್ಳೆಯದು, ಅದರಲ್ಲೂ ಬೆಳ್ಳಿಯ ತ್ರಿಶೂಲವನ್ನು ಸೋಮವಾರ ತರುವುದರಿಂದ ಜೀವನದಲ್ಲಿರುವ ಸಮಸ್ಯೆಗಳು ದೂರಾಗುವುದು.
ಗಂಗಾಜಲ
ಹಿಂದೂಧರ್ಮದಲ್ಲಿ ಯಾವುದೇ ಶುಭ ಕಾರ್ಯಕ್ರಮಗಳಿರಲಿ ಗಂಗಾಜಲ ಬಳಸುತ್ತೇವೆ. ಗಂಗಾಜಲ ಮನೆಯಲ್ಲಿ ಚಿಮುಕಿಸಿದರೆ ನೆಗೆಟಿವ್ ಎನರ್ಜಿ ದೂರಾಗುವುದು ಎಂದು ನಂಬಲಾಗಿದೆ. ಶ್ರಾವಣ ತಿಂಗಳಿನಲ್ಲಿ ಶಿವನಿಗೆ ಗಂಗಾಜಲದಿಂದ ಅಭಿಷೇಕ ಮಾಡಿದರೆ ನಿಮ್ಮ ಇಷ್ಟಾರ್ಥ ನೆರವೇರುವುದು.
ರುದ್ರಾಕ್ಷಿ
ರುದ್ರಾಕ್ಷಿ ತುಂಬಾ ಶಕ್ತಿಶಾಲಿಯಾದ ವಸ್ತುವಾಗಿದೆ. ಇದನ್ನು ಬಳಸುವುದಕ್ಕೂ ಒಂದು ಕ್ರಮವಿದೆ. ಶ್ರಾವಣ ಮಾಸದಲ್ಲಿ ರುದ್ರಾಕ್ಷಿ ಮನೆಗೆ ತಂದರೆ ಶುಭ ಎಂದು ಹೇಳಲಾಗುವುದು. ಶಿವನಿಗೆ ಪೂಜೆ ಮಾಡಿ ನಂತರ ರುದ್ರಾಕ್ಷಿ ಧರಿಸಬೇಕು.
ಭಸ್ಮ
ಶಿವನ ಪೂಜೆಗೆ ಕುಂಕುಮ ಬದಲಿಗೆ ಭಸ್ಮವನ್ನು ಬಳಸಲಾಗುವುದು. ನಂಬಿಕೆ ಪ್ರಕಾರ ಶಿವನು ಮೈ ತುಂಬಾ ಭಸ್ಮ ಲೇಪಿಸಿಕೊಂಡಿರುತ್ತಾನೆ ಎಂದು ಹೇಳಲಾಗುವುದು. ಭಸ್ಮವನ್ನು ತಂದು ಆ ಭಸ್ಮದಿಂದ ನಾಮ ಹಾಕಿದರೆ ಒಳ್ಳೆಯದು.



Click it and Unblock the Notifications











