Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ಪ್ರಾಣಪ್ರತಿಷ್ಠಾಪನೆ: ಅಲಂಕೃತಗೊಂಡ ಅಯೋಧ್ಯೆ ರಾಮ ಮಂದಿರದ ಸುಂದರ ಫೋಟೋಗಳು
ಇಡೀ ದೇಶವೇ ಸಂಭ್ರಮಿಸುತ್ತಿದೆ, ದೇಶದ ಹಳ್ಳಿಗಳ ಮೂಲೆ-ಮೂಲೆಯಲ್ಲೂ ಈ ಸಂಭ್ರಮ ಮನೆ ಮಾಡಿದೆ. ಎಲ್ಲಾ ದೇವಾಲಯಗಳು ಹೂಗಳಿಂದ ಅಲಂಕೃತಗೊಂಡಿದೆ, ಈ ದಿನ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠಾಪನೆ ವೇಳೆ ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ಮಾಡಲಾಗುವುದು.ಕರ್ನಾಟಕದಲ್ಲಿರುವ ಅಷ್ಟೂ ದೇವಾಲಯಗಳಲ್ಲಿ ಈ ದಿನ ವಿಶೇಷ ಪೂಜೆ ಏರ್ಪಡಿಸಲಿದ್ದು ಮಧ್ಯಾಹ್ನ 12:29ರಿಂದ 1:32ರವರೆಗೆ ವಿಶೇಷ ಪೂಜೆ ನಡೆಯಲಿದೆ.
ಈ ದಿನ ಅಯೋಧ್ಯೆ ಎಷ್ಟು ಸುಂದರವಾಗಿದೆ ಕಾಣುತ್ತಿದೆ ಎಂದರೆ ಅದರ ಅಂದ ನೋಡಲು ಎರಡು ಕಣ್ಣು ಸಾಲದು, ಅಷ್ಟೊಂದು ಆಕರ್ಷಕವಾಗಿ ಅಲಂಕೃತಗೊಂಡಿದೆ. ಹೂಗಳಿಂದ ಅಲಂಕೃತಗೊಂಡಿರುವ ಅಯೋಧ್ಯೆ ರಾಮ ಮಂದಿರದ ಸೊಬಗು ನೋಡಿ ಹೀಗಿದೆ:

ಪ್ರಾಣ ಪ್ರತಿಷ್ಠಾಪನೆಗೆ ಇರುವ ಶುಭ ಮುಹೂರ್ತ ಜನವರಿ 22 ಮಧ್ಯಾಹ್ನ 12:29:08 ಸೆಕೆಂಡ್ನಿಂದ 12:30:32 ಸೆಕೆಂಡ್ ಒಳಗಡೆ ಪ್ರಾಣ ಪ್ರತಿಷ್ಠಾಪನೆ ಮಾಡಲಾಗುವುದು.
ಅಭಿಜಿತ್ ಮುಹೂರ್ತ ಕೂಡ ಇದೆ ಅಭಿಜಿತ್ ಮುಹೂರ್ತವನ್ನು ಅತ್ಯಂತ ಶುಭ ಸಮಯ ಎಂದು ಪರಿಗಣಿಸಲಾಗಿದೆ. ಪ್ರಾಣಪ್ರತಿಷ್ಠಾಪನೆ ಸಮಯದಲ್ಲಿಯೇ ಅಭಿಜಿತ್ ಮುಹೂರ್ತ ಕೂಡ ಬಂದಿರುವುದರಿಂದ ತುಂಬಾನೇ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಈ ಮುಹೂರ್ತದಲ್ಲಿ ಪ್ರಾಣಪ್ರತಿಷ್ಠಾಪನೆ ಮಾಡುವುದರಿಂದ ಪ್ರಗತಿ ಉಂಟಾಗುವುದು.
ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಾಣಪ್ರತಿಷ್ಠಾಪನೆ ನೀವು ಲೈವ್ನಲ್ಲಿ ನೋಡಬಹುದು
ಮಂದಿರದೊಳಗೆ ಹೋಗಿ ಪ್ರಾಣಪ್ರತಿಷ್ಠಾಪನೆ ನೋಡಲು ಸಾಧ್ಯವಾಗದೇ ಇರಬಹುದು, ಆದರೆ ಬೇಸರ ಪಡುವಂತಿಲ್ಲ ನೀವು ಲೈವ್ನಲ್ಲಿ ನೋಡಿ ಕಣ್ತುಂಬಿಕೊಳ್ಳಬಹುದು. ಸಮಯ ಜನವರಿ 22 ಬೆಳಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ ನೀವು ಲೈವ್ ವೀಕ್ಷಿಸಬಹುದು.
ಲೈವ್ ಟೆಲಿಕಾಸ್ಟ್ (ನೇರ ಪ್ರಸಾರ)ಕ್ಕೆ ಎಲ್ಲವೂ ವ್ಯವಸ್ಥೆ ಮಾಡಲಾಗುವುದು. ಪ್ರಾಣ ಪ್ರತಿಷ್ಠಾಪನೆ ಪೂಜೆಯನ್ನು ನೀವು DD ನ್ಯಾಷನಲ್ ಚಾನಲ್ನಲ್ಲಿ ವೀಕ್ಷಿಸಬಹುದು. ಅಲ್ಲದೆ ಇತರ ನ್ಯೂಸ್ ಏಜೆನ್ಸಿಗಳಿಗೂ ಫೀಡ್ ನೀಡಲಿದೆ, ಅಲ್ಲದೆ ದೂರದರ್ಶನ ಯೂಟ್ಯೂಬ್ ಲಿಂಕ್ನಲ್ಲಿಯೂ ವೀಕ್ಷಿಸಬಹುದು. ಅಯೋಧ್ಯೆಯ ಬೇರೆ-ಬೇರೆ ಭಾಗಗಳಲ್ಲಿ 40 ಕ್ಯಾಮರಾ ಅಳವಡಿಸಲಾಗಿದೆ.
ರಾಮ ಮಂದಿರದ ಆವರಣದಿಂದ ಹಿಡಿದು ಗರ್ಭಗುಡಿಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಎಲ್ಲವೂ ಲೈವ್ನಲ್ಲಿದೆ. ಈ ಬ್ರಾಡ್ಕಾಸ್ಟ್ಗೆ 4K ತಂತ್ರಜ್ಞಾನ ಬಳಸಲಾಗುವುದು ಎಂಬುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಸರಾಯು ಸಮೀಪದಲ್ಲಿರುವ ರಾಮ್ ಕಿ ಪೈಡಿ, ಜಟಾಯು ವಿಗ್ರಹ ಹೀಗೆ ವಿವಿಧ ಭಾಗಗಳಿಂದ ಲೈವ್ ಕವರೇಜ್ ನೀಡಲಾಗುವುದು.
ಅಯೋಧ್ಯೆ ರಾಮ ಮಂದಿರಲ್ಲಿ ನೀಡಲಾಗುವ ಪ್ರಸಾದ
ತಿರುಪತಿಯಿಂದ 1 ಲಕ್ಷ ಲಡ್ಡುಗಳನ್ನು ಕಳುಹಿಸಲಾಗಿದೆ, ಅದನ್ನು ಇಂದು ಅಯೋಧ್ಯೆಯಲ್ಲ ನೆರೆದಿರುವ ಭಕ್ತರಿಗೆ ಲಡ್ಡುಪ್ರಸಾದ ನೀಡಲಾಗುವುದು. ಅಯೋಧ್ಯೆಗೆ ಪ್ರಸಾದವಾಗಿ ಶ್ರೀರಾಮನಿಗೆ ಪ್ರಿಯವಾದ ಸಕ್ಕರೆಯನ್ನು ಪ್ರಸಾದವನ್ನಾಗಿ ನೀಡಲಾಗುವುದು. ಇಲ್ಲಿ ನಿಮಗೆ ಕಲ್ಲು ಸಕ್ಕರೆ ಹೊರತು ಪಡಿಸಿ ಬೇರೆ ಯಾವುದೇ ಪ್ರಸಾದ ಸಿಗುವುದಿಲ್ಲ , ಕಲ್ಲುಸಕ್ಕರೆ ಆರೋಗ್ಯಕ್ಕೂ ತುಂಬಾನೇ ಒಳ್ಳೆಯದು, ಇದೇ ಕಲ್ಲು ಸಕ್ಕರೆ ಪ್ರಸಾದವಾಗಿ ನೀಡಲಾಗುವುದು.



Click it and Unblock the Notifications





