Latest Updates
-
ಅಂತರಾಷ್ಟ್ರೀಯ ಸ್ನೇಹ ದಿನ: ಗೆಳೆಯರೊಂದಿಗೆ 'ಬಡ್ಡಿ ವರ್ಕೌಟ್' ಮಾಡಿ ಆರೋಗ್ಯ ಮತ್ತು ಬಾಂಧವ್ಯ ಹೆಚ್ಚಿಸಿಕೊಳ್ಳಿ! -
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು ಒಟ್ಟಾಗಿ ಕುಳಿತು ಈ ಕೆಲಸ ಮಾಡಿದರೆ ಟೆನ್ಷನ್ ಫ್ರೀ! -
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್!
ಪ್ರಾಣಪ್ರತಿಷ್ಠಾಪನೆ: ಅಲಂಕೃತಗೊಂಡ ಅಯೋಧ್ಯೆ ರಾಮ ಮಂದಿರದ ಸುಂದರ ಫೋಟೋಗಳು
ಇಡೀ ದೇಶವೇ ಸಂಭ್ರಮಿಸುತ್ತಿದೆ, ದೇಶದ ಹಳ್ಳಿಗಳ ಮೂಲೆ-ಮೂಲೆಯಲ್ಲೂ ಈ ಸಂಭ್ರಮ ಮನೆ ಮಾಡಿದೆ. ಎಲ್ಲಾ ದೇವಾಲಯಗಳು ಹೂಗಳಿಂದ ಅಲಂಕೃತಗೊಂಡಿದೆ, ಈ ದಿನ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠಾಪನೆ ವೇಳೆ ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ಮಾಡಲಾಗುವುದು.ಕರ್ನಾಟಕದಲ್ಲಿರುವ ಅಷ್ಟೂ ದೇವಾಲಯಗಳಲ್ಲಿ ಈ ದಿನ ವಿಶೇಷ ಪೂಜೆ ಏರ್ಪಡಿಸಲಿದ್ದು ಮಧ್ಯಾಹ್ನ 12:29ರಿಂದ 1:32ರವರೆಗೆ ವಿಶೇಷ ಪೂಜೆ ನಡೆಯಲಿದೆ.
ಈ ದಿನ ಅಯೋಧ್ಯೆ ಎಷ್ಟು ಸುಂದರವಾಗಿದೆ ಕಾಣುತ್ತಿದೆ ಎಂದರೆ ಅದರ ಅಂದ ನೋಡಲು ಎರಡು ಕಣ್ಣು ಸಾಲದು, ಅಷ್ಟೊಂದು ಆಕರ್ಷಕವಾಗಿ ಅಲಂಕೃತಗೊಂಡಿದೆ. ಹೂಗಳಿಂದ ಅಲಂಕೃತಗೊಂಡಿರುವ ಅಯೋಧ್ಯೆ ರಾಮ ಮಂದಿರದ ಸೊಬಗು ನೋಡಿ ಹೀಗಿದೆ:

ಪ್ರಾಣ ಪ್ರತಿಷ್ಠಾಪನೆಗೆ ಇರುವ ಶುಭ ಮುಹೂರ್ತ ಜನವರಿ 22 ಮಧ್ಯಾಹ್ನ 12:29:08 ಸೆಕೆಂಡ್ನಿಂದ 12:30:32 ಸೆಕೆಂಡ್ ಒಳಗಡೆ ಪ್ರಾಣ ಪ್ರತಿಷ್ಠಾಪನೆ ಮಾಡಲಾಗುವುದು.
ಅಭಿಜಿತ್ ಮುಹೂರ್ತ ಕೂಡ ಇದೆ ಅಭಿಜಿತ್ ಮುಹೂರ್ತವನ್ನು ಅತ್ಯಂತ ಶುಭ ಸಮಯ ಎಂದು ಪರಿಗಣಿಸಲಾಗಿದೆ. ಪ್ರಾಣಪ್ರತಿಷ್ಠಾಪನೆ ಸಮಯದಲ್ಲಿಯೇ ಅಭಿಜಿತ್ ಮುಹೂರ್ತ ಕೂಡ ಬಂದಿರುವುದರಿಂದ ತುಂಬಾನೇ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಈ ಮುಹೂರ್ತದಲ್ಲಿ ಪ್ರಾಣಪ್ರತಿಷ್ಠಾಪನೆ ಮಾಡುವುದರಿಂದ ಪ್ರಗತಿ ಉಂಟಾಗುವುದು.
ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಾಣಪ್ರತಿಷ್ಠಾಪನೆ ನೀವು ಲೈವ್ನಲ್ಲಿ ನೋಡಬಹುದು
ಮಂದಿರದೊಳಗೆ ಹೋಗಿ ಪ್ರಾಣಪ್ರತಿಷ್ಠಾಪನೆ ನೋಡಲು ಸಾಧ್ಯವಾಗದೇ ಇರಬಹುದು, ಆದರೆ ಬೇಸರ ಪಡುವಂತಿಲ್ಲ ನೀವು ಲೈವ್ನಲ್ಲಿ ನೋಡಿ ಕಣ್ತುಂಬಿಕೊಳ್ಳಬಹುದು. ಸಮಯ ಜನವರಿ 22 ಬೆಳಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ ನೀವು ಲೈವ್ ವೀಕ್ಷಿಸಬಹುದು.
ಲೈವ್ ಟೆಲಿಕಾಸ್ಟ್ (ನೇರ ಪ್ರಸಾರ)ಕ್ಕೆ ಎಲ್ಲವೂ ವ್ಯವಸ್ಥೆ ಮಾಡಲಾಗುವುದು. ಪ್ರಾಣ ಪ್ರತಿಷ್ಠಾಪನೆ ಪೂಜೆಯನ್ನು ನೀವು DD ನ್ಯಾಷನಲ್ ಚಾನಲ್ನಲ್ಲಿ ವೀಕ್ಷಿಸಬಹುದು. ಅಲ್ಲದೆ ಇತರ ನ್ಯೂಸ್ ಏಜೆನ್ಸಿಗಳಿಗೂ ಫೀಡ್ ನೀಡಲಿದೆ, ಅಲ್ಲದೆ ದೂರದರ್ಶನ ಯೂಟ್ಯೂಬ್ ಲಿಂಕ್ನಲ್ಲಿಯೂ ವೀಕ್ಷಿಸಬಹುದು. ಅಯೋಧ್ಯೆಯ ಬೇರೆ-ಬೇರೆ ಭಾಗಗಳಲ್ಲಿ 40 ಕ್ಯಾಮರಾ ಅಳವಡಿಸಲಾಗಿದೆ.
ರಾಮ ಮಂದಿರದ ಆವರಣದಿಂದ ಹಿಡಿದು ಗರ್ಭಗುಡಿಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಎಲ್ಲವೂ ಲೈವ್ನಲ್ಲಿದೆ. ಈ ಬ್ರಾಡ್ಕಾಸ್ಟ್ಗೆ 4K ತಂತ್ರಜ್ಞಾನ ಬಳಸಲಾಗುವುದು ಎಂಬುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಸರಾಯು ಸಮೀಪದಲ್ಲಿರುವ ರಾಮ್ ಕಿ ಪೈಡಿ, ಜಟಾಯು ವಿಗ್ರಹ ಹೀಗೆ ವಿವಿಧ ಭಾಗಗಳಿಂದ ಲೈವ್ ಕವರೇಜ್ ನೀಡಲಾಗುವುದು.
ಅಯೋಧ್ಯೆ ರಾಮ ಮಂದಿರಲ್ಲಿ ನೀಡಲಾಗುವ ಪ್ರಸಾದ
ತಿರುಪತಿಯಿಂದ 1 ಲಕ್ಷ ಲಡ್ಡುಗಳನ್ನು ಕಳುಹಿಸಲಾಗಿದೆ, ಅದನ್ನು ಇಂದು ಅಯೋಧ್ಯೆಯಲ್ಲ ನೆರೆದಿರುವ ಭಕ್ತರಿಗೆ ಲಡ್ಡುಪ್ರಸಾದ ನೀಡಲಾಗುವುದು. ಅಯೋಧ್ಯೆಗೆ ಪ್ರಸಾದವಾಗಿ ಶ್ರೀರಾಮನಿಗೆ ಪ್ರಿಯವಾದ ಸಕ್ಕರೆಯನ್ನು ಪ್ರಸಾದವನ್ನಾಗಿ ನೀಡಲಾಗುವುದು. ಇಲ್ಲಿ ನಿಮಗೆ ಕಲ್ಲು ಸಕ್ಕರೆ ಹೊರತು ಪಡಿಸಿ ಬೇರೆ ಯಾವುದೇ ಪ್ರಸಾದ ಸಿಗುವುದಿಲ್ಲ , ಕಲ್ಲುಸಕ್ಕರೆ ಆರೋಗ್ಯಕ್ಕೂ ತುಂಬಾನೇ ಒಳ್ಳೆಯದು, ಇದೇ ಕಲ್ಲು ಸಕ್ಕರೆ ಪ್ರಸಾದವಾಗಿ ನೀಡಲಾಗುವುದು.



Click it and Unblock the Notifications





