Latest Updates
-
ಅಕ್ಷಯ ತೃತೀಯ ಮದುವೆ: ಬಾಲ್ಯ ವಿವಾಹ ತಡೆಯಲು ನೀವೇನು ಮಾಡಬೇಕು? -
ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ಈ ಟಿಪ್ಸ್ ಪಾಲಿಸಿ! -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ಆಹಾರಗಳೇ ನಿಮ್ಮ ರಕ್ಷಕ -
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ
ಪ್ರಾಣಪ್ರತಿಷ್ಠಾಪನೆಯಂದು ಬ್ಯಾಂಕ್ ಹಾಗೂ ಕೇಂದ್ರ ಸರ್ಕಾರ ಉದ್ಯೋಗಿಗಳಿಗೆ ಅರ್ಧ ದಿನ ರಜೆ
ಅಯೋಧ್ಯೆ ಶ್ರೀರಾಮನನ್ನು ಬರಮಾಡಿಕೊಳ್ಳಲು ತಳಿರು ತೋರಣ, ಹೂವಿನ ಅಲಂಕಾರದಿಂದ ಸಿಂಗಾರಗೊಳ್ಳುತ್ತಿದೆ, ಕೋಟ್ಯಾಂತರ ಶ್ರೀರಾಮ ಭಕ್ತರ ಸಡಗರ ಸಂಭ್ರಮಕ್ಕೆ ಎಲ್ಲೆ ಇಲ್ಲ... ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣಪ್ರತಿಷ್ಠಾಪನೆಯ ಆ ದಿನದ ವೈಭೋಗ ಕಣ್ತುಂಬಿಕೊಳ್ಳಲು ಎಲ್ಲರೂ ಕಾತುರದಿಂದ ಕಾಯುತ್ತಿದ್ದರೆ. ಪ್ರದಾನಿ ಮೋದಿ, ಪ್ರಧಾನ ಅರ್ಚಕರು ಸೇರಿದಂತೆ ಐದು ಜನರ ಮಾತ್ರ ಪ್ರಾಣಪ್ರತಿಷ್ಠಾನೆ ಕಾರ್ಯದಲ್ಲಿ ಭಾಗಿಯಾಗುವುದಾದರೂ ಲೈವ್ ಪ್ರಸಾರದ ಮುಖಾಂತರ ಇಂಥ ಅತ್ಯಾದ್ಭುತ ಕ್ಷಣವನ್ನು ಕಣ್ತುಂಬಿಕೊಳ್ಳಬಹುದು.

ಜನವರಿ 22ರಿಂದ ಅರ್ಧ ದಿನ ಬ್ಯಾಂಕ್ಗಳಿಗೆ ರಜೆ
ಈ ದಿನದಂದು ಬ್ಯಾಂಕ್ಗಳು ಅರ್ಧ ದಿನ ಮಾತ್ರ ಕಾರ್ಯನಿರ್ವಹಿಸಲಿದೆ.
ಸರ್ಕಾರಿ ಉದ್ಯೋಗಿಗಳಿಗೂ ಅರ್ಧ ದಿನ ರಜೆ
ಕೇಂದ್ರ ಸರ್ಕಾರದ ಉದ್ಯೋಗಿಗಳಿಗೆ ಈ ದಿನ ಅರ್ಧ ದಿನ ರಜೆ ನೀಡಲಾಗಿದೆ. ರಜೆ ಬೇಕೆಂದು ಕೋರಿ ಸಾರ್ವಜನಿಕ ವಯಲದಲ್ಲಿ ತುಂಬಾನೇ ಬೇಡಿಕೆ ಬಂದಿತ್ತು, ಜನರ ಬೇಡಿಕೆಯನ್ನು ಪರಿಗಣಿಸಿ, ಈ ದಿನದ ಸಂಭ್ರಮ ಕಣ್ತುಂಬಿಕಳ್ಳಲು ಅರ್ಧ ದಿನ ರಜೆ ನೀಡಲಾಗಿದೆ.
ಕೋಟ್ಯಾಂತರ ಭಕ್ತರಿಂದ ಹರಿದು ಬಂದಿದೆ ಕೋಟ್ಯಾಂತರ ರುಪಾಯಿ ದೇಣಿಗೆ: ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ 2020ರಿಂದ ಶುರುವಾದಾಗಿನಿಂದ ಕೋಟ್ಯಾಂತರ ರುಪಾಯಿ ದೇಣಿಗೆ ಬಂದಿದೆ, ಇಲ್ಲಿಯವರೆಗೆ ಒಟ್ಟು ಸುಮಾರು 5300 ಕೋಟಿ ಆದಾಯ ಭಕ್ತರಿಂದ ದೇವಾಲಯಕ್ಕೆ ಬಂದಿದೆ ಎಂದು ಹೇಳಲಾಗುತ್ತಿದೆ.
ಇದಲ್ಲದೆ ತುಂಬಾ ವಿಶೇಷ ಕಾಣಿಕೆಗಳು ದೇವಾಲಯಕ್ಕೆ ಬಂದಿದೆ:
*ಉತ್ತರದ ಪ್ರದೇಶದಿಂದ 2100 ಕೆಜಿ ತೂಕದ ಅಷ್ಟದಾತುಗಳ ಗಂಟೆ
* ತೆಲಂಗಾಣದಿಂದ ಉದ್ಯಮಿಯೊಬ್ಬರು ಚಿನ್ನದ ಪಾದುಕೆ ನೀಡಲಿದ್ದಾರೆ
* ಸೂರತ್ ಬಂಗಾರದ ವ್ಯಾಪಾರಿಯಿಂದ 5000 ಅಮೇರಿಕನ್ ವಜ್ರಗಳಿಂದ ತಯಾರಾದ ಹಾರ, ಈ ಹಾರ ಶ್ರೀಮಂದಿರದ ವಿನ್ಯಾಸ ಹೊಂದಿದೆ.
* ಸೀತೆಯ ಊರಾದ ನೇಪಾಳದಿಂದ 3000 ಬೆಳ್ಳಿ-ಚಿನ್ನದ ಉಡುಗೊರೆಗಳು
* ಉತ್ತರ ಪ್ರದೇಶದ ಬೀಗದ ವ್ಯಾಪಾರಿಯಿಂದ 400ಕೆಜಿ ತೂಕದ ಬೀಗ
* ಉತ್ತರ ಪ್ರದೇಶದ ತರಕಾರಿ ವ್ಯಾಪಾರಿಯಿಂದ 8 ದೇಶಗಳ ಸಮಯ ಒಂದೇ ಸಮಯದಲ್ಲಿ ತೋರಿಸುವ ಗಡಿಯಾರ
* ಅಹಮದಾಬಾದ್ ನಿಂದ 11.5 ಕೆಜಿ ಬೆಳ್ಳಿ ಬಂಗಾರ ಮಿಶ್ರಿತ ಬಿಲ್ಲು ಬಾಣ
* ಗುಜರಾತಿನಿಂದ 108 ಅಡಿಯ 3614 ಕೆಜಿ ತೂಕದ ಕಿಲೋ ಮೀಟರ್ ಗಳಷ್ಟು ಸುವಾಸನೆ ಬೀರುವ ಒಂದೇ ಅಗರಬತ್ತಿ
* ಗುಜರಾತಿನಿಂದ ಒಟ್ಟು 5500 ಕೆಜಿಯಲ್ಲಿ ಕಂಚಿನ 7 ಧ್ವಜ ಸ್ಥಂಭಗಳು ಸಿದ್ದವಾಗಿವೆ
ನಾಗಪುರದ ಬಾಣಸಿಗನಿಂದ 7000 ಕೆಜಿ ರಾಮ ಹಲ್ವಾ
* ಪ್ರಾಣಪ್ರತಿಷ್ಠಾಪನೆಯಂದು ತಿರುಪತಿಯಿಂದ 1 ಲಕ್ಷ ಲಡ್ಡು ಪ್ರಸಾದ ನೀಡಲಾಗಿದೆ.
* ಮಥುರಾದಿಂದ 200 ಕೆಜಿ ಲಡ್ಡು ಪ್ರಸಾದ
* ವಡೋದರಾದ ಕೃಷಿಕನಿಂದ 1100 ಕೆಜಿ ಪಂಚದಾತು ದೀಪ 851 ಕೆ ಜಿ ತುಪ್ಪ ಹಿಡಿಸುವ 8 ಅಡಿ ಅಗಲ 9 ಅಡಿ ಉದ್ದದ ಜ್ಯೋತಿ
* ಕರ್ನಾಟಕದಿಂದ ರಾಮಲಾಲ ವಿಗ್ರಹ ಹೀಗೆ ದೇಶದ ಮೂಲೆ-ಮೂಲೆಗಳಿಂದ ಕಾಣಿಕೆಗಳು ಹರಿದು ಬರುತ್ತಿವೆ.
ಜನವರಿ 22ರ ಮಹತ್ವದ ದಿನವನ್ನು, ಆ ದಿನ ಸಂಭ್ರಮವನ್ನು ಅನುಭವಿಸಲು ಎಲ್ಲಾ ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ, ಬ್ಯಾಂಕ್ನವರಿಗೆ ಅರ್ಧ ರಜೆಯನ್ನು ಘೋಷಿಸಲಾಗಿದೆ.



Click it and Unblock the Notifications











