Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಪ್ರಾಣಪ್ರತಿಷ್ಠಾಪನೆಯಂದು ಬ್ಯಾಂಕ್ ಹಾಗೂ ಕೇಂದ್ರ ಸರ್ಕಾರ ಉದ್ಯೋಗಿಗಳಿಗೆ ಅರ್ಧ ದಿನ ರಜೆ
ಅಯೋಧ್ಯೆ ಶ್ರೀರಾಮನನ್ನು ಬರಮಾಡಿಕೊಳ್ಳಲು ತಳಿರು ತೋರಣ, ಹೂವಿನ ಅಲಂಕಾರದಿಂದ ಸಿಂಗಾರಗೊಳ್ಳುತ್ತಿದೆ, ಕೋಟ್ಯಾಂತರ ಶ್ರೀರಾಮ ಭಕ್ತರ ಸಡಗರ ಸಂಭ್ರಮಕ್ಕೆ ಎಲ್ಲೆ ಇಲ್ಲ... ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣಪ್ರತಿಷ್ಠಾಪನೆಯ ಆ ದಿನದ ವೈಭೋಗ ಕಣ್ತುಂಬಿಕೊಳ್ಳಲು ಎಲ್ಲರೂ ಕಾತುರದಿಂದ ಕಾಯುತ್ತಿದ್ದರೆ. ಪ್ರದಾನಿ ಮೋದಿ, ಪ್ರಧಾನ ಅರ್ಚಕರು ಸೇರಿದಂತೆ ಐದು ಜನರ ಮಾತ್ರ ಪ್ರಾಣಪ್ರತಿಷ್ಠಾನೆ ಕಾರ್ಯದಲ್ಲಿ ಭಾಗಿಯಾಗುವುದಾದರೂ ಲೈವ್ ಪ್ರಸಾರದ ಮುಖಾಂತರ ಇಂಥ ಅತ್ಯಾದ್ಭುತ ಕ್ಷಣವನ್ನು ಕಣ್ತುಂಬಿಕೊಳ್ಳಬಹುದು.

ಜನವರಿ 22ರಿಂದ ಅರ್ಧ ದಿನ ಬ್ಯಾಂಕ್ಗಳಿಗೆ ರಜೆ
ಈ ದಿನದಂದು ಬ್ಯಾಂಕ್ಗಳು ಅರ್ಧ ದಿನ ಮಾತ್ರ ಕಾರ್ಯನಿರ್ವಹಿಸಲಿದೆ.
ಸರ್ಕಾರಿ ಉದ್ಯೋಗಿಗಳಿಗೂ ಅರ್ಧ ದಿನ ರಜೆ
ಕೇಂದ್ರ ಸರ್ಕಾರದ ಉದ್ಯೋಗಿಗಳಿಗೆ ಈ ದಿನ ಅರ್ಧ ದಿನ ರಜೆ ನೀಡಲಾಗಿದೆ. ರಜೆ ಬೇಕೆಂದು ಕೋರಿ ಸಾರ್ವಜನಿಕ ವಯಲದಲ್ಲಿ ತುಂಬಾನೇ ಬೇಡಿಕೆ ಬಂದಿತ್ತು, ಜನರ ಬೇಡಿಕೆಯನ್ನು ಪರಿಗಣಿಸಿ, ಈ ದಿನದ ಸಂಭ್ರಮ ಕಣ್ತುಂಬಿಕಳ್ಳಲು ಅರ್ಧ ದಿನ ರಜೆ ನೀಡಲಾಗಿದೆ.
ಕೋಟ್ಯಾಂತರ ಭಕ್ತರಿಂದ ಹರಿದು ಬಂದಿದೆ ಕೋಟ್ಯಾಂತರ ರುಪಾಯಿ ದೇಣಿಗೆ: ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ 2020ರಿಂದ ಶುರುವಾದಾಗಿನಿಂದ ಕೋಟ್ಯಾಂತರ ರುಪಾಯಿ ದೇಣಿಗೆ ಬಂದಿದೆ, ಇಲ್ಲಿಯವರೆಗೆ ಒಟ್ಟು ಸುಮಾರು 5300 ಕೋಟಿ ಆದಾಯ ಭಕ್ತರಿಂದ ದೇವಾಲಯಕ್ಕೆ ಬಂದಿದೆ ಎಂದು ಹೇಳಲಾಗುತ್ತಿದೆ.
ಇದಲ್ಲದೆ ತುಂಬಾ ವಿಶೇಷ ಕಾಣಿಕೆಗಳು ದೇವಾಲಯಕ್ಕೆ ಬಂದಿದೆ:
*ಉತ್ತರದ ಪ್ರದೇಶದಿಂದ 2100 ಕೆಜಿ ತೂಕದ ಅಷ್ಟದಾತುಗಳ ಗಂಟೆ
* ತೆಲಂಗಾಣದಿಂದ ಉದ್ಯಮಿಯೊಬ್ಬರು ಚಿನ್ನದ ಪಾದುಕೆ ನೀಡಲಿದ್ದಾರೆ
* ಸೂರತ್ ಬಂಗಾರದ ವ್ಯಾಪಾರಿಯಿಂದ 5000 ಅಮೇರಿಕನ್ ವಜ್ರಗಳಿಂದ ತಯಾರಾದ ಹಾರ, ಈ ಹಾರ ಶ್ರೀಮಂದಿರದ ವಿನ್ಯಾಸ ಹೊಂದಿದೆ.
* ಸೀತೆಯ ಊರಾದ ನೇಪಾಳದಿಂದ 3000 ಬೆಳ್ಳಿ-ಚಿನ್ನದ ಉಡುಗೊರೆಗಳು
* ಉತ್ತರ ಪ್ರದೇಶದ ಬೀಗದ ವ್ಯಾಪಾರಿಯಿಂದ 400ಕೆಜಿ ತೂಕದ ಬೀಗ
* ಉತ್ತರ ಪ್ರದೇಶದ ತರಕಾರಿ ವ್ಯಾಪಾರಿಯಿಂದ 8 ದೇಶಗಳ ಸಮಯ ಒಂದೇ ಸಮಯದಲ್ಲಿ ತೋರಿಸುವ ಗಡಿಯಾರ
* ಅಹಮದಾಬಾದ್ ನಿಂದ 11.5 ಕೆಜಿ ಬೆಳ್ಳಿ ಬಂಗಾರ ಮಿಶ್ರಿತ ಬಿಲ್ಲು ಬಾಣ
* ಗುಜರಾತಿನಿಂದ 108 ಅಡಿಯ 3614 ಕೆಜಿ ತೂಕದ ಕಿಲೋ ಮೀಟರ್ ಗಳಷ್ಟು ಸುವಾಸನೆ ಬೀರುವ ಒಂದೇ ಅಗರಬತ್ತಿ
* ಗುಜರಾತಿನಿಂದ ಒಟ್ಟು 5500 ಕೆಜಿಯಲ್ಲಿ ಕಂಚಿನ 7 ಧ್ವಜ ಸ್ಥಂಭಗಳು ಸಿದ್ದವಾಗಿವೆ
ನಾಗಪುರದ ಬಾಣಸಿಗನಿಂದ 7000 ಕೆಜಿ ರಾಮ ಹಲ್ವಾ
* ಪ್ರಾಣಪ್ರತಿಷ್ಠಾಪನೆಯಂದು ತಿರುಪತಿಯಿಂದ 1 ಲಕ್ಷ ಲಡ್ಡು ಪ್ರಸಾದ ನೀಡಲಾಗಿದೆ.
* ಮಥುರಾದಿಂದ 200 ಕೆಜಿ ಲಡ್ಡು ಪ್ರಸಾದ
* ವಡೋದರಾದ ಕೃಷಿಕನಿಂದ 1100 ಕೆಜಿ ಪಂಚದಾತು ದೀಪ 851 ಕೆ ಜಿ ತುಪ್ಪ ಹಿಡಿಸುವ 8 ಅಡಿ ಅಗಲ 9 ಅಡಿ ಉದ್ದದ ಜ್ಯೋತಿ
* ಕರ್ನಾಟಕದಿಂದ ರಾಮಲಾಲ ವಿಗ್ರಹ ಹೀಗೆ ದೇಶದ ಮೂಲೆ-ಮೂಲೆಗಳಿಂದ ಕಾಣಿಕೆಗಳು ಹರಿದು ಬರುತ್ತಿವೆ.
ಜನವರಿ 22ರ ಮಹತ್ವದ ದಿನವನ್ನು, ಆ ದಿನ ಸಂಭ್ರಮವನ್ನು ಅನುಭವಿಸಲು ಎಲ್ಲಾ ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ, ಬ್ಯಾಂಕ್ನವರಿಗೆ ಅರ್ಧ ರಜೆಯನ್ನು ಘೋಷಿಸಲಾಗಿದೆ.



Click it and Unblock the Notifications