Latest Updates
-
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ಸಜ್ಜುಗೊಳಿಸಿ: ಸೋರಿಕೆ ಮತ್ತು ತೇವಾಂಶದಿಂದ ಮುಕ್ತಿ ಪಡೆಯಿರಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೇಹ ತಂಪಾಗಿಡಲು ಈ ಸಾಂಪ್ರದಾಯಿಕ ಪಾನೀಯಗಳೇ ಮದ್ದು! -
ಬೆಂಗಳೂರಿನಲ್ಲಿ ಇವತ್ತು ಭಾರಿ ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಈ ಕೆಲಸಗಳನ್ನು ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ! -
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ!
ಪ್ರಾಣಪ್ರತಿಷ್ಠಾಪನೆಯಂದು ಬ್ಯಾಂಕ್ ಹಾಗೂ ಕೇಂದ್ರ ಸರ್ಕಾರ ಉದ್ಯೋಗಿಗಳಿಗೆ ಅರ್ಧ ದಿನ ರಜೆ
ಅಯೋಧ್ಯೆ ಶ್ರೀರಾಮನನ್ನು ಬರಮಾಡಿಕೊಳ್ಳಲು ತಳಿರು ತೋರಣ, ಹೂವಿನ ಅಲಂಕಾರದಿಂದ ಸಿಂಗಾರಗೊಳ್ಳುತ್ತಿದೆ, ಕೋಟ್ಯಾಂತರ ಶ್ರೀರಾಮ ಭಕ್ತರ ಸಡಗರ ಸಂಭ್ರಮಕ್ಕೆ ಎಲ್ಲೆ ಇಲ್ಲ... ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣಪ್ರತಿಷ್ಠಾಪನೆಯ ಆ ದಿನದ ವೈಭೋಗ ಕಣ್ತುಂಬಿಕೊಳ್ಳಲು ಎಲ್ಲರೂ ಕಾತುರದಿಂದ ಕಾಯುತ್ತಿದ್ದರೆ. ಪ್ರದಾನಿ ಮೋದಿ, ಪ್ರಧಾನ ಅರ್ಚಕರು ಸೇರಿದಂತೆ ಐದು ಜನರ ಮಾತ್ರ ಪ್ರಾಣಪ್ರತಿಷ್ಠಾನೆ ಕಾರ್ಯದಲ್ಲಿ ಭಾಗಿಯಾಗುವುದಾದರೂ ಲೈವ್ ಪ್ರಸಾರದ ಮುಖಾಂತರ ಇಂಥ ಅತ್ಯಾದ್ಭುತ ಕ್ಷಣವನ್ನು ಕಣ್ತುಂಬಿಕೊಳ್ಳಬಹುದು.

ಜನವರಿ 22ರಿಂದ ಅರ್ಧ ದಿನ ಬ್ಯಾಂಕ್ಗಳಿಗೆ ರಜೆ
ಈ ದಿನದಂದು ಬ್ಯಾಂಕ್ಗಳು ಅರ್ಧ ದಿನ ಮಾತ್ರ ಕಾರ್ಯನಿರ್ವಹಿಸಲಿದೆ.
ಸರ್ಕಾರಿ ಉದ್ಯೋಗಿಗಳಿಗೂ ಅರ್ಧ ದಿನ ರಜೆ
ಕೇಂದ್ರ ಸರ್ಕಾರದ ಉದ್ಯೋಗಿಗಳಿಗೆ ಈ ದಿನ ಅರ್ಧ ದಿನ ರಜೆ ನೀಡಲಾಗಿದೆ. ರಜೆ ಬೇಕೆಂದು ಕೋರಿ ಸಾರ್ವಜನಿಕ ವಯಲದಲ್ಲಿ ತುಂಬಾನೇ ಬೇಡಿಕೆ ಬಂದಿತ್ತು, ಜನರ ಬೇಡಿಕೆಯನ್ನು ಪರಿಗಣಿಸಿ, ಈ ದಿನದ ಸಂಭ್ರಮ ಕಣ್ತುಂಬಿಕಳ್ಳಲು ಅರ್ಧ ದಿನ ರಜೆ ನೀಡಲಾಗಿದೆ.
ಕೋಟ್ಯಾಂತರ ಭಕ್ತರಿಂದ ಹರಿದು ಬಂದಿದೆ ಕೋಟ್ಯಾಂತರ ರುಪಾಯಿ ದೇಣಿಗೆ: ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ 2020ರಿಂದ ಶುರುವಾದಾಗಿನಿಂದ ಕೋಟ್ಯಾಂತರ ರುಪಾಯಿ ದೇಣಿಗೆ ಬಂದಿದೆ, ಇಲ್ಲಿಯವರೆಗೆ ಒಟ್ಟು ಸುಮಾರು 5300 ಕೋಟಿ ಆದಾಯ ಭಕ್ತರಿಂದ ದೇವಾಲಯಕ್ಕೆ ಬಂದಿದೆ ಎಂದು ಹೇಳಲಾಗುತ್ತಿದೆ.
ಇದಲ್ಲದೆ ತುಂಬಾ ವಿಶೇಷ ಕಾಣಿಕೆಗಳು ದೇವಾಲಯಕ್ಕೆ ಬಂದಿದೆ:
*ಉತ್ತರದ ಪ್ರದೇಶದಿಂದ 2100 ಕೆಜಿ ತೂಕದ ಅಷ್ಟದಾತುಗಳ ಗಂಟೆ
* ತೆಲಂಗಾಣದಿಂದ ಉದ್ಯಮಿಯೊಬ್ಬರು ಚಿನ್ನದ ಪಾದುಕೆ ನೀಡಲಿದ್ದಾರೆ
* ಸೂರತ್ ಬಂಗಾರದ ವ್ಯಾಪಾರಿಯಿಂದ 5000 ಅಮೇರಿಕನ್ ವಜ್ರಗಳಿಂದ ತಯಾರಾದ ಹಾರ, ಈ ಹಾರ ಶ್ರೀಮಂದಿರದ ವಿನ್ಯಾಸ ಹೊಂದಿದೆ.
* ಸೀತೆಯ ಊರಾದ ನೇಪಾಳದಿಂದ 3000 ಬೆಳ್ಳಿ-ಚಿನ್ನದ ಉಡುಗೊರೆಗಳು
* ಉತ್ತರ ಪ್ರದೇಶದ ಬೀಗದ ವ್ಯಾಪಾರಿಯಿಂದ 400ಕೆಜಿ ತೂಕದ ಬೀಗ
* ಉತ್ತರ ಪ್ರದೇಶದ ತರಕಾರಿ ವ್ಯಾಪಾರಿಯಿಂದ 8 ದೇಶಗಳ ಸಮಯ ಒಂದೇ ಸಮಯದಲ್ಲಿ ತೋರಿಸುವ ಗಡಿಯಾರ
* ಅಹಮದಾಬಾದ್ ನಿಂದ 11.5 ಕೆಜಿ ಬೆಳ್ಳಿ ಬಂಗಾರ ಮಿಶ್ರಿತ ಬಿಲ್ಲು ಬಾಣ
* ಗುಜರಾತಿನಿಂದ 108 ಅಡಿಯ 3614 ಕೆಜಿ ತೂಕದ ಕಿಲೋ ಮೀಟರ್ ಗಳಷ್ಟು ಸುವಾಸನೆ ಬೀರುವ ಒಂದೇ ಅಗರಬತ್ತಿ
* ಗುಜರಾತಿನಿಂದ ಒಟ್ಟು 5500 ಕೆಜಿಯಲ್ಲಿ ಕಂಚಿನ 7 ಧ್ವಜ ಸ್ಥಂಭಗಳು ಸಿದ್ದವಾಗಿವೆ
ನಾಗಪುರದ ಬಾಣಸಿಗನಿಂದ 7000 ಕೆಜಿ ರಾಮ ಹಲ್ವಾ
* ಪ್ರಾಣಪ್ರತಿಷ್ಠಾಪನೆಯಂದು ತಿರುಪತಿಯಿಂದ 1 ಲಕ್ಷ ಲಡ್ಡು ಪ್ರಸಾದ ನೀಡಲಾಗಿದೆ.
* ಮಥುರಾದಿಂದ 200 ಕೆಜಿ ಲಡ್ಡು ಪ್ರಸಾದ
* ವಡೋದರಾದ ಕೃಷಿಕನಿಂದ 1100 ಕೆಜಿ ಪಂಚದಾತು ದೀಪ 851 ಕೆ ಜಿ ತುಪ್ಪ ಹಿಡಿಸುವ 8 ಅಡಿ ಅಗಲ 9 ಅಡಿ ಉದ್ದದ ಜ್ಯೋತಿ
* ಕರ್ನಾಟಕದಿಂದ ರಾಮಲಾಲ ವಿಗ್ರಹ ಹೀಗೆ ದೇಶದ ಮೂಲೆ-ಮೂಲೆಗಳಿಂದ ಕಾಣಿಕೆಗಳು ಹರಿದು ಬರುತ್ತಿವೆ.
ಜನವರಿ 22ರ ಮಹತ್ವದ ದಿನವನ್ನು, ಆ ದಿನ ಸಂಭ್ರಮವನ್ನು ಅನುಭವಿಸಲು ಎಲ್ಲಾ ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ, ಬ್ಯಾಂಕ್ನವರಿಗೆ ಅರ್ಧ ರಜೆಯನ್ನು ಘೋಷಿಸಲಾಗಿದೆ.



Click it and Unblock the Notifications