Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ಬಲರಾಮ ಜಯಂತಿ 2023 : ದಿನಾಂಕ, ಶುಭ ಮುಹೂರ್ತ, ಪೂಜಾವಿಧಿಯೇನು?
ಸನಾತನ ಪಂಚಾಂಗದ ಪ್ರಕಾರ ಪ್ರತಿ ವರ್ಷ ಭಾದ್ರಪದ ಮಾಸದ ಕೃಷ್ಣ ಪಕ್ಷದ ಷಷ್ಠಿಯಂದು ಬಲರಾಮ ಜಯಂತಿಯನ್ನು ಆಚರಿಸಲಾಗುತ್ತದೆ. ಈ ವರ್ಷ ಸೆಪ್ಟೆಂಬರ್ 5 ರ ಮಂಗಳವಾರ ಬಲರಾಮ್ ಜಯಂತಿಯನ್ನು ಆಚರಣೆ ಮಾಡಲಾಗುತ್ತಿದೆ. ಬಲರಾಮನು ಭಾದ್ರಪದ ಮಾಸದ ಕೃಷ್ಣ ಪಕ್ಷದ ಆರನೆಯ ದಿನದಂದು ಜನಿಸಿದನೆಂದು ಸನಾತನ ಗ್ರಂಥಗಳಲ್ಲಿ ಸೂಚಿಸಲಾಗಿದೆ. ಆದ್ದರಿಂದ ಈ ದಿನ ಬಲರಾಮ ಜಯಂತಿಯನ್ನು ಆಚರಿಸಲಾಗುತ್ತದೆ.

ವಿಶ್ವ ರಕ್ಷಕನಾದ ಶ್ರೀಕೃಷ್ಣನ ಅಣ್ಣನಾದ ಬಲರಾಮನ ಪೂಜೆಗೂ ವಿಶೇಷ ಮಹತ್ವವಿದೆ. ಈ ದಿನ ಕೃಷ್ಣನ ಜೊತೆಗೆ ಬಲರಾಮನನ್ನು ಪೂಜಿಸುವುದರಿಂದ ಸಾಧಕನು ಬಯಸಿದ ಫಲವನ್ನು ಪಡೆಯುತ್ತಾನೆ ಎಂಬ ನಂಬಿಕೆಯಿದೆ. ಅಷ್ಟೇ ಅಲ್ಲದೇ, ನಿಮ್ಮ ಕಷ್ಟಗಳೆಲ್ಲಾ ದೂರವಾಗುತ್ತೆ ಎನ್ನುವ ನಂಬಿಕೆ ಕೂಡಯಿದೆ. ಅಷ್ಟಕ್ಕೂ ಬಲರಾಮ ಜಯಂತಿಯ ಶುಭ ಸಮಯ ಯಾವುದು? ಪೂಜಾ ವಿಧಿ ಬಗ್ಗೆ ತಿಳಿದುಕೊಳ್ಳೋಣ.
ಶುಭ ಮುಹೂರ್ತ ಯಾವುದು?
ಜ್ಯೋತಿಷಿಗಳ ಪ್ರಕಾರ ಭಾದ್ರಪದ ಮಾಸದ ಕೃಷ್ಣ ಪಕ್ಷದ ಷಷ್ಠಿಯಂದು ಸೆಪ್ಟೆಂಬರ್ 04ರ ಸೋಮವಾರದಂದು ಸಂಜೆ 04.41 ಕ್ಕೆ ಪ್ರಾರಂಭವಾಗಿ ಮರುದಿನ ಸೆಪ್ಟೆಂಬರ್ 05 ರಂದು ಮಧ್ಯಾಹ್ನ 03.46 ಕ್ಕೆ ಕೊನೆಗೊಳ್ಳುತ್ತದೆ. ಸನಾತನ ಧರ್ಮದಲ್ಲಿ ಉದಯ ತಿಥಿಯನ್ನು ಪರಿಗಣಿಸಲಾಗಿದೆ. ಹೀಗಾಗಿ ಸೆ.5ರಂದು ಬಲರಾಮ್ ಜಯಂತಿ ಆಚರಿಸಲಾಗುವುದು. ಈ ದಿನ ಭಕ್ತಿಯಿಂದ ಪೂಜೆಯನ್ನು ನೆರವೇರಿಸಿದರೆ ನಿಮ್ಮೆಲ್ಲಾ ಇಷ್ಟಾರ್ಥಗಳು ಸಿದ್ಧಿಸುತ್ತೆ ಎನ್ನುವ ನಂಬಿಕೆಯಿದೆ.
ಪೂಜಾ ವಿಧಾನ ಹೇಗಿರಬೇಕು?
ಬಲರಾಮ ಜಯಂತಿಯ ದಿನದಂದು ಬೆಳಗ್ಗೆ ಎದ್ದು ಲೋಕರಕ್ಷಕನಾದ ವಿಷ್ಣುವಿನ ಸಮೇತ ಶೇಷನಾಗನ ದರ್ಶನ ಮಾಡಿ. ದ್ವಾಪರ ಯುಗದಲ್ಲಿ ಶೇಷನಾಗನು ಬಲರಾಮನಾಗಿ ಅವತರಿಸಿದನೆಂದು ಗ್ರಂಥಗಳಲ್ಲಿ ಸೂಚಿಸಲಾಗಿದೆ. ದೈನಂದಿನ ಚಟುವಟಿಕೆಗಳನ್ನು ಮಾಡಿದ ನಂತರ ಗಂಗಾಜಲವಿರುವ ನೀರಿನಿಂದ ಸ್ನಾನ ಮಾಡಿ. ಮತ್ತು ನಂತರ ಬಂದು ಧ್ಯಾನ ಮಾಡಿ. ಅದರ ನಂತರ ಹೊಸ ಬಟ್ಟೆಗಳನ್ನು ಧರಿಸಿ. ಮತ್ತು ಸೂರ್ಯ ದೇವರಿಗೆ ನೀರನ್ನು ಅರ್ಪಿಸಿ.
ಇದಾದ ಬಳಿಕ ಶ್ರೀಕೃಷ್ಣನೊಂದಿಗೆ ಬಲರಾಮನ ಪೂಜೆಯನ್ನು ನಿಯಮಗಳು ಮತ್ತು ನಿಬಂಧನೆಗಳ ಪ್ರಕಾರ ಅದನ್ನು ಮಾಡಿ. ಪೂಜೆಯ ಕೊನೆಯಲ್ಲಿ ಆರತಿಯನ್ನು ಅರ್ಪಿಸಿ ಮತ್ತು ಸಂತೋಷ ಮತ್ತು ಸಮೃದ್ಧಿಗಾಗಿ ಪ್ರಾರ್ಥಿಸಿ. ವಿಶೇಷ ಕಾರ್ಯಗಳಲ್ಲಿ ಯಶಸ್ಸನ್ನು ಸಾಧಿಸಲು ಪೂಜೆ ಮಾಡಿದರೆ ತುಂಬಾನೇ ಒಳ್ಳೆಯದಾಗುತ್ತೆ ಎನ್ನುವ ನಂಬಿಕೆಯಿದೆ. ಸಂಜೆ ಆರತಿ ಮಾಡಿ ಹಣ್ಣು ತಿನ್ನಿರಿ. ಮರುದಿನ ಪೂಜೆಯನ್ನು ಮಾಡುವ ಮೂಲಕ ಉಪವಾಸವನ್ನು ಮುರಿಯಿರಿ.
ಈ ರೀತಿ ಬಲರಾಮ ಜಯಂತಿಯ ದಿನ ಪೂಜಾ ವಿಧಿಯನ್ನು ನೆರವೇರಿಸಿದ್ರೆ ನಿಮ್ಮೆಲ್ಲಾ ಕಷ್ಟಗಳು ನೆರವೇರಿ ಇಷ್ಟಾರ್ಥಗಳೆಲ್ಲಾ ಸಿದ್ಧಿಯಾಗಲಿದೆ.



Click it and Unblock the Notifications