Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಬಲರಾಮ ಜಯಂತಿ 2023 : ದಿನಾಂಕ, ಶುಭ ಮುಹೂರ್ತ, ಪೂಜಾವಿಧಿಯೇನು?
ಸನಾತನ ಪಂಚಾಂಗದ ಪ್ರಕಾರ ಪ್ರತಿ ವರ್ಷ ಭಾದ್ರಪದ ಮಾಸದ ಕೃಷ್ಣ ಪಕ್ಷದ ಷಷ್ಠಿಯಂದು ಬಲರಾಮ ಜಯಂತಿಯನ್ನು ಆಚರಿಸಲಾಗುತ್ತದೆ. ಈ ವರ್ಷ ಸೆಪ್ಟೆಂಬರ್ 5 ರ ಮಂಗಳವಾರ ಬಲರಾಮ್ ಜಯಂತಿಯನ್ನು ಆಚರಣೆ ಮಾಡಲಾಗುತ್ತಿದೆ. ಬಲರಾಮನು ಭಾದ್ರಪದ ಮಾಸದ ಕೃಷ್ಣ ಪಕ್ಷದ ಆರನೆಯ ದಿನದಂದು ಜನಿಸಿದನೆಂದು ಸನಾತನ ಗ್ರಂಥಗಳಲ್ಲಿ ಸೂಚಿಸಲಾಗಿದೆ. ಆದ್ದರಿಂದ ಈ ದಿನ ಬಲರಾಮ ಜಯಂತಿಯನ್ನು ಆಚರಿಸಲಾಗುತ್ತದೆ.

ವಿಶ್ವ ರಕ್ಷಕನಾದ ಶ್ರೀಕೃಷ್ಣನ ಅಣ್ಣನಾದ ಬಲರಾಮನ ಪೂಜೆಗೂ ವಿಶೇಷ ಮಹತ್ವವಿದೆ. ಈ ದಿನ ಕೃಷ್ಣನ ಜೊತೆಗೆ ಬಲರಾಮನನ್ನು ಪೂಜಿಸುವುದರಿಂದ ಸಾಧಕನು ಬಯಸಿದ ಫಲವನ್ನು ಪಡೆಯುತ್ತಾನೆ ಎಂಬ ನಂಬಿಕೆಯಿದೆ. ಅಷ್ಟೇ ಅಲ್ಲದೇ, ನಿಮ್ಮ ಕಷ್ಟಗಳೆಲ್ಲಾ ದೂರವಾಗುತ್ತೆ ಎನ್ನುವ ನಂಬಿಕೆ ಕೂಡಯಿದೆ. ಅಷ್ಟಕ್ಕೂ ಬಲರಾಮ ಜಯಂತಿಯ ಶುಭ ಸಮಯ ಯಾವುದು? ಪೂಜಾ ವಿಧಿ ಬಗ್ಗೆ ತಿಳಿದುಕೊಳ್ಳೋಣ.
ಶುಭ ಮುಹೂರ್ತ ಯಾವುದು?
ಜ್ಯೋತಿಷಿಗಳ ಪ್ರಕಾರ ಭಾದ್ರಪದ ಮಾಸದ ಕೃಷ್ಣ ಪಕ್ಷದ ಷಷ್ಠಿಯಂದು ಸೆಪ್ಟೆಂಬರ್ 04ರ ಸೋಮವಾರದಂದು ಸಂಜೆ 04.41 ಕ್ಕೆ ಪ್ರಾರಂಭವಾಗಿ ಮರುದಿನ ಸೆಪ್ಟೆಂಬರ್ 05 ರಂದು ಮಧ್ಯಾಹ್ನ 03.46 ಕ್ಕೆ ಕೊನೆಗೊಳ್ಳುತ್ತದೆ. ಸನಾತನ ಧರ್ಮದಲ್ಲಿ ಉದಯ ತಿಥಿಯನ್ನು ಪರಿಗಣಿಸಲಾಗಿದೆ. ಹೀಗಾಗಿ ಸೆ.5ರಂದು ಬಲರಾಮ್ ಜಯಂತಿ ಆಚರಿಸಲಾಗುವುದು. ಈ ದಿನ ಭಕ್ತಿಯಿಂದ ಪೂಜೆಯನ್ನು ನೆರವೇರಿಸಿದರೆ ನಿಮ್ಮೆಲ್ಲಾ ಇಷ್ಟಾರ್ಥಗಳು ಸಿದ್ಧಿಸುತ್ತೆ ಎನ್ನುವ ನಂಬಿಕೆಯಿದೆ.
ಪೂಜಾ ವಿಧಾನ ಹೇಗಿರಬೇಕು?
ಬಲರಾಮ ಜಯಂತಿಯ ದಿನದಂದು ಬೆಳಗ್ಗೆ ಎದ್ದು ಲೋಕರಕ್ಷಕನಾದ ವಿಷ್ಣುವಿನ ಸಮೇತ ಶೇಷನಾಗನ ದರ್ಶನ ಮಾಡಿ. ದ್ವಾಪರ ಯುಗದಲ್ಲಿ ಶೇಷನಾಗನು ಬಲರಾಮನಾಗಿ ಅವತರಿಸಿದನೆಂದು ಗ್ರಂಥಗಳಲ್ಲಿ ಸೂಚಿಸಲಾಗಿದೆ. ದೈನಂದಿನ ಚಟುವಟಿಕೆಗಳನ್ನು ಮಾಡಿದ ನಂತರ ಗಂಗಾಜಲವಿರುವ ನೀರಿನಿಂದ ಸ್ನಾನ ಮಾಡಿ. ಮತ್ತು ನಂತರ ಬಂದು ಧ್ಯಾನ ಮಾಡಿ. ಅದರ ನಂತರ ಹೊಸ ಬಟ್ಟೆಗಳನ್ನು ಧರಿಸಿ. ಮತ್ತು ಸೂರ್ಯ ದೇವರಿಗೆ ನೀರನ್ನು ಅರ್ಪಿಸಿ.
ಇದಾದ ಬಳಿಕ ಶ್ರೀಕೃಷ್ಣನೊಂದಿಗೆ ಬಲರಾಮನ ಪೂಜೆಯನ್ನು ನಿಯಮಗಳು ಮತ್ತು ನಿಬಂಧನೆಗಳ ಪ್ರಕಾರ ಅದನ್ನು ಮಾಡಿ. ಪೂಜೆಯ ಕೊನೆಯಲ್ಲಿ ಆರತಿಯನ್ನು ಅರ್ಪಿಸಿ ಮತ್ತು ಸಂತೋಷ ಮತ್ತು ಸಮೃದ್ಧಿಗಾಗಿ ಪ್ರಾರ್ಥಿಸಿ. ವಿಶೇಷ ಕಾರ್ಯಗಳಲ್ಲಿ ಯಶಸ್ಸನ್ನು ಸಾಧಿಸಲು ಪೂಜೆ ಮಾಡಿದರೆ ತುಂಬಾನೇ ಒಳ್ಳೆಯದಾಗುತ್ತೆ ಎನ್ನುವ ನಂಬಿಕೆಯಿದೆ. ಸಂಜೆ ಆರತಿ ಮಾಡಿ ಹಣ್ಣು ತಿನ್ನಿರಿ. ಮರುದಿನ ಪೂಜೆಯನ್ನು ಮಾಡುವ ಮೂಲಕ ಉಪವಾಸವನ್ನು ಮುರಿಯಿರಿ.
ಈ ರೀತಿ ಬಲರಾಮ ಜಯಂತಿಯ ದಿನ ಪೂಜಾ ವಿಧಿಯನ್ನು ನೆರವೇರಿಸಿದ್ರೆ ನಿಮ್ಮೆಲ್ಲಾ ಕಷ್ಟಗಳು ನೆರವೇರಿ ಇಷ್ಟಾರ್ಥಗಳೆಲ್ಲಾ ಸಿದ್ಧಿಯಾಗಲಿದೆ.



Click it and Unblock the Notifications