Latest Updates
-
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್! -
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ! -
ಹೊರಗೆ ಬಿರುಗಾಳಿ, ಮನೆಯಲ್ಲಿ ಫಿಟ್ನೆಸ್: ಇಂದಿನ ಹವಾಮಾನಕ್ಕೆ ಈ ವರ್ಕೌಟ್ ಬೆಸ್ಟ್! -
ಮದುವೆ ಮನೆಯಲ್ಲಿ ನೋಟಿನ ಹಾರ: ಸಂಭ್ರಮದ ನಡುವೆ ಅನಿರೀಕ್ಷಿತವಾಗಿ ನುಗ್ಗಿ ಬಂತು ರಣರಂಗ! -
ಮಕ್ಕಳಲ್ಲಿ ಹೆಚ್ಚುತ್ತಿದೆ ಮಧುಮೇಹದ ಭೀತಿ: ಇಂದೇ ಬದಲಾಯಿಸಿ ನಿಮ್ಮ ಅಡುಗೆಮನೆಯ ಈ ಅಭ್ಯಾಸಗಳನ್ನು! -
ಮೆಟ್ ಗಾಲಾ 2026: ಜಾಗತಿಕ ವೇದಿಕೆಯಲ್ಲಿ ಅಬ್ಬರಿಸಿದ ಭಾರತೀಯ ಸಂಸ್ಕೃತಿ, ಫ್ಯಾನ್ಸ್ ಫಿದಾ! -
ಬೇಸಿಗೆಯ ಬಿಸಿಲಿಗೆ ಸುಸ್ತಾದ್ರಾ? ಕೇವಲ 1000 ರೂಪಾಯಿಯಲ್ಲಿ ನಿಮ್ಮ ಮನೆಯನ್ನು ತಂಪಾಗಿಸಿ!
ಬಲರಾಮ ಜಯಂತಿ 2023 : ದಿನಾಂಕ, ಶುಭ ಮುಹೂರ್ತ, ಪೂಜಾವಿಧಿಯೇನು?
ಸನಾತನ ಪಂಚಾಂಗದ ಪ್ರಕಾರ ಪ್ರತಿ ವರ್ಷ ಭಾದ್ರಪದ ಮಾಸದ ಕೃಷ್ಣ ಪಕ್ಷದ ಷಷ್ಠಿಯಂದು ಬಲರಾಮ ಜಯಂತಿಯನ್ನು ಆಚರಿಸಲಾಗುತ್ತದೆ. ಈ ವರ್ಷ ಸೆಪ್ಟೆಂಬರ್ 5 ರ ಮಂಗಳವಾರ ಬಲರಾಮ್ ಜಯಂತಿಯನ್ನು ಆಚರಣೆ ಮಾಡಲಾಗುತ್ತಿದೆ. ಬಲರಾಮನು ಭಾದ್ರಪದ ಮಾಸದ ಕೃಷ್ಣ ಪಕ್ಷದ ಆರನೆಯ ದಿನದಂದು ಜನಿಸಿದನೆಂದು ಸನಾತನ ಗ್ರಂಥಗಳಲ್ಲಿ ಸೂಚಿಸಲಾಗಿದೆ. ಆದ್ದರಿಂದ ಈ ದಿನ ಬಲರಾಮ ಜಯಂತಿಯನ್ನು ಆಚರಿಸಲಾಗುತ್ತದೆ.

ವಿಶ್ವ ರಕ್ಷಕನಾದ ಶ್ರೀಕೃಷ್ಣನ ಅಣ್ಣನಾದ ಬಲರಾಮನ ಪೂಜೆಗೂ ವಿಶೇಷ ಮಹತ್ವವಿದೆ. ಈ ದಿನ ಕೃಷ್ಣನ ಜೊತೆಗೆ ಬಲರಾಮನನ್ನು ಪೂಜಿಸುವುದರಿಂದ ಸಾಧಕನು ಬಯಸಿದ ಫಲವನ್ನು ಪಡೆಯುತ್ತಾನೆ ಎಂಬ ನಂಬಿಕೆಯಿದೆ. ಅಷ್ಟೇ ಅಲ್ಲದೇ, ನಿಮ್ಮ ಕಷ್ಟಗಳೆಲ್ಲಾ ದೂರವಾಗುತ್ತೆ ಎನ್ನುವ ನಂಬಿಕೆ ಕೂಡಯಿದೆ. ಅಷ್ಟಕ್ಕೂ ಬಲರಾಮ ಜಯಂತಿಯ ಶುಭ ಸಮಯ ಯಾವುದು? ಪೂಜಾ ವಿಧಿ ಬಗ್ಗೆ ತಿಳಿದುಕೊಳ್ಳೋಣ.
ಶುಭ ಮುಹೂರ್ತ ಯಾವುದು?
ಜ್ಯೋತಿಷಿಗಳ ಪ್ರಕಾರ ಭಾದ್ರಪದ ಮಾಸದ ಕೃಷ್ಣ ಪಕ್ಷದ ಷಷ್ಠಿಯಂದು ಸೆಪ್ಟೆಂಬರ್ 04ರ ಸೋಮವಾರದಂದು ಸಂಜೆ 04.41 ಕ್ಕೆ ಪ್ರಾರಂಭವಾಗಿ ಮರುದಿನ ಸೆಪ್ಟೆಂಬರ್ 05 ರಂದು ಮಧ್ಯಾಹ್ನ 03.46 ಕ್ಕೆ ಕೊನೆಗೊಳ್ಳುತ್ತದೆ. ಸನಾತನ ಧರ್ಮದಲ್ಲಿ ಉದಯ ತಿಥಿಯನ್ನು ಪರಿಗಣಿಸಲಾಗಿದೆ. ಹೀಗಾಗಿ ಸೆ.5ರಂದು ಬಲರಾಮ್ ಜಯಂತಿ ಆಚರಿಸಲಾಗುವುದು. ಈ ದಿನ ಭಕ್ತಿಯಿಂದ ಪೂಜೆಯನ್ನು ನೆರವೇರಿಸಿದರೆ ನಿಮ್ಮೆಲ್ಲಾ ಇಷ್ಟಾರ್ಥಗಳು ಸಿದ್ಧಿಸುತ್ತೆ ಎನ್ನುವ ನಂಬಿಕೆಯಿದೆ.
ಪೂಜಾ ವಿಧಾನ ಹೇಗಿರಬೇಕು?
ಬಲರಾಮ ಜಯಂತಿಯ ದಿನದಂದು ಬೆಳಗ್ಗೆ ಎದ್ದು ಲೋಕರಕ್ಷಕನಾದ ವಿಷ್ಣುವಿನ ಸಮೇತ ಶೇಷನಾಗನ ದರ್ಶನ ಮಾಡಿ. ದ್ವಾಪರ ಯುಗದಲ್ಲಿ ಶೇಷನಾಗನು ಬಲರಾಮನಾಗಿ ಅವತರಿಸಿದನೆಂದು ಗ್ರಂಥಗಳಲ್ಲಿ ಸೂಚಿಸಲಾಗಿದೆ. ದೈನಂದಿನ ಚಟುವಟಿಕೆಗಳನ್ನು ಮಾಡಿದ ನಂತರ ಗಂಗಾಜಲವಿರುವ ನೀರಿನಿಂದ ಸ್ನಾನ ಮಾಡಿ. ಮತ್ತು ನಂತರ ಬಂದು ಧ್ಯಾನ ಮಾಡಿ. ಅದರ ನಂತರ ಹೊಸ ಬಟ್ಟೆಗಳನ್ನು ಧರಿಸಿ. ಮತ್ತು ಸೂರ್ಯ ದೇವರಿಗೆ ನೀರನ್ನು ಅರ್ಪಿಸಿ.
ಇದಾದ ಬಳಿಕ ಶ್ರೀಕೃಷ್ಣನೊಂದಿಗೆ ಬಲರಾಮನ ಪೂಜೆಯನ್ನು ನಿಯಮಗಳು ಮತ್ತು ನಿಬಂಧನೆಗಳ ಪ್ರಕಾರ ಅದನ್ನು ಮಾಡಿ. ಪೂಜೆಯ ಕೊನೆಯಲ್ಲಿ ಆರತಿಯನ್ನು ಅರ್ಪಿಸಿ ಮತ್ತು ಸಂತೋಷ ಮತ್ತು ಸಮೃದ್ಧಿಗಾಗಿ ಪ್ರಾರ್ಥಿಸಿ. ವಿಶೇಷ ಕಾರ್ಯಗಳಲ್ಲಿ ಯಶಸ್ಸನ್ನು ಸಾಧಿಸಲು ಪೂಜೆ ಮಾಡಿದರೆ ತುಂಬಾನೇ ಒಳ್ಳೆಯದಾಗುತ್ತೆ ಎನ್ನುವ ನಂಬಿಕೆಯಿದೆ. ಸಂಜೆ ಆರತಿ ಮಾಡಿ ಹಣ್ಣು ತಿನ್ನಿರಿ. ಮರುದಿನ ಪೂಜೆಯನ್ನು ಮಾಡುವ ಮೂಲಕ ಉಪವಾಸವನ್ನು ಮುರಿಯಿರಿ.
ಈ ರೀತಿ ಬಲರಾಮ ಜಯಂತಿಯ ದಿನ ಪೂಜಾ ವಿಧಿಯನ್ನು ನೆರವೇರಿಸಿದ್ರೆ ನಿಮ್ಮೆಲ್ಲಾ ಕಷ್ಟಗಳು ನೆರವೇರಿ ಇಷ್ಟಾರ್ಥಗಳೆಲ್ಲಾ ಸಿದ್ಧಿಯಾಗಲಿದೆ.



Click it and Unblock the Notifications