Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಅಮ್ಮ ತೋರಿಸುತ್ತಿದ್ದ ಚಂದ ಮಾಮ ಈಗ ಭಾರತದ ಕೈಯಲ್ಲಿದೆ, ಮುಗಿಲು ಮುಟ್ಟಿದ ಭಾರತೀಯರ ಸಂಭ್ರಮ
'India Is On the Moon'ಎಂದು ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಅವರು ಹೇಳುವುದನ್ನು ಕೇಳಿದಾಗ ಪ್ರತಿಯೊಬ್ಬ ಭಾರತೀಯನಿಗೆ ರೋಮಾಂಚನ ಉಂಟಾಗುವುದು.. ಈ ಕ್ಷಣಕ್ಕಾಗಿ, ಈ ಸುಂದರ, ಹೆಮ್ಮೆಯ ಕ್ಷಣಕ್ಕಾಗಿ ಇಡಿ ದೇಶವೇ ಎದುರು ನೋಡುತ್ತಿತ್ತು. ಚಂದ್ರಯಾನ 3 ತ್ರಿವಿಕ್ರಮ ಜುಲೈ 14, 2:35ಕ್ಕೆ ಭೂ ಕಕ್ಷೆಯನ್ನು ಬಿಟ್ಟು ಹೊರಟ ಕ್ಷಣದಿಂದ ಇದುವರೆಗೆ ದೇವರೇ... ಪ್ರಗ್ಯಾನ್ ಅನ್ನು ಚಂದ್ರನಲ್ಲಿ ಯಶಸ್ವಿಯಾಗಿ ಇಳಿಯುವಂತೆ ಮಾಡು ಎಂದು ಪ್ರಾರ್ಥಿಸಿದೆವು.

ಇಸ್ರೋ ವಿಜ್ಞಾನಿಗಳ ಶ್ರಮದ ಜೊತೆಗೆ ಲಕ್ಷಾಂತರ ಭಾರತೀಯರ ಪ್ರಾರ್ಥನೆಗೆ ಫಲ ಸಿಕ್ಕಿದೆ, ಇಡೀ ದೇಶದಲ್ಲಿ ಇಂದು ಸಂಭ್ರಮದ ವಾತಾವರಣ. ಶಾಲಾ ಮಕ್ಕಳು ಈ ಕ್ಷಣದಿಂದ ತಾವು ಕೂಡ ವಿಜ್ಞಾನಿಗಳಾಗುವ ಕನಸು ಕಾಣುವಂತೆ ಮಾಡಿರುವ ಈ ಯಶಸ್ವಿ ವಿಕ್ರಮ್ 3 ಯೋಜನೆ ಭಾರತದ ಕೀರ್ತಿ ಪತಾಕೆಯನ್ನು ಮತ್ತಷ್ಟು ಎತ್ತರಕ್ಕೆ ಹಾರಿಸಿದೆ. ಇಡೀ ವಿಶ್ವವೇ ಭಾರತದ ಸಾಧನೆಯನ್ನು ಬೆರಗುಗಣ್ಣಿನಿಂದ ನೋಡುವಂತೆ ಮಾಡಿದ ನಮ್ಮ ಇಸ್ರೋ ವಿಜ್ಞಾನಿಗಳಿಗೆ ಎಷ್ಟು ಕೃತಜ್ಞತೆ ಹೇಳಿದರೂ ಸಾಲದು ಅಲ್ವಾ?
ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಸೌತ್ ಆಫ್ರಿಕಕ್ಕೆ ಹೋಗಿರುವ ಪ್ರಧಾನಿ ಮೀದಿಯವರು ವರ್ಚ್ಯೂಯಲ್ ಮೂಲಕ ಈ ದೃಶ್ಯವನ್ನು ವೀಕ್ಷಿಸಿದ ಪ್ರಧಾನಿ ಮೋದಿ ಭಾರತದ ಬಾವುಟ ತೋರಿಸಿ ಸಂಭ್ರಮಿಸಿದರು. ನಮ್ಮ ವಿಜ್ಞಾನಿಗಳು ಹಲವು ವರ್ಷಗಳಿಂದ ಇದಕ್ಕಾಗಿ ಶ್ರಮಿಸಿದ್ದಾರೆ ,ಸಮಸ್ತ ಭಾರತೀಯರ ಪರವಾಗಿ ಕೋಟಿ ಕೋಟಿ ಧನ್ಯವಾದ ಸಲ್ಲಿಸುತ್ತಿದ್ದೇನೆ ಎಂದು ಮೋದಿ ಹೇಳಿದ್ದಾರೆ.
ಮಕ್ಕಳು ಚಿಕ್ಕವಿರುವಾಗ ಚಂದ ಮಾಮನ ತೋರಿಸಿ ಅಮ್ಮ ಆಹಾರ ತಿನ್ನಿಸುತ್ತಿದ್ದಳು, ಆದರೆ ಇದೀಗ ಅದೇ ಚಂದಮಾಮನ ಮೇಲೆ ನಾವಿದ್ದೇವೆ, ಇದು ಖುಷಿಯ ವಿಚಾರವಾಗಿದೆ.
ಸೋಲೇ ಗೆಲುವಿನ ಸೋಪಾನ
ಒಮ್ಮೆ ಸೋತ ಮಾತ್ರ ಎಲ್ಲವೂ ಕಳೆದುಕೊಂಡಿವೆ ಎಂಬ ಅರ್ಥವಲ್ಲ, ಸೋತರೆ ಅದರಿಂದ ಗೆಲ್ಲುವ ಮಾರ್ಗವನ್ನು ಕಂಡುಕೊಳ್ಳಬೇಕು. ನಮ್ಮ ವಿಜ್ಞಾನಿಗಳು ಸೋಲಿನಿಂದ ಪಾಠ ಕಲಿತು ಇದೀಗ ಯಶಸ್ವಿನ ಖುಷಿಯನ್ನು ಸಂಭ್ರಮಿಸುತ್ತಿದ್ದಾರೆ. ಚಂದ್ರಯಾನ 2 ವಿಫಲರಾದಾಗ ಆವಾಗ ಇಸ್ರೋ ಅಧ್ಯಕ್ಷರಾಗಿದ್ದ ಕೆ. ಶಿವನ್ ಚಿಕ್ಕ ಮಗುವಿನಂತೆ ಬಿಕ್ಕಿ- ಬಿಕ್ಕಿ ಅತ್ತಾಗ ಅವರ ಕಣ್ಣೀರು ಭಾರತೋಯರ ಕಣ್ಣಂಚಿನಲ್ಲಿ ನೀರು ತಂದಿತ್ತು. ಆ ಸೋಲಿನಿಂದ ಕಲಿತ ಪಾಠಗಳಿಂದಲೇ ಇಂದು ನಮ್ಮ ವಿಜ್ಞಾನಿಗಳು ಲ್ಯಾಂಡರ್ ಅನ್ನು ಚಂದ್ರನ ಮೇಲೆ ಇಳಿಸಲು ಸಾಧ್ಯವಾಯಿತು.
ಸೂರ್ಯ-ಶುಕ್ರನ ಅಧ್ಯಯನವನ್ನು ಮಾಡಲಿದೆ ಇಸ್ರೋ
ಇಸ್ರೋ ತನ್ನ ಅನ್ವೇಷಣೆಯನ್ನು ಚಂದ್ರನಲ್ಲಿ ಮಾತ್ರವಲ್ಲ ಮುಂಬರುವ ವರ್ಷಗಳಲ್ಲಿ ಸೂರ್ಯ ಹಾಗೂ ಶುಕ್ರ ಗ್ರಹಗಳಲ್ಲಿ ಮಾಡುವ ಇಚ್ಛೆಯನ್ನು ಹೊಂದಿದ್ದು ಇಸ್ರೋದ ಮುಂದಿನ ಎಲ್ಲಾ ಪ್ರಯೋಗಗಳು ಯಶಸ್ವಿಯಾಗಲಿ, ಭಾರತ ವಿಶ್ವದಲ್ಲಿಯೇ ಬಿಲಿಷ್ಠ ರಾಷ್ಟ್ರವಾಗಿ ಬೆಳೆಯುವಂತಾಗಲಿ ಎಂಬುವುದೇ ಪ್ರತಿಯೊಬ್ಬ ಭಾರತೀಯರ ಪ್ರಾರ್ಥನೆ, ಆಶಯವಾಗಿದೆ... ಜೈ ಹಿಂದ್..



Click it and Unblock the Notifications