Latest Updates
-
ಹವಾಮಾನ ಇಲಾಖೆ ಎಚ್ಚರಿಕೆ: ಇಂದಿನ ಮಳೆ-ಸಿಡಿಲಿನ ಆರ್ಭಟಕ್ಕೆ ನಿಮ್ಮ ದಿನಚರಿ ಬದಲಾಯಿಸಿಕೊಳ್ಳಿ! -
ನೀಟ್ 2026 ಪರೀಕ್ಷೆ ಮುಗಿದಿದೆ: ಪೋಷಕರ ಜೊತೆ ಮನಬಿಚ್ಚಿ ಮಾತನಾಡಿ ಒತ್ತಡವನ್ನು ದೂರ ಮಾಡುವುದು ಹೇಗೆ? -
IMD ರೆಡ್ ಅಲರ್ಟ್: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಬಾಲ್ಕನಿ ಮತ್ತು ಗಿಡಗಳು ಬಲಿಯಾಗದಿರಲಿ, ಈ ಕೆಲಸ ತಕ್ಷಣ ಮಾಡಿ! -
ಹೀಟ್ವೇವ್ ಎಫೆಕ್ಟ್: ಸುಡುವ ಬಿಸಿಲಿಗೆ ತಂಪಾಗಲು ಮಜ್ಜಿಗೆ, ಎಳನೀರು ಸಾಕಾ? ಇಲ್ಲಿದೆ ಆರೋಗ್ಯದ ಗುಟ್ಟು -
ಮೆಟ್ ಗಾಲಾ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯ ತಾರೆಯರ ಅಬ್ಬರ, ಲೈವ್ ನೋಡುವುದು ಹೇಗೆ? -
ಪಾರ್ಕ್ಗಳಲ್ಲಿ ನಗು-ಯೋಗದ ಅಲೆ: ಒತ್ತಡ ಮರೆಸಿ ದಿನವಿಡೀ ಎನರ್ಜಿಟಿಕ್ ಆಗಿರೋದು ಹೇಗೆ? -
ಮದುವೆ ಅಥವಾ ಡೇಟಿಂಗ್ ಪ್ಲಾನ್ ಮಾಡಿದ್ದೀರಾ? ಇಂದಿನ ಹವಾಮಾನದ ಅಬ್ಬರಕ್ಕೆ ನಿಮ್ಮ ತಯಾರಿ ಹೇಗಿರಲಿ? -
ಬಿರುಗಾಳಿ ಮಳೆಗೆ ನಿಮ್ಮ ಬಾಲ್ಕನಿ ಗಾರ್ಡನ್ ನಲುಗುತ್ತಿದೆಯೇ? ಗಿಡಗಳನ್ನು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲ ಧಗೆಗೆ ಸುಸ್ತಾದ್ರಾ? ಈ ಪಾನೀಯಗಳಿದ್ದರೆ ಸಾಕು, ಬೇಸಿಗೆಯಲ್ಲೂ ಇರುತ್ತೀರಿ ಫ್ರೆಶ್! -
ಮೆಟ್ ಗಾಲಾ 2026: ಕರಣ್ ಜೋಹರ್ ಎಂಟ್ರಿಯಿಂದ ಫ್ಯಾಷನ್ ಲೋಕದಲ್ಲಿ ಸಂಚಲನ, ಭಾರತದಲ್ಲಿ ವೀಕ್ಷಿಸುವುದು ಹೇಗೆ?
ಅರ್ಜುನ ಪ್ರಶಸ್ತಿ ಗೆದ್ದ ಮೊದಲ ಮಹಿಳಾ ಕ್ರೀಡಾಪಟು..! ಯಾರು ಈ ದಿವ್ಯಾಕೃತಿ ಗೊತ್ತಾ?
ಕುದುರೆ ಸವಾರಿಯಲ್ಲಿ 41 ವರ್ಷಗಳ ಸುದೀರ್ಘ ಯಶಸ್ಸಿನ ನಂತರ ದೇಶಕ್ಕೆ ಐತಿಹಾಸಿಕ ಚಿನ್ನದ ಪದಕ ಗೆದ್ದುಕೊಟ್ಟ ಭಾರತದ ಈಕ್ವೆಸ್ಟ್ರಿಯನ್ ಡ್ರೆಸ್ಸೇಜ್ ತಂಡದ ಸದಸ್ಯೆ ರಾಜಸ್ಥಾನದ ದಿವ್ಯಾಕೃತಿ ಸಿಂಗ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮಂಗಳವಾರ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಿದರು.
ಏಷ್ಯನ್ ಗೇಮ್ಸ್ 2023ರಲ್ಲಿ ಅವರ ಅತ್ಯುತ್ತಮ ಪ್ರದರ್ಶನಕ್ಕಾಗಿ ಅವರಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ. ಈ ಗೌರವ ಪಡೆದ ಏಕೈಕ ಭಾರತೀಯ ಮಹಿಳೆ ಎಂಬ ಕೀರ್ತಿಗೆ ಅವರು ಭಾಜನರಾಗಿದ್ದಾರೆ. ಹಾಗಾದರೆ ಯಾರು ಈ ದಿವ್ಯಾಕೃತಿ? ಆಕೆಯ ಸಾಧನೆ ಏನು? ಈ ಎಲ್ಲಾ ಮಾಹಿತಿ ಇಲ್ಲಿದೆ ನೋಡಿ.
ದಿವ್ಯಾಕೃತಿ ಸಿಂಗ್ ರಾಥೋಡ್ ಮೂಲತಃ ನಾಗೌರ್ನವರು, ಅವರು ಪ್ರಸ್ತುತ ರಾಜಸ್ಥಾನದ ಜೈಪುರದಲ್ಲಿ ವಾಸಿಸುತ್ತಿದ್ದಾರೆ. ದಿಲ್ಲಿ ವಿಶ್ವವಿದ್ಯಾನಿಲಯದಲ್ಲಿ ಮನಃಶಾಸ್ತ್ರ ಓದುತ್ತಿದ್ದಾಗ ಸ್ಪರ್ಧೆಯಲ್ಲಿ ಭಾಗವಹಿಸಲು ಕುದುರೆ ಇಲ್ಲದ ಕಾರಣ ದಿವ್ಯಾಕೃತಿ ಎರಡು ವರ್ಷಗಳ ಕಾಲ ಯಾವುದೇ ಸ್ಪರ್ಧೆಯಲ್ಲಿ ಭಾಗವಹಿಸಿರಲಿಲ್ಲ.

ಆದರೆ ಆಕೆಯ ತಂದೆ ಮಗಳ ಪ್ರತಿಭೆಯನ್ನು ಗುರುತಿಸಿ ಜರ್ಮನಿಯಿಂದ ಕುದುರೆಯನ್ನು ಖರೀದಿಸಿ ಪ್ರೋತ್ಸಾಹಿಸಿದರು. ಕುದುರೆಯ ಸಹಾಯದಿಂದ, ಅವರು ತಮ್ಮ ಹೆಚ್ಚಿನ ತರಬೇತಿಯನ್ನು ಪೂರ್ಣಗೊಳಿಸಿದರು, ಇದರ ಪರಿಣಾಮವಾಗಿ ಭಾರತ ತಂಡವು ಏಷ್ಯನ್ ಕ್ರೀಡಾಕೂಟದಲ್ಲಿ ಐತಿಹಾಸಿಕ ಪ್ರದರ್ಶನವನ್ನು ನೀಡಲು ಸಾಧ್ಯವಾಗಿತ್ತು.
ಆನುವಂಶಿಕವಾಗಿ ಕುದುರೆ ಸವಾರಿ
ದಿವ್ಯಾಕೃತಿ ಅತ್ಯುತ್ತಮ ಕುದುರೆ ಸವಾರಿ ಪಟು. ಅವರು ಈ ಕ್ರೀಡೆಯನ್ನು ಆನುವಂಶಿಕವಾಗಿ ಪಡೆದಿದ್ದಾರೆ. ಕುಟುಂಬದಲ್ಲಿ ಕುದುರೆ ಸವಾರಿಯ ಮೊದಲ ಪಾಠವನ್ನು ಪಡೆದರು. ದಿವ್ಯಾಕೃತಿಯ ತಂದೆ ವಿಕ್ರಮ್ ಸಿಂಗ್ ರಾಥೋಡ್ ಕೂಡ ಈ ಕ್ರೀಡೆಯಲ್ಲಿ ವಿಶೇಷ ಗುರುತನ್ನು ಹೊಂದಿದ್ದಾರೆ. ಅವರು ರಾಜಸ್ಥಾನ ಪೋಲೋ ಅಸೋಸಿಯೇಷನ್ ಕ್ಲಬ್ನಲ್ಲಿ ಕುದುರೆ ಸವಾರಿ ಮಾಡಿರುವ ಅನುಭವ ಹೊಂದಿದ್ದಾರೆ.
ಇಲ್ಲಿಂದ ತರಬೇತಿ ಪಡೆದರು
ದಿವ್ಯಾಕೃತಿ ದೆಹಲಿ ವಿಶ್ವವಿದ್ಯಾಲಯದ ಜೀಸಸ್ ಮತ್ತು ಮೇರಿ ಕಾಲೇಜಿನಲ್ಲಿ ಓದುತ್ತಿದ್ದಾಗ ಯುರೋಪ್ (ನೆದರ್ಲ್ಯಾಂಡ್ಸ್, ಬೆಲ್ಜಿಯಂ, ಜರ್ಮನಿ, ಆಸ್ಟ್ರಿಯಾ) ನಲ್ಲಿ ತರಬೇತಿ ಪಡೆಯುತ್ತಿದ್ದರು. ಅಷ್ಟೇ ಅಲ್ಲ, ವಿಶ್ವದ ಕುದುರೆ ಸವಾರಿ ರಾಜಧಾನಿ ಎನಿಸಿಕೊಂಡಿರುವ ಅಮೆರಿಕದ ವೆಲ್ಲಿಂಗ್ಟನ್-ಫ್ಲೋರಿಡಾದಲ್ಲಿ ತರಬೇತಿಯನ್ನೂ ಪಡೆದಿದ್ದಾರೆ.
ದಿವ್ಯಾಕೃತಿ ಸಿಂಗ್ ಕಳೆದ ಕೆಲವು ವರ್ಷಗಳಿಂದ ಜರ್ಮನಿಯಲ್ಲಿ ಕುದುರೆ ಸವಾರಿ ತರಬೇತಿ ಪಡೆಯುತ್ತಿದ್ದಾರೆ. ಈ ಹಿಂದೆ, 2022 ರ ಏಷ್ಯನ್ ಗೇಮ್ಸ್ಗೆ ಆಯ್ಕೆಯಾಗದಿದ್ದಾಗ ಅವರು ಸಾಕಷ್ಟು ಎದೆಗುಂದಿದ್ದರು, ಆದರೆ ಬಳಿಕ ಕಠಿಣ ಅಭ್ಯಾಸದ ಬಳಿಕ ಮತ್ತೆ ಆಯ್ಕೆಯಾದರು. ಮೊದಲು ಚಿನ್ನದ ಪದಕವನ್ನು ಗೆದ್ದರು ಮತ್ತು ಈಗ ಅರ್ಜುನ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ದೇಶಕ್ಕೆ ಗೌರವ ತಂದಿದ್ದಾರೆ.
ಯಾರಿಗೆಲ್ಲಾ ಪ್ರಶಸ್ತ ನೀಡಲಾಗಿದೆ.
ಅರ್ಜುನ ಪ್ರಶಸ್ತಿ ಪಡೆದವರಲ್ಲಿ 12 ಮಹಿಳಾ ಕ್ರಿಕೆಟ್ ಆಟಗಾರ್ತಿಯರು ಸೇರಿದ್ದಾರೆ. ಮೊಹಮ್ಮದ್ ಶಮಿ (ಕ್ರಿಕೆಟ್) ಅಜಯ್ ರೆಡ್ಡಿ (ಅಂಧರ ಕ್ರಿಕೆಟ್), ಓಜಸ್ ಪ್ರವೀಣ್ ಡಿಯೋಟಾಲೆ (ಆರ್ಚರಿ), ಅದಿತಿ ಗೋಪಿಚಂದ್ ಸ್ವಾಮಿ (ಆರ್ಚರಿ), ಶೀತಲ್ ದೇವಿ (ಪ್ಯಾರಾ ಆರ್ಚರಿ), ಪಾರುಲ್ ಚೌಧರಿ ಮತ್ತು ಮುರಳಿ ಶ್ರೀಶಂಕರ್ (ಅಥ್ಲೆಟಿಕ್ಸ್), ಮೊಹಮ್ಮದ್ ಹುಸಾಮುದ್ದೀನ್ (ಬಾಕ್ಸಿಂಗ್), ಆರ್. ವೈಶಾಲಿ (ಚೆಸ್), ದಿವ್ಯಾಕೃತಿ ಸಿಂಗ್ ಮತ್ತು ಅನುಷ್ ಅಗರ್ವಾಲಾ (ಈಕ್ವೆಸ್ಟ್ರಿಯನ್), ದೀಕ್ಷಾ ದಾಗರ್ (ಗಾಲ್ಫ್), ಕ್ರಿಶನ್ ಬಹದ್ದೂರ್ ಪಾಠಕ್ (ಹಾಕಿ), ಸುಶೀಲಾ ಚಾನು (ಹಾಕಿ), ಪಿಂಕಿ (ಲಾನ್ ಬಾಲ್), ಐಶ್ವರಿ ಪ್ರತಾಪ್ ಸಿಂಗ್ ತೋಮರ್ (ಶೂಟಿಂಗ್), ಅಂತಿಮ್ ಪಂಘಲ್ (ಕುಸ್ತಿ), ಐಹಿಕಾ ಮುಖರ್ಜಿ (ಟೇಬಲ್ ಟೆನಿಸ್).



Click it and Unblock the Notifications