Latest Updates
-
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಯೋಗ ದಿನಾಚರಣೆ: ಮೈದಾನದಲ್ಲಿ ಯೋಗ ಮಾಡಲು ಸಿದ್ಧರಿದ್ದೀರಾ? ಇಲ್ಲಿದೆ ಅಗತ್ಯ ಮುನ್ನೆಚ್ಚರಿಕೆಗಳು! -
ಟೆಲಿಗ್ರಾಮ್ ಬಳಕೆದಾರರೇ ಎಚ್ಚರ: ಜೂನ್ 16 ರಿಂದ 22 ರವರೆಗೆ ಸೇವೆ ಸ್ಥಗಿತ, ಪರ್ಯಾಯ ಮಾರ್ಗಗಳೇನು? -
ಪಂಜಾಬ್-ಹರಿಯಾಣದಲ್ಲಿ ಭಾರಿ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ 20 ನಿಮಿಷಗಳ ಟಿಪ್ಸ್ ಪಾಲಿಸಿ! -
ಸೋಯಾಬೀನ್ ಎಣ್ಣೆ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಮೇಲೆ ಹೊರೆ, ಕಲಬೆರಕೆ ಪತ್ತೆ ಹಚ್ಚುವುದು ಹೇಗೆ?
ಮೊದಲ ಆಷಾಢ ಶುಕ್ರವಾರ: ಈ ದಿನ ಮೈಸೂರು ಚಾಮುಂಡೇಶ್ವರಿ ದರ್ಶನದ ಮಹತ್ವವೇನು?
ಜೂನ್ 23ಕ್ಕೆ ಮೊದಲ ಆಷಾಢ ಶುಕ್ರವಾರ. ಈ ದಿನ ಲಕ್ಷ್ಮಿ ಪೂಜೆಗೆ ತುಂಬಾ ಶ್ರೇಷ್ಠ ಅದರಲ್ಲೂ ಮೈಸೂರಿನ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಗುವುದು. ಈ ದಿನ ದೇವಿಯ ದರ್ಶನ ಪಡೆಯಲು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಭಾರತದ ಪ್ರಮುಖ ಶಕ್ತಿಪೀಠಗಳಲ್ಲಿ ಒಂದಾಗಿರುವ ನಾಡ ದೇವತೆ ಚಾಮುಂಡೇಶ್ವರಿಗೆ ಆಷಾಢ ಶುಕ್ರವಾರದಂದು ವಿಶೇಷ ಪೂಜೆ ಸಲ್ಲಿಸಲಾಗುವುದು.

ಚಾಮುಂಡೇಶ್ವರಿ ಮಹಿಷಾಸುರ ರಾಕ್ಷಸನನ್ನು ಕೊಂದ ಕಾರಣ ಮಹಿಷಾಸುರ ಮರ್ದಿನಿ ಎಂದು ಕೂಡ ಕರೆಯಲಾಗುವುದು. ಚಾಮುಂಡೇಶ್ವರಿ ದೇವಿಗೆ ಆಷಾಢ ಶುಕ್ರವಾರ ಸಲ್ಲಿಸುವ ಪೂಜೆ ತುಂಬಾ ವಿಶೇಷ ಏಕೆ? ಈ ದಿನ ಚಾಮುಂಡೇಶ್ವರಿಯನ್ನು ದರ್ಶನ ಮಾಡಬೇಕೆಂದು ಹೇಳುವುದು ಏಕೆ ಎಂದು ನೋಡೋಣ ಬನ್ನಿ:
ಆಷಾಢ ಮೊದಲ ಶುಕ್ರವಾರದಂದು ಮೈಸೂರು ಚಾಮುಂಡೇಶ್ವರಿ ದೇವಾಲಯದಲ್ಲಿ ಸಲ್ಲಿಸುವ ಪೂಜೆ ತುಂಬಾ ವಿಶೇಷ ಏಕೆ?
ಮೈಸೂರು ಚಾಮುಂಡೇಶ್ವರಿ ದೇವಿಗೆ ಆಷಾಢ ಮಾಸದ ಮೊದಲ ಶುಕ್ರವಾರದಂದು ವಿಶೇಷ ಪೂಜೆಯನ್ನು ಸಲ್ಲಿಸಲಾಗುವುದು. ಈ ದಿನ ಆಷಾಢ ಮಾಸದ ಮೊದಲ ಶುಕ್ರವಾರ ಚಾಮುಂಡಿ ತಾಯಿಯ ಜನ್ಮ ದಿನ. ಈ ಬಾರಿ ಚಾಮುಂಡೇಶ್ವರಿ ಜಯಂತಿಯನ್ನು ಜೂನ್ 23ರಂದು ಆಚರಿಸಲಾಗುತ್ತಿದೆ.
ಈ ದಿನ ತಾಯಿ ಚಾಮುಂಡಿಗೆ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಸಹಸ್ರನಾಮಾರ್ಚನೆ, ತ್ರಿಪಾದಿ, ಅಷ್ಟೋತ್ತರ ಹೀಗೆ ವಿವಿಧ ಬಗೆಯ ವಿಶೇಷ ಪೂಜೆಯನ್ನು ಆಯೋಜಿಸಲಾಗುತ್ತದೆ. ಆಷಾಢದ ಮೊದಲ ಶುಕ್ರವಾರದಿಂದ ಹಿಡಿದು ಪ್ರತೀಶುಕ್ರವಾರ ವಿಶೇಷ ಪೂಜೆಯನ್ನು ಸಲ್ಲಿಸಲಾಗುವುದು. ಆಷಾಢ ಶುಕ್ರವಾರದ ಸಮಯದಲ್ಲಿ ತುಂಬಾ ಭಕ್ತರು ಆಗಮಿಸುತ್ತಾರೆ. ಇವರಿಗೆ ಪ್ರಸಾದವನ್ನು ವಿತರಿಸಲಾಗುವುದು.
ಈ ಬಾರಿ ಭಕ್ತರಿಗೆ ಸಿದ್ಧವಾಗಿದೆ ಮ್ಯಾಂಗೋ ಬರ್ಫಿ ಪ್ರಸಾದ
ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆಯಲು ಬರುವ ಭಕ್ತರಿಗೆ ಮ್ಯಾಂಗೋ ಬರ್ಫಿ ಪ್ರಸಾದ ಸಿದ್ಧವಾಗುತ್ತಿದೆ. 18 ವರ್ಷಗಳಿಂದ ಪ್ರಸಾದ ವ್ಯವಸ್ಥೆ ಮಾಡುತ್ತಿರುವ ನೂರಡಿ ರಸ್ತೆಯ ಶ್ರೀ ಚಾಮುಂಡೇಶ್ವರಿ ಸೇವಾ ಸಮಿತಿ ಈ ಬಾರಿಯೂ ಪ್ರಸಾದ ವಿತರಣೆ ಮಾಡಲಿದೆ. ನಾಳೆ ಅಂದರೆ ಜೂನ್ 23 ಶುಕ್ರವಾರ ಬೆಳಗ್ಗೆಯೇ ಪ್ರಸಾದ ನೀಡಲಾರಂಭಿಸುತ್ತಾರೆ. ಬೆಳಗ್ಗೆ ಉಪಹಾರಕ್ಕೆ ಪೈನಾಪಲ್ ಕೇಸರ್ಬಾತ್, ಪೊಂಗಲ್, ರವಾವಾಂಗೀಬಾತ್ ಇರಲಿದೆ. ಮಧ್ಯಾಹ್ನ ಊಟಕ್ಕೆ ಕೋಸಂಬರಿ, ಪಲ್ಯ, ಬಿಸಿಬೇಳೆಬಾತ್, ಅನ್ನ ಸಾಂಬಾರ್, ಹಪ್ಪಳ, ಮೊಸರು ಹಾಗೂ ಮ್ಯಾಂಗೋಬರ್ಫಿ ನೀಡಲಾಗುವುದು.
ಆಷಾಢ ಶುಕ್ರವಾರ ಭಕ್ತರು ಚಾಮುಂಡೇಶ್ವರಿ ದರ್ಶನವನ್ನೇಕೆ ಮಾಡುತ್ತಾರೆ?
* ಆಷಾಢ ಶುಕ್ರವಾರದಂದು ದೇವಿಗೆ ವಿಶೇಷ ಅಲಂಕಾರ ಮಾಡಲಾಗುವುದು, ಇದನ್ನು ಕಣ್ತುಂಬಿಕೊಳ್ಳುವುದೇ ಮಹಾದೃಷ್ಟ.
* ದೇವಿಯನ್ನು ಚಿನ್ನದ ಪಲ್ಲಕ್ಕಿಯಲ್ಲಿ ಮೆರವಣಿಗೆ ಮಾಡಲಾಗುವುದು, ಈ ಭಾಗ್ಯವನ್ನು ಕಣ್ತುಂಬಿಕೊಳ್ಳಬಹುದು.
* ದೇವಿಯ ವಿಶೇಷ ಮಂತ್ರಗಳ ಪಠಣೆ ಮಾಡಲಾಗುವುದು, ಇದನ್ನು ಕೇಳಿದರೆ ನಮಗೆ ಭಾಗ್ಯ ಒದಗಲಿದೆ.
* ಚಾಮುಂಡೇಶ್ವರಿ ದೇವಿ ಕ್ಷೇತ್ರಕ್ಕೆ ಬಂದು ಈ ದಿನ ಏನು ಬೇಡಿಕೊಂಡರೂ ಅದು ನೆರವೇರುವುದು ಎಂದು ಹೇಳಲಾಗುವುದು. ಆದ್ದರಿಂದ ಈ ದಿನ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸುತ್ತಾರೆ.



Click it and Unblock the Notifications