Latest Updates
-
ಲಿವ್-ಇನ್ ಸಂಬಂಧ ಮುರಿದರೆ ಕ್ರಿಮಿನಲ್ ಕೇಸ್? ಸುಪ್ರೀಂ ಕೋರ್ಟ್ನಿಂದ ಬಂತು ಬಿಗ್ ಶಾಕ್! -
ಉರಿಬಿಸಿಲಿನ ತಾಪಕ್ಕೆ ಸುಸ್ತಾದ್ರಾ? ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಹೀಟ್ ವೇವ್ ಎಚ್ಚರಿಕೆ: ಬಿಸಿಲಿನ ಬೇಗೆಯಿಂದ ಬಚಾವಾಗಲು ಈ ಪಾನೀಯಗಳೇ ಮದ್ದು! -
ಅನುಷ್ಕಾ ಶರ್ಮಾ ಐಪಿಎಲ್ ಲುಕ್: ಸಿಂಪಲ್ ಡ್ರೆಸ್ನಲ್ಲೇ ಮ್ಯಾಜಿಕ್ ಮಾಡಿದ್ದು ಹೇಗೆ? -
ಬಿಸಿಗಾಳಿ ಎಚ್ಚರಿಕೆ: ಏಪ್ರಿಲ್ ಬಿಸಿಲಿನಿಂದ ಪಾರಾಗಲು ನಿಮ್ಮ ಫಿಟ್ನೆಸ್ ರೂಟೀನ್ ಬದಲಾಯಿಸುವುದು ಹೇಗೆ? -
ಪೊಲೀಸ್ ಕಿರುಕುಳದಿಂದ ಬೇಸತ್ತಿದ್ದೀರಾ? ಪ್ರೇಮಿಗಳಿಗೆ ರಕ್ಷಣೆ ನೀಡಲು ಹೈಕೋರ್ಟ್ ಕೊಟ್ಟಿದೆ ಬಿಗ್ ರಿಲೀಫ್! -
ಬಿಸಿಲ ಬೇಗೆಯಿಂದ ತತ್ತರಿಸಿದೆಯೇ? ನಿಮ್ಮ ಮನೆ ಮತ್ತು ಗಿಡಗಳನ್ನು ತಂಪಾಗಿರಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್ -
ಬಿಸಿಲ ಬೇಗೆಯಿಂದ ಪಾರಾಗಲು ಈ ಸರಳ ಟಿಪ್ಸ್ ಪಾಲಿಸಿ: ಸುಡುವ ಬಿಸಿಲಿನಲ್ಲಿ ಆರೋಗ್ಯವಾಗಿರುವುದು ಹೇಗೆ? -
ಸುಡುವ ಬಿಸಿಲಿಗೆ ಸುಸ್ತಾದ್ರಾ? ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿರೋ ಈ ಕೂಲಿಂಗ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಗಾಳಿಯ ಅಬ್ಬರ: ನಿಮ್ಮ ವರ್ಕೌಟ್ ರೂಟೀನ್ ಬದಲಾಯಿಸದಿದ್ದರೆ ಕಾದಿದೆ ದೊಡ್ಡ ಅಪಾಯ!
ಗಣೇಶ ಚತುರ್ಥಿ 2023 : ಶುಭ ಮುಹೂರ್ತ, ಪೂಜಾವಿಧಿ ಹೇಗಿರಬೇಕು?
ವಿನಾಯಕ ಚತುರ್ಥಿ ಅಥವಾ ಗಣೇಶ ಹಬ್ಬವನ್ನು ದೇಶದಾದ್ಯಂತ ಹಬಳ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತದೆ. ಈ ಹಬ್ಬವನ್ನು 10 ದಿನಗಳ ಕಾಲ ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ಗಣೇಶನ ವಿಗ್ರಹವನ್ನು ವಿವಿಧ ಸ್ಥಳಗಳಲ್ಲಿ ಸ್ಥಾಪಿಸಿ ವಿಶೇಷ ಪೂಜೆಯನ್ನು ಸಲ್ಲಿಸಲಾಗುತ್ತದೆ.

10 ದಿನಗಳ ಕಾಲ ಶ್ರದ್ಧಾಭಕ್ತಿಯಿಂದ ವಿನಾಯಕನನ್ನು ಪೂಜಿಸಿ 11ನೇ ದಿನ ಗಣೇಶನ ಮೂರ್ತಿಯನ್ನು ವಿಸರ್ಜನೆ ಮಾಡಲಾಗುತ್ತದೆ. ಅಷ್ಟಕ್ಕೂ ಗಣೇಶ ಚತಿರ್ಥಿ ಯಾವಾಗ? ಶುಭ ಮುಹೂರ್ತ ಹಾಗೂ ಪೂಜಾ ವಿಧಿಗಳ ಬಗ್ಗೆ ತಿಳಿಯೋಣ.
ಗಣೇಶ ಚತುರ್ಥಿ 2023 ದಿನಾಂಕ :
ಧಾರ್ಮಿಕ ನಂಬಿಕೆಗಳ ಪ್ರಕಾರ ಭಗವಾನ್ ಗಣೇಶನು ಭಾದ್ರಪದ ಮಾಸದ ಶುಕ್ಲ ಪಕ್ಷದ ಚತುರ್ಥಿಯಂದು ಜನಿಸಿದನು. ಈ ವರ್ಷ ಗಣೇಶನ ಉತ್ಸವವು ಮಂಗಳವಾರ 18 ಸೆಪ್ಟೆಂಬರ್ 2023 ರಿಂದ ಪ್ರಾರಂಭವಾಗುತ್ತದೆ. ಈ ಹಬ್ಬವನ್ನು ದೇಶಾದ್ಯಂತ 10 ದಿನಗಳ ಕಾಲ ಸಂಭ್ರಮದಿಂದ ಆಚರಿಸಲಾಗುವುದು. ನಂತರ 28 ಸೆಪ್ಟೆಂಬರ್ 2023 ರಂದು ಗುರುವಾರದಂದು ಗಣೇಶನನ್ನು ವಿಸರ್ಜನೆ ಮಾಡಲಾಗುವುದು.
ಗಣೇಶ ಚತುರ್ಥಿ 2023 ರ ಶುಭ ಮುಹೂರ್ತ :
ಹಿಂದೂ ಕ್ಯಾಲೆಂಡರ್ ಪ್ರಕಾರ ಈ ವರ್ಷದ ಗಣೇಶ ಚತುರ್ಥಿ 18 ಸೆಪ್ಟೆಂಬರ್ ಸೋಮವಾರ 2023 ರಂದು ಮಧ್ಯಾಹ್ನ 12:39 ರಿಂದ ಪ್ರಾರಂಭವಾಗುತ್ತದೆ. ಚತುರ್ಥಿ ತಿಥಿಯು ಮರುದಿನ ಅಂದರೆ ಮಂಗಳವಾರ ಸೆಪ್ಟೆಂಬರ್ 19 ರಂದು ರಾತ್ರಿ 08:43 ಕ್ಕೆ ಕೊನೆಗೊಳ್ಳುತ್ತದೆ. ಗಣಪತಿಯನ್ನು ಪೂಜಿಸಲು ಶುಭ ಸಮಯವು ಬೆಳಿಗ್ಗೆ 11:01 ರಿಂದ ಮಧ್ಯಾಹ್ನ 01:28 ರವರೆಗೆ ಇರುತ್ತದೆ. ವಿನಾಯಕನನ್ನು ಆರಾಧಿಸಲು ನಿಮಗೆ 2 ಗಂಟೆ 27 ನಿಮಿಷಗಳ ಸಮಯ ಸಿಗುತ್ತದೆ. ಗಣೇಶ ಚತುರ್ಥಿಯಂದು ಬೆಳಿಗ್ಗೆ 09:45 ರಿಂದ ರಾತ್ರಿ 08:44 ರವರೆಗೆ ಚಂದ್ರನನ್ನು ನೋಡದಂತೆ ಜ್ಯೋತಿಷಿಗಳು ಸಲಹೆ ನೀಡುತ್ತಾರೆ.
ಗಣೇಶ ಚತುರ್ಥಿ ಪೂಜಾ ವಿಧಾನ ಹೇಗಿರಬೇಕು?
* ಗಣೇಶ ಚತುರ್ಥಿಯ ದಿನ ಬೆಳಗ್ಗೆ ಬೇಗ ಎದ್ದು ಸ್ನಾನ ಮಾಡಿ
* ಇದರ ಬಳಿಕ ಪೂಜಾ ಕೊಠಡಿಯನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ. ನಂತರವೇ ಗಣೇಶನನ್ನು ಪೂಜಿಸಬೇಕು
* ಮಂಗಳಕರ ಸಮಯದಲ್ಲಿ ಈಶಾನ್ಯ ಮೂಲೆಯಲ್ಲಿ ಮರದ ಕಂಬವನ್ನು ಸ್ಥಾಪಿಸಿ
* ಒಂದು ಸ್ಟೂಲ್ ಮೇಲೆ ಕೆಂಪು ಅಥವಾ ಹಳದಿ ಬಣ್ಣದ ಬಟ್ಟೆಯನ್ನು ಹರಡಿ
* ಅದರ ಮೇಲೆ ಗಣಪನ ವಿಗ್ರಹವನ್ನು ಪ್ರತಿಷ್ಠಾಪಿಸಿ
* ಪ್ರತಿ ದಿನ ನಿಯಮಿತವಾಗಿ ಗಣಪತಿಯನ್ನು ಪೂಜಿಸಿ.
* 11 ನೇ ದಿನದಂದು ಗಣಪತಿಯನ್ನು ಭಕ್ತಿಯಿಂದ ಬೀಳ್ಕೊಡಿ.
ಗಣೇಶನನ್ನು ಈ ರೀತಿ ಭಕ್ತಿಯಿಂದ ಪೂಜಿಸಿದ್ರೆ ನಿಮ್ಮ ಸಕಲ ಸಂಕಷ್ಟಗಳೆಲ್ಲಾ ನಿವಾರಣೆ ಆಗುತ್ತದೆ ಎನ್ನುವ ನಂಬಿಕೆಯಿದೆ.



Click it and Unblock the Notifications