Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಗಣೇಶ ಚತುರ್ಥಿ 2023: ನಿಮ್ಮ ರಾಶಿ ಪ್ರಕಾರ ಗಣೇಶನಿಗೆ ಈ ನೈವೇದ್ಯ ಅರ್ಪಿಸಿ
ಈ ವರ್ಷ ಗಣೇಶ ಚತುರ್ಥಿಯನ್ನು ಸೆಪ್ಟೆಂಬರ್ 18, 19ರಂದು ಆಚರಿಸಲಾಗುವುದು. ಗಣೇಶನನ್ನು ಸೆಪ್ಟೆಂಬರ್ 19ರಂದು ಪ್ರತಿಷ್ಠಾಪನೆ ಮಾಡಲಾಗುವುದು. ನೀವು ಗಣೇಶನನ್ನು ನಿಮ್ಮ ರಾಶಿಗೆ ಪ್ರಕಾರ ಹೇಗೆ ಪ್ರತಿಷ್ಠಾಪನೆ ಮಾಡಬೇಕು ಎಂಬುವುದನ್ನು ಈ ಹಿಂದಿನ ಲೇಖನದಲ್ಲಿ ಹೇಳಿದ್ದೆವು. ಈ ಲೇಖನದಲ್ಲಿ ನಿಮ್ಮ ರಾಶಿ ಪ್ರಕಾರ ಗಣೇಶನಿಗೆ ಯಾವ ನೈವೇದ್ಯ ಅರ್ಪಿಸಿದರೆ ಒಳ್ಳೆಯದು ಎಂದು ಹೇಳಲಾಗಿದೆ ನೋಡಿ:

ವೃಷಭ ರಾಶಿ: ವೃಷಭ ರಾಶಿಯವರು ಅಕ್ಕಿ ಪಾಯಸ ಅಥವಾ ಲಡ್ಡುವನ್ನು ಪ್ರಸಾದವನ್ನಾಗಿ ಅರ್ಪಿಸಿ
ಮಿಥುನ ರಾಶಿ: ನೀವು ಗಣೇಶನಿಗೆ ಫ್ರೂಟ್ ಸಲಾಡ್, ಸೌತೆ ರಾಯತ, ಮೊಳಕೆ ಬರಿಸಿದ ಕಾಳುಗಳನ್ನು ಅರ್ಪಿಸಿ
ಕರ್ಕ ರಾಶಿ: ಕರ್ಕ ರಾಶಿಯವರು ಗಣೇಶನಿಗೆ ಕಿಚಡಿ, ಕಡ್ಲೆ ಕಾಳು ಇವುಗಳನ್ನು ಪ್ರಸಾದವನ್ನಾಗಿ ಅರ್ಪಿಸಿ
ಸಿಂಹ ರಾಶಿ: ಸಿಂಹ ರಾಶಿಯವರು ಗಣೇಶನಿಗೆ ಪಾಯಸ, ಬೂಂದಿ, ಲಡ್ಡುಗಳನ್ನು ಅರ್ಪಿಸಿ
ಕನ್ಯಾ ರಾಶಿ: ನೀವು ಬೂಂದಿಯನ್ನು ಗಣೇಶನಿಗೆ ಅರ್ಪಿಸಿ.
ತುಲಾ ರಾಶಿ: ನೀವು ಗಣೇಶನಿಗೆ ತೆಂಗಿನಕಾಯಿಂದ ಮಾಡಿದ ಸಿಹಿತಿಂಡಿಯನ್ನು ಅರ್ಪಿಸಿ. ಕರ್ಜಿಕಾಯಿಯನ್ನು ಮಾಡಿ ಅರ್ಪಿಸಿ.
ವೃಶ್ಚಿಕ ರಾಶಿ: ನೀವು ಗಣೇಶನಿಗೆ ಬಗೆ ಬಗೆಯ ಮೋದಕಗಳನ್ನು ಅರ್ಪಿಸಿ
ಧನು ರಾಶಿ: ನೀವು ಹಣ್ಣುಗಳನ್ನು, ಸಿಹಿ ತಿಂಡಿಗಳನ್ನು ಅರ್ಪಿಸಿ'
ಮಕರ ರಾಶಿ: ನೀವು ಗಣೇಶನಿಗೆ ಜಿಲೇಬಿ, ಸಿಹಿ ಕಡಬು ಅರ್ಪಿಸಿ
ಕುಂಭ ರಾಶಿ: ಕುಂಭ ರಾಶಿಯವರು ಗಣೇಶನಿಗೆ ಹತ್ತಿ ಹಣ್ಣು, ಲಡ್ಡು ಇವುಗಳನ್ನು ಅರ್ಪಿಸಿದರೆ ಒಳ್ಳೆಯದು
ಮೀನ ರಾಶಿ: ಮೀನ ರಾಶಿಯವರು ಗಣೇಶನಿಗೆ ಬೂಂದಿ, ಮೋದಕ, ಲಡ್ಡುಗಳನ್ನು ಅರ್ಪಿಸಿ.
ಗಣೇಶನಿಗೆ ಪ್ರಸಾದವನ್ನು ಅರ್ಪಿಸುವಾಗಈ ಮಂತ್ರ ಪಠಿಸಿ
ಓಂ ಗಂ ಗಣಪತೆಯೇ ನಮಃ: ಈ ಮಂತ್ರವನ್ನು ಪಠಿಸುವುದರಿಂದ ವಿಘ್ನ ನಿವಾರಕ ನಿಮ್ಮೆಲ್ಲಾ ಕಷ್ಟಗಳನ್ನು ದೂರ ಮಾಡುತ್ತಾನೆ.
ವಕ್ರತುಂಡ ಮಹಾಕಾಯ : ಈ ಮಂತ್ರವನ್ನು ಪಠಣೆ ಮಾಡುವುದರಿಂದ ಸಂಪತ್ತು ವೃದ್ಧಿಸಲಿದೆ, ನಿಮ್ಮ ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯಲಿದೆ.
ಗಣೇಶ ಗಾಯತ್ರಿ ಮಂತ್ರ
"ಓಂ ಏಕದಂತಾಯ ವಿದ್ಮಹೇ ವಕ್ರತುಂಡಾಯ ಧೀಮಹಿ ತನ್ನೋ ಬುದ್ಧಿಧ್ ಪ್ರಚೋದಯಾತ್"
ಈ ಗಾಯತ್ರಿ ಮಂತ್ರ ಪಠಣೆ ಮಾಡುವುದರಿಂದ ಶ್ರೀಗಣೇಶನ ರಕ್ಷೆ ಸದಾ ನಿಮ್ಮ ಮೇಲಿರುತ್ತದೆ.
ಓಂ ಶ್ರೀ ಗಣೇಶಾಯ ನಮಃ: ಈ ಮಂತ್ರವನ್ನು ನೀವು ಯಾವಾಗ ಬೇಕಾದರೂ ಪಠಿಸಬಹುದು. ಈ ರೀತಿ ಮಂತ್ರ ಪಠಣೆ ಮಾಡುವುದರಿಂದ ಮನಸ್ಸಿಗೆ ಆತ್ಮವಿಶ್ವಾಸ ಹೆಚ್ಚಾಗಲಿದೆ.
ಗಣೇಶ ಮೂಲ ಮಂತ್ರ:
ಓಂ ಶ್ರೀಂ ಹ್ರೀಂ ಕ್ಲೀಂ ಗ್ಲೌಂ ಗಂ ಗಣಪತಯೇ ವರ ವರದ ಸರ್ವಜನಂ ಮೇ ವಶಮಾನಯ ಸ್ವಾಹಾ॥
ಏಕದನ್ತಾಯ ವಿದ್ಮಹೇ ।
ವಕ್ರತುಂಡಾಯ ಧೀಮಹಿ ।
ತನ್ನೋ ದನ್ತಿ ಪ್ರಚೋದಯಾತ್ ॥
ॐ ಶಾಂತಿಃ ಶಾಂತಿಃ ಶಾಂತಿಃ ॥
ಈ ಜಗತ್ತಿಗೆ, ಜನರಿಗೆ ಒಳಿತಾಗಲು, ಎಲ್ಲರೂ ಒಳ್ಳೆಯ ಜೀವನ ನಡೆಸುವಂತೆ ಅನುಗ್ರಹಿಸು ದೇವರೇ ಎಂದು ಈ ಮಂತ್ರದ ಮೂಲಕ ಪಠಣೆ ಮಾಡಲಾಗುವುದು.



Click it and Unblock the Notifications











