Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಗಣೇಶ ಚತುರ್ಥಿ 2023: ನಿಮ್ಮ ರಾಶಿ ಪ್ರಕಾರ ಗಣೇಶನಿಗೆ ಈ ನೈವೇದ್ಯ ಅರ್ಪಿಸಿ
ಈ ವರ್ಷ ಗಣೇಶ ಚತುರ್ಥಿಯನ್ನು ಸೆಪ್ಟೆಂಬರ್ 18, 19ರಂದು ಆಚರಿಸಲಾಗುವುದು. ಗಣೇಶನನ್ನು ಸೆಪ್ಟೆಂಬರ್ 19ರಂದು ಪ್ರತಿಷ್ಠಾಪನೆ ಮಾಡಲಾಗುವುದು. ನೀವು ಗಣೇಶನನ್ನು ನಿಮ್ಮ ರಾಶಿಗೆ ಪ್ರಕಾರ ಹೇಗೆ ಪ್ರತಿಷ್ಠಾಪನೆ ಮಾಡಬೇಕು ಎಂಬುವುದನ್ನು ಈ ಹಿಂದಿನ ಲೇಖನದಲ್ಲಿ ಹೇಳಿದ್ದೆವು. ಈ ಲೇಖನದಲ್ಲಿ ನಿಮ್ಮ ರಾಶಿ ಪ್ರಕಾರ ಗಣೇಶನಿಗೆ ಯಾವ ನೈವೇದ್ಯ ಅರ್ಪಿಸಿದರೆ ಒಳ್ಳೆಯದು ಎಂದು ಹೇಳಲಾಗಿದೆ ನೋಡಿ:

ವೃಷಭ ರಾಶಿ: ವೃಷಭ ರಾಶಿಯವರು ಅಕ್ಕಿ ಪಾಯಸ ಅಥವಾ ಲಡ್ಡುವನ್ನು ಪ್ರಸಾದವನ್ನಾಗಿ ಅರ್ಪಿಸಿ
ಮಿಥುನ ರಾಶಿ: ನೀವು ಗಣೇಶನಿಗೆ ಫ್ರೂಟ್ ಸಲಾಡ್, ಸೌತೆ ರಾಯತ, ಮೊಳಕೆ ಬರಿಸಿದ ಕಾಳುಗಳನ್ನು ಅರ್ಪಿಸಿ
ಕರ್ಕ ರಾಶಿ: ಕರ್ಕ ರಾಶಿಯವರು ಗಣೇಶನಿಗೆ ಕಿಚಡಿ, ಕಡ್ಲೆ ಕಾಳು ಇವುಗಳನ್ನು ಪ್ರಸಾದವನ್ನಾಗಿ ಅರ್ಪಿಸಿ
ಸಿಂಹ ರಾಶಿ: ಸಿಂಹ ರಾಶಿಯವರು ಗಣೇಶನಿಗೆ ಪಾಯಸ, ಬೂಂದಿ, ಲಡ್ಡುಗಳನ್ನು ಅರ್ಪಿಸಿ
ಕನ್ಯಾ ರಾಶಿ: ನೀವು ಬೂಂದಿಯನ್ನು ಗಣೇಶನಿಗೆ ಅರ್ಪಿಸಿ.
ತುಲಾ ರಾಶಿ: ನೀವು ಗಣೇಶನಿಗೆ ತೆಂಗಿನಕಾಯಿಂದ ಮಾಡಿದ ಸಿಹಿತಿಂಡಿಯನ್ನು ಅರ್ಪಿಸಿ. ಕರ್ಜಿಕಾಯಿಯನ್ನು ಮಾಡಿ ಅರ್ಪಿಸಿ.
ವೃಶ್ಚಿಕ ರಾಶಿ: ನೀವು ಗಣೇಶನಿಗೆ ಬಗೆ ಬಗೆಯ ಮೋದಕಗಳನ್ನು ಅರ್ಪಿಸಿ
ಧನು ರಾಶಿ: ನೀವು ಹಣ್ಣುಗಳನ್ನು, ಸಿಹಿ ತಿಂಡಿಗಳನ್ನು ಅರ್ಪಿಸಿ'
ಮಕರ ರಾಶಿ: ನೀವು ಗಣೇಶನಿಗೆ ಜಿಲೇಬಿ, ಸಿಹಿ ಕಡಬು ಅರ್ಪಿಸಿ
ಕುಂಭ ರಾಶಿ: ಕುಂಭ ರಾಶಿಯವರು ಗಣೇಶನಿಗೆ ಹತ್ತಿ ಹಣ್ಣು, ಲಡ್ಡು ಇವುಗಳನ್ನು ಅರ್ಪಿಸಿದರೆ ಒಳ್ಳೆಯದು
ಮೀನ ರಾಶಿ: ಮೀನ ರಾಶಿಯವರು ಗಣೇಶನಿಗೆ ಬೂಂದಿ, ಮೋದಕ, ಲಡ್ಡುಗಳನ್ನು ಅರ್ಪಿಸಿ.
ಗಣೇಶನಿಗೆ ಪ್ರಸಾದವನ್ನು ಅರ್ಪಿಸುವಾಗಈ ಮಂತ್ರ ಪಠಿಸಿ
ಓಂ ಗಂ ಗಣಪತೆಯೇ ನಮಃ: ಈ ಮಂತ್ರವನ್ನು ಪಠಿಸುವುದರಿಂದ ವಿಘ್ನ ನಿವಾರಕ ನಿಮ್ಮೆಲ್ಲಾ ಕಷ್ಟಗಳನ್ನು ದೂರ ಮಾಡುತ್ತಾನೆ.
ವಕ್ರತುಂಡ ಮಹಾಕಾಯ : ಈ ಮಂತ್ರವನ್ನು ಪಠಣೆ ಮಾಡುವುದರಿಂದ ಸಂಪತ್ತು ವೃದ್ಧಿಸಲಿದೆ, ನಿಮ್ಮ ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯಲಿದೆ.
ಗಣೇಶ ಗಾಯತ್ರಿ ಮಂತ್ರ
"ಓಂ ಏಕದಂತಾಯ ವಿದ್ಮಹೇ ವಕ್ರತುಂಡಾಯ ಧೀಮಹಿ ತನ್ನೋ ಬುದ್ಧಿಧ್ ಪ್ರಚೋದಯಾತ್"
ಈ ಗಾಯತ್ರಿ ಮಂತ್ರ ಪಠಣೆ ಮಾಡುವುದರಿಂದ ಶ್ರೀಗಣೇಶನ ರಕ್ಷೆ ಸದಾ ನಿಮ್ಮ ಮೇಲಿರುತ್ತದೆ.
ಓಂ ಶ್ರೀ ಗಣೇಶಾಯ ನಮಃ: ಈ ಮಂತ್ರವನ್ನು ನೀವು ಯಾವಾಗ ಬೇಕಾದರೂ ಪಠಿಸಬಹುದು. ಈ ರೀತಿ ಮಂತ್ರ ಪಠಣೆ ಮಾಡುವುದರಿಂದ ಮನಸ್ಸಿಗೆ ಆತ್ಮವಿಶ್ವಾಸ ಹೆಚ್ಚಾಗಲಿದೆ.
ಗಣೇಶ ಮೂಲ ಮಂತ್ರ:
ಓಂ ಶ್ರೀಂ ಹ್ರೀಂ ಕ್ಲೀಂ ಗ್ಲೌಂ ಗಂ ಗಣಪತಯೇ ವರ ವರದ ಸರ್ವಜನಂ ಮೇ ವಶಮಾನಯ ಸ್ವಾಹಾ॥
ಏಕದನ್ತಾಯ ವಿದ್ಮಹೇ ।
ವಕ್ರತುಂಡಾಯ ಧೀಮಹಿ ।
ತನ್ನೋ ದನ್ತಿ ಪ್ರಚೋದಯಾತ್ ॥
ॐ ಶಾಂತಿಃ ಶಾಂತಿಃ ಶಾಂತಿಃ ॥
ಈ ಜಗತ್ತಿಗೆ, ಜನರಿಗೆ ಒಳಿತಾಗಲು, ಎಲ್ಲರೂ ಒಳ್ಳೆಯ ಜೀವನ ನಡೆಸುವಂತೆ ಅನುಗ್ರಹಿಸು ದೇವರೇ ಎಂದು ಈ ಮಂತ್ರದ ಮೂಲಕ ಪಠಣೆ ಮಾಡಲಾಗುವುದು.



Click it and Unblock the Notifications