Latest Updates
-
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್! -
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ! -
ಹೊರಗೆ ಬಿರುಗಾಳಿ, ಮನೆಯಲ್ಲಿ ಫಿಟ್ನೆಸ್: ಇಂದಿನ ಹವಾಮಾನಕ್ಕೆ ಈ ವರ್ಕೌಟ್ ಬೆಸ್ಟ್!
ಗಣೇಶ ಚತುರ್ಥಿ 2023: ನಿಮ್ಮ ರಾಶಿ ಪ್ರಕಾರ ಗಣೇಶನಿಗೆ ಈ ನೈವೇದ್ಯ ಅರ್ಪಿಸಿ
ಈ ವರ್ಷ ಗಣೇಶ ಚತುರ್ಥಿಯನ್ನು ಸೆಪ್ಟೆಂಬರ್ 18, 19ರಂದು ಆಚರಿಸಲಾಗುವುದು. ಗಣೇಶನನ್ನು ಸೆಪ್ಟೆಂಬರ್ 19ರಂದು ಪ್ರತಿಷ್ಠಾಪನೆ ಮಾಡಲಾಗುವುದು. ನೀವು ಗಣೇಶನನ್ನು ನಿಮ್ಮ ರಾಶಿಗೆ ಪ್ರಕಾರ ಹೇಗೆ ಪ್ರತಿಷ್ಠಾಪನೆ ಮಾಡಬೇಕು ಎಂಬುವುದನ್ನು ಈ ಹಿಂದಿನ ಲೇಖನದಲ್ಲಿ ಹೇಳಿದ್ದೆವು. ಈ ಲೇಖನದಲ್ಲಿ ನಿಮ್ಮ ರಾಶಿ ಪ್ರಕಾರ ಗಣೇಶನಿಗೆ ಯಾವ ನೈವೇದ್ಯ ಅರ್ಪಿಸಿದರೆ ಒಳ್ಳೆಯದು ಎಂದು ಹೇಳಲಾಗಿದೆ ನೋಡಿ:

ವೃಷಭ ರಾಶಿ: ವೃಷಭ ರಾಶಿಯವರು ಅಕ್ಕಿ ಪಾಯಸ ಅಥವಾ ಲಡ್ಡುವನ್ನು ಪ್ರಸಾದವನ್ನಾಗಿ ಅರ್ಪಿಸಿ
ಮಿಥುನ ರಾಶಿ: ನೀವು ಗಣೇಶನಿಗೆ ಫ್ರೂಟ್ ಸಲಾಡ್, ಸೌತೆ ರಾಯತ, ಮೊಳಕೆ ಬರಿಸಿದ ಕಾಳುಗಳನ್ನು ಅರ್ಪಿಸಿ
ಕರ್ಕ ರಾಶಿ: ಕರ್ಕ ರಾಶಿಯವರು ಗಣೇಶನಿಗೆ ಕಿಚಡಿ, ಕಡ್ಲೆ ಕಾಳು ಇವುಗಳನ್ನು ಪ್ರಸಾದವನ್ನಾಗಿ ಅರ್ಪಿಸಿ
ಸಿಂಹ ರಾಶಿ: ಸಿಂಹ ರಾಶಿಯವರು ಗಣೇಶನಿಗೆ ಪಾಯಸ, ಬೂಂದಿ, ಲಡ್ಡುಗಳನ್ನು ಅರ್ಪಿಸಿ
ಕನ್ಯಾ ರಾಶಿ: ನೀವು ಬೂಂದಿಯನ್ನು ಗಣೇಶನಿಗೆ ಅರ್ಪಿಸಿ.
ತುಲಾ ರಾಶಿ: ನೀವು ಗಣೇಶನಿಗೆ ತೆಂಗಿನಕಾಯಿಂದ ಮಾಡಿದ ಸಿಹಿತಿಂಡಿಯನ್ನು ಅರ್ಪಿಸಿ. ಕರ್ಜಿಕಾಯಿಯನ್ನು ಮಾಡಿ ಅರ್ಪಿಸಿ.
ವೃಶ್ಚಿಕ ರಾಶಿ: ನೀವು ಗಣೇಶನಿಗೆ ಬಗೆ ಬಗೆಯ ಮೋದಕಗಳನ್ನು ಅರ್ಪಿಸಿ
ಧನು ರಾಶಿ: ನೀವು ಹಣ್ಣುಗಳನ್ನು, ಸಿಹಿ ತಿಂಡಿಗಳನ್ನು ಅರ್ಪಿಸಿ'
ಮಕರ ರಾಶಿ: ನೀವು ಗಣೇಶನಿಗೆ ಜಿಲೇಬಿ, ಸಿಹಿ ಕಡಬು ಅರ್ಪಿಸಿ
ಕುಂಭ ರಾಶಿ: ಕುಂಭ ರಾಶಿಯವರು ಗಣೇಶನಿಗೆ ಹತ್ತಿ ಹಣ್ಣು, ಲಡ್ಡು ಇವುಗಳನ್ನು ಅರ್ಪಿಸಿದರೆ ಒಳ್ಳೆಯದು
ಮೀನ ರಾಶಿ: ಮೀನ ರಾಶಿಯವರು ಗಣೇಶನಿಗೆ ಬೂಂದಿ, ಮೋದಕ, ಲಡ್ಡುಗಳನ್ನು ಅರ್ಪಿಸಿ.
ಗಣೇಶನಿಗೆ ಪ್ರಸಾದವನ್ನು ಅರ್ಪಿಸುವಾಗಈ ಮಂತ್ರ ಪಠಿಸಿ
ಓಂ ಗಂ ಗಣಪತೆಯೇ ನಮಃ: ಈ ಮಂತ್ರವನ್ನು ಪಠಿಸುವುದರಿಂದ ವಿಘ್ನ ನಿವಾರಕ ನಿಮ್ಮೆಲ್ಲಾ ಕಷ್ಟಗಳನ್ನು ದೂರ ಮಾಡುತ್ತಾನೆ.
ವಕ್ರತುಂಡ ಮಹಾಕಾಯ : ಈ ಮಂತ್ರವನ್ನು ಪಠಣೆ ಮಾಡುವುದರಿಂದ ಸಂಪತ್ತು ವೃದ್ಧಿಸಲಿದೆ, ನಿಮ್ಮ ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯಲಿದೆ.
ಗಣೇಶ ಗಾಯತ್ರಿ ಮಂತ್ರ
"ಓಂ ಏಕದಂತಾಯ ವಿದ್ಮಹೇ ವಕ್ರತುಂಡಾಯ ಧೀಮಹಿ ತನ್ನೋ ಬುದ್ಧಿಧ್ ಪ್ರಚೋದಯಾತ್"
ಈ ಗಾಯತ್ರಿ ಮಂತ್ರ ಪಠಣೆ ಮಾಡುವುದರಿಂದ ಶ್ರೀಗಣೇಶನ ರಕ್ಷೆ ಸದಾ ನಿಮ್ಮ ಮೇಲಿರುತ್ತದೆ.
ಓಂ ಶ್ರೀ ಗಣೇಶಾಯ ನಮಃ: ಈ ಮಂತ್ರವನ್ನು ನೀವು ಯಾವಾಗ ಬೇಕಾದರೂ ಪಠಿಸಬಹುದು. ಈ ರೀತಿ ಮಂತ್ರ ಪಠಣೆ ಮಾಡುವುದರಿಂದ ಮನಸ್ಸಿಗೆ ಆತ್ಮವಿಶ್ವಾಸ ಹೆಚ್ಚಾಗಲಿದೆ.
ಗಣೇಶ ಮೂಲ ಮಂತ್ರ:
ಓಂ ಶ್ರೀಂ ಹ್ರೀಂ ಕ್ಲೀಂ ಗ್ಲೌಂ ಗಂ ಗಣಪತಯೇ ವರ ವರದ ಸರ್ವಜನಂ ಮೇ ವಶಮಾನಯ ಸ್ವಾಹಾ॥
ಏಕದನ್ತಾಯ ವಿದ್ಮಹೇ ।
ವಕ್ರತುಂಡಾಯ ಧೀಮಹಿ ।
ತನ್ನೋ ದನ್ತಿ ಪ್ರಚೋದಯಾತ್ ॥
ॐ ಶಾಂತಿಃ ಶಾಂತಿಃ ಶಾಂತಿಃ ॥
ಈ ಜಗತ್ತಿಗೆ, ಜನರಿಗೆ ಒಳಿತಾಗಲು, ಎಲ್ಲರೂ ಒಳ್ಳೆಯ ಜೀವನ ನಡೆಸುವಂತೆ ಅನುಗ್ರಹಿಸು ದೇವರೇ ಎಂದು ಈ ಮಂತ್ರದ ಮೂಲಕ ಪಠಣೆ ಮಾಡಲಾಗುವುದು.



Click it and Unblock the Notifications