Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ಜುಲೈ 17ಕ್ಕೆ ಗೌರಿ ಅಮವಾಸ್ಯೆ, ಈ ದಿನ ಗೌರಿ ಪೂಜೆಯ ಮಹತ್ವವೇನು? ಪೂಜಾ ವಿಧಿಗಳೇನು?
ಜುಲೈ 17ಕ್ಕೆ ಆಷಾಢ ಅಮವಾಸ್ಯೆ. ಹಲವು ಕಾರಣಗಳಿಂದಾಗಿ ಈ ದಿನ ತುಂಬಾ ಪ್ರಾಮುಖ್ಯತೆ ಹೊಂದಿದೆ. ಈ ದಿನ ಭೀಮನ ಅಮವಾಸ್ಯೆ ಆಚರಿಸಲಾಗುವುದು, ಪಿತೃ ತರ್ಪಣ ಮಾಡಲಾಗುವುದು, ಕಾಳ ಸರ್ಪ ದೋಷವಿದ್ದರೆ ಅದಕ್ಕೆ ಪರಿಹಾರ ಮಾಡಲಾಗುವುದು ಹೀಗೆ ಹಲವು ಕಾರಣಗಳಿಂದ ತುಂಬಾನೇ ಪ್ರಾಮುಖ್ಯತೆ ಹೊಂದಿದೆ. ಇನ್ನು ಈ ಅಮವಾಸ್ಯೆಯನ್ನು ದಿವಾಸಿ ಅಮವಾಸ್ಯೆಯೆಂದು ಕೂಡ ಆಚರಿಸಲಾಗುವುದು.
ಈ ದಿವಾಸಿ ಅಮವಾಸ್ಯೆಯಂದು ಗೌರಿ ಪೂಜೆ ಮಾಡಲಾಗುವುದು, ಆದ್ದರಿಂದ ಈ ಅಮವಾಸ್ಯೆಯನ್ನು ಗೌರಿ ಅಮವಾಸ್ಯೆ ಎಂದು ಕರಿಯಲಾಗುವುದು. ಇದರ ಕುರಿತ ಹೆಚ್ಚಿನ ಮಾಹಿತಿ ಈ ಲೇಖನದ ಮೂಲಕ ತಿಳಿಯೋಣ:

ದಿವಾಸಿ ಅಮವಾಸ್ಯೆ ತಿಥಿ
ಗೌರಿ ಅಮವಾಸ್ಯೆ ಜುಲೈ 16ರಿಂದ ಪ್ರಾರಂಭವಾಗಿ ಜುಲೈ 17ಕ್ಕೆ ಮುಕ್ತಾಯವಾಗುತ್ತದೆ.
ಗೌರಿ ಅಮವಾಸ್ಯೆ
ಈ ಅಮವಾಸ್ಯೆಯೆಂದು ಗೌರಿಗೆ ಪೂಜೆಯನ್ನು ಮಾಡಲಾಗುವುದು. ಈ ಪೂಜೆ ಮಾಡುವುದರಿಂದ ಕುಟುಂಬಕ್ಕೆ ಹಾಗೂ ಮಕ್ಕಳಿಗೆ ಒಳಿತಾಗುವುದು ಎಂಬ ನಂಬಿಕೆಯಿದೆ, ಹಾಗಾಗಿ ಮಹಿಳೆಯರು ಈ ದಿನ ಗೌರಿ ಪೂಜೆ ಮಾಡುತ್ತಾರೆ.
ಈ ದಿನ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಗುವುದು
ಈ ದಿನ ಕರ್ನಾಟಕದ ವಿವಿಧ ದೇವಾಲಯಗಳಲ್ಲಿ ದೇವಿಗೆ ರುದ್ರಾಭಿಷೇಕ, ಕುಂಕುಮಾಭಿಷೇಕ, ಬಿಲ್ವಾರ್ಚಾನೆ, ದೇವಿಗೆ ನಿಂಬೆಹಣ್ಣಿನ ಹಾರ ಹಾಕಿ ವಿಶೇಷ ಪೂಜೆ ಸಲ್ಲಿಸಲಾಗುವುದು. ಈ ದಿನ ದೇವಿಯ ದರ್ಶನ ಪಡೆಯಲು ಬರುವ ಭಕ್ತರ ಸಂಖ್ಯೆ ಎಂದಿಗಿಂತಲೂ ಹೆಚ್ಚು ಅಧಿಕವಿರುತ್ತದೆ.
ದೇವಿಗೆ ಪೂಜೆ ಸಲ್ಲಿಸಿದ ಬಳಿಕ ಗೌರಿದಾರ ಕಟ್ಟಿಕೊಳ್ಳಬೇಕು
ಮಹಿಳೆಯರು ಗೌರಿಗೆ ಪೂಜೆಯನ್ನು ಸಲ್ಲಿಸಿದ ಬಳಿಕ 9 ಗಂಟುಗಳ ಪವಿತ್ರ ದಾರವಾದ ಗೌರಿ ದಾರವನ್ನು ತಮ್ಮ ಬಲಗೈಗೆ (ಬಲ ಮಣಿಕಟ್ಟಿಗೆ) ಕಟ್ಟಬೇಕು. ಈ ದಾರವನ್ನು ಕಟ್ಟುವುದರಿಂದ ಗೌರಿ ಮಾತೆಯ ಆಶೀರ್ವಾದ ದೊರೆಯಲಿದೆ.
ಈ ದಿನ ಮಹಿಳೆಯರಿಗೆ ಭೀಮನ ಅಮವಾಸ್ಯೆ ಕಾರಣದಿಂದಲೂ ತುಂಬಾನೇ ಪ್ರಾಮುಖ್ಯತೆಯಾದ ದಿನವಾಗಿದೆ
ಈ ದಿನ ಮಹಿಳೆಯರು ಗೌರಿಯನ್ನು ಮಾತ್ರವಲ್ಲ ಶಿವ-ಪಾರ್ವತಿಯನ್ನು ಆಚರಿಸಲಾಗುವುದು. ಶಿವ ಪಾರ್ವತಿಗೆ ಪೂಜೆ ಸಲ್ಲಿಸಿ ನಂತರ ತಮ್ಮ ಗಂಡನ ಪಾದಗಳಿಗೆ ಪಾದ ಪೂಜೆ ಮಾಡಿ ಅವರಿಂದ ಆಶೀರ್ವಾದ ಪಡೆಯುವ ಪದ್ಧತಿ ಇದೆ.
* ಈ ದಿನ ಪೂಜಾ ಸ್ಥಳವನ್ನು ಸ್ವಚ್ಛಗೊಳಿಸಿ, ನಂತರ ರಂಗೋಲಿ ಹಾಕಿ.
* ನಂತರ ಮರದ ಹಲಗೆ ಅಥವಾ ಪೀಠ ಇಟ್ಟು ಮಂಗಳ ಗೌರಿ ಮೂರ್ತಿ ಜೊತೆಗೆ ತಟ್ಟೆಯಲ್ಲಿ ಅಕ್ಕಿ ಹಾಕಿ ಎರಡು ಮಣ್ಣಿನ ಅಥವಾ ಬೆಳ್ಳಿಯ ದೀಪವನ್ನು ಇಡಿ.
* ನಂತರ ಅದೇ ತಟ್ಟೆಯಲ್ಲಿ 9 ವೀಳ್ಯೆದೆಲೆ ಹಾಗೂ 9 ಗಂಟಿನ ದಾರವನ್ನು ಇಡಿ.
* ದೇವಿಗೆ ನೈವೇದ್ಯವಾಗಿ ಕಡಬು ಇಡಬಹುದು. ಎಣ್ಣೆಯಲ್ಲಿ ಕರಿಯಬೇಡಿ, ಹಬೆಯಲ್ಲಿ ಬೇಯಿಸಿದ ಕಡಬು ದೇವರಿಗೆ ಅರ್ಪಿಸಿ.
* 9 ಗಂಟಿನ ದಾರವನ್ನು ಅರಿಶಿಣ ಪೇಸ್ಟ್ನಲ್ಲಿ ಅದ್ದಿ ನಂತರ ಆ ದಾರವನ್ನು ಬಲಗೈಗೆ ಕಟ್ಟಿಕೊಳ್ಳಿ.
* ದೇವಿಯ ಮಂತ್ರ ಅಥವಾ ಹಾಡು ಹೇಳುವ ಮೂಲಕ ದೇವರಿಗೆ ಆರತಿ ಎತ್ತಿ.
ಹೆಣ್ಮಕ್ಕಳು ಗಂಡ-ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಗೌರಿ ಪೂಜೆಯನ್ನು ಮಾಡುತ್ತಾರೆ.



Click it and Unblock the Notifications