Latest Updates
-
ಕರಣ್-ತೇಜಸ್ವಿ ಗುಟ್ಟಾಗಿ ಮದುವೆಯಾದ್ರಾ? ವೈರಲ್ ವಿಡಿಯೋ ಹಿಂದಿನ ಅಸಲಿ ಸತ್ಯ ಇಲ್ಲಿದೆ! -
ಮುಂಬೈನಲ್ಲಿ ನೀರು ಕಡಿತ: ಬಿಎಂಸಿ ಎಚ್ಚರಿಕೆ ಬೆನ್ನಲ್ಲೇ ಮನೆಯಲ್ಲಿ ನೀರು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ಮದ್ದು! -
ಕಿರೀಟ ಯಾರ ಪಾಲಾಗಲಿದೆ? ದೆಹಲಿಯಲ್ಲಿ ಮಿಸ್ ಗ್ರ್ಯಾಂಡ್ ಇಂಡಿಯಾ 2026 ಫಿನಾಲೆ ಸಂಭ್ರಮದ ಕ್ಷಣಗಳು -
ಹವಾಮಾನದಲ್ಲಿ ಭಾರಿ ಬದಲಾವಣೆ: ಮೇ 12-13 ರಂದು ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ದೆಹಲಿ ಮದುವೆ ಸೀಸನ್: ಮಳೆ ಮತ್ತು ಬಿರುಗಾಳಿಯಿಂದ ನಿಮ್ಮ ಸಂಭ್ರಮವನ್ನು ಕಾಪಾಡಿಕೊಳ್ಳುವುದು ಹೇಗೆ? -
ಬಿಸಿಗಾಳಿ-ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ಈ ಆಹಾರ ಕ್ರಮ ಪಾಲಿಸಿದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ! -
ಕಾನ್ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯರ ಅಬ್ಬರ, ಈ ಬಾರಿ ಫ್ಯಾಷನ್ ಲೋಕವೇ ದಂಗು! -
ಪ್ರಧಾನಿ ಮೋದಿ ಭೇಟಿಯ ನಂತರ ಟ್ರೆಂಡಿಂಗ್: ಕೇವಲ 15 ನಿಮಿಷದಲ್ಲಿ ನಿಮ್ಮ ದಿನವನ್ನು ಬದಲಾಯಿಸುವ ಮ್ಯಾಜಿಕ್ ಯೋಗ ಟಿಪ್ಸ್!
ಸಂತಾನೋತ್ಪತ್ತಿ ಭಾಗ್ಯ ಕರುಣಿಸುವ ದೇವತೆಗಳು
ಸಂತಾನೋತ್ಪತ್ತಿಗಾಗಿ ದೇವರನ್ನು ಪ್ರಾರ್ಥಿಸಿದರೆ ಮಕ್ಕಳಾಗುತ್ತದೆ ಎಂಬ ನಂಬಿಕೆ ನಮ್ಮಲ್ಲಿ ಅನೇಕರಲ್ಲಿದೆ. ವೈದ್ಯಕೀಯದಲ್ಲಿ ವಿಜ್ಞಾನ ಸಾಕಷ್ಟು ಮುಂದುವರೆದಿದೆ. ಮಕ್ಕಳಾಗಲು ತೊಂದರೆ ಇರುವವರೆಗೆ ಮಕ್ಕಳಾಗುವಂತೆ ಮಾಡಲು ಅನೇಕ ಆಧುನಿಕ ಸೌಲಭ್ಯಗಳಿವೆ. ಕೆಲವೊಮ್ಮೆ ಸಂತಾನೋತ್ಪತ್ತಿಗೆ ತೆಗೆದುಕೊಳ್ಳುವ ಚಿಕಿತ್ಸೆಯೂ ಫಲಕಾರಿಯಾಗುವುದಿಲ್ಲ. ಆಗ ದೇವರ ಮೊರೆ ಹೋಗುತ್ತೇವೆ.
ಪವಾಡವೆಂಬಂತೆ ಮಕ್ಕಳಾಗದ ಅನೇಕರಿಗೆ ಕೆಲವೊಂದು ದೇವಾಸ್ಥಾನಕ್ಕೆ ಹೋಗಿ ಹರಕೆ ಮಾಡಿ ಬಂದ ಮೇಲೆ ಮಕ್ಕಳಾದ ನಿದರ್ಶನಗಳಿವೆ. ಮಕ್ಕಳಾಗದವರು ಈ ಕೆಳಗಿನ ದೇವತೆಗಳನ್ನು ಪೂಜೆ ಮಾಡಿದರೆ ಸಂತಾನ ಭಾಗ್ಯ ದೊರೆಯುತ್ತದೆ ಎಂಬ ನಂಬಿಕೆ ಜನರಲ್ಲಿದೆ. ದೇವರನ್ನು ನಂಬಿದರೆ ಮಕ್ಕಳಾಗುತ್ತದೆ, ಆಗಲ್ಲ ಅನ್ನುವುದು ನಿಮ್ಮ ನಂಬಿಕೆಗೆ ಬಿಟ್ಟದ್ದು.

ಅಧಿತಿ
ಅಧಿತಿ ದೇವರನ್ನು ಇಡೀ ಬ್ರಹ್ಮಾಂಡದ ಸೃಷ್ಟಿಕರ್ತಳು ಎನ್ನುತ್ತಾರೆ. ಅಧಿತಿ ದೇವತೆಯನ್ನು ಪ್ರತಿನಿತ್ಯ ಪೂಜೆ ಮಾಡಿದರೆ ಮಕ್ಕಳಾಗುತ್ತದೆ ಎಂಬ ನಂಬಿಕೆ ಆಸ್ತಿಕರಲ್ಲಿದೆ.
ಚಂದ್ರಾ
ಸೋಮವಾರ ತಲೆ ಸ್ನಾನ ಮಾಡಿ ಚಂದ್ರಾ ಅಂದರೆ ಸೋಮ ದೇವರನ್ನು ಪೂಜಿಸಿದರೆ ಮಕ್ಕಳಾಗುವುದು ಎನ್ನಲಾಗುತ್ತದೆ.
ಮಾನಸ
ತಾಯಿ ಮಾನಸ ಸಂತಾನೋತ್ಪತ್ತಿ ಹಾಗೂ ಹಾವುಗಳ ಅದಿ ದೇವತೆ. ಹಾವು ಕಚ್ಚಿದರೆ ಗುಣಮುಖವಾಗಲು ಹಾಗೂ ಮಕ್ಕಳಾಗಲು ಈ ದೇವತೆಯನ್ನು ಪೂಜಿಸುತ್ತಾರೆ. ಅದರಲ್ಲೂ ಬೆಂಗಾಳಿಯರು ಮಾನಸ ಪೂಜೆ ಸಮಯದಲ್ಲಿ ಬಟ್ಟಲು ತುಂಬಾ ಹಾಲನ್ನು ಹಾವಿನ ಹುತ್ತಕ್ಕೆ ಎರೆಯುತ್ತಾರೆ.
ಪಾರ್ವತಿ
ಶಕ್ತಿ ದೇವತೆಯಾದ ಪಾರ್ವತಿಯನ್ನು ಪೂಜಿಸಿದರೆ ಮಕ್ಕಳ ಭಾಗ್ಯ ಕರುಣಿಸುತ್ತಾಳೆ ಎಂಬ ನಂಬಿಕೆಯಿದೆ.
ಸಂತೋಷಿ
ಸಂತೋಷಿ ಮಾತೆ ಸಂತೃಪ್ತಿಯ ದೇವತೆ. ಈ ದೇವತೆಯನ್ನು ಬೇಡಿದರೆ ಮಕ್ಕಳ ಭಾಗ್ಯ ಕರುಣಿಸಿ ಬಾಳಿಗೆ ಸಂತೃಪ್ತಿ ತುಂಬುತ್ತಾಳೆ ಎಂಬ ನಂಬಿಕೆ ಇದೆ. ಈ ದೇವತೆಯನ್ನು ಪೂಜಿಸುವವರು ಪ್ರತೀ ಶುಕ್ರವಾರ ಉಪವಾಸ ಮಾಡುತ್ತಾರೆ. ಆ ದಿನ ಯಾವುದೇ ಹುಳಿ ಪದಾರ್ಥವನ್ನು ಮುಟ್ಟಬಾರದು. ಭಕ್ತಿಯಿಂದ ಪೂಜಿಸಿದರೆ ಮಾತೆ ನಮ್ಮ ಕೋರಿಕೆ ಈಡೇರಿಸುತ್ತಾಳೆ ಎಂಬ ನಂಬಿಕೆ ಅವಳ ಭಕ್ತರಲ್ಲಿದೆ.



Click it and Unblock the Notifications