Latest Updates
-
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು! -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆಯ ಮಳೆನೀರು ಕೊಯ್ಲು ವ್ಯವಸ್ಥೆ ಹಾಳಾಗದಂತೆ ತಡೆಯುವುದು ಹೇಗೆ? -
ಮಳೆಗಾಲದಲ್ಲಿ ಮಕ್ಕಳ ಲಂಚ್ಬಾಕ್ಸ್ ಸುರಕ್ಷತೆ: ಆರೋಗ್ಯಕರ ಮತ್ತು ಹೈ-ಪ್ರೋಟೀನ್ ಆಹಾರದ ಟಿಪ್ಸ್ -
ಮುಂಬೈನಲ್ಲಿ ಭಾರೀ ಮಳೆ: ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ, ಪೋಷಕರು ಗಮನಿಸಿ!
ಸಂತಾನೋತ್ಪತ್ತಿ ಭಾಗ್ಯ ಕರುಣಿಸುವ ದೇವತೆಗಳು
ಸಂತಾನೋತ್ಪತ್ತಿಗಾಗಿ ದೇವರನ್ನು ಪ್ರಾರ್ಥಿಸಿದರೆ ಮಕ್ಕಳಾಗುತ್ತದೆ ಎಂಬ ನಂಬಿಕೆ ನಮ್ಮಲ್ಲಿ ಅನೇಕರಲ್ಲಿದೆ. ವೈದ್ಯಕೀಯದಲ್ಲಿ ವಿಜ್ಞಾನ ಸಾಕಷ್ಟು ಮುಂದುವರೆದಿದೆ. ಮಕ್ಕಳಾಗಲು ತೊಂದರೆ ಇರುವವರೆಗೆ ಮಕ್ಕಳಾಗುವಂತೆ ಮಾಡಲು ಅನೇಕ ಆಧುನಿಕ ಸೌಲಭ್ಯಗಳಿವೆ. ಕೆಲವೊಮ್ಮೆ ಸಂತಾನೋತ್ಪತ್ತಿಗೆ ತೆಗೆದುಕೊಳ್ಳುವ ಚಿಕಿತ್ಸೆಯೂ ಫಲಕಾರಿಯಾಗುವುದಿಲ್ಲ. ಆಗ ದೇವರ ಮೊರೆ ಹೋಗುತ್ತೇವೆ.
ಪವಾಡವೆಂಬಂತೆ ಮಕ್ಕಳಾಗದ ಅನೇಕರಿಗೆ ಕೆಲವೊಂದು ದೇವಾಸ್ಥಾನಕ್ಕೆ ಹೋಗಿ ಹರಕೆ ಮಾಡಿ ಬಂದ ಮೇಲೆ ಮಕ್ಕಳಾದ ನಿದರ್ಶನಗಳಿವೆ. ಮಕ್ಕಳಾಗದವರು ಈ ಕೆಳಗಿನ ದೇವತೆಗಳನ್ನು ಪೂಜೆ ಮಾಡಿದರೆ ಸಂತಾನ ಭಾಗ್ಯ ದೊರೆಯುತ್ತದೆ ಎಂಬ ನಂಬಿಕೆ ಜನರಲ್ಲಿದೆ. ದೇವರನ್ನು ನಂಬಿದರೆ ಮಕ್ಕಳಾಗುತ್ತದೆ, ಆಗಲ್ಲ ಅನ್ನುವುದು ನಿಮ್ಮ ನಂಬಿಕೆಗೆ ಬಿಟ್ಟದ್ದು.

ಅಧಿತಿ
ಅಧಿತಿ ದೇವರನ್ನು ಇಡೀ ಬ್ರಹ್ಮಾಂಡದ ಸೃಷ್ಟಿಕರ್ತಳು ಎನ್ನುತ್ತಾರೆ. ಅಧಿತಿ ದೇವತೆಯನ್ನು ಪ್ರತಿನಿತ್ಯ ಪೂಜೆ ಮಾಡಿದರೆ ಮಕ್ಕಳಾಗುತ್ತದೆ ಎಂಬ ನಂಬಿಕೆ ಆಸ್ತಿಕರಲ್ಲಿದೆ.
ಚಂದ್ರಾ
ಸೋಮವಾರ ತಲೆ ಸ್ನಾನ ಮಾಡಿ ಚಂದ್ರಾ ಅಂದರೆ ಸೋಮ ದೇವರನ್ನು ಪೂಜಿಸಿದರೆ ಮಕ್ಕಳಾಗುವುದು ಎನ್ನಲಾಗುತ್ತದೆ.
ಮಾನಸ
ತಾಯಿ ಮಾನಸ ಸಂತಾನೋತ್ಪತ್ತಿ ಹಾಗೂ ಹಾವುಗಳ ಅದಿ ದೇವತೆ. ಹಾವು ಕಚ್ಚಿದರೆ ಗುಣಮುಖವಾಗಲು ಹಾಗೂ ಮಕ್ಕಳಾಗಲು ಈ ದೇವತೆಯನ್ನು ಪೂಜಿಸುತ್ತಾರೆ. ಅದರಲ್ಲೂ ಬೆಂಗಾಳಿಯರು ಮಾನಸ ಪೂಜೆ ಸಮಯದಲ್ಲಿ ಬಟ್ಟಲು ತುಂಬಾ ಹಾಲನ್ನು ಹಾವಿನ ಹುತ್ತಕ್ಕೆ ಎರೆಯುತ್ತಾರೆ.
ಪಾರ್ವತಿ
ಶಕ್ತಿ ದೇವತೆಯಾದ ಪಾರ್ವತಿಯನ್ನು ಪೂಜಿಸಿದರೆ ಮಕ್ಕಳ ಭಾಗ್ಯ ಕರುಣಿಸುತ್ತಾಳೆ ಎಂಬ ನಂಬಿಕೆಯಿದೆ.
ಸಂತೋಷಿ
ಸಂತೋಷಿ ಮಾತೆ ಸಂತೃಪ್ತಿಯ ದೇವತೆ. ಈ ದೇವತೆಯನ್ನು ಬೇಡಿದರೆ ಮಕ್ಕಳ ಭಾಗ್ಯ ಕರುಣಿಸಿ ಬಾಳಿಗೆ ಸಂತೃಪ್ತಿ ತುಂಬುತ್ತಾಳೆ ಎಂಬ ನಂಬಿಕೆ ಇದೆ. ಈ ದೇವತೆಯನ್ನು ಪೂಜಿಸುವವರು ಪ್ರತೀ ಶುಕ್ರವಾರ ಉಪವಾಸ ಮಾಡುತ್ತಾರೆ. ಆ ದಿನ ಯಾವುದೇ ಹುಳಿ ಪದಾರ್ಥವನ್ನು ಮುಟ್ಟಬಾರದು. ಭಕ್ತಿಯಿಂದ ಪೂಜಿಸಿದರೆ ಮಾತೆ ನಮ್ಮ ಕೋರಿಕೆ ಈಡೇರಿಸುತ್ತಾಳೆ ಎಂಬ ನಂಬಿಕೆ ಅವಳ ಭಕ್ತರಲ್ಲಿದೆ.



Click it and Unblock the Notifications