Latest Updates
-
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು! -
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ -
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ!
ಸಂತಾನೋತ್ಪತ್ತಿ ಭಾಗ್ಯ ಕರುಣಿಸುವ ದೇವತೆಗಳು
ಸಂತಾನೋತ್ಪತ್ತಿಗಾಗಿ ದೇವರನ್ನು ಪ್ರಾರ್ಥಿಸಿದರೆ ಮಕ್ಕಳಾಗುತ್ತದೆ ಎಂಬ ನಂಬಿಕೆ ನಮ್ಮಲ್ಲಿ ಅನೇಕರಲ್ಲಿದೆ. ವೈದ್ಯಕೀಯದಲ್ಲಿ ವಿಜ್ಞಾನ ಸಾಕಷ್ಟು ಮುಂದುವರೆದಿದೆ. ಮಕ್ಕಳಾಗಲು ತೊಂದರೆ ಇರುವವರೆಗೆ ಮಕ್ಕಳಾಗುವಂತೆ ಮಾಡಲು ಅನೇಕ ಆಧುನಿಕ ಸೌಲಭ್ಯಗಳಿವೆ. ಕೆಲವೊಮ್ಮೆ ಸಂತಾನೋತ್ಪತ್ತಿಗೆ ತೆಗೆದುಕೊಳ್ಳುವ ಚಿಕಿತ್ಸೆಯೂ ಫಲಕಾರಿಯಾಗುವುದಿಲ್ಲ. ಆಗ ದೇವರ ಮೊರೆ ಹೋಗುತ್ತೇವೆ.
ಪವಾಡವೆಂಬಂತೆ ಮಕ್ಕಳಾಗದ ಅನೇಕರಿಗೆ ಕೆಲವೊಂದು ದೇವಾಸ್ಥಾನಕ್ಕೆ ಹೋಗಿ ಹರಕೆ ಮಾಡಿ ಬಂದ ಮೇಲೆ ಮಕ್ಕಳಾದ ನಿದರ್ಶನಗಳಿವೆ. ಮಕ್ಕಳಾಗದವರು ಈ ಕೆಳಗಿನ ದೇವತೆಗಳನ್ನು ಪೂಜೆ ಮಾಡಿದರೆ ಸಂತಾನ ಭಾಗ್ಯ ದೊರೆಯುತ್ತದೆ ಎಂಬ ನಂಬಿಕೆ ಜನರಲ್ಲಿದೆ. ದೇವರನ್ನು ನಂಬಿದರೆ ಮಕ್ಕಳಾಗುತ್ತದೆ, ಆಗಲ್ಲ ಅನ್ನುವುದು ನಿಮ್ಮ ನಂಬಿಕೆಗೆ ಬಿಟ್ಟದ್ದು.

ಅಧಿತಿ
ಅಧಿತಿ ದೇವರನ್ನು ಇಡೀ ಬ್ರಹ್ಮಾಂಡದ ಸೃಷ್ಟಿಕರ್ತಳು ಎನ್ನುತ್ತಾರೆ. ಅಧಿತಿ ದೇವತೆಯನ್ನು ಪ್ರತಿನಿತ್ಯ ಪೂಜೆ ಮಾಡಿದರೆ ಮಕ್ಕಳಾಗುತ್ತದೆ ಎಂಬ ನಂಬಿಕೆ ಆಸ್ತಿಕರಲ್ಲಿದೆ.
ಚಂದ್ರಾ
ಸೋಮವಾರ ತಲೆ ಸ್ನಾನ ಮಾಡಿ ಚಂದ್ರಾ ಅಂದರೆ ಸೋಮ ದೇವರನ್ನು ಪೂಜಿಸಿದರೆ ಮಕ್ಕಳಾಗುವುದು ಎನ್ನಲಾಗುತ್ತದೆ.
ಮಾನಸ
ತಾಯಿ ಮಾನಸ ಸಂತಾನೋತ್ಪತ್ತಿ ಹಾಗೂ ಹಾವುಗಳ ಅದಿ ದೇವತೆ. ಹಾವು ಕಚ್ಚಿದರೆ ಗುಣಮುಖವಾಗಲು ಹಾಗೂ ಮಕ್ಕಳಾಗಲು ಈ ದೇವತೆಯನ್ನು ಪೂಜಿಸುತ್ತಾರೆ. ಅದರಲ್ಲೂ ಬೆಂಗಾಳಿಯರು ಮಾನಸ ಪೂಜೆ ಸಮಯದಲ್ಲಿ ಬಟ್ಟಲು ತುಂಬಾ ಹಾಲನ್ನು ಹಾವಿನ ಹುತ್ತಕ್ಕೆ ಎರೆಯುತ್ತಾರೆ.
ಪಾರ್ವತಿ
ಶಕ್ತಿ ದೇವತೆಯಾದ ಪಾರ್ವತಿಯನ್ನು ಪೂಜಿಸಿದರೆ ಮಕ್ಕಳ ಭಾಗ್ಯ ಕರುಣಿಸುತ್ತಾಳೆ ಎಂಬ ನಂಬಿಕೆಯಿದೆ.
ಸಂತೋಷಿ
ಸಂತೋಷಿ ಮಾತೆ ಸಂತೃಪ್ತಿಯ ದೇವತೆ. ಈ ದೇವತೆಯನ್ನು ಬೇಡಿದರೆ ಮಕ್ಕಳ ಭಾಗ್ಯ ಕರುಣಿಸಿ ಬಾಳಿಗೆ ಸಂತೃಪ್ತಿ ತುಂಬುತ್ತಾಳೆ ಎಂಬ ನಂಬಿಕೆ ಇದೆ. ಈ ದೇವತೆಯನ್ನು ಪೂಜಿಸುವವರು ಪ್ರತೀ ಶುಕ್ರವಾರ ಉಪವಾಸ ಮಾಡುತ್ತಾರೆ. ಆ ದಿನ ಯಾವುದೇ ಹುಳಿ ಪದಾರ್ಥವನ್ನು ಮುಟ್ಟಬಾರದು. ಭಕ್ತಿಯಿಂದ ಪೂಜಿಸಿದರೆ ಮಾತೆ ನಮ್ಮ ಕೋರಿಕೆ ಈಡೇರಿಸುತ್ತಾಳೆ ಎಂಬ ನಂಬಿಕೆ ಅವಳ ಭಕ್ತರಲ್ಲಿದೆ.



Click it and Unblock the Notifications











