Latest Updates
-
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಯೋಗ ದಿನಾಚರಣೆ: ಮೈದಾನದಲ್ಲಿ ಯೋಗ ಮಾಡಲು ಸಿದ್ಧರಿದ್ದೀರಾ? ಇಲ್ಲಿದೆ ಅಗತ್ಯ ಮುನ್ನೆಚ್ಚರಿಕೆಗಳು! -
ಟೆಲಿಗ್ರಾಮ್ ಬಳಕೆದಾರರೇ ಎಚ್ಚರ: ಜೂನ್ 16 ರಿಂದ 22 ರವರೆಗೆ ಸೇವೆ ಸ್ಥಗಿತ, ಪರ್ಯಾಯ ಮಾರ್ಗಗಳೇನು? -
ಪಂಜಾಬ್-ಹರಿಯಾಣದಲ್ಲಿ ಭಾರಿ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ 20 ನಿಮಿಷಗಳ ಟಿಪ್ಸ್ ಪಾಲಿಸಿ! -
ಸೋಯಾಬೀನ್ ಎಣ್ಣೆ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಮೇಲೆ ಹೊರೆ, ಕಲಬೆರಕೆ ಪತ್ತೆ ಹಚ್ಚುವುದು ಹೇಗೆ? -
ದೆಹಲಿ-ಎನ್ಸಿಆರ್ನಲ್ಲಿ ಮಳೆ ಅಬ್ಬರ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ನೀವು ಮಾಡಬೇಕಾದ್ದೇನು? -
ಮುಂಬೈ ಸೆಕೆ ಮತ್ತು ಆರ್ದ್ರತೆ: ಹೊರಗೆ ಹೋಗಿ ಸುಸ್ತಾಗುವ ಬದಲು ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ!
ಸಂತಾನೋತ್ಪತ್ತಿ ಭಾಗ್ಯ ಕರುಣಿಸುವ ದೇವತೆಗಳು
ಸಂತಾನೋತ್ಪತ್ತಿಗಾಗಿ ದೇವರನ್ನು ಪ್ರಾರ್ಥಿಸಿದರೆ ಮಕ್ಕಳಾಗುತ್ತದೆ ಎಂಬ ನಂಬಿಕೆ ನಮ್ಮಲ್ಲಿ ಅನೇಕರಲ್ಲಿದೆ. ವೈದ್ಯಕೀಯದಲ್ಲಿ ವಿಜ್ಞಾನ ಸಾಕಷ್ಟು ಮುಂದುವರೆದಿದೆ. ಮಕ್ಕಳಾಗಲು ತೊಂದರೆ ಇರುವವರೆಗೆ ಮಕ್ಕಳಾಗುವಂತೆ ಮಾಡಲು ಅನೇಕ ಆಧುನಿಕ ಸೌಲಭ್ಯಗಳಿವೆ. ಕೆಲವೊಮ್ಮೆ ಸಂತಾನೋತ್ಪತ್ತಿಗೆ ತೆಗೆದುಕೊಳ್ಳುವ ಚಿಕಿತ್ಸೆಯೂ ಫಲಕಾರಿಯಾಗುವುದಿಲ್ಲ. ಆಗ ದೇವರ ಮೊರೆ ಹೋಗುತ್ತೇವೆ.
ಪವಾಡವೆಂಬಂತೆ ಮಕ್ಕಳಾಗದ ಅನೇಕರಿಗೆ ಕೆಲವೊಂದು ದೇವಾಸ್ಥಾನಕ್ಕೆ ಹೋಗಿ ಹರಕೆ ಮಾಡಿ ಬಂದ ಮೇಲೆ ಮಕ್ಕಳಾದ ನಿದರ್ಶನಗಳಿವೆ. ಮಕ್ಕಳಾಗದವರು ಈ ಕೆಳಗಿನ ದೇವತೆಗಳನ್ನು ಪೂಜೆ ಮಾಡಿದರೆ ಸಂತಾನ ಭಾಗ್ಯ ದೊರೆಯುತ್ತದೆ ಎಂಬ ನಂಬಿಕೆ ಜನರಲ್ಲಿದೆ. ದೇವರನ್ನು ನಂಬಿದರೆ ಮಕ್ಕಳಾಗುತ್ತದೆ, ಆಗಲ್ಲ ಅನ್ನುವುದು ನಿಮ್ಮ ನಂಬಿಕೆಗೆ ಬಿಟ್ಟದ್ದು.

ಅಧಿತಿ
ಅಧಿತಿ ದೇವರನ್ನು ಇಡೀ ಬ್ರಹ್ಮಾಂಡದ ಸೃಷ್ಟಿಕರ್ತಳು ಎನ್ನುತ್ತಾರೆ. ಅಧಿತಿ ದೇವತೆಯನ್ನು ಪ್ರತಿನಿತ್ಯ ಪೂಜೆ ಮಾಡಿದರೆ ಮಕ್ಕಳಾಗುತ್ತದೆ ಎಂಬ ನಂಬಿಕೆ ಆಸ್ತಿಕರಲ್ಲಿದೆ.
ಚಂದ್ರಾ
ಸೋಮವಾರ ತಲೆ ಸ್ನಾನ ಮಾಡಿ ಚಂದ್ರಾ ಅಂದರೆ ಸೋಮ ದೇವರನ್ನು ಪೂಜಿಸಿದರೆ ಮಕ್ಕಳಾಗುವುದು ಎನ್ನಲಾಗುತ್ತದೆ.
ಮಾನಸ
ತಾಯಿ ಮಾನಸ ಸಂತಾನೋತ್ಪತ್ತಿ ಹಾಗೂ ಹಾವುಗಳ ಅದಿ ದೇವತೆ. ಹಾವು ಕಚ್ಚಿದರೆ ಗುಣಮುಖವಾಗಲು ಹಾಗೂ ಮಕ್ಕಳಾಗಲು ಈ ದೇವತೆಯನ್ನು ಪೂಜಿಸುತ್ತಾರೆ. ಅದರಲ್ಲೂ ಬೆಂಗಾಳಿಯರು ಮಾನಸ ಪೂಜೆ ಸಮಯದಲ್ಲಿ ಬಟ್ಟಲು ತುಂಬಾ ಹಾಲನ್ನು ಹಾವಿನ ಹುತ್ತಕ್ಕೆ ಎರೆಯುತ್ತಾರೆ.
ಪಾರ್ವತಿ
ಶಕ್ತಿ ದೇವತೆಯಾದ ಪಾರ್ವತಿಯನ್ನು ಪೂಜಿಸಿದರೆ ಮಕ್ಕಳ ಭಾಗ್ಯ ಕರುಣಿಸುತ್ತಾಳೆ ಎಂಬ ನಂಬಿಕೆಯಿದೆ.
ಸಂತೋಷಿ
ಸಂತೋಷಿ ಮಾತೆ ಸಂತೃಪ್ತಿಯ ದೇವತೆ. ಈ ದೇವತೆಯನ್ನು ಬೇಡಿದರೆ ಮಕ್ಕಳ ಭಾಗ್ಯ ಕರುಣಿಸಿ ಬಾಳಿಗೆ ಸಂತೃಪ್ತಿ ತುಂಬುತ್ತಾಳೆ ಎಂಬ ನಂಬಿಕೆ ಇದೆ. ಈ ದೇವತೆಯನ್ನು ಪೂಜಿಸುವವರು ಪ್ರತೀ ಶುಕ್ರವಾರ ಉಪವಾಸ ಮಾಡುತ್ತಾರೆ. ಆ ದಿನ ಯಾವುದೇ ಹುಳಿ ಪದಾರ್ಥವನ್ನು ಮುಟ್ಟಬಾರದು. ಭಕ್ತಿಯಿಂದ ಪೂಜಿಸಿದರೆ ಮಾತೆ ನಮ್ಮ ಕೋರಿಕೆ ಈಡೇರಿಸುತ್ತಾಳೆ ಎಂಬ ನಂಬಿಕೆ ಅವಳ ಭಕ್ತರಲ್ಲಿದೆ.



Click it and Unblock the Notifications