Latest Updates
-
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ!
ಗಣೇಶನಿಗೆ ಎಷ್ಟು ಗರಿಕೆ ಅರ್ಪಿಸಬೇಕು? ಹೇಗೆ ಅರ್ಪಿಸಬೇಕು?
ಗಣಪತಿ ಪೂಜೆಯನ್ನು ಮಾಡಲು ಕಠಿಣ ನಿಯಮಗಳಿಲ್ಲ, ಆದರೆ ಶುದ್ಧ ಮನಸ್ಸಿನಿಂದ ಶ್ರೀ ಗಣೇಶನ ಆರಾಧನೆ ಮಾಡಿದರೆ ಸಾಕು ಗಣೇಶನ ಕೃಪೆಗೆ ಪಾತ್ರರಾಗುತ್ತೇವೆ. ಆದರೆ ಗಣಪತಿ ಪೂಜೆಯಲ್ಲಿ ಎಲ್ಲಾ ವಸ್ತುಗಳಿಗಿಂತ ಗರಿಕೆಗೆ ತುಂಬಾ ಶ್ರೇಷ್ಠವಾದ ಸ್ಥಾನವಿದೆ. ನೀವು ಪೂಜೆಗೆ ಇತರ ಯಾವುದೇ ವಸ್ತುಗಳನ್ನು ಅರ್ಪಿಸದಿದ್ದರೂ ಬರೀ ಗರಿಕೆಯನ್ನು ಅರ್ಪಿಸಿದರೂ ಸಾಕು ಗಣೇಶ ತೃಪ್ತನಾಗುತ್ತಾನೆ.
ಗಣಪತಿ ಪೂಜೆಯಲ್ಲಿ ಗರಿಕೆಯನ್ನು ಏಕೆ ಅರ್ಪಿಸಲಾಗುವುದು? ಇದರ ಹಿಂದಿರುವ ಧಾರ್ಮಿಕ ಕಾರಣಗಳೇನು ಎಂದು ನೋಡೋಣ ಬನ್ನಿ:

ದಂಥಕತೆ ಪ್ರಕಾರ
ದೇವಲೋಕದ ನರ್ತಕಿ ಗಣಪತಿಯನ್ನು ಮದುವೆಯಾಗ ಬಯಸುತ್ತಾಳೆ. ಗಣೇಶ ಧ್ಯಾನ ಮಾಡುತ್ತಿದ್ದಾಗ ಆಕೆ ಗಣಪತಿಯ ಧ್ಯಾನಕ್ಕೆ ಭಂಗ ಮಾಡಲು ಯತ್ನಿಸುತ್ತಾಳೆ, ನಂತರ ಗಣೇಶನ ಬಳಿ ತನ್ನ ಆಸೆಯನ್ನು ಹೇಳುತ್ತಾಳೆ, ಗಣಪತಿ ಆಕೆಯನ್ನು ಮದುವೆಯಾಗಲು ನಿರಾಕರಿಸುತ್ತಾನೆ, ಇದರಿಂದ ಕೋಪಗೊಂಡ ಆಕೆ ಶಾಪವನ್ನು ನೀಡುತ್ತಾರೆ. ಇದರಿಂದ ಗಣಪತಿಗೆ ಮೈಯೆಲ್ಲಾ ಉರಿಯ ಅನುಭವ ಉಂಟಾಗುವುದು ಆವಾಗ ಗರಿಕೆಯನ್ನು ಕಿತ್ತು ತಲೆ ಮೇಲೆ ಇಟ್ಟಾಗ ಉರಿ ಕಡಿಮೆಯಾಯಿತು, ಹೀಗಾಗಿ ಗಣಪತಿಗೆ ಗರಿಕೆಯೆಂದರೆ ತುಂಬಾನೇ ಪ್ರಿಯ ಎಂದು ಹೇಳಲಾಗುವುದು.
ಅನಾಲಸುರ ಎಂಬ ರಾಕ್ಷಸ ತನ್ನ ಪೈಶಾಚಿಕ ಕೃತ್ಯ ಮೂಲಕ ದೇವ ಲೋಕದ ನೆಮ್ಮದಿ ಕೆಡಿಸಿದ್ದ , ದೇವತೆಗಳು ಶ್ರೀ ಗಣೇಶನ ಬಳಿ ಬಂದು ಕಾಪಾಡುವಂತೆ ಕೋರುತ್ತಾರೆ. ಆವಾಗ ಶ್ರೀ ಗಣೇಶ ಅನಾಲಸುರ ಎಂಬ ರಾಕ್ಷಸನನ್ನು ನುಂಗಿ ಭೂ ಲೋಕವನ್ನು ಕಾಪಾಡುತ್ತಾನೆ. ಆದರೆ ರಾಕ್ಷಸನ ನುಂಗಿದ ಬಳಿಕ ದೇಹದಲ್ಲಿ ತುಂಬಾ ಉರಿ ಉಂಟಾಗುವುದು, ಶ್ರೀ ವಿಷ್ಣು ಕಮಲವನ್ನು, ಇಂದ್ರ ಚಂದ್ರನನ್ನು ನೀಡುತ್ತಾನೆ, ಆದರೆ ಉರಿ ಕಡಿಮೆಯಾಗಲಿಲ್ಲ, ಆವಾಗ 21 ಗರಿಕೆಯನ್ನು ಗಣೇಶನಿಗೆ ಅರ್ಪಿಸಿದಾಗ ಉರಿ ಕಡಿಮೆಯಾಗುತ್ತದೆ, ಹೀಗಾಗಿ ಶ್ರೀ ಗಣೇಶನ ಪೂಜೆಯಲ್ಲಿ ಗರಿಕೆಯನ್ನು ಕಡ್ಡಾಯವಾಗಿ ಬಳಸಬೇಕು ಎಂದು ಹೇಳಲಾಗುವುದು.
ಎಷ್ಟು ಗರಿಕೆಯನ್ನು ಅರ್ಪಿಸಬೇಕು?
ಗಣೇಶನಿಗೆ ಗರಿಕೆಯನ್ನು ಅರ್ಪಿಸುವಾಗ ಬೆಸ ಸಂಖ್ಯೆಯಲ್ಲಿ ಅರ್ಪಿಸಬೇಕು. ಗರಿಕೆಯನ್ನು 3 ಅಥವಾ 5, 7, 21ರಂತೆ ಅರ್ಪಿಸಬೇಕು. ಸಾಮಾನ್ಯವಾಗಿ 21 ಗರಿಕೆಯನ್ನು ಅರ್ಪಿಸಲಾಗುವುದು.
ಗಣೇಶನಿಗೆ ಗರಿಕೆಯನ್ನು ಹೇಗೆ ಅರ್ಪಿಸಬೇಕು?
ಶ್ರೀ ಗಣೇಶನ ಮುಖ ಬಿಟ್ಟು ದೇಹದ ಉಳಿದ ಭಾಗವನ್ನು ಗರಿಕೆಯಿಂದ ಅಲಂಕರಿಸಿದರೆ ಒಳ್ಳೆಯದು ಎಂದು ಹೇಳಲಾಗುವುದು. ಗರಕೆಯನ್ನು ಬಳಸಿದರೆ 3 ದಿನಗಳಿಗೊಮ್ಮೆ ಬದಲಾಯಿಸಿದರೆ ಸಾಕು.



Click it and Unblock the Notifications