Latest Updates
-
ಬಿಸಿಲಿನ ಬೇಗೆಯಲ್ಲಿ ಮದುವೆ ಸಂಭ್ರಮ: ಅತಿಥಿಗಳ ಆರೋಗ್ಯ ಕಾಪಾಡಲು ಪ್ಲಾನ್ ಬದಲಾಯಿಸುವುದು ಅನಿವಾರ್ಯವೇ? -
ದೆಹಲಿ-ಎನ್ಸಿಆರ್ನಲ್ಲಿ ಧೂಳಿನ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಗಾರ್ಡನ್ ಮತ್ತು ಮನೆಯನ್ನು ರಕ್ಷಿಸಿಕೊಳ್ಳುವುದು ಹೇಗೆ? -
ಹೀಟ್ವೇವ್ ಎಚ್ಚರಿಕೆ: ಬಿಸಿಲ ಬೇಗೆಯಿಂದ ಬಚಾವಾಗಲು ಈ ಸರಳ ಆಹಾರ ಕ್ರಮಗಳನ್ನು ಮರೆಯದಿರಿ -
ದೆಹಲಿ ಬಿಸಿಲು: ಸುಡುವ ತಾಪಮಾನದಲ್ಲೂ ಸ್ಟೈಲಿಶ್ ಆಗಿ ಕಾಣಲು ವೈರಲ್ ಆಗ್ತಿವೆ ಈ ಸಿಂಪಲ್ ಹ್ಯಾಕ್ಸ್! -
ಮಳೆಗಾಲದ ಬೆಳಗಿನ ವರ್ಕೌಟ್: ನಿಮ್ಮ ಪ್ಲಾನ್ ಉಲ್ಟಾಪಲ್ಟಾ ಆಗದಿರಲಿ, ಈ ಮುನ್ನೆಚ್ಚರಿಕೆ ಮರೆಯದಿರಿ! -
ಲಿವ್-ಇನ್ ಸಂಬಂಧ ಮುರಿದರೆ ಕ್ರಿಮಿನಲ್ ಕೇಸ್? ಸುಪ್ರೀಂ ಕೋರ್ಟ್ನಿಂದ ಬಂತು ಬಿಗ್ ಶಾಕ್! -
ಉರಿಬಿಸಿಲಿನ ತಾಪಕ್ಕೆ ಸುಸ್ತಾದ್ರಾ? ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಹೀಟ್ ವೇವ್ ಎಚ್ಚರಿಕೆ: ಬಿಸಿಲಿನ ಬೇಗೆಯಿಂದ ಬಚಾವಾಗಲು ಈ ಪಾನೀಯಗಳೇ ಮದ್ದು! -
ಅನುಷ್ಕಾ ಶರ್ಮಾ ಐಪಿಎಲ್ ಲುಕ್: ಸಿಂಪಲ್ ಡ್ರೆಸ್ನಲ್ಲೇ ಮ್ಯಾಜಿಕ್ ಮಾಡಿದ್ದು ಹೇಗೆ? -
ಬಿಸಿಗಾಳಿ ಎಚ್ಚರಿಕೆ: ಏಪ್ರಿಲ್ ಬಿಸಿಲಿನಿಂದ ಪಾರಾಗಲು ನಿಮ್ಮ ಫಿಟ್ನೆಸ್ ರೂಟೀನ್ ಬದಲಾಯಿಸುವುದು ಹೇಗೆ?
ಗಣೇಶನಿಗೆ ಎಷ್ಟು ಗರಿಕೆ ಅರ್ಪಿಸಬೇಕು? ಹೇಗೆ ಅರ್ಪಿಸಬೇಕು?
ಗಣಪತಿ ಪೂಜೆಯನ್ನು ಮಾಡಲು ಕಠಿಣ ನಿಯಮಗಳಿಲ್ಲ, ಆದರೆ ಶುದ್ಧ ಮನಸ್ಸಿನಿಂದ ಶ್ರೀ ಗಣೇಶನ ಆರಾಧನೆ ಮಾಡಿದರೆ ಸಾಕು ಗಣೇಶನ ಕೃಪೆಗೆ ಪಾತ್ರರಾಗುತ್ತೇವೆ. ಆದರೆ ಗಣಪತಿ ಪೂಜೆಯಲ್ಲಿ ಎಲ್ಲಾ ವಸ್ತುಗಳಿಗಿಂತ ಗರಿಕೆಗೆ ತುಂಬಾ ಶ್ರೇಷ್ಠವಾದ ಸ್ಥಾನವಿದೆ. ನೀವು ಪೂಜೆಗೆ ಇತರ ಯಾವುದೇ ವಸ್ತುಗಳನ್ನು ಅರ್ಪಿಸದಿದ್ದರೂ ಬರೀ ಗರಿಕೆಯನ್ನು ಅರ್ಪಿಸಿದರೂ ಸಾಕು ಗಣೇಶ ತೃಪ್ತನಾಗುತ್ತಾನೆ.
ಗಣಪತಿ ಪೂಜೆಯಲ್ಲಿ ಗರಿಕೆಯನ್ನು ಏಕೆ ಅರ್ಪಿಸಲಾಗುವುದು? ಇದರ ಹಿಂದಿರುವ ಧಾರ್ಮಿಕ ಕಾರಣಗಳೇನು ಎಂದು ನೋಡೋಣ ಬನ್ನಿ:

ದಂಥಕತೆ ಪ್ರಕಾರ
ದೇವಲೋಕದ ನರ್ತಕಿ ಗಣಪತಿಯನ್ನು ಮದುವೆಯಾಗ ಬಯಸುತ್ತಾಳೆ. ಗಣೇಶ ಧ್ಯಾನ ಮಾಡುತ್ತಿದ್ದಾಗ ಆಕೆ ಗಣಪತಿಯ ಧ್ಯಾನಕ್ಕೆ ಭಂಗ ಮಾಡಲು ಯತ್ನಿಸುತ್ತಾಳೆ, ನಂತರ ಗಣೇಶನ ಬಳಿ ತನ್ನ ಆಸೆಯನ್ನು ಹೇಳುತ್ತಾಳೆ, ಗಣಪತಿ ಆಕೆಯನ್ನು ಮದುವೆಯಾಗಲು ನಿರಾಕರಿಸುತ್ತಾನೆ, ಇದರಿಂದ ಕೋಪಗೊಂಡ ಆಕೆ ಶಾಪವನ್ನು ನೀಡುತ್ತಾರೆ. ಇದರಿಂದ ಗಣಪತಿಗೆ ಮೈಯೆಲ್ಲಾ ಉರಿಯ ಅನುಭವ ಉಂಟಾಗುವುದು ಆವಾಗ ಗರಿಕೆಯನ್ನು ಕಿತ್ತು ತಲೆ ಮೇಲೆ ಇಟ್ಟಾಗ ಉರಿ ಕಡಿಮೆಯಾಯಿತು, ಹೀಗಾಗಿ ಗಣಪತಿಗೆ ಗರಿಕೆಯೆಂದರೆ ತುಂಬಾನೇ ಪ್ರಿಯ ಎಂದು ಹೇಳಲಾಗುವುದು.
ಅನಾಲಸುರ ಎಂಬ ರಾಕ್ಷಸ ತನ್ನ ಪೈಶಾಚಿಕ ಕೃತ್ಯ ಮೂಲಕ ದೇವ ಲೋಕದ ನೆಮ್ಮದಿ ಕೆಡಿಸಿದ್ದ , ದೇವತೆಗಳು ಶ್ರೀ ಗಣೇಶನ ಬಳಿ ಬಂದು ಕಾಪಾಡುವಂತೆ ಕೋರುತ್ತಾರೆ. ಆವಾಗ ಶ್ರೀ ಗಣೇಶ ಅನಾಲಸುರ ಎಂಬ ರಾಕ್ಷಸನನ್ನು ನುಂಗಿ ಭೂ ಲೋಕವನ್ನು ಕಾಪಾಡುತ್ತಾನೆ. ಆದರೆ ರಾಕ್ಷಸನ ನುಂಗಿದ ಬಳಿಕ ದೇಹದಲ್ಲಿ ತುಂಬಾ ಉರಿ ಉಂಟಾಗುವುದು, ಶ್ರೀ ವಿಷ್ಣು ಕಮಲವನ್ನು, ಇಂದ್ರ ಚಂದ್ರನನ್ನು ನೀಡುತ್ತಾನೆ, ಆದರೆ ಉರಿ ಕಡಿಮೆಯಾಗಲಿಲ್ಲ, ಆವಾಗ 21 ಗರಿಕೆಯನ್ನು ಗಣೇಶನಿಗೆ ಅರ್ಪಿಸಿದಾಗ ಉರಿ ಕಡಿಮೆಯಾಗುತ್ತದೆ, ಹೀಗಾಗಿ ಶ್ರೀ ಗಣೇಶನ ಪೂಜೆಯಲ್ಲಿ ಗರಿಕೆಯನ್ನು ಕಡ್ಡಾಯವಾಗಿ ಬಳಸಬೇಕು ಎಂದು ಹೇಳಲಾಗುವುದು.
ಎಷ್ಟು ಗರಿಕೆಯನ್ನು ಅರ್ಪಿಸಬೇಕು?
ಗಣೇಶನಿಗೆ ಗರಿಕೆಯನ್ನು ಅರ್ಪಿಸುವಾಗ ಬೆಸ ಸಂಖ್ಯೆಯಲ್ಲಿ ಅರ್ಪಿಸಬೇಕು. ಗರಿಕೆಯನ್ನು 3 ಅಥವಾ 5, 7, 21ರಂತೆ ಅರ್ಪಿಸಬೇಕು. ಸಾಮಾನ್ಯವಾಗಿ 21 ಗರಿಕೆಯನ್ನು ಅರ್ಪಿಸಲಾಗುವುದು.
ಗಣೇಶನಿಗೆ ಗರಿಕೆಯನ್ನು ಹೇಗೆ ಅರ್ಪಿಸಬೇಕು?
ಶ್ರೀ ಗಣೇಶನ ಮುಖ ಬಿಟ್ಟು ದೇಹದ ಉಳಿದ ಭಾಗವನ್ನು ಗರಿಕೆಯಿಂದ ಅಲಂಕರಿಸಿದರೆ ಒಳ್ಳೆಯದು ಎಂದು ಹೇಳಲಾಗುವುದು. ಗರಕೆಯನ್ನು ಬಳಸಿದರೆ 3 ದಿನಗಳಿಗೊಮ್ಮೆ ಬದಲಾಯಿಸಿದರೆ ಸಾಕು.



Click it and Unblock the Notifications