Latest Updates
-
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು?
ಗಣೇಶನಿಗೆ ಎಷ್ಟು ಗರಿಕೆ ಅರ್ಪಿಸಬೇಕು? ಹೇಗೆ ಅರ್ಪಿಸಬೇಕು?
ಗಣಪತಿ ಪೂಜೆಯನ್ನು ಮಾಡಲು ಕಠಿಣ ನಿಯಮಗಳಿಲ್ಲ, ಆದರೆ ಶುದ್ಧ ಮನಸ್ಸಿನಿಂದ ಶ್ರೀ ಗಣೇಶನ ಆರಾಧನೆ ಮಾಡಿದರೆ ಸಾಕು ಗಣೇಶನ ಕೃಪೆಗೆ ಪಾತ್ರರಾಗುತ್ತೇವೆ. ಆದರೆ ಗಣಪತಿ ಪೂಜೆಯಲ್ಲಿ ಎಲ್ಲಾ ವಸ್ತುಗಳಿಗಿಂತ ಗರಿಕೆಗೆ ತುಂಬಾ ಶ್ರೇಷ್ಠವಾದ ಸ್ಥಾನವಿದೆ. ನೀವು ಪೂಜೆಗೆ ಇತರ ಯಾವುದೇ ವಸ್ತುಗಳನ್ನು ಅರ್ಪಿಸದಿದ್ದರೂ ಬರೀ ಗರಿಕೆಯನ್ನು ಅರ್ಪಿಸಿದರೂ ಸಾಕು ಗಣೇಶ ತೃಪ್ತನಾಗುತ್ತಾನೆ.
ಗಣಪತಿ ಪೂಜೆಯಲ್ಲಿ ಗರಿಕೆಯನ್ನು ಏಕೆ ಅರ್ಪಿಸಲಾಗುವುದು? ಇದರ ಹಿಂದಿರುವ ಧಾರ್ಮಿಕ ಕಾರಣಗಳೇನು ಎಂದು ನೋಡೋಣ ಬನ್ನಿ:

ದಂಥಕತೆ ಪ್ರಕಾರ
ದೇವಲೋಕದ ನರ್ತಕಿ ಗಣಪತಿಯನ್ನು ಮದುವೆಯಾಗ ಬಯಸುತ್ತಾಳೆ. ಗಣೇಶ ಧ್ಯಾನ ಮಾಡುತ್ತಿದ್ದಾಗ ಆಕೆ ಗಣಪತಿಯ ಧ್ಯಾನಕ್ಕೆ ಭಂಗ ಮಾಡಲು ಯತ್ನಿಸುತ್ತಾಳೆ, ನಂತರ ಗಣೇಶನ ಬಳಿ ತನ್ನ ಆಸೆಯನ್ನು ಹೇಳುತ್ತಾಳೆ, ಗಣಪತಿ ಆಕೆಯನ್ನು ಮದುವೆಯಾಗಲು ನಿರಾಕರಿಸುತ್ತಾನೆ, ಇದರಿಂದ ಕೋಪಗೊಂಡ ಆಕೆ ಶಾಪವನ್ನು ನೀಡುತ್ತಾರೆ. ಇದರಿಂದ ಗಣಪತಿಗೆ ಮೈಯೆಲ್ಲಾ ಉರಿಯ ಅನುಭವ ಉಂಟಾಗುವುದು ಆವಾಗ ಗರಿಕೆಯನ್ನು ಕಿತ್ತು ತಲೆ ಮೇಲೆ ಇಟ್ಟಾಗ ಉರಿ ಕಡಿಮೆಯಾಯಿತು, ಹೀಗಾಗಿ ಗಣಪತಿಗೆ ಗರಿಕೆಯೆಂದರೆ ತುಂಬಾನೇ ಪ್ರಿಯ ಎಂದು ಹೇಳಲಾಗುವುದು.
ಅನಾಲಸುರ ಎಂಬ ರಾಕ್ಷಸ ತನ್ನ ಪೈಶಾಚಿಕ ಕೃತ್ಯ ಮೂಲಕ ದೇವ ಲೋಕದ ನೆಮ್ಮದಿ ಕೆಡಿಸಿದ್ದ , ದೇವತೆಗಳು ಶ್ರೀ ಗಣೇಶನ ಬಳಿ ಬಂದು ಕಾಪಾಡುವಂತೆ ಕೋರುತ್ತಾರೆ. ಆವಾಗ ಶ್ರೀ ಗಣೇಶ ಅನಾಲಸುರ ಎಂಬ ರಾಕ್ಷಸನನ್ನು ನುಂಗಿ ಭೂ ಲೋಕವನ್ನು ಕಾಪಾಡುತ್ತಾನೆ. ಆದರೆ ರಾಕ್ಷಸನ ನುಂಗಿದ ಬಳಿಕ ದೇಹದಲ್ಲಿ ತುಂಬಾ ಉರಿ ಉಂಟಾಗುವುದು, ಶ್ರೀ ವಿಷ್ಣು ಕಮಲವನ್ನು, ಇಂದ್ರ ಚಂದ್ರನನ್ನು ನೀಡುತ್ತಾನೆ, ಆದರೆ ಉರಿ ಕಡಿಮೆಯಾಗಲಿಲ್ಲ, ಆವಾಗ 21 ಗರಿಕೆಯನ್ನು ಗಣೇಶನಿಗೆ ಅರ್ಪಿಸಿದಾಗ ಉರಿ ಕಡಿಮೆಯಾಗುತ್ತದೆ, ಹೀಗಾಗಿ ಶ್ರೀ ಗಣೇಶನ ಪೂಜೆಯಲ್ಲಿ ಗರಿಕೆಯನ್ನು ಕಡ್ಡಾಯವಾಗಿ ಬಳಸಬೇಕು ಎಂದು ಹೇಳಲಾಗುವುದು.
ಎಷ್ಟು ಗರಿಕೆಯನ್ನು ಅರ್ಪಿಸಬೇಕು?
ಗಣೇಶನಿಗೆ ಗರಿಕೆಯನ್ನು ಅರ್ಪಿಸುವಾಗ ಬೆಸ ಸಂಖ್ಯೆಯಲ್ಲಿ ಅರ್ಪಿಸಬೇಕು. ಗರಿಕೆಯನ್ನು 3 ಅಥವಾ 5, 7, 21ರಂತೆ ಅರ್ಪಿಸಬೇಕು. ಸಾಮಾನ್ಯವಾಗಿ 21 ಗರಿಕೆಯನ್ನು ಅರ್ಪಿಸಲಾಗುವುದು.
ಗಣೇಶನಿಗೆ ಗರಿಕೆಯನ್ನು ಹೇಗೆ ಅರ್ಪಿಸಬೇಕು?
ಶ್ರೀ ಗಣೇಶನ ಮುಖ ಬಿಟ್ಟು ದೇಹದ ಉಳಿದ ಭಾಗವನ್ನು ಗರಿಕೆಯಿಂದ ಅಲಂಕರಿಸಿದರೆ ಒಳ್ಳೆಯದು ಎಂದು ಹೇಳಲಾಗುವುದು. ಗರಕೆಯನ್ನು ಬಳಸಿದರೆ 3 ದಿನಗಳಿಗೊಮ್ಮೆ ಬದಲಾಯಿಸಿದರೆ ಸಾಕು.



Click it and Unblock the Notifications
