Latest Updates
-
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ
ಗಣೇಶನಿಗೆ ಎಷ್ಟು ಗರಿಕೆ ಅರ್ಪಿಸಬೇಕು? ಹೇಗೆ ಅರ್ಪಿಸಬೇಕು?
ಗಣಪತಿ ಪೂಜೆಯನ್ನು ಮಾಡಲು ಕಠಿಣ ನಿಯಮಗಳಿಲ್ಲ, ಆದರೆ ಶುದ್ಧ ಮನಸ್ಸಿನಿಂದ ಶ್ರೀ ಗಣೇಶನ ಆರಾಧನೆ ಮಾಡಿದರೆ ಸಾಕು ಗಣೇಶನ ಕೃಪೆಗೆ ಪಾತ್ರರಾಗುತ್ತೇವೆ. ಆದರೆ ಗಣಪತಿ ಪೂಜೆಯಲ್ಲಿ ಎಲ್ಲಾ ವಸ್ತುಗಳಿಗಿಂತ ಗರಿಕೆಗೆ ತುಂಬಾ ಶ್ರೇಷ್ಠವಾದ ಸ್ಥಾನವಿದೆ. ನೀವು ಪೂಜೆಗೆ ಇತರ ಯಾವುದೇ ವಸ್ತುಗಳನ್ನು ಅರ್ಪಿಸದಿದ್ದರೂ ಬರೀ ಗರಿಕೆಯನ್ನು ಅರ್ಪಿಸಿದರೂ ಸಾಕು ಗಣೇಶ ತೃಪ್ತನಾಗುತ್ತಾನೆ.
ಗಣಪತಿ ಪೂಜೆಯಲ್ಲಿ ಗರಿಕೆಯನ್ನು ಏಕೆ ಅರ್ಪಿಸಲಾಗುವುದು? ಇದರ ಹಿಂದಿರುವ ಧಾರ್ಮಿಕ ಕಾರಣಗಳೇನು ಎಂದು ನೋಡೋಣ ಬನ್ನಿ:

ದಂಥಕತೆ ಪ್ರಕಾರ
ದೇವಲೋಕದ ನರ್ತಕಿ ಗಣಪತಿಯನ್ನು ಮದುವೆಯಾಗ ಬಯಸುತ್ತಾಳೆ. ಗಣೇಶ ಧ್ಯಾನ ಮಾಡುತ್ತಿದ್ದಾಗ ಆಕೆ ಗಣಪತಿಯ ಧ್ಯಾನಕ್ಕೆ ಭಂಗ ಮಾಡಲು ಯತ್ನಿಸುತ್ತಾಳೆ, ನಂತರ ಗಣೇಶನ ಬಳಿ ತನ್ನ ಆಸೆಯನ್ನು ಹೇಳುತ್ತಾಳೆ, ಗಣಪತಿ ಆಕೆಯನ್ನು ಮದುವೆಯಾಗಲು ನಿರಾಕರಿಸುತ್ತಾನೆ, ಇದರಿಂದ ಕೋಪಗೊಂಡ ಆಕೆ ಶಾಪವನ್ನು ನೀಡುತ್ತಾರೆ. ಇದರಿಂದ ಗಣಪತಿಗೆ ಮೈಯೆಲ್ಲಾ ಉರಿಯ ಅನುಭವ ಉಂಟಾಗುವುದು ಆವಾಗ ಗರಿಕೆಯನ್ನು ಕಿತ್ತು ತಲೆ ಮೇಲೆ ಇಟ್ಟಾಗ ಉರಿ ಕಡಿಮೆಯಾಯಿತು, ಹೀಗಾಗಿ ಗಣಪತಿಗೆ ಗರಿಕೆಯೆಂದರೆ ತುಂಬಾನೇ ಪ್ರಿಯ ಎಂದು ಹೇಳಲಾಗುವುದು.
ಅನಾಲಸುರ ಎಂಬ ರಾಕ್ಷಸ ತನ್ನ ಪೈಶಾಚಿಕ ಕೃತ್ಯ ಮೂಲಕ ದೇವ ಲೋಕದ ನೆಮ್ಮದಿ ಕೆಡಿಸಿದ್ದ , ದೇವತೆಗಳು ಶ್ರೀ ಗಣೇಶನ ಬಳಿ ಬಂದು ಕಾಪಾಡುವಂತೆ ಕೋರುತ್ತಾರೆ. ಆವಾಗ ಶ್ರೀ ಗಣೇಶ ಅನಾಲಸುರ ಎಂಬ ರಾಕ್ಷಸನನ್ನು ನುಂಗಿ ಭೂ ಲೋಕವನ್ನು ಕಾಪಾಡುತ್ತಾನೆ. ಆದರೆ ರಾಕ್ಷಸನ ನುಂಗಿದ ಬಳಿಕ ದೇಹದಲ್ಲಿ ತುಂಬಾ ಉರಿ ಉಂಟಾಗುವುದು, ಶ್ರೀ ವಿಷ್ಣು ಕಮಲವನ್ನು, ಇಂದ್ರ ಚಂದ್ರನನ್ನು ನೀಡುತ್ತಾನೆ, ಆದರೆ ಉರಿ ಕಡಿಮೆಯಾಗಲಿಲ್ಲ, ಆವಾಗ 21 ಗರಿಕೆಯನ್ನು ಗಣೇಶನಿಗೆ ಅರ್ಪಿಸಿದಾಗ ಉರಿ ಕಡಿಮೆಯಾಗುತ್ತದೆ, ಹೀಗಾಗಿ ಶ್ರೀ ಗಣೇಶನ ಪೂಜೆಯಲ್ಲಿ ಗರಿಕೆಯನ್ನು ಕಡ್ಡಾಯವಾಗಿ ಬಳಸಬೇಕು ಎಂದು ಹೇಳಲಾಗುವುದು.
ಎಷ್ಟು ಗರಿಕೆಯನ್ನು ಅರ್ಪಿಸಬೇಕು?
ಗಣೇಶನಿಗೆ ಗರಿಕೆಯನ್ನು ಅರ್ಪಿಸುವಾಗ ಬೆಸ ಸಂಖ್ಯೆಯಲ್ಲಿ ಅರ್ಪಿಸಬೇಕು. ಗರಿಕೆಯನ್ನು 3 ಅಥವಾ 5, 7, 21ರಂತೆ ಅರ್ಪಿಸಬೇಕು. ಸಾಮಾನ್ಯವಾಗಿ 21 ಗರಿಕೆಯನ್ನು ಅರ್ಪಿಸಲಾಗುವುದು.
ಗಣೇಶನಿಗೆ ಗರಿಕೆಯನ್ನು ಹೇಗೆ ಅರ್ಪಿಸಬೇಕು?
ಶ್ರೀ ಗಣೇಶನ ಮುಖ ಬಿಟ್ಟು ದೇಹದ ಉಳಿದ ಭಾಗವನ್ನು ಗರಿಕೆಯಿಂದ ಅಲಂಕರಿಸಿದರೆ ಒಳ್ಳೆಯದು ಎಂದು ಹೇಳಲಾಗುವುದು. ಗರಕೆಯನ್ನು ಬಳಸಿದರೆ 3 ದಿನಗಳಿಗೊಮ್ಮೆ ಬದಲಾಯಿಸಿದರೆ ಸಾಕು.



Click it and Unblock the Notifications