Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಅಯೋಧ್ಯೆ: ಶ್ರೀರಾಮನಿಗೆ ಚಿನ್ನದ ಚಪ್ಪಲಿ ಅರ್ಪಿಸಲು 8000 ಕಿ. ಮೀ ಕಾಲ್ನಡಿಗೆಯಲ್ಲಿ ಹೋಗುತ್ತಿರುವ ಹೈದರಾಬಾದ್ನ ವ್ಯಕ್ತಿ
ಜನವರಿ 22, ಎಲ್ಲಾ ಶ್ರೀರಾಮ ಭಕ್ತರು ಕಾತುರದಿಂದ ಎದುರು ನೋಡುತ್ತಿರುವ ದಿನ. ಅಯೋಧ್ಯೆಯಲ್ಲಿ ಶ್ರೀರಾಮನನ್ನು ಕಣ್ತುಂಬಿಕೊಳ್ಳಲು ಪ್ರತಿದಿನ ರಾಮ... ರಾಮ ಎಂದು ಜಪಿಸುತ್ತಿದ್ದಾರೆ. ಈಗಾಗಲೇ ಭಕ್ತರು ಅಯೋಧ್ಯೆಯೆಡೆಗೆ ಪ್ರಯಾಣ ಮಾಡುತ್ತಿದ್ದಾರೆ.
ಕೆಲವರು ಕಾಲ್ನಡಿಗೆಯಲ್ಲಿ ಪ್ರಯಾಣ ಮಾಡುತ್ತಿದ್ದಾರೆ, ತುಂಬಾ ಭಕ್ತರು ತಮ್ಮ ಕೈಯಲ್ಲಾದ ಅಳಿವು ಸೇವೆಯನ್ನು ಆ ಭಗವಂತನಿಗೆ ಮಾಡುತ್ತಿದ್ದಾರೆ. ಗುಜರಾತಿ ಚಿನ್ನದ ವ್ಯಾಪಾರಿಯೊಬ್ಬರು ರಾಮಮಂದಿರ ಹೋಲುವ ವಜ್ರಖಚಿತ ಹಾರವನ್ನು ಶ್ರೀರಾಮನಿಗೆ ಅರ್ಪಿಸಿದ್ದಾರೆ. ಹೈದರಾಬಾದ್ನ ಹಿರಿಯ ಜೀವವೊಂದು ರಾಮನಿಗೆ ಚಿನ್ನದ ಕೋಟ್ನ ಚಪ್ಪಲಿ ಮಾಡಿಸಿಕೊಂಡು ಅಯೋಧ್ಯೆಗೆ ಬರಿಗಾಲಿನಲ್ಲಿ ಹೋಗುತ್ತಿದ್ದಾರೆ. ಅವರ ಹೆಸರು ಚಲ್ಲ ಶ್ರೀನಿವಾಸ ಶಾಸ್ತ್ರಿ

ಹೈದರಾಬಾದ್ನಿಂದ ಅಯೋಧ್ಯೆಗೆ ಸುಮಾರು 8000 ಕಿ.ಮೀ ಅನ್ನು ನಡೆದುಕೊಂಡೇ ಹೋಗಿ ರಾಮನ ದರ್ಶನ ಮಾಡುತ್ತೇನೆ ಎಂಬ ಸಂಕಲ್ಪ ಅವರದ್ದು. ಅವರು ಜನವರಿ 22ಕ್ಕೆ ಅಯೋಧ್ಯೆಗೆ ತಲುಪಲಿದ್ದಾರೆ. ಸುಮಾರು 65 ಲಕ್ಷ ಮೌಲ್ಯದ ಚಿನ್ನದ ಪಾದುಕೆಗಳನ್ನು ಹೊತ್ತುಕೊಂಡು ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ. ಅವರು ಈ ಮೊದಲು 5 ಬೆಳ್ಳಿಯ ಇಟ್ಟಿಗೆಗಳನ್ನು ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ನೀಡಿದ್ದರು.
ಪಂಚ ಲೋಹವನ್ನು ಬಳಸಿ ಪಾದುಕೆಯನ್ನು ಮಾಡಿ ಅದಕ್ಕೆ ಚಿನ್ನದ ಲೇಪನ ಮಾಡಲಾಗಿದೆ. ಅವರು ಅಯೋಧ್ಯೆಗೆ ಹೋಗುವ ಮುನ್ನ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥನನ್ನು ಬೇಟಿ ಮಾಡಿ ನಂತರ ಅಯೋಧ್ಯೆ ಮಂದಿರಕ್ಕೆ ಹೋಗಲಿದ್ದಾರೆ.
ಅವರ ಈ ಸೇವೆಗೆ ಸ್ಪೂರ್ತಿಯೇನು?
ಅವರ ತಂದೆ ಕರಸೇವಾದಲ್ಲಿ ಭಾಗಿಯಾಗಿದ್ದರು ಅವರು ಹನುಮಂತನ ಭಕ್ತರಾಗಿದ್ದರು, ಅಯೋಧ್ಯೆಯಲ್ಲಿ ಶ್ರೀರಾಮನನ್ನು ನೋಡಬೇಕೆಂಬುವುದು ಅವರ ಆಸೆಯಾಗಿತ್ತು. ಈಗ ಅವರಿಲ್ಲ ಅವರ ಆಸೆಯನ್ನು ನಾನು ಪೂರೈಸಲು ಇಚ್ಛಿಸುತ್ತೇನೆ ಎಂದು ಹೇಳುತ್ತಾರೆ. ಶಾಸ್ತ್ರಿಗಳ ಜೊತೆ ಐವರು ಈ ಧಾರ್ಮಿಕ ಪ್ರಯಾಣ ಕೈಗೊಂಡಿದ್ದಾರೆ.
ಶಾಸ್ತ್ರಿಗೆ ಅಯೋಧ್ಯೆಯಲ್ಲಿ ನೆಲನಿಲ್ಲುವ ಆಸೆಯಂತೆ, ಅಲ್ಲಿಯೇ ಮನೆ ಖರೀದಿಸಿ ವಾಸಿಸಬೇಕೆಂಬ ಇಚ್ಛೆ ವ್ಯಕ್ತಪಡಿಸುತ್ತಿದ್ದಾರೆ.
ಜುಲೈನಿಂದ ಪ್ರಯಾಣ ಆರಂಭಿಸಿರುವ ಶಾಸ್ತ್ರಿ
ಶಾಸ್ತ್ರಿ ತಮ್ಮ ಪ್ರಯಾಣವನ್ನು ಜುಲೈನಿಂದ ಪ್ರಾರಂಭಿಸಿದ್ದಾರೆ. ಶಿವ ದೇವಾಲಯಗಳಲ್ಲಿ ತಂಗುತ್ತಾ ಪ್ರಯಾಣ ಮಾಡುತ್ತಿದ್ದಾರೆ. ಅಯೋಧ್ಯೆಯಲ್ಲಿ ಪ್ರಾಣಪ್ರತಿಷ್ಟಾಪನೆ ದಿನ ತಲುಪುವ ಗುರಿ ಹೊಂದಿದ್ದಾರೆ.
ಆದರ್ಶಪುರುಷ ಶ್ರೀರಾಮ ಅಯೋಧ್ಯೆಯಲ್ಲಿ ಜನಿಸಿದ ಎಂದು ರಾಮಾಯಣದಲ್ಲಿ ಹೇಳಲಾಗಿದೆ. ಮೊಘಲರು ಭಾರತದ ಮೇಲೆ ದಾಳಿ ಮಾಡಿದಾಗ ಅಲ್ಲಿದ್ದ ಶ್ರೀರಾಮನ ಮಂದಿರ ನಾಶ ಮಾಡಿ ಬಾಬ್ರಿ ಮಸೀದಿ ನಿರ್ಮಾಣ ಮಾಡಲಾಯ್ತು, ಆದರೆ ಶ್ರೀರಾಮನ ಭಕ್ತರು ನಿರಂತರ ಹೋರಾಟದ ಫಲವಾಗಿ ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣಕ್ಕೆ ಸುಪ್ರೀಂಕೋರ್ಟ್ ಅನುಮತಿ ನೀಡಿತ್ತು, ಇದೀ ಅಯೋಧ್ಯೆಯಲ್ಲಿ ಭವ್ಯ ಮಂದಿರ ತಲೆ ಎತ್ತಿದ, ಜನವರಿ 22ಕ್ಕೆ ಪ್ರಾಣ ಪ್ರತಿಷ್ಠಾಪನೆ ಮಾಡಲಾಗುವುದು. ಪ್ರವಾಸಿಗರು ಅತಿ ಹೆಚ್ಚಾಗಿ ಬರಲಿದ್ದಾರೆ, ಜನರು ತಮ್ಮ ಕೈಯಲ್ಲಾದ ಕಾಣಿಕೆ ನೀಡಿ, ಅಯೋಧ್ಯೆ ಮಂದಿರ ಕಟ್ಟಲು ನೆರವಾಗಿದ್ದಾರೆ. ಆ ಶ್ರೀರಾಮನ ಕೃಪೆಯಿಂದ ಭಾರತ ದೇಶ ಮತ್ತಷ್ಟು ಸದೃಢವಾಗಲಿ.



Click it and Unblock the Notifications