Latest Updates
-
ಲಿವ್-ಇನ್ ಸಂಬಂಧದಲ್ಲಿರುವ ಯುವ ಜೋಡಿಗಳಿಗೆ ಶಾಕ್: ಹೈಕೋರ್ಟ್ನಿಂದ ಹೊಸ ಆದೇಶ, ಇನ್ನು ರಕ್ಷಣೆ ಸಿಗಲ್ಲ! -
ಬಿಸಿಲಿಗೆ ಬಾಲ್ಕನಿ ಗಿಡಗಳು ಬಾಡುತ್ತಿವೆಯೇ? ಈ 5 ಸರಳ ಟ್ರಿಕ್ಸ್ ಬಳಸಿ ಗಿಡಗಳನ್ನು ಶಾಶ್ವತವಾಗಿ ಉಳಿಸಿಕೊಳ್ಳಿ! -
ಹಾಲಿನ ಬೆಲೆ ಏರಿಕೆ: ಅಡುಗೆಮನೆಯ ಬಜೆಟ್ ಹಾಳಾಗದಂತೆ ಆರೋಗ್ಯ ಕಾಪಾಡಿಕೊಳ್ಳಲು ಈ ಪರ್ಯಾಯ ಆಹಾರಗಳೇ ದಾರಿ! -
ರೆಡ್ ಕಾರ್ಪೆಟ್ ಮೇಲೆ ಸದ್ದು ಮಾಡುತ್ತಿರುವ 'ಸೀರೆ-ಗೌನ್' ಮ್ಯಾಜಿಕ್: 2026ರ ಈ ಫ್ಯಾಷನ್ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಬಿಸಿಗಾಳಿಯ ಅಬ್ಬರ: ಆರೋಗ್ಯ ಹಾಳಾಗದಂತೆ ವರ್ಕೌಟ್ ಮಾಡಲು ಈ ಬದಲಾವಣೆಗಳನ್ನು ಮಾಡಿಕೊಳ್ಳುವುದು ಅತ್ಯಗತ್ಯ, ಇಲ್ಲದಿದ್ದರೆ ಅಪಾಯ! -
ಬಿಸಿಲು ಅಥವಾ ಮಳೆ: ಹವಾಮಾನದ ಅಬ್ಬರದ ನಡುವೆಯೂ ನಿಮ್ಮ ಮದುವೆ ಸಂಭ್ರಮವನ್ನು ಅಚ್ಚುಕಟ್ಟಾಗಿ ಪ್ಲಾನ್ ಮಾಡುವುದು ಹೇಗೆ? -
ಬಿಸಿಲ ಧಗೆಗೆ ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ನಿಮ್ಮ ಮನೆಯನ್ನು ತಂಪಾಗಿರಿಸಲು ಮತ್ತು ಗಿಡಗಳನ್ನು ಉಳಿಸಲು ಇಲ್ಲಿವೆ ಅದ್ಭುತ ಟಿಪ್ಸ್! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಅಡುಗೆ ಮನೆಯಲ್ಲಿರುವ ಈ ಪದಾರ್ಥಗಳೇ ಸಾಕು, ಇಂದೇ ಟ್ರೈ ಮಾಡಿ! -
ಕಾನ್ 2026 ರೆಡ್ ಕಾರ್ಪೆಟ್ನಲ್ಲಿ ಭಾರತೀಯ ತಾರೆಯರ ಮಿಂಚಿನ ಸಂಚಲನ: ಈ ಫ್ಯಾಷನ್ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ!
ಜ. 15ಕ್ಕೆ ಸೇನಾ ದಿನ: ಈ ದಿನದ ಇತಿಹಾಸ ಹಾಗೂ ಮಹತ್ವ
ಪ್ರತೀವರ್ಷ ಜನವರಿ 15ರಂದು ಭಾರತೀಯ ಸೇನಾ ದಿನವನ್ನು ಆಚರಿಸಲಾಗುವುದು. ನಮ್ಮ ವೀರ ಯೋಧರಿಗೆ ಗೌರವ ಸಲ್ಲಿಸುವ ಸಲುವಾಗಿ ದೇಶದ ಎಲ್ಲಾ ಸೇನಾ ಕಮಾಂಡ್ಗಳ ಪ್ರಧಾನ ಕಚೇರಿಗಳಲ್ಲಿ ಈ ದಿನ ಆಚರಿಸಲಾಗುವುದು.

ಈ ದಿನದ ಆಚರಣೆಯ ಇತಿಹಾಸವನ್ನು ನೋಡುವುದಾದರೆ:
ಫೀಲ್ಡ್ ಮಾರ್ಷಲ್ ಕೆ. ಎಂ ಕಾರ್ಯಪ್ಪ ಅವರು ಭಾರತೀಯ ಸೇನೆಯ ಮೊದಲ ಕಮಾಂಡರ್-ಇನ್-ಚೀಫ್ ಆಗಿ 1949 ಜನವರಿ 15ರಂದು ಅಧಿಕಾರ ಸ್ವೀಕರಿಸಿದರು. ಅದರ ಗುರುತಾಗಿ ಪ್ರತೀವರ್ಷ ಸೇನಾ ದಿನವನ್ನಾಗಿ ಆಚರಿಸುತ್ತಾ ಬರುತ್ತಿದೆ. ಈ ವರ್ಷ 74ನೇ ಸೇನಾ ದಿನವನ್ಉ ಆಚರಿಸಲಾಗುತ್ತಿದೆ.
ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಕರ್ನಾಟಕದ ಕೊಡಗು ಜಿಲ್ಲೆಯ ವೀರ ಪುತ್ರ ಎಂಬುವುದೇ ನಮ್ಮ ಹೆಮ್ಮೆ.
ಸೇನಾ ದಿನ ಆಚರಣೆ
ಈ ದಿನ ಸೇನಾ ಕಮಾಂಡ್ಗಳ ಪ್ರಧಾನ ಕಚೇರಿಗಳಲ್ಲಿ ಪಥಸಂಚಲನ, ವೈಮಾನಿಕ ಕಸರತ್ತು, ಯೋಧರಿಂದ ಬೈಕ್ ಸ್ಟಂಟ್ ಮುಂತಾದ ಕಾರ್ಯಕ್ರಮಗಳನ್ನು ನಡೆಸಲಾಗುವುದು. ದೆಹಲಿಯ ಕಂಟೇನ್ಮೆಂಟ್ ಕಾರ್ಯಪ್ಪ ಮೈದಾನದಲ್ಲಿ ಪ್ರಮುಖ ಸೇನಾ ಪರೇಟ್ ನಡೆಸಲಾಗುವುದು. ಈ ದಿನ ವಿಶೇಷ ಸಾಧನೆ ತೋರಿದ ಯೋಧರಿಗೆ ಹಾಗೂ ಹುತಾತ್ಮರಾದ ವೀರ ಸೇನಾನಿಗಳಿಗೆ ಪ್ರಶಸ್ತಿ ಮೂಲಕ ಗೌರವನ್ನು ಸೂಚಿಸಲಾಗುವುದು.
ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಅವರ ಹಿನ್ನೆಲೆ
ಭಾರತಕ್ಕೆ ಸ್ವತಂತ್ರ್ಯ ಸಿಕ್ಕ ಬಳಿಕ ಭಾರತದ ಸೇನಾ ಕಮಾಂಡರ್-ಇನ್-ಚೀಫ್ ಅಧಿಕಾರ ವಹಿಸಿಕೊಂಡವರೇ ಫೀಲ್ಡ್ ಮಾರ್ಷಲ್ ಕೊದಂಡ ಮಾದಪ್ಪ ಕಾರ್ಯಪ್ಪ. ಫೀಲ್ಡ್ ಮಾರ್ಷಲ್ ಸ್ಯಾಮ್ ಮಾಣಿಕ್ ಶಾ ಹಾಗೂ ಕೆ ಎಂ ಕಾರ್ಯಪ್ಪ, ಭಾರತೀಯ ಸೇನೆಯ ಪಂಚತಾರಾ ಶ್ರೇಣಿ ಅಧಿಕಾರಿಗಳಾಗಿದ್ದರು. ಭಾರತಕ್ಕೆ ಇವರು ಸಲ್ಲಿಸಿದ ಸೇವೆ ಎಂದೆಂದಿಗೂ ಸ್ಮರಿಸುವಂಥದ್ದು. 1920 ರಿಂದ 1950ರವರೆಗೆ3 ದಶಕಗಳವರೆಗೆ ಭಾರತ ಮಾತೆಯ ಸೇವೆ ಮಾಡಿದ್ದಾರೆ. 1947ರಲ್ಲಿ ಯುನೈಟೆಡ್ ಕಿಂಗಡಮ್ನ ಕಿಂಬೆರ್ಲಿಯಲ್ಲಿರುವ ಇಂಪೆರಿಯಲ್ ಡಿಫೆನ್ಸ್ ಕಾಲೇಜಿನಲ್ಲಿ ಯುದ್ಧದ ಉನ್ನತ ಮಟ್ಟದ ತಂತ್ರಗಳ ಬಗ್ಗೆ ತರಬೇತಿ ಪಡೆದ, ಮೊದಲ ಭಾರತೀಯ ಕಾರ್ಯಪ್ಪ ಅವರು ಆಗಿದ್ದಾರೆ. ಇವರು ಜನವರಿ 15ರಂದು ಸೇನೆಯ ಕಮಾಂಡರ್-ಇನ್-ಚೀಫ್ ಆಗಿ ಅಧಿಕಾರ ವಹಿಸಿಕೊಂಡರು. ಈ ದಿನವನ್ನು ಭಾರತೀಯರು ಹೆಮ್ಮೆಯಿಂದ ಆಚರಿಸುತ್ತಾರೆ.
ದೇಶವನ್ನು ಕಾಯುವ ವೀರ ಯೋಧರಿಗೆ ನಮ್ಮದೊಂದು ಸಲಾಂ....



Click it and Unblock the Notifications