Latest Updates
-
2026ರ ಸೂರ್ಯ ಗೋಚಾರ: ಇವರಿಗೆ ಸಿಗಲಿದೆ ಸರ್ಕಾರಿ ಉದ್ಯೋಗ! ಯಾರಿಗೆ ಮಾನಸಿಕ ಒತ್ತಡ? 12 ರಾಶಿಯವರಿಗೆ ರಾಶಿಫಲ ಇಲ್ಲಿದೆ -
ಹೋಟೆಲ್ ಶೈಲಿಯ ಆಲೂ ಮಸಾಲಾ ಪೂರಿ! ಈ ರೀತಿ ಮನೆಯಲ್ಲೇ ಮಾಡಿ, ಪರ್ಫೆಕ್ಟ್ ಆಗಿ ಉಬ್ಬಿ ಬರುತ್ತೆ -
ಇವರ ಜೀವನದಲ್ಲಿ ಹೊಸ ಕಿಡಿ ಹೊತ್ತಿಕೊಳ್ಳಲಿದೆ! ಹಠಮಾರಿ ಸ್ವಭಾವವನ್ನು ಬಿಡಿ -
March 12 Horoscope: ಹಣಕಾಸಿನ ಸವಾಲುಗಳು ದೊಡ್ಡದಾಗುವ ಸಂಭವ -
ಕೋಮಾದಲ್ಲಿದ್ದ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂ ಒಪ್ಪಿಗೆ: ಈ ಕೇಸ್ ಬಗ್ಗೆ ನಿಮಗೆ ಗೊತ್ತಾ? -
ಪಂಜಾಬಿ ಸ್ಟೈಲ್ ಮಲೈ ಲಸ್ಸಿ! ಈ ರೀತಿ ಮಾಡಿ ಗಟ್ಟಿ ಕೆನೆಯ ಢಾಬಾ ಸ್ಟೈಲ್ ಲಸ್ಸಿ.. ಬಿಸಿಲ ತಾಪಕ್ಕೆ ಬೆಸ್ಟ್ ಕೂಲ್ ಡ್ರಿಂಕ್ -
ಮಾರ್ಚ್ ಅಂತ್ಯದಲ್ಲಿ ಗಜಕೇಸರಿ ಯೋಗ: ಈ ಮೂರು ರಾಶಿಯ ಜನರಿಗೆ ಒಲಿಯಲಿದೆ ಅದೃಷ್ಟ! -
ನಾಟಿ ಸ್ಟೈಲ್ನಲ್ಲಿ ಸೋಯಾ ಚಾಪ್ಸ್ ಮಾಡಿ: ಚಪಾತಿ, ಅನ್ನ, ಮುದ್ದೆ ಎಲ್ಲದ್ದಕ್ಕೂ ಬೆಸ್ಟ್! -
ತಣ್ಣೀರು ಬೇಕಾ? ಮಡಕೆ ಕೊಳ್ಳುವಾಗ ಈ ತಪ್ಪು ಮಾಡಬೇಡಿ.. ಸಮಸ್ಯೆ ಗ್ಯಾರಂಟಿ!! ಹೇಗೆ ಆಯ್ಕೆ ಮಾಡಬೇಕು? -
ನಿಮ್ಮ ಮನೆಯ ಗಡಿಯಾರ ತಪ್ಪಾದ ದಿಕ್ಕಿನಲ್ಲಿ ಇಡಲಾಗಿದ್ಯಾ? ಈ ಸಣ್ಣ ತಪ್ಪು ದೊಡ್ಡ ಸಮಸ್ಯೆ ತರಬಹುದು!
Basava Jayanti 2021: ಭಕ್ತಿ ಭಂಡಾರಿಯ ಸ್ಪೂರ್ತಿದಾಯಕ ನುಡಿಮುತ್ತುಗಳು ಇಲ್ಲಿವೆ
ಏಪ್ರಿಲ್ 14ರಂದು ಭಕ್ತ ಭಂಡಾರಿ ಬಸವಣ್ಣನ ಜನ್ಮ ದಿನ ಅಂದರೆ ಬಸವ ಜಯಂತಿ. ಕಾಯಕವೇ ಕೈಲಾಸ ಎಂದು ಇಡೀ ಲೋಕಕ್ಕೆ ಸಾರಿದ ಮಹಾನ್ ಸಮಾಜಸುಧಾರಕ ನಮ್ಮ ಬಸವಣ್ಣ. ತಮ್ಮ ವಚನಗಳ ಮೂಲಕವೇ ಜನರಲ್ಲಿ ಅರಿವು ಮೂಡಿಸಿ, ಲೋಕಕಲ್ಯಾಣಾರ್ಥವಾಗಿ ಅನುಭವ ಮಂಟಪವನ್ನ ನಿರ್ಮಿಸಿ ಎಲ್ಲರಿಗೂ ಮಾದರಿಯಾದ 12ನೇ ಶತಮಾನದ ಕವಿ ಇವರು. ಇಂತಹ ಮಹಾನ್ ವ್ಯಕ್ತಿಯ ಜಯಂತಿಯ ಸಲುವಾಗಿ ಅವರ ಕೆಲವೊಂದು ನುಡಿಮುತ್ತುಗಳನ್ನು ನಿಮಗಾಗಿ ನೀಡಿದ್ದೇವೆ.
ಬಸವಣ್ಣನವರ ಆಯ್ದ ಅತ್ಯುತ್ತಮ ನುಡಿಮುತ್ತು ಹಾಗೂ ವಚನಗಳು ಇಲ್ಲಿವೆ:

1. ಕಾಯಕವೇ ಕೈಲಾಸ, ಕರ್ತವ್ಯವೇ ಪರಮೋದ್ದೇಶ
2. ಸನ್ಮಾನ ದೊಡ್ಡದಲ್ಲ, ಸಂಸ್ಕಾರ ದೊಡ್ಡದು
ಹಣ ದೊಡ್ಡದಲ್ಲ, ಗುಣ ದೊಡ್ಡದು
3. ಲೋಕದ ಡೊಂಕ ನೀವೇಕೆ ತಿದ್ದುವಿರಿ
ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ
ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ
ನೆರೆಮನೆಯ ದುಃಖಕ್ಕೆ ಅಳುವವರ ಮೆಚ್ಚ
ನಮ್ಮ ಕೂಡಲಸಂಗಮದೇವಾ
4. ಕಳಬೇಡ ಕೊಲಬೇಡ
ಹುಸಿಯನುಡಿಯಲು ಬೇಡ
ಮುನಿಯಬೇಡ
ಅನ್ಯರಿಗೆ ಅಸಹ್ಯ ಪಡಬೇಡ
ತನ್ನ ಬಣ್ಣಿಸಬೇಡ
ಇದಿರ ಹಳಿಯಲುಬೇಡ
ಇದೇ ಅಂತರಂಗ ಶುದ್ಧಿ
ಇದೇ ಬಹಿರಂಗ ಶುದ್ಧಿ
ಇದೇ ನಮ್ಮ ಕೂಡಲಸಂಗಮನೊಲಿಸುವ ಪರಿ
5. ಜ್ಞಾನದ ಬಲದಿಂದ ಅಜ್ಞಾನದ ಕೇಡು ನೋಡಯ್ಯಾ
ಜ್ಯೋತಿಯ ಬಲದಿಂದ ತಮಂಧದ ಕೇಡು ನೋಡಯ್ಯಾ
ಸತ್ಯದ ಬಲದಿಂದ ಅಸತ್ಯದ ಕೇಡು ನೋಡಯ್ಯಾ
ಪರುಷದ ಬಲದಿಂದ ಅವಲೋಹದ ಕೇಡು ನೋಡಯ್ಯಾ
ಕೂಡಲಸಂಗಮದೇವನ ಶರಣರ ಅನುಭಾವದಿಂದ
ಎನ್ನ ಭವದ ಕೇಡು ನೋಡಯ್ಯಾ
6. ಇವನಾರವ, ಇವನಾರವ
ಇವನಾರವನೆಂದೆನಿಸದಿರಯ್ಯಾ.
ಇವ ನಮ್ಮವ, ಇವ ನಮ್ಮವ,
ಇವನಮ್ಮವನೆಂದೆನಿಸಯ್ಯಾ.
ಕೂಡಲಸಂಗಮದೇವಯ್ಯ ನಿಮ್ಮ
ಮನೆಯ ಮಗನೆಂದೆನಿಸಯ್ಯ
7. ವೇದವನ್ನು ಓದಿದವರು ದೊಡ್ಡವರಾಗುವುದಿಲ್ಲ,
ಜನರ ವೇದನೆಯನ್ನು ಅರತವರು ದೊಡ್ಡವರಾಗುತ್ತಾರೆ
8. ದಯವಿಲ್ಲದ ಧರ್ಮವಾವುದಯ್ಯಾ?
ದಯವೇ ಬೇಕು ಸಕಲ ಪ್ರಾಣಿಗಳಲ್ಲಿಯೂ
ದಯವೇ ಧರ್ಮದ ಮೂಲವಯ್ಯಾ
ಕೂಡಲಸಂಗಯ್ಯನಂತಲ್ಲದೊಲ್ಲಯ್ಯಾ



Click it and Unblock the Notifications


















