Just In
- 18 min ago ದಿನ ಭವಿಷ್ಯ ಮಾರ್ಚ್ 30: ಮಂಗಳವಾರದ ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
- 21 min ago 10 ವರ್ಷದಿಂದ ನಿರಂತರ ರಕ್ತ ಕುಡಿಯುತ್ತಿರುವ ಯುವತಿ..! ರಕ್ತವೇ ಟೀ, ಅದರಲ್ಲೇ ಊಟ..!
- 2 hrs ago ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- 3 hrs ago ಕೇತು ಕನ್ಯಾ ರಾಶಿಯಲ್ಲಿರುವ ಇನ್ನು 285 ದಿನ 12 ರಾಶಿಗಳ ಮೇಲೆ ಅದರ ಪ್ರಭಾವ ಹೀಗಿರಲಿದೆ
Don't Miss
- News Rain Alert: ಕೊಡಗಿನ ವಿವಿಧಡೆ ಮಳೆ ಅಬ್ಬರ: ಮೋಡ ಕವಿದ ವಾತಾವರಣ
- Automobiles Brezza: ಮಾರುತಿ ಸುಜುಕಿ ಬ್ರೆಝಾ ಖರೀದಿಸಬೇಕೇ.. ಆನ್ ರೋಡ್ ಬೆಲೆ ಎಷ್ಟು? EMI ಏನು?
- Sports IPL 2024: RCB ವಿರುದ್ಧ ಪಂದ್ಯಕ್ಕೆ KKRನ ಆಡುವ 11ರ ಬಳಗ ಮರೆತ ಶ್ರೇಯಸ್ ಅಯ್ಯರ್
- Movies "ನನ್ನೇನು ಅಭಿಮನ್ಯು ಅಂದುಕೊಂಡ್ಯ..; ಕೆಲವ್ರು ಕುಡಿದ ಮೇಲೆ ಗಂಡಸರಾಗ್ತಾರೆ.. 'ಯುವ' ಡೈಲಾಗ್ ಪಂಚ್
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
Basava Jayanti 2021: ಭಕ್ತಿ ಭಂಡಾರಿಯ ಸ್ಪೂರ್ತಿದಾಯಕ ನುಡಿಮುತ್ತುಗಳು ಇಲ್ಲಿವೆ
ಏಪ್ರಿಲ್ 14ರಂದು ಭಕ್ತ ಭಂಡಾರಿ ಬಸವಣ್ಣನ ಜನ್ಮ ದಿನ ಅಂದರೆ ಬಸವ ಜಯಂತಿ. ಕಾಯಕವೇ ಕೈಲಾಸ ಎಂದು ಇಡೀ ಲೋಕಕ್ಕೆ ಸಾರಿದ ಮಹಾನ್ ಸಮಾಜಸುಧಾರಕ ನಮ್ಮ ಬಸವಣ್ಣ. ತಮ್ಮ ವಚನಗಳ ಮೂಲಕವೇ ಜನರಲ್ಲಿ ಅರಿವು ಮೂಡಿಸಿ, ಲೋಕಕಲ್ಯಾಣಾರ್ಥವಾಗಿ ಅನುಭವ ಮಂಟಪವನ್ನ ನಿರ್ಮಿಸಿ ಎಲ್ಲರಿಗೂ ಮಾದರಿಯಾದ 12ನೇ ಶತಮಾನದ ಕವಿ ಇವರು. ಇಂತಹ ಮಹಾನ್ ವ್ಯಕ್ತಿಯ ಜಯಂತಿಯ ಸಲುವಾಗಿ ಅವರ ಕೆಲವೊಂದು ನುಡಿಮುತ್ತುಗಳನ್ನು ನಿಮಗಾಗಿ ನೀಡಿದ್ದೇವೆ.
ಬಸವಣ್ಣನವರ ಆಯ್ದ ಅತ್ಯುತ್ತಮ ನುಡಿಮುತ್ತು ಹಾಗೂ ವಚನಗಳು ಇಲ್ಲಿವೆ:
1. ಕಾಯಕವೇ ಕೈಲಾಸ, ಕರ್ತವ್ಯವೇ ಪರಮೋದ್ದೇಶ
2. ಸನ್ಮಾನ ದೊಡ್ಡದಲ್ಲ, ಸಂಸ್ಕಾರ ದೊಡ್ಡದು
ಹಣ ದೊಡ್ಡದಲ್ಲ, ಗುಣ ದೊಡ್ಡದು
3. ಲೋಕದ ಡೊಂಕ ನೀವೇಕೆ ತಿದ್ದುವಿರಿ
ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ
ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ
ನೆರೆಮನೆಯ ದುಃಖಕ್ಕೆ ಅಳುವವರ ಮೆಚ್ಚ
ನಮ್ಮ ಕೂಡಲಸಂಗಮದೇವಾ
4. ಕಳಬೇಡ ಕೊಲಬೇಡ
ಹುಸಿಯನುಡಿಯಲು ಬೇಡ
ಮುನಿಯಬೇಡ
ಅನ್ಯರಿಗೆ ಅಸಹ್ಯ ಪಡಬೇಡ
ತನ್ನ ಬಣ್ಣಿಸಬೇಡ
ಇದಿರ ಹಳಿಯಲುಬೇಡ
ಇದೇ ಅಂತರಂಗ ಶುದ್ಧಿ
ಇದೇ ಬಹಿರಂಗ ಶುದ್ಧಿ
ಇದೇ ನಮ್ಮ ಕೂಡಲಸಂಗಮನೊಲಿಸುವ ಪರಿ
5. ಜ್ಞಾನದ ಬಲದಿಂದ ಅಜ್ಞಾನದ ಕೇಡು ನೋಡಯ್ಯಾ
ಜ್ಯೋತಿಯ ಬಲದಿಂದ ತಮಂಧದ ಕೇಡು ನೋಡಯ್ಯಾ
ಸತ್ಯದ ಬಲದಿಂದ ಅಸತ್ಯದ ಕೇಡು ನೋಡಯ್ಯಾ
ಪರುಷದ ಬಲದಿಂದ ಅವಲೋಹದ ಕೇಡು ನೋಡಯ್ಯಾ
ಕೂಡಲಸಂಗಮದೇವನ ಶರಣರ ಅನುಭಾವದಿಂದ
ಎನ್ನ ಭವದ ಕೇಡು ನೋಡಯ್ಯಾ
6. ಇವನಾರವ, ಇವನಾರವ
ಇವನಾರವನೆಂದೆನಿಸದಿರಯ್ಯಾ.
ಇವ ನಮ್ಮವ, ಇವ ನಮ್ಮವ,
ಇವನಮ್ಮವನೆಂದೆನಿಸಯ್ಯಾ.
ಕೂಡಲಸಂಗಮದೇವಯ್ಯ ನಿಮ್ಮ
ಮನೆಯ ಮಗನೆಂದೆನಿಸಯ್ಯ
7. ವೇದವನ್ನು ಓದಿದವರು ದೊಡ್ಡವರಾಗುವುದಿಲ್ಲ,
ಜನರ ವೇದನೆಯನ್ನು ಅರತವರು ದೊಡ್ಡವರಾಗುತ್ತಾರೆ
8. ದಯವಿಲ್ಲದ ಧರ್ಮವಾವುದಯ್ಯಾ?
ದಯವೇ ಬೇಕು ಸಕಲ ಪ್ರಾಣಿಗಳಲ್ಲಿಯೂ
ದಯವೇ ಧರ್ಮದ ಮೂಲವಯ್ಯಾ
ಕೂಡಲಸಂಗಯ್ಯನಂತಲ್ಲದೊಲ್ಲಯ್ಯಾ