Latest Updates
-
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್!
ದೇವಸ್ಥಾನದಲ್ಲಿಟ್ಟಿದ್ದ ಚಪ್ಪಲಿ ಕಳುವಾದ್ರೆ ಶುಭ ಸೂಚನೆಯೇ?
ಕಳ್ಳತನ ಅನ್ನೋದು ಎಷ್ಟರ ಮಟ್ಟಿಗೆ ವ್ಯಾಪಿಸಿಕೊಂಡಿದೆ ಅಂದರೆ ದೇವಾಸ್ಥಾನದಲ್ಲಿಟ್ಟ ಚಪ್ಪಲಿಯನ್ನು ಕೂಡ ಕಳ್ಳರು ಬಿಡೋದಿಲ್ಲ. ಹೀಗಾಗಿ ದೇವಾಲಯದ ಹೊರಗಡೆ ಪ್ರತ್ಯೇಕ ಚಪ್ಪಲಿ ಸ್ಟ್ಯಾಂಡ್ಗಳನ್ನು ನಾವು ಕಾಣಬಹುದು. ಇಲ್ಲಿ ನಾವು ಹಣ ಪಾವತಿಸಿದರೆ ಸಾಕು ಅವರೇ ನಮ್ಮ ಪಾದರಕ್ಷೆಗಳನ್ನು ಸುರಕ್ಷಿತವಾಗಿ ನೋಡಿಕೊಳ್ಳುತ್ತಾರೆ.
ಅನೇಕ ಬಾರಿ ನಾವು ದೇವಸ್ಥಾನದ ಹೊರಗಿಟ್ಟಿದ್ದ ಚಪ್ಪಲಿ ಅಲ್ಲಿಂದ ಹೊರ ಬರುವಷ್ಟು ಹೊತ್ತಿಗೆ ಮಂಗ ಮಾಯವಾಗಿರುತ್ತದೆ. ಆ ಕ್ಷಣ ನಾವು ಎಷ್ಟು ನೊಂದುಕೊಳ್ಳುತ್ತೇವೆ ಎಂದರೆ ಭಹುಶಃ ಚಿನ್ನ ಕಳೆದುಕೊಂಡರೂ ಕೂಡ ಅಷ್ಟು ವ್ಯಥೆ ಪಡುತ್ತೇವೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಇನ್ನೂರು ರೂಪಾಯಿ ಕೊಟ್ಟ ಚಪ್ಪಲಿ ಕಳೆದುಕೊಂಡಾಗ ಆಗುವ ನೋವು ಇದ್ಯಲ್ಲ ಅದನ್ನು ಹೇಳಲು ಅಸಾಧ್ಯ.

ಆದ್ರೆ ಇನ್ನು ಮುಂದೆ ನೀವು ನಿಮ್ಮ ಚಪ್ಪಲಿ ದೇವಸ್ಥಾನದಲ್ಲಿ ಕಳವಾದ್ರೆ ಬೇಸರ ಪಟ್ಟುಕೊಳ್ಳುವ ಅಗತ್ಯವಿಲ್ಲ. ಯಾಕಂದ್ರೆ ದೇವಸ್ಥಾನದಲ್ಲಿ ಚಪ್ಪಲಿ ಕಳುವಾದ್ರೆ ತುಂಬಾನೇ ಒಳ್ಳೆಯದಂತೆ. ಹಾಗಾದ್ರೆ ದೇವಸ್ಥಾನದಲ್ಲಿ ಚಪ್ಪಲಿ ಕಳುವಾಗೋದು ಒಳ್ಳೆಯದಾ? ಜ್ಯೋತಿಷ್ಯ ಶಾಸ್ತ್ರ ಈ ಬಗ್ಗೆ ಏನು ಹೇಳುತ್ತವೆ ಅನ್ನೋದನ್ನ ತಿಳಿದುಕೊಳ್ಳೋಣ.
ದೇವಸ್ಥಾನದಲ್ಲಿ ಚಪ್ಪಲಿ ಕಳುವಾದ್ರೆ ಶುಭ ಸೂಚನೆ !
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ದೇವಾಸ್ಥಾನದಲ್ಲಿಟ್ಟಿದ್ದ ಚಪ್ಪಲಿ ಕಳುವಾದ್ರೆ ಶುಭ ಸೂಚನೆಯಂತೆ. ಅದ್ರಲ್ಲೂ ಶನಿವಾರದ ದಿನ ಚಪ್ಪಲಿ ಕಳುವಾದ್ರೆ ತುಂಬಾನೇ ಒಳ್ಳೆಯದು ಅಂತ ಹೇಳಲಾಗುತ್ತದೆ. ಇದರ ಜೊತೆಗೆ ನಿಮ್ಮ ಕಷ್ಟಗಳು ಎಲ್ಲಾ ಪರಿಹಾರವಾಗಲಿದೆ. ಜೊತೆಗೆ ನೀವು ಬಡತನದಿಂದ ಮುಕ್ತಿ ಹೊಂದುತ್ತೀರಿ. ಹೀಗಾಗಿ ದೇವಸ್ಥಾನದಲ್ಲಿಟ್ಟಿದ್ದ ಚಪ್ಪಲಿ ಕಳೆದು ಹೋದ್ರೆ ಬೇಸರ ಪಟ್ಟುಕೊಳ್ಳುವ ಬದಲಾಗಿ ಖುಷಿ ಪಡಿ.
ಶನಿ ದೋಷ ಪರಿಹಾರವಾಗುತ್ತಾ?
ದೇವಸ್ಥಾನದಲ್ಲಿ ನಮ್ಮ ಚಪ್ಪಲಿ ಕಳೆದು ಹೋದ್ರೆ ಒಳ್ಳೆಯದೇ ಯಾಕಂದ್ರೆ ಅದು ನಮ್ಮ ಶನಿ ದೋಷವನ್ನು ಪರಿಹರಿಸುತ್ತಂತೆ. ನಂಬಲು ಅಸಾಧ್ಯವಾದ್ರು ಕೂಡ ಇದು ನಿಜ. ನಮಗೆ ಜೀವನದಲ್ಲಿ ಮೇಲಿಂದ ಮೇಲೆ ಸಮಸ್ಯೆಗಳು ಬರುತ್ತಿದ್ದರೆ ಆಗ ಶನಿದೋಷ ಇರಬಹುದು ಎಂದು ನಾವು ಅಂದುಕೊಳ್ಳುತ್ತೇವೆ. ಶನಿಯು ನಮ್ಮ ಪಾದದಲ್ಲಿ ವಾಸವಾಗಿರುತ್ತಾನೆ ಎಂದು ನಂಬಲಾಗಿದೆ. ಹಾಗೂ ಶನಿಯನ್ನು ಪಾದರಕ್ಷೆಯ ಅಂಶ ಎಂದು ಹೇಳಲಾಗುತ್ತದೆ.
ಚಪ್ಪಲಿ ದಾನ ಮಾಡೋದ್ರಿಂದ ಶನಿಯ ಆಶೀರ್ವಾದ ಪ್ರಾಪ್ತಿ
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಜೋಡಿ ಚಪ್ಪಲಿಗಳನ್ನು ದಾನ ಮಾಡೋದ್ರಿಂದ ಶನಿಯ ಆಶೀರ್ವಾದ ಪ್ರಾಪ್ತಿಯಾಗುತ್ತದೆ. ಶನಿಗ್ರಹದಲ್ಲಿ ಅಶುಭ ಸಂಕೇತವಾದ ದಶ ಇರೋದ್ರಿಂದ ನಾವು ಏನೇ ಕೆಲಸ ಮಾಡಿದರೂ ಕೂಡ ಅದು ಯಶಸ್ವಿಯಾಗೋದಿಲ್ಲ. ಇಂತಹ ಸಮಯದಲ್ಲಿ ದೇವಾಸ್ಥಾನದಲ್ಲಿ ನಮ್ಮ ಚಪ್ಪಲಿ ಅಥವಾ ಶೂ ಕಳುವಾದ್ರೆ ಶುಭ ಸೂಚನೆ ಅಂತ ಹೇಳಲಾಗುತ್ತದೆ. ಆಗ ನಮ್ಮ ನಕ್ಷತ್ರದಲ್ಲಿದ್ದ ದೋಷ ಪರಿಹಾರವಾಗುತ್ತಂತೆ.
ನಮ್ಮ ದೇಹದ ಚರ್ಮ ಹಾಗೂ ಅದರ ಬಣ್ಣ ಶನಿಗೆ ಸಂಬಂಧಿಸಿದ್ದಾಗಿದೆ. ಇಂತಹ ಸಮಯದಲ್ಲಿ ಶನಿವಾರದ ದಿನ ಯಾರಾದರೂ ಚಪ್ಪಲಿ ಅಥವಾ ಶೂ ವನ್ನು ದೇವಸ್ಥಾನದ ಮುಂಭಾಗ ಬಿಟ್ಟು ಬಂದರೆ ಶನಿಯು ನಮ್ಮ ಸಂಕಷ್ಟಗಳನ್ನು ಪರಿಹರಿಸುತ್ತಾನೆ ಎಂಬ ನಂಬಿಕೆಯಿದೆ.
ಇನ್ನು ಮುಂದೆ ದೇವಸ್ಥಾನದಲ್ಲಿ ನಿಮ್ಮ ಚಪ್ಪಲಿ ಕಳುವಾದರೆ ಬೇಸರ ಪಟ್ಟುಕೊಳ್ಳುವುದರ ಬದಲು ಖುಷಿ ಪಡಿ. ಯಾಕಂದ್ರೆ ಚಪ್ಪಲಿಯ ಜೊತೆಗೆ ನಿಮ್ಮೆಲ್ಲಾ ಕಷ್ಟಗಳು ಪರಿಹಾರವಾಗುತ್ತದೆ.



Click it and Unblock the Notifications


