Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ದೇವಸ್ಥಾನದಲ್ಲಿಟ್ಟಿದ್ದ ಚಪ್ಪಲಿ ಕಳುವಾದ್ರೆ ಶುಭ ಸೂಚನೆಯೇ?
ಕಳ್ಳತನ ಅನ್ನೋದು ಎಷ್ಟರ ಮಟ್ಟಿಗೆ ವ್ಯಾಪಿಸಿಕೊಂಡಿದೆ ಅಂದರೆ ದೇವಾಸ್ಥಾನದಲ್ಲಿಟ್ಟ ಚಪ್ಪಲಿಯನ್ನು ಕೂಡ ಕಳ್ಳರು ಬಿಡೋದಿಲ್ಲ. ಹೀಗಾಗಿ ದೇವಾಲಯದ ಹೊರಗಡೆ ಪ್ರತ್ಯೇಕ ಚಪ್ಪಲಿ ಸ್ಟ್ಯಾಂಡ್ಗಳನ್ನು ನಾವು ಕಾಣಬಹುದು. ಇಲ್ಲಿ ನಾವು ಹಣ ಪಾವತಿಸಿದರೆ ಸಾಕು ಅವರೇ ನಮ್ಮ ಪಾದರಕ್ಷೆಗಳನ್ನು ಸುರಕ್ಷಿತವಾಗಿ ನೋಡಿಕೊಳ್ಳುತ್ತಾರೆ.
ಅನೇಕ ಬಾರಿ ನಾವು ದೇವಸ್ಥಾನದ ಹೊರಗಿಟ್ಟಿದ್ದ ಚಪ್ಪಲಿ ಅಲ್ಲಿಂದ ಹೊರ ಬರುವಷ್ಟು ಹೊತ್ತಿಗೆ ಮಂಗ ಮಾಯವಾಗಿರುತ್ತದೆ. ಆ ಕ್ಷಣ ನಾವು ಎಷ್ಟು ನೊಂದುಕೊಳ್ಳುತ್ತೇವೆ ಎಂದರೆ ಭಹುಶಃ ಚಿನ್ನ ಕಳೆದುಕೊಂಡರೂ ಕೂಡ ಅಷ್ಟು ವ್ಯಥೆ ಪಡುತ್ತೇವೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಇನ್ನೂರು ರೂಪಾಯಿ ಕೊಟ್ಟ ಚಪ್ಪಲಿ ಕಳೆದುಕೊಂಡಾಗ ಆಗುವ ನೋವು ಇದ್ಯಲ್ಲ ಅದನ್ನು ಹೇಳಲು ಅಸಾಧ್ಯ.

ಆದ್ರೆ ಇನ್ನು ಮುಂದೆ ನೀವು ನಿಮ್ಮ ಚಪ್ಪಲಿ ದೇವಸ್ಥಾನದಲ್ಲಿ ಕಳವಾದ್ರೆ ಬೇಸರ ಪಟ್ಟುಕೊಳ್ಳುವ ಅಗತ್ಯವಿಲ್ಲ. ಯಾಕಂದ್ರೆ ದೇವಸ್ಥಾನದಲ್ಲಿ ಚಪ್ಪಲಿ ಕಳುವಾದ್ರೆ ತುಂಬಾನೇ ಒಳ್ಳೆಯದಂತೆ. ಹಾಗಾದ್ರೆ ದೇವಸ್ಥಾನದಲ್ಲಿ ಚಪ್ಪಲಿ ಕಳುವಾಗೋದು ಒಳ್ಳೆಯದಾ? ಜ್ಯೋತಿಷ್ಯ ಶಾಸ್ತ್ರ ಈ ಬಗ್ಗೆ ಏನು ಹೇಳುತ್ತವೆ ಅನ್ನೋದನ್ನ ತಿಳಿದುಕೊಳ್ಳೋಣ.
ದೇವಸ್ಥಾನದಲ್ಲಿ ಚಪ್ಪಲಿ ಕಳುವಾದ್ರೆ ಶುಭ ಸೂಚನೆ !
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ದೇವಾಸ್ಥಾನದಲ್ಲಿಟ್ಟಿದ್ದ ಚಪ್ಪಲಿ ಕಳುವಾದ್ರೆ ಶುಭ ಸೂಚನೆಯಂತೆ. ಅದ್ರಲ್ಲೂ ಶನಿವಾರದ ದಿನ ಚಪ್ಪಲಿ ಕಳುವಾದ್ರೆ ತುಂಬಾನೇ ಒಳ್ಳೆಯದು ಅಂತ ಹೇಳಲಾಗುತ್ತದೆ. ಇದರ ಜೊತೆಗೆ ನಿಮ್ಮ ಕಷ್ಟಗಳು ಎಲ್ಲಾ ಪರಿಹಾರವಾಗಲಿದೆ. ಜೊತೆಗೆ ನೀವು ಬಡತನದಿಂದ ಮುಕ್ತಿ ಹೊಂದುತ್ತೀರಿ. ಹೀಗಾಗಿ ದೇವಸ್ಥಾನದಲ್ಲಿಟ್ಟಿದ್ದ ಚಪ್ಪಲಿ ಕಳೆದು ಹೋದ್ರೆ ಬೇಸರ ಪಟ್ಟುಕೊಳ್ಳುವ ಬದಲಾಗಿ ಖುಷಿ ಪಡಿ.
ಶನಿ ದೋಷ ಪರಿಹಾರವಾಗುತ್ತಾ?
ದೇವಸ್ಥಾನದಲ್ಲಿ ನಮ್ಮ ಚಪ್ಪಲಿ ಕಳೆದು ಹೋದ್ರೆ ಒಳ್ಳೆಯದೇ ಯಾಕಂದ್ರೆ ಅದು ನಮ್ಮ ಶನಿ ದೋಷವನ್ನು ಪರಿಹರಿಸುತ್ತಂತೆ. ನಂಬಲು ಅಸಾಧ್ಯವಾದ್ರು ಕೂಡ ಇದು ನಿಜ. ನಮಗೆ ಜೀವನದಲ್ಲಿ ಮೇಲಿಂದ ಮೇಲೆ ಸಮಸ್ಯೆಗಳು ಬರುತ್ತಿದ್ದರೆ ಆಗ ಶನಿದೋಷ ಇರಬಹುದು ಎಂದು ನಾವು ಅಂದುಕೊಳ್ಳುತ್ತೇವೆ. ಶನಿಯು ನಮ್ಮ ಪಾದದಲ್ಲಿ ವಾಸವಾಗಿರುತ್ತಾನೆ ಎಂದು ನಂಬಲಾಗಿದೆ. ಹಾಗೂ ಶನಿಯನ್ನು ಪಾದರಕ್ಷೆಯ ಅಂಶ ಎಂದು ಹೇಳಲಾಗುತ್ತದೆ.
ಚಪ್ಪಲಿ ದಾನ ಮಾಡೋದ್ರಿಂದ ಶನಿಯ ಆಶೀರ್ವಾದ ಪ್ರಾಪ್ತಿ
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಜೋಡಿ ಚಪ್ಪಲಿಗಳನ್ನು ದಾನ ಮಾಡೋದ್ರಿಂದ ಶನಿಯ ಆಶೀರ್ವಾದ ಪ್ರಾಪ್ತಿಯಾಗುತ್ತದೆ. ಶನಿಗ್ರಹದಲ್ಲಿ ಅಶುಭ ಸಂಕೇತವಾದ ದಶ ಇರೋದ್ರಿಂದ ನಾವು ಏನೇ ಕೆಲಸ ಮಾಡಿದರೂ ಕೂಡ ಅದು ಯಶಸ್ವಿಯಾಗೋದಿಲ್ಲ. ಇಂತಹ ಸಮಯದಲ್ಲಿ ದೇವಾಸ್ಥಾನದಲ್ಲಿ ನಮ್ಮ ಚಪ್ಪಲಿ ಅಥವಾ ಶೂ ಕಳುವಾದ್ರೆ ಶುಭ ಸೂಚನೆ ಅಂತ ಹೇಳಲಾಗುತ್ತದೆ. ಆಗ ನಮ್ಮ ನಕ್ಷತ್ರದಲ್ಲಿದ್ದ ದೋಷ ಪರಿಹಾರವಾಗುತ್ತಂತೆ.
ನಮ್ಮ ದೇಹದ ಚರ್ಮ ಹಾಗೂ ಅದರ ಬಣ್ಣ ಶನಿಗೆ ಸಂಬಂಧಿಸಿದ್ದಾಗಿದೆ. ಇಂತಹ ಸಮಯದಲ್ಲಿ ಶನಿವಾರದ ದಿನ ಯಾರಾದರೂ ಚಪ್ಪಲಿ ಅಥವಾ ಶೂ ವನ್ನು ದೇವಸ್ಥಾನದ ಮುಂಭಾಗ ಬಿಟ್ಟು ಬಂದರೆ ಶನಿಯು ನಮ್ಮ ಸಂಕಷ್ಟಗಳನ್ನು ಪರಿಹರಿಸುತ್ತಾನೆ ಎಂಬ ನಂಬಿಕೆಯಿದೆ.
ಇನ್ನು ಮುಂದೆ ದೇವಸ್ಥಾನದಲ್ಲಿ ನಿಮ್ಮ ಚಪ್ಪಲಿ ಕಳುವಾದರೆ ಬೇಸರ ಪಟ್ಟುಕೊಳ್ಳುವುದರ ಬದಲು ಖುಷಿ ಪಡಿ. ಯಾಕಂದ್ರೆ ಚಪ್ಪಲಿಯ ಜೊತೆಗೆ ನಿಮ್ಮೆಲ್ಲಾ ಕಷ್ಟಗಳು ಪರಿಹಾರವಾಗುತ್ತದೆ.



Click it and Unblock the Notifications



