Latest Updates
-
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ!
ದೇವರಿಗೆ ಅರ್ಪಿಸಿದ ತೆಂಗಿನಕಾಯಿ ಹಾಳಾದರೆ ಏನರ್ಥ?
ಧಾರ್ಮಿಕ ಕಾರ್ಯಗಳಲ್ಲಿ ದೇವರಿಗೆ ತೆಂಗಿನಕಾಯಿ ಅರ್ಪಿಸಲಾಗುವುದು. ತೆಂಗಿನಕಾಯಿಯನ್ನು ಮಾತೆ ಲಕ್ಷ್ಮಿಯ ಸ್ವರೂಪ ಎಂದು ಹೇಳಲಾಗುವುದು. ದೇವರಿಗೆ ತೆಂಗಿನಕಾಯಿ ಅರ್ಪಿಸುವಾಗ ಜುಟ್ಟು ಇರುವ ತೆಂಗಿನಕಾಯಿಯನ್ನೇ ಅರ್ಪಿಸಬೇಕು. ತೆಂಗಿನಕಾಯಿಯನ್ನು ಆಯ್ಕೆ ಮಾಡುವಾಗ ಅದರೊಳಗೆ ಹೇಗಿದೆ ಎಂದು ತಿಳಿಯಲು ಸಾಧ್ಯವಿಲ್ಲ.
ಪೂಜೆಗೆ ಒಡೆದ ತೆಂಗಿನಕಾಯಿ ಹಾಳಾಗಿದ್ದರೆ ಅದು ಅಶುಭದ ಸೂಚನೆ ಎಂದೇ ಬಹುತೇಕರು ಭಾವಿಸುತ್ತಾರೆ. ದೇವರಿಗೆ ತೆಂಗಿನಕಾಯಿ ಒಡೆದಾಗ ಅದು ಹಾಳಾಗಿದ್ದರೆ ಅದು ಅಶುಭದ ಸೂಚನೆಯೇ? ಈ ಕುರಿತು ಶಾಸ್ತ್ರ ಏನು ಹೇಳುತ್ತದೆ ಎಂದು ನೋಡೋಣ ಬನ್ನಿ:

ಪೂಜೆಗೆ ತೆಂಗಿನಕಾಯಿ ಹಾಳಾಗಿದ್ದರೆ
ದೇವರಿಗೆ ತೆಂಗಿನಕಾಯಿ ಒಡೆದಾಗ ಅದು ಹಾಳಾಗಿದ್ದರೆ ಅದುಅಶುಭದ ಸೂಚನೆ, ದೇವರು ಈ ರೀತಿ ನಮಗೆ ಏನೋ ಸೂಚನೆ ನೀಡುತ್ತಿದ್ದಾನೆ ಎಂದು ಭಾವಿಸುತ್ತಾರೆ, ಆದರೆ ನಿಜವಾಗಲೂ ಆ ರೀತಿಯಲ್ಲ. ಪೂಜೆಗೆ ತೆಂಗಿನಕಾಯಿ ಒಡೆದಾಗ ಅದು ಹಾಳಾಗಿದ್ದರೆ ಅದು ಉತ್ತಮ ಸೂಚನೆಯಾಗಿದೆ! ದೇವರು ನಿಮ್ಮ ಪ್ರಸಾದವನ್ನು ಸ್ವೀಕರಿಸಿದ್ದಾನೆ ಎಂದು ಸೂಚಿಸುವ ಲಕ್ಷಣವಾಗಿದೆ.
ತೆಂಗಿನಕಾಯಿ ಹಾಳಾಗಿದ್ದರೆ ದೇವರು ನಮ್ಮ ಪ್ರಸಾದ ಸ್ವೀಕರಿಸಿದ್ದಾನೆ, ನಮ್ಮೆಲ್ಲಾ ಇಷ್ಟಾರ್ಥಗಳು ನೆರವೇರಲಿದೆ ಎಂಬ ಸೂಚನೆಯಾಗಿದೆ. ಆದ್ದರಿಂದ ಪೂಜೆಗೆ ಬಳಸಿದ ತೆಂಗಿನಕಾಯಿ ಹಾಳಾದರೆ ಟೆನ್ಷನ್ ಮಾಡಿಕೊಳ್ಳಬೇಡಿ, ಬದಲಿಗೆ ಖುಷಿ ಪಡಿ, ದೇವರ ಕೃಪೆ ನಮ್ಮ ಮೇಲಿದೆ, ನಮ್ಮ ಇಷ್ಟಾರ್ಥಗಳು ನೆರವೇರಲಿದೆ ಎಂದು ಸೂಚಿಸುವ ಲಕ್ಷಣವಾಗಿದೆ.
ತೆಂಗಿನಕಾಯಿ ಒಡೆದಾಗ ಸಮವಾಗಿ ವಿಬ್ಭಾಗವಾಗದೇ ಹೋದರೆ
ದೇವರಿಗೆ ತೆಂಗಿನಕಾಯಿ ಒಡೆದಾಗ ಅದು ಎರಡು ಭಾಗವಾಗಿ ಸಮವಾಗಿ ಭಾಗವಾಗದಿದ್ದರೆ ಆಗಲೂ ಕೂಡ ಕಲೆವರು ಟೆನ್ಷನ್ ಮಾಡಿಕೊಳ್ಳುತ್ತಾರೆ, ದೇವರಿಗೆ ಒಡೆದ ತೆಂಗಿನಕಾಯಿ ಹೇಗೇ ಭಾಗವಾದರೂ ತಲೆಕೆಡಿಸಿಕೊಳ್ಳಬೇಕಾಗಿಲ್ಲ, ತೆಂಗಿನಕಾಯಿ ಹೀಗೆಯೇ ಭಾಗವಾಗಬೇಕು ಎಂಬ ಯಾವ ನಿಯಮವೂ ಇಲ್ಲ.
ಮತ್ತೊಂದು ತೆಂಗಿನಕಾಯಿ ಅರ್ಪಿಸಬಹುದೇ?
ಒಂದು ತೆಂಗಿನಕಾಯಿ ಹಾಳಾದರೆ ಕೆಲವರು ಮತ್ತೊಂದು ಅರ್ಪಿಸುತ್ತಾರೆ. ಹೀಗೆ ಮಾಡಬಹುದು, ಆದರೆ ತೆಂಗಿನಕಾಯಿ ಹಾಳಾದರೆ ಅದು ಅಶುಭ ಎಂದು ಯೋಚಿಸುವ ಅಗ್ಯತವಿಲ್ಲ, ಅದು ಶುಭದ ಸೂಚನೆಯೇ ಆಗಿದೆ. ಕೆಲವೊಮ್ಮೆ ಪೂಜೆಗೆ ಬಳಸಿದ ತೆಂಗಿನಕಾಯಿಂದ ಪ್ರಸಾದ ತಯಾರಿಸುತ್ತೇವೆ, ಈ ಸಂದರ್ಭದಲ್ಲಿ ಹಾಳಾದ ತೆಂಗಿನಕಾಯಿಯನ್ನು ಬಳಸಲು ಸಾಧ್ಯವಿಲ್ಲ, ಆ ಸಂದರ್ಭದಲ್ಲಿ ಮತ್ತೊಂದುನ ಒಡೆದು ಬಳಸಬಹುದು.
ತೆಂಗಿನಕಾಯಿ ಒಳಗಡೆ ಹೂವಿದ್ದರೆ
ತೆಂಗಿನಕಾಯಿಯೊಳಗಡೆ ಹೂವು ಇದ್ದರೆ ಅದು ಕೂಡ ಒಳ್ಳೆಯದೇ. ಅಲ್ಲದೆ ಇದನ್ನು ತಿನ್ನಿ, ಏಕೆಂದರೆ ಇದರಲ್ಲಿ ಅನೇಕ ಪೋಷಕಾಂಶಗಳಿವೆ, ಆದ್ದರಿಂದ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು.



Click it and Unblock the Notifications