Latest Updates
-
ಬದನೆಕಾಯಿ ಕಹಿ ತೆಗೆಯೋದು ಹೇಗೆ? ಈ ಸಿಂಪಲ್ ಟ್ರಿಕ್ ಬಳಸಿ.. ಬಲು ರುಚಿ! ಕಹಿ ಅನ್ನೋದೇ ಇರಲ್ಲ -
ಮಧ್ಯಪ್ರಾಚ್ಯ ಸಂಘರ್ಷ: ಭಾರತದಲ್ಲಿ ಏರಿಕೆಯಾಗಲಿದೆ ಈ ವಸ್ತುಗಳ ಬೆಲೆ! -
ಇವ್ರು ಬೇಗ ಲವ್ನಲ್ಲಿ ಬೀಳ್ತಾರೆ.. ಮದುವೆ ಅಂದ್ರೆ ಅನ್ಪ್ರೆಡಿಕ್ಟಬಲ್! ನಿಮ್ಮ ಜನ್ಮದಿನಾಂಕ ಇದೇನಾ? -
ಬೇಸಿಗೆಯ ಉರಿ ಬಿಸಿಲಿನಲ್ಲಿ ಫ್ರಿಡ್ಜ್ನಲ್ಲಿಟ್ಟ ಈ ಹಣ್ಣು ಸೇವಿಸಬೇಡಿ! ಎದುರಾಗುತ್ತೆ ಆಪತ್ತು! -
ಸಕ್ಕರೆ ಬೇಡ, ಪಾಕವೂ ಬೇಡ.. ಅಜ್ಜ-ಅಜ್ಜಿಯರ ಕಾಲದ ಹೆಲ್ದಿ ಲಡ್ಡು! ತಿಂದ್ರೆ ತೂಕ ಇಳಿಯುತ್ತೆ, ಶುಗರ್ಗೂ ಬೆಸ್ಟ್ -
ಬಿಸಿಲಿನ ತಾಪಕ್ಕೆ ಕಣ್ಣು ಉರಿಗೆ ಈ ಪುಡಿ ಬೆಸ್ಟ್! ದಿನ 1 ಚಮಚ ಕಣ್ಣಿನ ಎಲ್ಲಾ ಸಮಸ್ಯೆ ಕಡಿಮೆಯಾಗುತ್ತೆ -
ಭಾಲಚಂದ್ರ ಸಂಕಷ್ಟ ಚತುರ್ಥಿ 2026: ಈ 6 ರಾಶಿಗಳಿಗೆ ಗಜಕೇಸರಿ ಯೋಗ! ಹಣದ ಮಳೆ ಸುರಿಸಲಿದ್ದಾರೆ ಗಣಪ -
ಶುಕ್ರ-ಶನಿಯ ಮೀನ ಸಂಚಾರದಿಂದ ಮಾಲವ್ಯ ಯೋಗ: ಈ 5 ರಾಶಿಯವರ ಜೀವನದಲ್ಲಿ ಬಹುದೊಡ್ಡ ಬದಲಾವಣೆ! -
ರಾತ್ರಿ ಉಳಿದ ಅನ್ನದಿಂದ ಬೆಳಗ್ಗೆ ಈ ಈರುಳ್ಳಿ ರೈಸ್ ಮಾಡಿ! ಸುಲಭದ ಟೇಸ್ಟಿ ರೆಸಿಪಿ -
10 ನಿಮಿಷದ ಸಬ್ಜಿ.. ಕ್ಯಾಪ್ಸಿಕಂ ಇಷ್ಟಪಡದವರೂ ಫಿದಾ ಆಗ್ತಾರೆ! ಬೆರಳು ಚೀಪುವಷ್ಟು ರುಚಿ.. ಮಾಡೋದು ಹೇಗೆ?
ದೇವರಿಗೆ ಅರ್ಪಿಸಿದ ತೆಂಗಿನಕಾಯಿ ಹಾಳಾದರೆ ಏನರ್ಥ?
ಧಾರ್ಮಿಕ ಕಾರ್ಯಗಳಲ್ಲಿ ದೇವರಿಗೆ ತೆಂಗಿನಕಾಯಿ ಅರ್ಪಿಸಲಾಗುವುದು. ತೆಂಗಿನಕಾಯಿಯನ್ನು ಮಾತೆ ಲಕ್ಷ್ಮಿಯ ಸ್ವರೂಪ ಎಂದು ಹೇಳಲಾಗುವುದು. ದೇವರಿಗೆ ತೆಂಗಿನಕಾಯಿ ಅರ್ಪಿಸುವಾಗ ಜುಟ್ಟು ಇರುವ ತೆಂಗಿನಕಾಯಿಯನ್ನೇ ಅರ್ಪಿಸಬೇಕು. ತೆಂಗಿನಕಾಯಿಯನ್ನು ಆಯ್ಕೆ ಮಾಡುವಾಗ ಅದರೊಳಗೆ ಹೇಗಿದೆ ಎಂದು ತಿಳಿಯಲು ಸಾಧ್ಯವಿಲ್ಲ.
ಪೂಜೆಗೆ ಒಡೆದ ತೆಂಗಿನಕಾಯಿ ಹಾಳಾಗಿದ್ದರೆ ಅದು ಅಶುಭದ ಸೂಚನೆ ಎಂದೇ ಬಹುತೇಕರು ಭಾವಿಸುತ್ತಾರೆ. ದೇವರಿಗೆ ತೆಂಗಿನಕಾಯಿ ಒಡೆದಾಗ ಅದು ಹಾಳಾಗಿದ್ದರೆ ಅದು ಅಶುಭದ ಸೂಚನೆಯೇ? ಈ ಕುರಿತು ಶಾಸ್ತ್ರ ಏನು ಹೇಳುತ್ತದೆ ಎಂದು ನೋಡೋಣ ಬನ್ನಿ:

ಪೂಜೆಗೆ ತೆಂಗಿನಕಾಯಿ ಹಾಳಾಗಿದ್ದರೆ
ದೇವರಿಗೆ ತೆಂಗಿನಕಾಯಿ ಒಡೆದಾಗ ಅದು ಹಾಳಾಗಿದ್ದರೆ ಅದುಅಶುಭದ ಸೂಚನೆ, ದೇವರು ಈ ರೀತಿ ನಮಗೆ ಏನೋ ಸೂಚನೆ ನೀಡುತ್ತಿದ್ದಾನೆ ಎಂದು ಭಾವಿಸುತ್ತಾರೆ, ಆದರೆ ನಿಜವಾಗಲೂ ಆ ರೀತಿಯಲ್ಲ. ಪೂಜೆಗೆ ತೆಂಗಿನಕಾಯಿ ಒಡೆದಾಗ ಅದು ಹಾಳಾಗಿದ್ದರೆ ಅದು ಉತ್ತಮ ಸೂಚನೆಯಾಗಿದೆ! ದೇವರು ನಿಮ್ಮ ಪ್ರಸಾದವನ್ನು ಸ್ವೀಕರಿಸಿದ್ದಾನೆ ಎಂದು ಸೂಚಿಸುವ ಲಕ್ಷಣವಾಗಿದೆ.
ತೆಂಗಿನಕಾಯಿ ಹಾಳಾಗಿದ್ದರೆ ದೇವರು ನಮ್ಮ ಪ್ರಸಾದ ಸ್ವೀಕರಿಸಿದ್ದಾನೆ, ನಮ್ಮೆಲ್ಲಾ ಇಷ್ಟಾರ್ಥಗಳು ನೆರವೇರಲಿದೆ ಎಂಬ ಸೂಚನೆಯಾಗಿದೆ. ಆದ್ದರಿಂದ ಪೂಜೆಗೆ ಬಳಸಿದ ತೆಂಗಿನಕಾಯಿ ಹಾಳಾದರೆ ಟೆನ್ಷನ್ ಮಾಡಿಕೊಳ್ಳಬೇಡಿ, ಬದಲಿಗೆ ಖುಷಿ ಪಡಿ, ದೇವರ ಕೃಪೆ ನಮ್ಮ ಮೇಲಿದೆ, ನಮ್ಮ ಇಷ್ಟಾರ್ಥಗಳು ನೆರವೇರಲಿದೆ ಎಂದು ಸೂಚಿಸುವ ಲಕ್ಷಣವಾಗಿದೆ.
ತೆಂಗಿನಕಾಯಿ ಒಡೆದಾಗ ಸಮವಾಗಿ ವಿಬ್ಭಾಗವಾಗದೇ ಹೋದರೆ
ದೇವರಿಗೆ ತೆಂಗಿನಕಾಯಿ ಒಡೆದಾಗ ಅದು ಎರಡು ಭಾಗವಾಗಿ ಸಮವಾಗಿ ಭಾಗವಾಗದಿದ್ದರೆ ಆಗಲೂ ಕೂಡ ಕಲೆವರು ಟೆನ್ಷನ್ ಮಾಡಿಕೊಳ್ಳುತ್ತಾರೆ, ದೇವರಿಗೆ ಒಡೆದ ತೆಂಗಿನಕಾಯಿ ಹೇಗೇ ಭಾಗವಾದರೂ ತಲೆಕೆಡಿಸಿಕೊಳ್ಳಬೇಕಾಗಿಲ್ಲ, ತೆಂಗಿನಕಾಯಿ ಹೀಗೆಯೇ ಭಾಗವಾಗಬೇಕು ಎಂಬ ಯಾವ ನಿಯಮವೂ ಇಲ್ಲ.
ಮತ್ತೊಂದು ತೆಂಗಿನಕಾಯಿ ಅರ್ಪಿಸಬಹುದೇ?
ಒಂದು ತೆಂಗಿನಕಾಯಿ ಹಾಳಾದರೆ ಕೆಲವರು ಮತ್ತೊಂದು ಅರ್ಪಿಸುತ್ತಾರೆ. ಹೀಗೆ ಮಾಡಬಹುದು, ಆದರೆ ತೆಂಗಿನಕಾಯಿ ಹಾಳಾದರೆ ಅದು ಅಶುಭ ಎಂದು ಯೋಚಿಸುವ ಅಗ್ಯತವಿಲ್ಲ, ಅದು ಶುಭದ ಸೂಚನೆಯೇ ಆಗಿದೆ. ಕೆಲವೊಮ್ಮೆ ಪೂಜೆಗೆ ಬಳಸಿದ ತೆಂಗಿನಕಾಯಿಂದ ಪ್ರಸಾದ ತಯಾರಿಸುತ್ತೇವೆ, ಈ ಸಂದರ್ಭದಲ್ಲಿ ಹಾಳಾದ ತೆಂಗಿನಕಾಯಿಯನ್ನು ಬಳಸಲು ಸಾಧ್ಯವಿಲ್ಲ, ಆ ಸಂದರ್ಭದಲ್ಲಿ ಮತ್ತೊಂದುನ ಒಡೆದು ಬಳಸಬಹುದು.
ತೆಂಗಿನಕಾಯಿ ಒಳಗಡೆ ಹೂವಿದ್ದರೆ
ತೆಂಗಿನಕಾಯಿಯೊಳಗಡೆ ಹೂವು ಇದ್ದರೆ ಅದು ಕೂಡ ಒಳ್ಳೆಯದೇ. ಅಲ್ಲದೆ ಇದನ್ನು ತಿನ್ನಿ, ಏಕೆಂದರೆ ಇದರಲ್ಲಿ ಅನೇಕ ಪೋಷಕಾಂಶಗಳಿವೆ, ಆದ್ದರಿಂದ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು.



Click it and Unblock the Notifications











