Latest Updates
-
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು!
ದೇವರಿಗೆ ಅರ್ಪಿಸಿದ ತೆಂಗಿನಕಾಯಿ ಹಾಳಾದರೆ ಏನರ್ಥ?
ಧಾರ್ಮಿಕ ಕಾರ್ಯಗಳಲ್ಲಿ ದೇವರಿಗೆ ತೆಂಗಿನಕಾಯಿ ಅರ್ಪಿಸಲಾಗುವುದು. ತೆಂಗಿನಕಾಯಿಯನ್ನು ಮಾತೆ ಲಕ್ಷ್ಮಿಯ ಸ್ವರೂಪ ಎಂದು ಹೇಳಲಾಗುವುದು. ದೇವರಿಗೆ ತೆಂಗಿನಕಾಯಿ ಅರ್ಪಿಸುವಾಗ ಜುಟ್ಟು ಇರುವ ತೆಂಗಿನಕಾಯಿಯನ್ನೇ ಅರ್ಪಿಸಬೇಕು. ತೆಂಗಿನಕಾಯಿಯನ್ನು ಆಯ್ಕೆ ಮಾಡುವಾಗ ಅದರೊಳಗೆ ಹೇಗಿದೆ ಎಂದು ತಿಳಿಯಲು ಸಾಧ್ಯವಿಲ್ಲ.
ಪೂಜೆಗೆ ಒಡೆದ ತೆಂಗಿನಕಾಯಿ ಹಾಳಾಗಿದ್ದರೆ ಅದು ಅಶುಭದ ಸೂಚನೆ ಎಂದೇ ಬಹುತೇಕರು ಭಾವಿಸುತ್ತಾರೆ. ದೇವರಿಗೆ ತೆಂಗಿನಕಾಯಿ ಒಡೆದಾಗ ಅದು ಹಾಳಾಗಿದ್ದರೆ ಅದು ಅಶುಭದ ಸೂಚನೆಯೇ? ಈ ಕುರಿತು ಶಾಸ್ತ್ರ ಏನು ಹೇಳುತ್ತದೆ ಎಂದು ನೋಡೋಣ ಬನ್ನಿ:

ಪೂಜೆಗೆ ತೆಂಗಿನಕಾಯಿ ಹಾಳಾಗಿದ್ದರೆ
ದೇವರಿಗೆ ತೆಂಗಿನಕಾಯಿ ಒಡೆದಾಗ ಅದು ಹಾಳಾಗಿದ್ದರೆ ಅದುಅಶುಭದ ಸೂಚನೆ, ದೇವರು ಈ ರೀತಿ ನಮಗೆ ಏನೋ ಸೂಚನೆ ನೀಡುತ್ತಿದ್ದಾನೆ ಎಂದು ಭಾವಿಸುತ್ತಾರೆ, ಆದರೆ ನಿಜವಾಗಲೂ ಆ ರೀತಿಯಲ್ಲ. ಪೂಜೆಗೆ ತೆಂಗಿನಕಾಯಿ ಒಡೆದಾಗ ಅದು ಹಾಳಾಗಿದ್ದರೆ ಅದು ಉತ್ತಮ ಸೂಚನೆಯಾಗಿದೆ! ದೇವರು ನಿಮ್ಮ ಪ್ರಸಾದವನ್ನು ಸ್ವೀಕರಿಸಿದ್ದಾನೆ ಎಂದು ಸೂಚಿಸುವ ಲಕ್ಷಣವಾಗಿದೆ.
ತೆಂಗಿನಕಾಯಿ ಹಾಳಾಗಿದ್ದರೆ ದೇವರು ನಮ್ಮ ಪ್ರಸಾದ ಸ್ವೀಕರಿಸಿದ್ದಾನೆ, ನಮ್ಮೆಲ್ಲಾ ಇಷ್ಟಾರ್ಥಗಳು ನೆರವೇರಲಿದೆ ಎಂಬ ಸೂಚನೆಯಾಗಿದೆ. ಆದ್ದರಿಂದ ಪೂಜೆಗೆ ಬಳಸಿದ ತೆಂಗಿನಕಾಯಿ ಹಾಳಾದರೆ ಟೆನ್ಷನ್ ಮಾಡಿಕೊಳ್ಳಬೇಡಿ, ಬದಲಿಗೆ ಖುಷಿ ಪಡಿ, ದೇವರ ಕೃಪೆ ನಮ್ಮ ಮೇಲಿದೆ, ನಮ್ಮ ಇಷ್ಟಾರ್ಥಗಳು ನೆರವೇರಲಿದೆ ಎಂದು ಸೂಚಿಸುವ ಲಕ್ಷಣವಾಗಿದೆ.
ತೆಂಗಿನಕಾಯಿ ಒಡೆದಾಗ ಸಮವಾಗಿ ವಿಬ್ಭಾಗವಾಗದೇ ಹೋದರೆ
ದೇವರಿಗೆ ತೆಂಗಿನಕಾಯಿ ಒಡೆದಾಗ ಅದು ಎರಡು ಭಾಗವಾಗಿ ಸಮವಾಗಿ ಭಾಗವಾಗದಿದ್ದರೆ ಆಗಲೂ ಕೂಡ ಕಲೆವರು ಟೆನ್ಷನ್ ಮಾಡಿಕೊಳ್ಳುತ್ತಾರೆ, ದೇವರಿಗೆ ಒಡೆದ ತೆಂಗಿನಕಾಯಿ ಹೇಗೇ ಭಾಗವಾದರೂ ತಲೆಕೆಡಿಸಿಕೊಳ್ಳಬೇಕಾಗಿಲ್ಲ, ತೆಂಗಿನಕಾಯಿ ಹೀಗೆಯೇ ಭಾಗವಾಗಬೇಕು ಎಂಬ ಯಾವ ನಿಯಮವೂ ಇಲ್ಲ.
ಮತ್ತೊಂದು ತೆಂಗಿನಕಾಯಿ ಅರ್ಪಿಸಬಹುದೇ?
ಒಂದು ತೆಂಗಿನಕಾಯಿ ಹಾಳಾದರೆ ಕೆಲವರು ಮತ್ತೊಂದು ಅರ್ಪಿಸುತ್ತಾರೆ. ಹೀಗೆ ಮಾಡಬಹುದು, ಆದರೆ ತೆಂಗಿನಕಾಯಿ ಹಾಳಾದರೆ ಅದು ಅಶುಭ ಎಂದು ಯೋಚಿಸುವ ಅಗ್ಯತವಿಲ್ಲ, ಅದು ಶುಭದ ಸೂಚನೆಯೇ ಆಗಿದೆ. ಕೆಲವೊಮ್ಮೆ ಪೂಜೆಗೆ ಬಳಸಿದ ತೆಂಗಿನಕಾಯಿಂದ ಪ್ರಸಾದ ತಯಾರಿಸುತ್ತೇವೆ, ಈ ಸಂದರ್ಭದಲ್ಲಿ ಹಾಳಾದ ತೆಂಗಿನಕಾಯಿಯನ್ನು ಬಳಸಲು ಸಾಧ್ಯವಿಲ್ಲ, ಆ ಸಂದರ್ಭದಲ್ಲಿ ಮತ್ತೊಂದುನ ಒಡೆದು ಬಳಸಬಹುದು.
ತೆಂಗಿನಕಾಯಿ ಒಳಗಡೆ ಹೂವಿದ್ದರೆ
ತೆಂಗಿನಕಾಯಿಯೊಳಗಡೆ ಹೂವು ಇದ್ದರೆ ಅದು ಕೂಡ ಒಳ್ಳೆಯದೇ. ಅಲ್ಲದೆ ಇದನ್ನು ತಿನ್ನಿ, ಏಕೆಂದರೆ ಇದರಲ್ಲಿ ಅನೇಕ ಪೋಷಕಾಂಶಗಳಿವೆ, ಆದ್ದರಿಂದ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು.



Click it and Unblock the Notifications
