Latest Updates
-
ಬಿಸಿಲು ಅಥವಾ ಮಳೆ: ಹವಾಮಾನದ ಅಬ್ಬರದ ನಡುವೆಯೂ ನಿಮ್ಮ ಮದುವೆ ಸಂಭ್ರಮವನ್ನು ಅಚ್ಚುಕಟ್ಟಾಗಿ ಪ್ಲಾನ್ ಮಾಡುವುದು ಹೇಗೆ? -
ಬಿಸಿಲ ಧಗೆಗೆ ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ನಿಮ್ಮ ಮನೆಯನ್ನು ತಂಪಾಗಿರಿಸಲು ಮತ್ತು ಗಿಡಗಳನ್ನು ಉಳಿಸಲು ಇಲ್ಲಿವೆ ಅದ್ಭುತ ಟಿಪ್ಸ್! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಅಡುಗೆ ಮನೆಯಲ್ಲಿರುವ ಈ ಪದಾರ್ಥಗಳೇ ಸಾಕು, ಇಂದೇ ಟ್ರೈ ಮಾಡಿ! -
ಕಾನ್ 2026 ರೆಡ್ ಕಾರ್ಪೆಟ್ನಲ್ಲಿ ಭಾರತೀಯ ತಾರೆಯರ ಮಿಂಚಿನ ಸಂಚಲನ: ಈ ಫ್ಯಾಷನ್ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಕರಣ್-ತೇಜಸ್ವಿ ಗುಟ್ಟಾಗಿ ಮದುವೆಯಾದ್ರಾ? ವೈರಲ್ ವಿಡಿಯೋ ಹಿಂದಿನ ಅಸಲಿ ಸತ್ಯ ಇಲ್ಲಿದೆ! -
ಮುಂಬೈನಲ್ಲಿ ನೀರು ಕಡಿತ: ಬಿಎಂಸಿ ಎಚ್ಚರಿಕೆ ಬೆನ್ನಲ್ಲೇ ಮನೆಯಲ್ಲಿ ನೀರು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ಮದ್ದು! -
ಕಿರೀಟ ಯಾರ ಪಾಲಾಗಲಿದೆ? ದೆಹಲಿಯಲ್ಲಿ ಮಿಸ್ ಗ್ರ್ಯಾಂಡ್ ಇಂಡಿಯಾ 2026 ಫಿನಾಲೆ ಸಂಭ್ರಮದ ಕ್ಷಣಗಳು -
ಹವಾಮಾನದಲ್ಲಿ ಭಾರಿ ಬದಲಾವಣೆ: ಮೇ 12-13 ರಂದು ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ!
ಜೂನ್ 17ಕ್ಕೆ ಶನಿ ಅಮವಾಸ್ಯೆ: ಶನಿಯ ಕೆಟ್ಟ ಪ್ರಭಾವ, ಪಿತೃದೋಷವಿದ್ದರೆ ಈ ಪರಿಹಾರ ಮಾಡಿ
ಹಿಂದೂ ಧರ್ಮದಲ್ಲಿ ಅಮವಾಸ್ಯೆಗೆ ಅದರದ್ದೇ ಆದ ಮಹತ್ವವಿದೆ, ಅದರಲ್ಲೂ ಅಮವಾಸ್ಯೆ ಶನಿವಾರ ಬಂದರೆ ಶನಿ ಅಮವಾಸ್ಯೆ ಎಂದು ಕರೆಯಲಾಗುವುದು. ಈ ವರ್ಷದ ಮೊದಲ ಶನಿ ಅಮವಾಸ್ಯೆ ಜನವರಿ 21ಕ್ಕೆ ಏರ್ಪಡಲಿದೆ. ಇದೀಗ ಜೂನ್ 17ಕ್ಕೆ ಶನಿ ಅಮವಾಸ್ಯೆ ಉಂಟಾಗಲಿದೆ. ಶನಿವಾರ ಶನಿ ದೇವರಿಗೆ ಮೀಸಲಾದ ದಿನ. ಈ ದಿನದಂದೇ ಅಮವಾಸ್ಯೆ ಬಂದರೆ ಅಮವಾಸ್ಯೆ ಬಂದರೆ ಶನಿ ಅಮವಾಸ್ಯೆ ಎಂದು ಕರೆಯಲಾಗುವುದು.
ಈ ಶನಿ ಅಮವಾಸ್ಯೆ ಮತ್ತೊಂದು ವಿಶೇಷವೆಂದರೆ ಬರೋಬರಿ 30 ವರ್ಷಗಳ ಬಳಿಕ ಶನಿಯು ಕುಂಭ ರಾಶಿಯಲ್ಲಿ ವಕ್ರೀಯವಾಗಿ ಚಲಿಸಲಿದೆ. ಶನಿ ಅಮವಾಸ್ಯೆಯಂದು ಶನಿ ದೋಷಕ್ಕೆ ಪರಿಹಾರ ಮಾಡಲು ಅತ್ಯಂತ ಸೂಕ್ತವಾದ ದಿನವೆಂದು ಪರಿಗಣಿಸಲಾಗಿದೆ. ಈ ದಿನದಂದು ಶನಿ ದೋಷಕ್ಕೆ ಪರಿಹಾರ ಮಾಡಲು ಹಾಗೂ ಪಿತೃದೋಷಕ್ಕೆ ಪರಿಹಾರ ಮಾಡಲು ಶ್ರೇಷ್ಠವಾಗಿದೆ. ಶನಿಯ ಸಾಡೇಸತಿ, ಧೈಯ ಅಥವಾ ಶನಿಯ ಮಹಾದಶಾ ಇರುವವರು ಈ ಶನಿ ಅಮಾವಾಸ್ಯೆಯಂದು ಶನಿ ಪರಿಹಾರವನ್ನು ಮಾಡಬೇಕು.

ಶನಿ ಅಮಾವಾಸ್ಯೆಯ ದಿನದಂದು ಈ ಪರಿಹಾರ ಮಾಡಿ:
- ಶನಿ ಅಮವಾಸ್ಯೆಯಂದು ಹಾಲಿಗೆ ಕಪ್ಪು ಎಳ್ಳು ಬೆರೆಸಿ ಶಿವನಿಗೆ ಅರ್ಪಿಸಿ. ಹೀಗೆ ಮಾಡುವುದರಿಂದ ಶನಿದೋಷದ ಪ್ರಭಾವದಿಂದ ಸಂಸಾರದಲ್ಲಿ ಉಂಟಾಗಿರುವ ಸಮಸ್ಯೆಗೆ ಪರಿಹಾರ ಸಿಗಲಿದೆ.
- ಶನಿ ದೇವಾಲಯಕ್ಕೆ ಹೋಗಿ ಕಪ್ಪು ಎಳ್ಳು ಹಾಗೂ ಎಳ್ಳೆಣ್ಣೆ ಅಥವಾ ಸಾಸಿವೆಯೆಣ್ಣೆ ಅರ್ಪಿಸಿ.
- ಶನಿ ಸಾಡೇಸಾತಿ, ಶನಿ ಧೈಯ್ಯ ಇರುವವರು ಉಪ್ಪು, ಸಾಸಿವೆ, ಎಳ್ಳನ್ನು ದಾನ ಮಾಡಿ. ಉದ್ದು ಹಾಗೂ ಸಕ್ಕರೆ ಮಿಶ್ರ ಮಾಡಿ ಇರುವೆಗಳಿಗೆ ಹಾಕಿ.
- ಈ ದಿನ ಎಳ್ಳು ಹಾಗೂ ಉದ್ದು ಮಿಶ್ರ ಮಾಡಿ ಮೀನುಗಳಿಗೆ ಹಾಕಿ
- ಬೆಳಗ್ಗೆ ಆಹಾರ ಸೇವಿಸುವ ಮುನ್ನ ಕರಿಮೆಣಸು ಅಗೆದು ಸೇವಿಸಿ.
- ಈ ದಿನ ನಿಮ್ಮ ಶಕ್ತಿಗೆ ಅನುಸಾರ ದಾನ ಮಾಡಿ.
- ಈ ದಿನದಿನ ನಿರ್ಗತಿಕರಿಗೆ ದಾನ ಮಾಡುವುದರಿಂದ ಕಷ್ಟಗಳು ಕಡಿಮೆಯಾಗುವುದು.
- ಶನಿ ಅಮವಾಸ್ಯೆಯಂದು ಕಪ್ಪು ಬಟ್ಟೆ ಧರಿಸಿ.
- ಬಡವರಿಗೆ ಕಪ್ಪು ರಗ್ ದಾನ ಮಾಡಿ.
ಪಿತೃದೋಷ ಪರಿಹಾರಕ್ಕೆ ಈ ದಿನ ಶ್ರೇಷ್ಠವಾಗಿದೆ
ಪಿತೃದೋಷವಿದ್ದರೆ ಅನೇಕ ಆರೋಗ್ಯ ಸಮಸ್ಯೆ, ವ್ಯವಹಾರದಲ್ಲಿ ನಷ್ಟ, ಕುಟುಂಬದದಲ್ಲಿ ಸಮಸ್ಯೆ, ಸಂತಾನಹೀನತೆ ಮುಂತಾದ ಸಮಸ್ಯೆ ಕಂಡು ಬರುವುದು. ಪಿತೃದೋಷಕ್ಕೆ ಶನಿ ಅಮವಾಸ್ಯೆಯಂದು ಪರಿಹಾರ ಮಾಡಿ.
ಅಲ್ಲದೆ ಶನಿಯ ಹಿಮ್ಮುಖ ಚಲನೆ ಕೂಡ ಇರುವುದರಿಂದ ಇದು ಕೂಡ ದ್ವಾದಶ ರಾಶಿಗಳ ಮೇಲೆ ಪ್ರಭಾವ ಬೀರಲಿದೆ. ಈ ಹಿಮ್ಮುಖ ಚಲನೆ ಕರ್ಕ, ಸಿಂಹ, ವೃಶ್ಚಿಕ ಮತ್ತು ಮೀನ ರಾಶಿಯವರಿಗೆ ಸಮಸ್ಯೆಗಳನ್ನು ಉಂಟುಮಾಡಬಹುದು. ಉಳಿದ ರಾಶಿಯವರ ಮೇಲೆ ಶನಿಯ ಹಿಮ್ಮುಖ ಚಲನೆಯ ಪರಿಣಾಮವು ಸಾಮಾನ್ಯವಾಗಿರುತ್ತದೆ. ಶನಿಯ ಹಿಮ್ಮುಖ ಚಲನೆಯಿಂದ ಕೆಟ್ಟ ಪ್ರಭಾವ ಎದುರಿಸುವ ರಾಶಿಯವರೂ ಈ ಪರಿಹಾರ ಮಾಡುವುದು ಒಳ್ಳೆಯದು.
ಶನಿ ಅಮವಾಸ್ಯೆಯ ದಿನ ಶನಿ ದೇವಾಲಯಕ್ಕೆ ಹೋಗಿ ಈ ಮಂತ್ರ ಪಠಿಸಿ
"ಓಂ ಹಿಲ್ಮ್ ಶಾಮ್ ಶನಾಯ ನಮ
" "ಓಂ ಪ್ರಾಮ್ ಪ್ರೀಮ್ ಪ್ರೌಮ್ ಸಹ ಶಾನೈಶ್ರಾಯ ನಮ"
"ಓಂ ಶಾಮ್ ಶನೇಶ್ಚಾರ ನಮಃ" "ಔಮ್ ಐಂಗ್ ಹರಿಂಗ್ ಶರಿಂಗ್ ಶಂಗ್ ಶನೈಶ್ಚರಾಯ ನಮ ಔಮ್"
ಶನಿ ಗಾಯತ್ರಿ ಮಂತ್ರ
ಓಂ ಶನೈಶ್ಚರಾಯ ವಿದ್ಮಯೇ
ಸೂರ್ಯಪುತ್ರಾಯ ದಹಿಮಹಿ ತನ್ನೊ ಮಂಡಾ ಪ್ರಚೋದಾಯತ್
ಶನಿ ಧ್ಯಾನ ಮಂತ್ರ
ನೀಲಂಜನ ಸಮಾಭಮ್ ರವಿಪುತ್ರಂ ಯಮಗ್ರಾಜಂ ಚಯಾ ಮಾರ್ತಾಂದ ಸಂಭಾತ್ ತಮ್ ನಮಮಿ ಶೈಶ್ಚರಂ



Click it and Unblock the Notifications