Latest Updates
-
ಜುಲೈ 17: ದಂಪತಿಗಳ ನಡುವಿನ ಮನಸ್ತಾಪ ದೂರವಾಗಿಸಲು ಈ ಸರಳ ಟಿಪ್ಸ್ ಪಾಲಿಸಿ! -
ದೆಹಲಿಯ ಸೆಖೆ ಮತ್ತು ಆರ್ದ್ರತೆ: ಕರೆಂಟ್ ಬಿಲ್ ಉಳಿಸಿ, ಮನೆಯನ್ನು ತಂಪಾಗಿರಿಸುವ ಸ್ಮಾರ್ಟ್ ಟಿಪ್ಸ್! -
ಬೆಲೆ ಏರಿಕೆಯ ಬಿಸಿ: ಟೊಮೆಟೊ, ಈರುಳ್ಳಿ ಇಲ್ಲದೆ ರುಚಿಕರ ಮತ್ತು ಪೌಷ್ಟಿಕ ಅಡುಗೆ ಮಾಡುವುದು ಹೇಗೆ? -
IND vs ENG ODI: ಇಂದಿನ ಹೈ-ವೋಲ್ಟೇಜ್ ಪಂದ್ಯದ ನೇರ ಪ್ರಸಾರ ಮತ್ತು ಕನ್ನಡ ಕಾಮೆಂಟರಿ ಮಿಸ್ ಮಾಡ್ಬೇಡಿ! -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಈ 7 ನಿಮಿಷದ ರೂಟೀನ್ ನಿಮ್ಮನ್ನು ರಕ್ಷಿಸುತ್ತದೆ! -
ಬೆಂಗಳೂರಿನಲ್ಲಿ ಇಂದೇ ವಿದ್ಯುತ್ ಕಡಿತ: ನಿಮ್ಮ ಎಲೆಕ್ಟ್ರಾನಿಕ್ ಉಪಕರಣಗಳನ್ನು ಸುರಕ್ಷಿತವಾಗಿಡುವುದು ಹೇಗೆ? -
ಕರ್ಕ ಸಂಕ್ರಾಂತಿ ವಿಶೇಷ: ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಜಗನ್ನಾಥ ರಥಯಾತ್ರೆ 2026: ಸಂಚಾರ ಮಾರ್ಗ ಬದಲಾವಣೆ, ಭಕ್ತರಿಗಾಗಿ ಇಲ್ಲಿದೆ ಮಹತ್ವದ ಮಾಹಿತಿ! -
ನೀಟ್ ಪರೀಕ್ಷೆಯ ಆತಂಕವೇ? ಈ 6 ನಿಮಿಷದ ವ್ಯಾಯಾಮ ನಿಮ್ಮ ಒತ್ತಡವನ್ನು ಮರೆಸುತ್ತದೆ! -
ಮಧ್ಯಪ್ರದೇಶ UCC: ಲಿವ್-ಇನ್ ಜೋಡಿಗಳಿಗೆ ಕಡ್ಡಾಯ ನೋಂದಣಿ, ನಿಯಮ ಮೀರಿದರೆ ಕಾದಿದೆ ಸಂಕಷ್ಟ!
ಕಾಮಕ್ಯ ದೇವಿ ಮುಟ್ಟಾದರೆ ಬ್ರಹ್ಮಪುತ್ರಾ ಕೆಂಪಾಗುವುದು!
ಶಕ್ತಿ ಪೀಠವೆಂದು ಗುರುತಿಸಲಾಗಿರುವ ಕಾಮಕ್ಯ ದೇವಾಲಯ ಗೌಹಾಟಿಯಲ್ಲಿದೆ. ಈ ದೇವಾಲಯದ ವಿಶೇಷವೆಂದರೆ ಕಾಮಕ್ಯ ದೇವಿ ರಕ್ತಸ್ರಾವ ದೇವತೆ ಎಂದು ಪ್ರಸಿದ್ಧಿಯಾಗಿದ್ದಾಳೆ! ಈ ದೇವಾಲಯವೂ ನೀಲಾಚಲಾ ಗಿರಿಯಲ್ಲಿದೆ. ಗೌಹಾಟಿ ರೈಲ್ವೆ ನಿಲ್ದಾಣದಿಂದ 8 ಕಿ. ಮೀ ದೂರದಲ್ಲಿದೆ. ಇಲ್ಲಿ ದೇವಿಯ ಹತ್ತು ರೂಪಗಳ ಮೂರ್ತಿಗಳನ್ನು ಕಾಣಬಹುದು.
ರಕ್ತ ಪೀಠ ದೇವಾಲಯದ ಉಗಮದ ಕತೆ
ಈ ಕಾಮಕ್ಯ ದೇವಾಲಯದ ಉಗಮದ ಕತೆ ತುಂಬಾ ಆಸಕ್ತಿಕರವಾಗಿದೆ. ಇಲ್ಲಿ 108 ಶಕ್ತಿ ಪೀಠಗಳಿವೆ. ಈ ಶಕ್ತಿ ಪೀಠಗಳ ಬಗ್ಗೆ ಹೇಳುವ ಕತೆಯೆಂದರೆ ಪಾರ್ವತಿ ತನ್ನ ಗಂಡನಾದ ಶಿವನನ್ನು ತನ್ನ ತಂದೆ ನಡೆಸುತ್ತಿರುವ ಯಾಗಕ್ಕೆ ಹೋಗಲು ಹೇಳುತ್ತಾಳೆ. ಶಿವ ಹೋಗಲ್ಲ ಎಂದಾಗಒತ್ತಾಯ ಮಾಡಿ ಶಿವನನ್ನು ಅಲ್ಲಿಗೆ ಹೋಗುವಂತೆ ಮಾಡುತ್ತಾಳೆ. ಯಾಗಕ್ಕೆ ಬಂದ ಶಿವನನ್ನು ಸತಿಯ ತಂದೆ ಅವಮಾನಿಸುತ್ತಾನೆ. ಇದರಿಂದ ಬೇಜಾರುಗೊಂಡ ಸತಿ ಬೆಂಕಿಗೆ ಹಾರಿ ಪ್ರಾಣ ಬಿಡುತ್ತಾಳೆ. ಶಿವನಿಗೆ ಪತ್ನಿ ತೀರಿಹೋದ ಸುದ್ದಿ ಕೇಳಿ ತುಂಬಾ ಆಘಾತವಾಗುತ್ತದೆ.

ಪತ್ನಿಯ ಸಾವಿನಿಂದ ಕೋಪಗೊಂಡ ಶಿವ ಪಾರ್ವತಿಯ ಶವವನ್ನು ಎತ್ತಿಕೊಂಡು ತಾಂಡವ ನೃತ್ಯ ಪ್ರಾರಂಭಿಸುತ್ತಾನೆ. ಇದನ್ನು ನೋಡಿದ ವಿಷ್ಣು, ಶಿವನ ನೃತ್ಯದಿಂದ ಎಲ್ಲವೂ ಸರ್ವನಾಶವಾಗುತ್ತದೆ ಎಂದು ತಿಳಿದು ತನ್ನ ಸುದರ್ಶನ ಚಕ್ರ ಬಿಟ್ಟು ಸತಿಯ ಶರೀರ ಕತ್ತರಿಸುತ್ತಾನೆ. ಸತಿಯ ದೇಹ ನೂರೆಂಟು ತುಂಡುಗಳಾಗಿ ಬೀಳುತ್ತದೆ. ಅವುಗಳೇ ಶಕ್ತಿ ಪೀಠಗಳಾದವು.
ಕಾಮಕ್ಯ ಹೆಸರು ಹೇಗೆ ಬಂತು?
ಕಾಮದೇವ ತನ್ನ ಪುರುಷತ್ವವನ್ನು ಶಾಪದಿಂದಾಗಿ ಕಳೆದುಕೊಂಡನು. ಸತಿಯ ದೇಹದ ಭಾಗ ಕಂಡು ಹಿಡಿದರೆ ಅವನು ಆ ಶಾಪದಿಂದ ಮುಕ್ತನಾಗಬಹುದಿತ್ತು. ಸತಿಯ ದೇಹದ ಭಾಗವನ್ನು ಹುಡುಕಿಕೊಂಡು ಬಂದ ಕಾಮದೇವನಿಗೆ ಸತಿಯ ದೇಹದ ಗರ್ಭಕೋಶ ಈ ಪ್ರದೇಶದಲ್ಲಿ ಕಾಣ ಸಿಗುತ್ತದೆ. ಅಲ್ಲಿಂದ ಈ ಸ್ಥಳವನ್ನು ಕಾಮಕ್ಯ, ದೇವಿಯನ್ನು ಕಾಮಕ್ಯ ದೇವಿಯೆಂದು ಎಂದು ಕರೆಯಲಾಯಿತು.
ರಕ್ತಸ್ರಾವದ ದೇವಿ
ದೇವಿಯ ಗರ್ಭಕೋಶ ಹಾಗೂ ಜನನೇಂದ್ರೀಯ ಈ ಭಾಗದಲ್ಲಿ ಬಿದ್ದ ಕಾರಣ ಪ್ರತೀ ವರ್ಷ ಆಷಾಡ ತಿಂಗಳಿನಲ್ಲಿ ದೇವಿ ಮುಟ್ಟಾಗುತ್ತಾಳೆ. ಕಾಮಕ್ಯ ದೇಗುಲದ ಹತ್ತಿರದ ಆಗ ಬ್ರಹ್ಮ ಪುತ್ರಾ ನದಿ ಕೆಂಪು ಬಣ್ಣಕ್ಕೆ ತಿರುಗುತ್ತದೆ. ಆಗ ದೇವಾಲಯವನ್ನು 3 ದಿನಗಳವರೆಗೆ ಮುಚ್ಚಲಾಗುತ್ತದೆ. 3 ದಿನಗಳ ಬಳಿಕ ಭಕ್ತರಿಗೆ ತೀರ್ಥ ನೀರನ್ನು ಕೊಡಲಾಗುವುದು.
ನದಿ ಏಕೆ ಕೆಂಪು ಬಣ್ಣಕ್ಕೆ ತಿರುಗುತ್ತದೆ ಅನ್ನುವುದು ವೈಜ್ಞಾನಿಕವಾಗಿ ಇದುವರೆಗೆ ಸಾಬೀತಾಗಿಲ್ಲ.



Click it and Unblock the Notifications