Latest Updates
-
ಸಣ್ಣ ಫ್ಲ್ಯಾಟ್ನಲ್ಲಿ ಗಣೇಶೋತ್ಸವ: ಅತಿಥಿಗಳಿಗಾಗಿ ಜಾಗ ಮತ್ತು ಸುರಕ್ಷತೆಗಾಗಿ ಈ 5 ಟಿಪ್ಸ್ ಫಾಲೋ ಮಾಡಿ -
ಗಣೇಶೋತ್ಸವದ ಪ್ರಸಾದ ಬೇಗ ಹಾಳಾಗುತ್ತಿದೆಯೇ? ಮೋದಕ ಮತ್ತು ಸಿಹಿ ತಿಂಡಿಗಳನ್ನು ತಾಜಾವಾಗಿಡಲು ಈ ಟಿಪ್ಸ್ ಪಾಲಿಸಿ! -
ಗಣೇಶೋತ್ಸವ 2026: ಲಾಲ್ಬಾಗ್ಚಾ ರಾಜನ ದರ್ಶನಕ್ಕೆ ಬೆಸ್ಟ್ ಟೈಮ್ ಯಾವುದು? ಮೆಟ್ರೋ ಮತ್ತು ಲೈವ್ ಅಪ್ಡೇಟ್ಸ್ ಇಲ್ಲಿದೆ! -
ಹಬ್ಬದ ಪೂಜೆಯ ವೇಳೆ ಮೊಣಕಾಲು ಮತ್ತು ಬೆನ್ನು ನೋವು ಕಾಡುತ್ತಿದೆಯೇ? ನೋವಿಲ್ಲದೆ ಪೂಜೆ ಮಾಡಲು ಇಲ್ಲಿದೆ 10 ನಿಮಿಷಗಳ ಸಿಂಪಲ್ ಟಿಪ್ಸ್! -
ಗಣೇಶೋತ್ಸವದ ಸೌಂಡ್ ಕಿರಿಕಿರಿ: ನೆರೆಹೊರೆಯವರ ಜೊತೆ ಜಗಳವಿಲ್ಲದೆ ನೆಮ್ಮದಿಯ ನಿದ್ರೆ ಪಡೆಯುವುದು ಹೇಗೆ? -
ದೆಹಲಿ ಮಳೆ: ನಿಮ್ಮ ಮನೆಯಲ್ಲಿ ಬೂಷ್ಟು ಮತ್ತು ತೇವಾಂಶ ತಡೆಯಲು 45 ನಿಮಿಷದ ಸಿಂಪಲ್ ಪ್ಲಾನ್! -
ಗಣೇಶ ಹಬ್ಬದ ಮೋದಕ: ಶುಗರ್ ಏರಿಕೆಯಾಗದಂತೆ ಸವಿಯಲು ಇಲ್ಲಿವೆ 5 ಆರೋಗ್ಯಕರ ಟಿಪ್ಸ್ -
ಐಫೋನ್ 18 ಪ್ರೋ ಪ್ರೀ-ಆರ್ಡರ್: ₹7,000 ಕ್ಯಾಶ್ಬ್ಯಾಕ್ ಪಡೆಯುವುದು ಹೇಗೆ? ನಕಲಿ ಆಫರ್ಗಳಿಂದ ಎಚ್ಚರ! -
ದೆಹಲಿ ಮಳೆ: ಜಾರಿ ಬೀಳದಂತೆ ಎಚ್ಚರ, ಬೆನ್ನುನೋವಿನಿಂದ ಮುಕ್ತಿ ಪಡೆಯಲು 12 ನಿಮಿಷದ ವರ್ಕೌಟ್ ರೂಟಿನ್! -
ಗಣೇಶೋತ್ಸವದ ಸಂಭ್ರಮದಲ್ಲಿ ದಂಪತಿಗಳ ಜಗಳ ಬೇಡ: ಸಮಯ ಮತ್ತು ಬಜೆಟ್ ನಿರ್ವಹಣೆಗೆ ಇಲ್ಲಿದೆ ಸಿಂಪಲ್ ಪ್ಲಾನ್!
ಕಾಮಕ್ಯ ದೇವಿ ಮುಟ್ಟಾದರೆ ಬ್ರಹ್ಮಪುತ್ರಾ ಕೆಂಪಾಗುವುದು!
ಶಕ್ತಿ ಪೀಠವೆಂದು ಗುರುತಿಸಲಾಗಿರುವ ಕಾಮಕ್ಯ ದೇವಾಲಯ ಗೌಹಾಟಿಯಲ್ಲಿದೆ. ಈ ದೇವಾಲಯದ ವಿಶೇಷವೆಂದರೆ ಕಾಮಕ್ಯ ದೇವಿ ರಕ್ತಸ್ರಾವ ದೇವತೆ ಎಂದು ಪ್ರಸಿದ್ಧಿಯಾಗಿದ್ದಾಳೆ! ಈ ದೇವಾಲಯವೂ ನೀಲಾಚಲಾ ಗಿರಿಯಲ್ಲಿದೆ. ಗೌಹಾಟಿ ರೈಲ್ವೆ ನಿಲ್ದಾಣದಿಂದ 8 ಕಿ. ಮೀ ದೂರದಲ್ಲಿದೆ. ಇಲ್ಲಿ ದೇವಿಯ ಹತ್ತು ರೂಪಗಳ ಮೂರ್ತಿಗಳನ್ನು ಕಾಣಬಹುದು.
ರಕ್ತ ಪೀಠ ದೇವಾಲಯದ ಉಗಮದ ಕತೆ
ಈ ಕಾಮಕ್ಯ ದೇವಾಲಯದ ಉಗಮದ ಕತೆ ತುಂಬಾ ಆಸಕ್ತಿಕರವಾಗಿದೆ. ಇಲ್ಲಿ 108 ಶಕ್ತಿ ಪೀಠಗಳಿವೆ. ಈ ಶಕ್ತಿ ಪೀಠಗಳ ಬಗ್ಗೆ ಹೇಳುವ ಕತೆಯೆಂದರೆ ಪಾರ್ವತಿ ತನ್ನ ಗಂಡನಾದ ಶಿವನನ್ನು ತನ್ನ ತಂದೆ ನಡೆಸುತ್ತಿರುವ ಯಾಗಕ್ಕೆ ಹೋಗಲು ಹೇಳುತ್ತಾಳೆ. ಶಿವ ಹೋಗಲ್ಲ ಎಂದಾಗಒತ್ತಾಯ ಮಾಡಿ ಶಿವನನ್ನು ಅಲ್ಲಿಗೆ ಹೋಗುವಂತೆ ಮಾಡುತ್ತಾಳೆ. ಯಾಗಕ್ಕೆ ಬಂದ ಶಿವನನ್ನು ಸತಿಯ ತಂದೆ ಅವಮಾನಿಸುತ್ತಾನೆ. ಇದರಿಂದ ಬೇಜಾರುಗೊಂಡ ಸತಿ ಬೆಂಕಿಗೆ ಹಾರಿ ಪ್ರಾಣ ಬಿಡುತ್ತಾಳೆ. ಶಿವನಿಗೆ ಪತ್ನಿ ತೀರಿಹೋದ ಸುದ್ದಿ ಕೇಳಿ ತುಂಬಾ ಆಘಾತವಾಗುತ್ತದೆ.

ಪತ್ನಿಯ ಸಾವಿನಿಂದ ಕೋಪಗೊಂಡ ಶಿವ ಪಾರ್ವತಿಯ ಶವವನ್ನು ಎತ್ತಿಕೊಂಡು ತಾಂಡವ ನೃತ್ಯ ಪ್ರಾರಂಭಿಸುತ್ತಾನೆ. ಇದನ್ನು ನೋಡಿದ ವಿಷ್ಣು, ಶಿವನ ನೃತ್ಯದಿಂದ ಎಲ್ಲವೂ ಸರ್ವನಾಶವಾಗುತ್ತದೆ ಎಂದು ತಿಳಿದು ತನ್ನ ಸುದರ್ಶನ ಚಕ್ರ ಬಿಟ್ಟು ಸತಿಯ ಶರೀರ ಕತ್ತರಿಸುತ್ತಾನೆ. ಸತಿಯ ದೇಹ ನೂರೆಂಟು ತುಂಡುಗಳಾಗಿ ಬೀಳುತ್ತದೆ. ಅವುಗಳೇ ಶಕ್ತಿ ಪೀಠಗಳಾದವು.
ಕಾಮಕ್ಯ ಹೆಸರು ಹೇಗೆ ಬಂತು?
ಕಾಮದೇವ ತನ್ನ ಪುರುಷತ್ವವನ್ನು ಶಾಪದಿಂದಾಗಿ ಕಳೆದುಕೊಂಡನು. ಸತಿಯ ದೇಹದ ಭಾಗ ಕಂಡು ಹಿಡಿದರೆ ಅವನು ಆ ಶಾಪದಿಂದ ಮುಕ್ತನಾಗಬಹುದಿತ್ತು. ಸತಿಯ ದೇಹದ ಭಾಗವನ್ನು ಹುಡುಕಿಕೊಂಡು ಬಂದ ಕಾಮದೇವನಿಗೆ ಸತಿಯ ದೇಹದ ಗರ್ಭಕೋಶ ಈ ಪ್ರದೇಶದಲ್ಲಿ ಕಾಣ ಸಿಗುತ್ತದೆ. ಅಲ್ಲಿಂದ ಈ ಸ್ಥಳವನ್ನು ಕಾಮಕ್ಯ, ದೇವಿಯನ್ನು ಕಾಮಕ್ಯ ದೇವಿಯೆಂದು ಎಂದು ಕರೆಯಲಾಯಿತು.
ರಕ್ತಸ್ರಾವದ ದೇವಿ
ದೇವಿಯ ಗರ್ಭಕೋಶ ಹಾಗೂ ಜನನೇಂದ್ರೀಯ ಈ ಭಾಗದಲ್ಲಿ ಬಿದ್ದ ಕಾರಣ ಪ್ರತೀ ವರ್ಷ ಆಷಾಡ ತಿಂಗಳಿನಲ್ಲಿ ದೇವಿ ಮುಟ್ಟಾಗುತ್ತಾಳೆ. ಕಾಮಕ್ಯ ದೇಗುಲದ ಹತ್ತಿರದ ಆಗ ಬ್ರಹ್ಮ ಪುತ್ರಾ ನದಿ ಕೆಂಪು ಬಣ್ಣಕ್ಕೆ ತಿರುಗುತ್ತದೆ. ಆಗ ದೇವಾಲಯವನ್ನು 3 ದಿನಗಳವರೆಗೆ ಮುಚ್ಚಲಾಗುತ್ತದೆ. 3 ದಿನಗಳ ಬಳಿಕ ಭಕ್ತರಿಗೆ ತೀರ್ಥ ನೀರನ್ನು ಕೊಡಲಾಗುವುದು.
ನದಿ ಏಕೆ ಕೆಂಪು ಬಣ್ಣಕ್ಕೆ ತಿರುಗುತ್ತದೆ ಅನ್ನುವುದು ವೈಜ್ಞಾನಿಕವಾಗಿ ಇದುವರೆಗೆ ಸಾಬೀತಾಗಿಲ್ಲ.



Click it and Unblock the Notifications
