Latest Updates
-
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ? -
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು! -
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್ -
ಬೆಂಗಳೂರಿನಲ್ಲಿ ನೀರಿನ ಉಳಿತಾಯ ಕಡ್ಡಾಯ: ಜುಲೈ 31ರೊಳಗೆ ನಿಮ್ಮ ಮನೆಯ ನಲ್ಲಿಗಳಿಗೆ ಏರೇಟರ್ ಅಳವಡಿಸಿ! -
ಅಂತರಾಷ್ಟ್ರೀಯ ಸ್ನೇಹ ದಿನ: ಗೆಳೆಯರೊಂದಿಗೆ 'ಬಡ್ಡಿ ವರ್ಕೌಟ್' ಮಾಡಿ ಆರೋಗ್ಯ ಮತ್ತು ಬಾಂಧವ್ಯ ಹೆಚ್ಚಿಸಿಕೊಳ್ಳಿ!
ಪ್ರತಿನಿತ್ಯ ಈರುಳ್ಳಿ ಸೇವಿಸ್ತಿದ್ದೀರಾ? ಶ್ರೀ ಕೃಷ್ಣ, ವಿಷ್ಣು ಹಾಗೂ ಈರುಳ್ಳಿಗಿರೋ ಸಂಬಂಧದ ಬಗ್ಗೆ ನಿಮಗೊತ್ತಾ?
ಈರುಳ್ಳಿ ಅಡುಗೆಗೆ ಬೇಕಾದ ಅತಿ ಮುಖ್ಯ ಸಾಮಾಗ್ರಿಗಳಲ್ಲಿ ಒಂದು. ಈರುಳ್ಳಿ ಇಲ್ಲದೇ ಅಡುಗೆ ಪೂರ್ತಿಯಾಗೋದೇ ಇಲ್ಲ. ಅಡುಗೆಗೆ ಈರುಳ್ಳಿ ಹಾಕಿದ್ರೆ ಅದರ ರುಚಿಯೇ ಬದಲಾಗಿ ಬಿಡುತ್ತದೆ. ಅದ್ರಲ್ಲೂ ಮಾಂಸಹಾರಿ ಖಾದ್ಯಗಳನ್ನು ತಯಾರಿಸುವಾಗಂತೂ ಈರುಳ್ಳಿ ಬೇಕೇ ಬೇಕು. ಇಂತಹ ಈರುಳ್ಳಿ ಹಾಗೂ ಶ್ರೀ ಕೃಷ್ಣನಿಗೆ ಅವಿನಾಭಾವ ಸಂಬಂಧ ಇತ್ತು ಅಂದ್ರೆ ನೀವು ನಂಬ್ತೀರಾ? ನಂಬಲು ಅಸಾಧ್ಯವಾದ್ರು ಇದು ಸತ್ಯ. ಈ ಈರುಳ್ಳಿ ಕೇವಲ ಕೃಷ್ಣನ ಜೊತೆಗೆ ಮಾತ್ರವಲ್ಲದೇ ಭಗವಾನ್ ವಿಷ್ಣುವಿಗೂ ಸಂಬಂಧಿಸಿದ್ದಾಗಿದೆ. ಅಷ್ಟಕ್ಕು ಏನಿದು ಶ್ರೀ ಕೃಷ್ಣ, ವಿಷ್ಣು ಹಾಗೂ ಈರುಳ್ಳಿ ಕಥೆ ಅನ್ನೋದನ್ನ ತಿಳಿದುಕೊಳ್ಳೋಣ.
ವೇದಗಳ ಕಾಲದಲ್ಲಿ ಸಂಸ್ಕೃತ ಭಾಷೆಯನ್ನೇ ಆಡು ಭಾಷೆಯನ್ನಾಗಿ ಬಳಕೆ ಮಾಡಲಾಗ್ತಿತ್ತು. ಆದ್ರೀಗ ಬ್ರಾಹ್ಮಣರ ಮಂತ್ರಗಳಲ್ಲಿ ಮಾತ್ರ ಸಂಸ್ಕೃತ ಕೇಳಲು ಸಿಗೋದು. ನಿಮಗೊತ್ತಾ ಈರುಳ್ಳಿಯನ್ನು ಸಂಸ್ಕೃತ ಭಾಷೆಯಲ್ಲಿ ಕೃಷ್ಣವಾಲ್ ಎಂದು ಕರೆಯಲಾಗುತ್ತಿತ್ತಂತೆ. ಆದ್ರೆ ಇತ್ತೀಚಿಗೆ ಈ ಪದವನ್ನು ಬಳಕೆ ಮಾಡಲಾಗ್ತಿಲ್ಲ. ಹಾಗಾದ್ರೆ ಈರುಳ್ಳಿಯ ಹಿಂದಿರುವ ಈ ನಾಲ್ಕು ಸ್ವಾರಸ್ಯಕರ ಕಥೆಗಳ ಬಗ್ಗೆ ತಿಳಿದುಕೊಳ್ಳೋಣ.

1. ಭಾರತದ ಯಾವ ಭಾಗಗಳಲ್ಲಿ ಈ ಹೆಸರು ಈಗಲೂ ಪ್ರಚಲಿತದಲ್ಲಿದೆ?
ಈರುಳ್ಳಿಗೆ ಇಂಗ್ಲಿಷ್ನಲ್ಲಿ ಆನಿಯನ್ ಎಂದು ಕರೆಯುತ್ತಾರೆ. ಇನ್ನೂ ಕರ್ನಾಟಕ, ಕೇರಳ, ತಮಿಳುನಾಡು ಹಾಗೂ ಆಂಧ್ರ ಸೇರಿದಂತೆ ಅನೇಕ ಕಡೆ ಆಯಾ ಭಾಗದ ಪ್ರಾದೇಶಿಕ ಭಾಷೆಯಿಂದಲೇ ಈರುಳ್ಳಿಯನ್ನು ಸಂಭೋದಿಸಲಾಗುತ್ತದೆ. ಆದ್ರೆ ತಮಿಳುನಾಡು ಹಾಗೂ ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಈಗಲೂ ಕೂಡ ಈರುಳ್ಳಿಯನ್ನು ಕೃಷ್ಣವಾಲ್ ಎಂತಲೇ ಕರೆಯಲಾಗುತ್ತಂತೆ.
2. ಶಂಕ, ಚಕ್ರದ ಈರುಳ್ಳಿ
ಪುರಾಣಗಳಿಂದಾನೂ ಶಂಕ ಹಾಗೂ ಚಕ್ರ ಮಹತ್ವದ ಸ್ಥಾನವನ್ನು ಪಡೆದುಕೊಂಡಿದೆ. ಮಹಾಭಾರತ ಯುದ್ಧದ ಸಂದರ್ಭದಲ್ಲಿ ಶಂಕ ಹಾಗೂ ಚಕ್ರದ ಪಾತ್ರ ಎಷ್ಟು ಪ್ರಾಮುಖ್ಯತೆ ಪಡೆದುಕೊಂಡಿತ್ತು ಅನ್ನೋದು ನಮಗೆಲ್ಲಾ ಗೊತ್ತೇ ಇದೆ. ಈರುಳ್ಳಿಯನ್ನು ಶಂಕ ಹಾಗೂ ಚಕ್ರಕ್ಕೆ ಹೋಲಿಕೆ ಮಾಡಲಾಗುತ್ತದೆ. ಯಾಕಂದ್ರೆ ಈರುಳ್ಳಿಯನ್ನು ಉದ್ದವಾಗಿ ತುಂಡರಿಸಿದರೆ ಶಂಖದ ರೂಪಕ್ಕೆ ಅಡ್ಡವಾಗಿ ತುಂಡರಿಸಿದರೆ ಚಕ್ರದ ರೂಪಕ್ಕೆ ಬದಲಾಗುತ್ತದೆ.
3. ಈರುಳ್ಳಿಯನ್ನು ಕೃಷ್ಣವಾಲ್ ಎಂದು ಕರೆಯೋದ್ಯಾಕೆ?
ಶ್ರೀ ಕೃಷ್ಣನ ಆಯುದ್ಧಗಳ ಬಗ್ಗೆ ನಿಮಗೆ ಗೊತ್ತಿರಬಹುದು. ಆತನ ಕೈಯಲ್ಲಿ ನೀವು ಶಂಕ ಹಾಗೂ ಚಕ್ರಗಳನ್ನು ಖಂಡಿತ ನೋಡಿರ್ತೀರಿ. ಹರಿ ವಿಷ್ಣುವಿನ ಎಂಟು ಅವತಾರಗಳಲ್ಲಿ ಈ ಅವತಾರ ಕೂಡ ಒಂದು ಎಂದು ಹೇಳಬಹುದು. ಭಗನಾವ್ ಶ್ರೀ ಕೃಷ್ಣನು ತನ್ನ ಕೈಯಲ್ಲಿ ಶಂಕ ಹಾಗೂ ಚಕ್ರವನ್ನು ಹಿಡಿದಿರೋದಕ್ಕಾಗಿ ಕೃಷ್ಣವಾಲ್ ಎಂಬ ಹೆಸರು ಬಂದಿದ್ಯಂತೆ.
4. ಈರುಳ್ಳಿ ವಿಷ್ಣುವನ್ನು ಪ್ರತಿನಿಧಿಸುತ್ತದೆ
ಈರುಳ್ಳಿಯನ್ನು ಕೃಷ್ಣವಾಲ್ ಎಂದು ಕರೆಯೋದಕ್ಕೆ ಮತ್ತೊಂದು ಕಾರಣವಿದೆ. ನೀವೇನಾದರೂ ಎಲೆಯನ್ನು ಹೊಂದಿರುವ ಈರುಳ್ಳಿಯನ್ನು ಮೇಲೆ ಕೆಳಗಾಗಿ ಹಿಡಿದುಕೊಂಡರೆ ಅದು ಪದ್ಮದ ರೂಪದಲ್ಲಿ ಕಾಣುತ್ತದೆ. ಇಲ್ಲಿ ಇಂಟ್ರಸ್ಟಿಂಗ್ ವಿಚಾರ ಅಂದ್ರೆ ಪದ್ಮ ಎಂದರೆ ಕಮಲ. ಗದಾ ಹಾಗೂ ಪದ್ಮವು ವಿಷ್ಣುವಿಗೆ ಸಂಬಂಧ ಪಟ್ಟಿದಾಗಿದೆ.
ಈ ವಿಚಾರದ ಬಗ್ಗೆ ಅನೇಕ ಜನರಿಗೆ ಗೊತ್ತಿಲ್ಲ. ಈರುಳ್ಳಿಯೂ ಕೃಷ್ಣ ಹಾಗೂ ಭಗವಾನ್ ವಿಷ್ಣುವಿನ ಜೊತೆಗೆ ಪರೋಕ್ಷ ಸಂಬಂಧವನ್ನು ಹೊಂದಿದೆ. ಇದೇ ಕಾರಣಕ್ಕೆ ಈರುಳ್ಳಿಯನ್ನು ಕೃಷ್ಣವಾಲ್ ಎಂದು ಕರೆಯೋದು.



Click it and Unblock the Notifications


