Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ಶ್ರೀ ಕೃಷ್ಣ ಜನ್ಮಾಷ್ಟಮಿ ದಿನ ಜಯಂತಿ ಯೋಗ! ಉಪಯೋಗಗಳೇನು?
ಈ ಬಾರಿಯ ಜನ್ಮಾಷ್ಟಮಿಯ ದಿನದಂದು ಜಯಂತಿ ಯೋಗ ಸೃಷ್ಟಿಯಾಗುತ್ತಿದೆ. ಹೀಗಾಗಿ ಈ ವರ್ಷದ ಜನ್ಮಾಷ್ಟಮಿ ಹಬ್ಬವೂ ಬಹಳ ಅಪರೂಪವೆಂಬಂತೆ ಪರಿಗಣಿಸಲಾಗುತ್ತಿದೆ. ಇನ್ನೂ ವಿಶೇಷವಾಗಿ ಈ ಬಾರಿ ಸೆಪ್ಟೆಂಬರ್ 6 ಮತ್ತು ಸೆಪ್ಟೆಂಬರ್ 7 ರಂದು ಜನ್ಮಾಷ್ಟಮಿ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ.

ಇದೇ ದಿನ ಜಯಂತಿ ಯೋಗ ಬಂದಿರೋದ್ರಿಂದ ತುಂಬಾನೇ ವಿಶೇಷವಾಗಿದೆ. ಅಷ್ಟಕ್ಕು ಜಯಂತಿ ಯೋಗ ಯಾವಾಗ ಮತ್ತು ಹೇಗೆ ರೂಪುಗೊಳ್ಳುತ್ತದೆ ಮತ್ತು ಅದರ ಪ್ರಯೋಜನಗಳೇನು ಎಂಬುದನ್ನು ತಿಳಿಯೋಣ.
ಜನ್ಮಾಷ್ಟಮಿಯಂದು ಅಪರೂಪದ ಕಾಕತಾಳೀಯವೇ ಜಯಂತಿ ಯೋಗ!
ಜ್ಯೋತಿಷ್ಯಶಾಸ್ತ್ರದ ಪ್ರಕಾರ ಈ ವರ್ಷ ಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ಹೆಚ್ಚಿನ ಕಡೆಗಳಲ್ಲಿ ಸೆಪ್ಟೆಂಬರ್ 6 ರಂದು ಆಚರಿಸಲಾಗುತ್ತದೆ. ಸೆಪ್ಟಂಬರ್ 6 ರಂದು ಮನೆಯವರು ಉಪವಾಸ ಮಾಡಿದರೆ ತುಂಬಾ ಒಳ್ಳೆಯದು ಅಂತ ಹೇಳಲಾಗುತ್ತದೆ.
ಈ ಬಾರಿ ಸೆಪ್ಟೆಂಬರ್ 6 ರಂದು ಎಲ್ಲಾ ಆರು ಅಂಶಗಳ ಭದ್ರ ಕೃಷ್ಣ ಪಕ್ಷ, ಮಧ್ಯರಾತ್ರಿ, ಅಷ್ಟಮಿ ತಿಥಿ, ರೋಹಿಣಿ ನಕ್ಷತ್ರ ಮತ್ತು ಈ ದಿನ ಚಂದ್ರನು ವೃಷಭ ರಾಶಿಯಲ್ಲಿ ಸಾಗುತ್ತಾನೆ. ಹಾಗೆಯೇ ಜನ್ಮಾಷ್ಟಮಿ ಬುಧವಾರ ಮತ್ತು ಸೋಮವಾರ ಸಂಭವಿಸಿದರೆ ಬಹಳ ಮಂಗಳಕರವೆಂದು ಪರಿಗಣಿಸಲಾಗುತ್ತದೆ.
ಈ ಬಾರಿ ಸೆಪ್ಟೆಂಬರ್ 6 ರಂದು ಅಪರೂಪದ ಕಾಕತಾಳೀಯವೆಂಬಂತೆ ಜನ್ಮಾಷ್ಟಮಿ ಸಂಭವಿಸುತ್ತಿದೆ. ಈ ರೀತಿ ಕಾಕತಾಳೀಯವಾದಾಗಲೆಲ್ಲ ಅದನ್ನು ಜಯಂತಿ ಯೋಗ ಎನ್ನುತ್ತಾರೆ. ಅದಕ್ಕಾಗಿಯೇ ಸೆಪ್ಟೆಂಬರ್ 6 ರಂದು ಜನ್ಮಾಷ್ಟಮಿಯಂದು ಮನೆಯವರು ಉಪವಾಸ ಮಾಡುವುದು ಮಂಗಳಕರವಾಗಿರುತ್ತದೆ. ಋಷಿಮುನಿಗಳು ಮತ್ತು ಸಂತರು ಸೆಪ್ಟೆಂಬರ್ 7 ರಂದು ಜನ್ಮಾಷ್ಟಮಿಯಂದು ಉಪವಾಸ ಮಾಡುತ್ತಾರೆ.
ಜಯಂತಿ ಯೋಗದ ಸಮಯದಲ್ಲಿ ಉಪವಾಸದ ಪ್ರಯೋಜನಗಳೇನು?
ಜ್ಯೋತಿಷ್ಯಶಾಸ್ತ್ರದ ಪ್ರಕಾರ ಜಯಂತಿ ಯೋಗದಲ್ಲಿ ಜನ್ಮಾಷ್ಟಮಿಯಂದು ಉಪವಾಸ ಮಾಡುವುದು ಮತ್ತು ಶ್ರೀ ಕೃಷ್ಣನನ್ನು ಪೂಜಿಸುವುದು ಮೂರು ಜನ್ಮಗಳ ಪಾಪಗಳಿಂದ ವ್ಯಕ್ತಿಯನ್ನು ಮುಕ್ತಗೊಳಿಸುತ್ತಂತೆ. ಅಷ್ಟಮಿ ತಿಥಿಯಂದು ರೋಹಿಣಿ ನಕ್ಷತ್ರ ಬಂದಾಗಲೆಲ್ಲ ಅದನ್ನು ಜಯಂತಿ ಯೋಗ ಎನ್ನುತ್ತಾರೆ.
ಜಯಂತಿ ಯೋಗದಲ್ಲಿ ಉಪವಾಸ ಮಾಡಿದ್ರೆ ಅನೇಕ ಪುಣ್ಯ-ಫಲಗಳನ್ನು ಪಡೆಯಲು ಸಾಧ್ಯವಾಗುತ್ತಂತೆ. ಇನ್ನೂ ಜನ್ಮಾಷ್ಟಮಿಯ ಎರಡನೇ ದಿನ ಪ್ರಸಾದವಾಗಿ ಕೆಲವು ಸಿಹಿತಿಂಡಿಗಳನ್ನು ವಿತರಿಸಿ. ಇದರ ಜೊತೆಗೆ ಬ್ರಾಹ್ಮಣರಿಗೆ ಅನ್ನಸಂತರ್ಪಣೆ ಮಾಡಿ. ಹೀಗೆ ಮಾಡುವುದರಿಂದ ಜನ್ಮಾಷ್ಟಮಿ ಹಬ್ಬದ ಪುಣ್ಯ ಖಂಡಿತಾ ಸಿಗುತ್ತದೆ ಎಂದು ನಂಬಲಾಗಿದೆ.



Click it and Unblock the Notifications