Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಶ್ರೀ ಕೃಷ್ಣ ಜನ್ಮಾಷ್ಟಮಿ ದಿನ ಜಯಂತಿ ಯೋಗ! ಉಪಯೋಗಗಳೇನು?
ಈ ಬಾರಿಯ ಜನ್ಮಾಷ್ಟಮಿಯ ದಿನದಂದು ಜಯಂತಿ ಯೋಗ ಸೃಷ್ಟಿಯಾಗುತ್ತಿದೆ. ಹೀಗಾಗಿ ಈ ವರ್ಷದ ಜನ್ಮಾಷ್ಟಮಿ ಹಬ್ಬವೂ ಬಹಳ ಅಪರೂಪವೆಂಬಂತೆ ಪರಿಗಣಿಸಲಾಗುತ್ತಿದೆ. ಇನ್ನೂ ವಿಶೇಷವಾಗಿ ಈ ಬಾರಿ ಸೆಪ್ಟೆಂಬರ್ 6 ಮತ್ತು ಸೆಪ್ಟೆಂಬರ್ 7 ರಂದು ಜನ್ಮಾಷ್ಟಮಿ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ.

ಇದೇ ದಿನ ಜಯಂತಿ ಯೋಗ ಬಂದಿರೋದ್ರಿಂದ ತುಂಬಾನೇ ವಿಶೇಷವಾಗಿದೆ. ಅಷ್ಟಕ್ಕು ಜಯಂತಿ ಯೋಗ ಯಾವಾಗ ಮತ್ತು ಹೇಗೆ ರೂಪುಗೊಳ್ಳುತ್ತದೆ ಮತ್ತು ಅದರ ಪ್ರಯೋಜನಗಳೇನು ಎಂಬುದನ್ನು ತಿಳಿಯೋಣ.
ಜನ್ಮಾಷ್ಟಮಿಯಂದು ಅಪರೂಪದ ಕಾಕತಾಳೀಯವೇ ಜಯಂತಿ ಯೋಗ!
ಜ್ಯೋತಿಷ್ಯಶಾಸ್ತ್ರದ ಪ್ರಕಾರ ಈ ವರ್ಷ ಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ಹೆಚ್ಚಿನ ಕಡೆಗಳಲ್ಲಿ ಸೆಪ್ಟೆಂಬರ್ 6 ರಂದು ಆಚರಿಸಲಾಗುತ್ತದೆ. ಸೆಪ್ಟಂಬರ್ 6 ರಂದು ಮನೆಯವರು ಉಪವಾಸ ಮಾಡಿದರೆ ತುಂಬಾ ಒಳ್ಳೆಯದು ಅಂತ ಹೇಳಲಾಗುತ್ತದೆ.
ಈ ಬಾರಿ ಸೆಪ್ಟೆಂಬರ್ 6 ರಂದು ಎಲ್ಲಾ ಆರು ಅಂಶಗಳ ಭದ್ರ ಕೃಷ್ಣ ಪಕ್ಷ, ಮಧ್ಯರಾತ್ರಿ, ಅಷ್ಟಮಿ ತಿಥಿ, ರೋಹಿಣಿ ನಕ್ಷತ್ರ ಮತ್ತು ಈ ದಿನ ಚಂದ್ರನು ವೃಷಭ ರಾಶಿಯಲ್ಲಿ ಸಾಗುತ್ತಾನೆ. ಹಾಗೆಯೇ ಜನ್ಮಾಷ್ಟಮಿ ಬುಧವಾರ ಮತ್ತು ಸೋಮವಾರ ಸಂಭವಿಸಿದರೆ ಬಹಳ ಮಂಗಳಕರವೆಂದು ಪರಿಗಣಿಸಲಾಗುತ್ತದೆ.
ಈ ಬಾರಿ ಸೆಪ್ಟೆಂಬರ್ 6 ರಂದು ಅಪರೂಪದ ಕಾಕತಾಳೀಯವೆಂಬಂತೆ ಜನ್ಮಾಷ್ಟಮಿ ಸಂಭವಿಸುತ್ತಿದೆ. ಈ ರೀತಿ ಕಾಕತಾಳೀಯವಾದಾಗಲೆಲ್ಲ ಅದನ್ನು ಜಯಂತಿ ಯೋಗ ಎನ್ನುತ್ತಾರೆ. ಅದಕ್ಕಾಗಿಯೇ ಸೆಪ್ಟೆಂಬರ್ 6 ರಂದು ಜನ್ಮಾಷ್ಟಮಿಯಂದು ಮನೆಯವರು ಉಪವಾಸ ಮಾಡುವುದು ಮಂಗಳಕರವಾಗಿರುತ್ತದೆ. ಋಷಿಮುನಿಗಳು ಮತ್ತು ಸಂತರು ಸೆಪ್ಟೆಂಬರ್ 7 ರಂದು ಜನ್ಮಾಷ್ಟಮಿಯಂದು ಉಪವಾಸ ಮಾಡುತ್ತಾರೆ.
ಜಯಂತಿ ಯೋಗದ ಸಮಯದಲ್ಲಿ ಉಪವಾಸದ ಪ್ರಯೋಜನಗಳೇನು?
ಜ್ಯೋತಿಷ್ಯಶಾಸ್ತ್ರದ ಪ್ರಕಾರ ಜಯಂತಿ ಯೋಗದಲ್ಲಿ ಜನ್ಮಾಷ್ಟಮಿಯಂದು ಉಪವಾಸ ಮಾಡುವುದು ಮತ್ತು ಶ್ರೀ ಕೃಷ್ಣನನ್ನು ಪೂಜಿಸುವುದು ಮೂರು ಜನ್ಮಗಳ ಪಾಪಗಳಿಂದ ವ್ಯಕ್ತಿಯನ್ನು ಮುಕ್ತಗೊಳಿಸುತ್ತಂತೆ. ಅಷ್ಟಮಿ ತಿಥಿಯಂದು ರೋಹಿಣಿ ನಕ್ಷತ್ರ ಬಂದಾಗಲೆಲ್ಲ ಅದನ್ನು ಜಯಂತಿ ಯೋಗ ಎನ್ನುತ್ತಾರೆ.
ಜಯಂತಿ ಯೋಗದಲ್ಲಿ ಉಪವಾಸ ಮಾಡಿದ್ರೆ ಅನೇಕ ಪುಣ್ಯ-ಫಲಗಳನ್ನು ಪಡೆಯಲು ಸಾಧ್ಯವಾಗುತ್ತಂತೆ. ಇನ್ನೂ ಜನ್ಮಾಷ್ಟಮಿಯ ಎರಡನೇ ದಿನ ಪ್ರಸಾದವಾಗಿ ಕೆಲವು ಸಿಹಿತಿಂಡಿಗಳನ್ನು ವಿತರಿಸಿ. ಇದರ ಜೊತೆಗೆ ಬ್ರಾಹ್ಮಣರಿಗೆ ಅನ್ನಸಂತರ್ಪಣೆ ಮಾಡಿ. ಹೀಗೆ ಮಾಡುವುದರಿಂದ ಜನ್ಮಾಷ್ಟಮಿ ಹಬ್ಬದ ಪುಣ್ಯ ಖಂಡಿತಾ ಸಿಗುತ್ತದೆ ಎಂದು ನಂಬಲಾಗಿದೆ.



Click it and Unblock the Notifications











