Latest Updates
-
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ! -
ಮಳೆಗಾಲದ ರಜೆ: ವರ್ಕ್ ಫ್ರಮ್ ಹೋಮ್ ಪೋಷಕರಿಗೆ ಮಕ್ಕಳನ್ನು ನಿಭಾಯಿಸುವುದು ಹೇಗೆ? ಇಲ್ಲಿದೆ ಸರಳ ಟಿಪ್ಸ್ -
ಮಳೆಗಾಲದಲ್ಲಿ ನಿಮ್ಮ ಮನೆಯ ಗಿಡಗಳು ಸಾಯುತ್ತಿವೆಯೇ? ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಮಳೆಗಾಲದಲ್ಲಿ ಕರೆಂಟ್ ಹೋದರೆ ಫ್ರಿಜ್ ಆಹಾರ ಹಾಳಾಗುತ್ತಾ? ಸುರಕ್ಷಿತವಾಗಿಡಲು ಇಲ್ಲಿವೆ ಸರಳ ಟಿಪ್ಸ್
ಶ್ರೀ ಕೃಷ್ಣ ಜನ್ಮಾಷ್ಟಮಿ ದಿನ ಜಯಂತಿ ಯೋಗ! ಉಪಯೋಗಗಳೇನು?
ಈ ಬಾರಿಯ ಜನ್ಮಾಷ್ಟಮಿಯ ದಿನದಂದು ಜಯಂತಿ ಯೋಗ ಸೃಷ್ಟಿಯಾಗುತ್ತಿದೆ. ಹೀಗಾಗಿ ಈ ವರ್ಷದ ಜನ್ಮಾಷ್ಟಮಿ ಹಬ್ಬವೂ ಬಹಳ ಅಪರೂಪವೆಂಬಂತೆ ಪರಿಗಣಿಸಲಾಗುತ್ತಿದೆ. ಇನ್ನೂ ವಿಶೇಷವಾಗಿ ಈ ಬಾರಿ ಸೆಪ್ಟೆಂಬರ್ 6 ಮತ್ತು ಸೆಪ್ಟೆಂಬರ್ 7 ರಂದು ಜನ್ಮಾಷ್ಟಮಿ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ.

ಇದೇ ದಿನ ಜಯಂತಿ ಯೋಗ ಬಂದಿರೋದ್ರಿಂದ ತುಂಬಾನೇ ವಿಶೇಷವಾಗಿದೆ. ಅಷ್ಟಕ್ಕು ಜಯಂತಿ ಯೋಗ ಯಾವಾಗ ಮತ್ತು ಹೇಗೆ ರೂಪುಗೊಳ್ಳುತ್ತದೆ ಮತ್ತು ಅದರ ಪ್ರಯೋಜನಗಳೇನು ಎಂಬುದನ್ನು ತಿಳಿಯೋಣ.
ಜನ್ಮಾಷ್ಟಮಿಯಂದು ಅಪರೂಪದ ಕಾಕತಾಳೀಯವೇ ಜಯಂತಿ ಯೋಗ!
ಜ್ಯೋತಿಷ್ಯಶಾಸ್ತ್ರದ ಪ್ರಕಾರ ಈ ವರ್ಷ ಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ಹೆಚ್ಚಿನ ಕಡೆಗಳಲ್ಲಿ ಸೆಪ್ಟೆಂಬರ್ 6 ರಂದು ಆಚರಿಸಲಾಗುತ್ತದೆ. ಸೆಪ್ಟಂಬರ್ 6 ರಂದು ಮನೆಯವರು ಉಪವಾಸ ಮಾಡಿದರೆ ತುಂಬಾ ಒಳ್ಳೆಯದು ಅಂತ ಹೇಳಲಾಗುತ್ತದೆ.
ಈ ಬಾರಿ ಸೆಪ್ಟೆಂಬರ್ 6 ರಂದು ಎಲ್ಲಾ ಆರು ಅಂಶಗಳ ಭದ್ರ ಕೃಷ್ಣ ಪಕ್ಷ, ಮಧ್ಯರಾತ್ರಿ, ಅಷ್ಟಮಿ ತಿಥಿ, ರೋಹಿಣಿ ನಕ್ಷತ್ರ ಮತ್ತು ಈ ದಿನ ಚಂದ್ರನು ವೃಷಭ ರಾಶಿಯಲ್ಲಿ ಸಾಗುತ್ತಾನೆ. ಹಾಗೆಯೇ ಜನ್ಮಾಷ್ಟಮಿ ಬುಧವಾರ ಮತ್ತು ಸೋಮವಾರ ಸಂಭವಿಸಿದರೆ ಬಹಳ ಮಂಗಳಕರವೆಂದು ಪರಿಗಣಿಸಲಾಗುತ್ತದೆ.
ಈ ಬಾರಿ ಸೆಪ್ಟೆಂಬರ್ 6 ರಂದು ಅಪರೂಪದ ಕಾಕತಾಳೀಯವೆಂಬಂತೆ ಜನ್ಮಾಷ್ಟಮಿ ಸಂಭವಿಸುತ್ತಿದೆ. ಈ ರೀತಿ ಕಾಕತಾಳೀಯವಾದಾಗಲೆಲ್ಲ ಅದನ್ನು ಜಯಂತಿ ಯೋಗ ಎನ್ನುತ್ತಾರೆ. ಅದಕ್ಕಾಗಿಯೇ ಸೆಪ್ಟೆಂಬರ್ 6 ರಂದು ಜನ್ಮಾಷ್ಟಮಿಯಂದು ಮನೆಯವರು ಉಪವಾಸ ಮಾಡುವುದು ಮಂಗಳಕರವಾಗಿರುತ್ತದೆ. ಋಷಿಮುನಿಗಳು ಮತ್ತು ಸಂತರು ಸೆಪ್ಟೆಂಬರ್ 7 ರಂದು ಜನ್ಮಾಷ್ಟಮಿಯಂದು ಉಪವಾಸ ಮಾಡುತ್ತಾರೆ.
ಜಯಂತಿ ಯೋಗದ ಸಮಯದಲ್ಲಿ ಉಪವಾಸದ ಪ್ರಯೋಜನಗಳೇನು?
ಜ್ಯೋತಿಷ್ಯಶಾಸ್ತ್ರದ ಪ್ರಕಾರ ಜಯಂತಿ ಯೋಗದಲ್ಲಿ ಜನ್ಮಾಷ್ಟಮಿಯಂದು ಉಪವಾಸ ಮಾಡುವುದು ಮತ್ತು ಶ್ರೀ ಕೃಷ್ಣನನ್ನು ಪೂಜಿಸುವುದು ಮೂರು ಜನ್ಮಗಳ ಪಾಪಗಳಿಂದ ವ್ಯಕ್ತಿಯನ್ನು ಮುಕ್ತಗೊಳಿಸುತ್ತಂತೆ. ಅಷ್ಟಮಿ ತಿಥಿಯಂದು ರೋಹಿಣಿ ನಕ್ಷತ್ರ ಬಂದಾಗಲೆಲ್ಲ ಅದನ್ನು ಜಯಂತಿ ಯೋಗ ಎನ್ನುತ್ತಾರೆ.
ಜಯಂತಿ ಯೋಗದಲ್ಲಿ ಉಪವಾಸ ಮಾಡಿದ್ರೆ ಅನೇಕ ಪುಣ್ಯ-ಫಲಗಳನ್ನು ಪಡೆಯಲು ಸಾಧ್ಯವಾಗುತ್ತಂತೆ. ಇನ್ನೂ ಜನ್ಮಾಷ್ಟಮಿಯ ಎರಡನೇ ದಿನ ಪ್ರಸಾದವಾಗಿ ಕೆಲವು ಸಿಹಿತಿಂಡಿಗಳನ್ನು ವಿತರಿಸಿ. ಇದರ ಜೊತೆಗೆ ಬ್ರಾಹ್ಮಣರಿಗೆ ಅನ್ನಸಂತರ್ಪಣೆ ಮಾಡಿ. ಹೀಗೆ ಮಾಡುವುದರಿಂದ ಜನ್ಮಾಷ್ಟಮಿ ಹಬ್ಬದ ಪುಣ್ಯ ಖಂಡಿತಾ ಸಿಗುತ್ತದೆ ಎಂದು ನಂಬಲಾಗಿದೆ.



Click it and Unblock the Notifications