Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
ಶ್ರೀ ಕೃಷ್ಣ ಜನ್ಮಾಷ್ಟಮಿ ದಿನ ಜಯಂತಿ ಯೋಗ! ಉಪಯೋಗಗಳೇನು?
ಈ ಬಾರಿಯ ಜನ್ಮಾಷ್ಟಮಿಯ ದಿನದಂದು ಜಯಂತಿ ಯೋಗ ಸೃಷ್ಟಿಯಾಗುತ್ತಿದೆ. ಹೀಗಾಗಿ ಈ ವರ್ಷದ ಜನ್ಮಾಷ್ಟಮಿ ಹಬ್ಬವೂ ಬಹಳ ಅಪರೂಪವೆಂಬಂತೆ ಪರಿಗಣಿಸಲಾಗುತ್ತಿದೆ. ಇನ್ನೂ ವಿಶೇಷವಾಗಿ ಈ ಬಾರಿ ಸೆಪ್ಟೆಂಬರ್ 6 ಮತ್ತು ಸೆಪ್ಟೆಂಬರ್ 7 ರಂದು ಜನ್ಮಾಷ್ಟಮಿ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ.

ಇದೇ ದಿನ ಜಯಂತಿ ಯೋಗ ಬಂದಿರೋದ್ರಿಂದ ತುಂಬಾನೇ ವಿಶೇಷವಾಗಿದೆ. ಅಷ್ಟಕ್ಕು ಜಯಂತಿ ಯೋಗ ಯಾವಾಗ ಮತ್ತು ಹೇಗೆ ರೂಪುಗೊಳ್ಳುತ್ತದೆ ಮತ್ತು ಅದರ ಪ್ರಯೋಜನಗಳೇನು ಎಂಬುದನ್ನು ತಿಳಿಯೋಣ.
ಜನ್ಮಾಷ್ಟಮಿಯಂದು ಅಪರೂಪದ ಕಾಕತಾಳೀಯವೇ ಜಯಂತಿ ಯೋಗ!
ಜ್ಯೋತಿಷ್ಯಶಾಸ್ತ್ರದ ಪ್ರಕಾರ ಈ ವರ್ಷ ಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ಹೆಚ್ಚಿನ ಕಡೆಗಳಲ್ಲಿ ಸೆಪ್ಟೆಂಬರ್ 6 ರಂದು ಆಚರಿಸಲಾಗುತ್ತದೆ. ಸೆಪ್ಟಂಬರ್ 6 ರಂದು ಮನೆಯವರು ಉಪವಾಸ ಮಾಡಿದರೆ ತುಂಬಾ ಒಳ್ಳೆಯದು ಅಂತ ಹೇಳಲಾಗುತ್ತದೆ.
ಈ ಬಾರಿ ಸೆಪ್ಟೆಂಬರ್ 6 ರಂದು ಎಲ್ಲಾ ಆರು ಅಂಶಗಳ ಭದ್ರ ಕೃಷ್ಣ ಪಕ್ಷ, ಮಧ್ಯರಾತ್ರಿ, ಅಷ್ಟಮಿ ತಿಥಿ, ರೋಹಿಣಿ ನಕ್ಷತ್ರ ಮತ್ತು ಈ ದಿನ ಚಂದ್ರನು ವೃಷಭ ರಾಶಿಯಲ್ಲಿ ಸಾಗುತ್ತಾನೆ. ಹಾಗೆಯೇ ಜನ್ಮಾಷ್ಟಮಿ ಬುಧವಾರ ಮತ್ತು ಸೋಮವಾರ ಸಂಭವಿಸಿದರೆ ಬಹಳ ಮಂಗಳಕರವೆಂದು ಪರಿಗಣಿಸಲಾಗುತ್ತದೆ.
ಈ ಬಾರಿ ಸೆಪ್ಟೆಂಬರ್ 6 ರಂದು ಅಪರೂಪದ ಕಾಕತಾಳೀಯವೆಂಬಂತೆ ಜನ್ಮಾಷ್ಟಮಿ ಸಂಭವಿಸುತ್ತಿದೆ. ಈ ರೀತಿ ಕಾಕತಾಳೀಯವಾದಾಗಲೆಲ್ಲ ಅದನ್ನು ಜಯಂತಿ ಯೋಗ ಎನ್ನುತ್ತಾರೆ. ಅದಕ್ಕಾಗಿಯೇ ಸೆಪ್ಟೆಂಬರ್ 6 ರಂದು ಜನ್ಮಾಷ್ಟಮಿಯಂದು ಮನೆಯವರು ಉಪವಾಸ ಮಾಡುವುದು ಮಂಗಳಕರವಾಗಿರುತ್ತದೆ. ಋಷಿಮುನಿಗಳು ಮತ್ತು ಸಂತರು ಸೆಪ್ಟೆಂಬರ್ 7 ರಂದು ಜನ್ಮಾಷ್ಟಮಿಯಂದು ಉಪವಾಸ ಮಾಡುತ್ತಾರೆ.
ಜಯಂತಿ ಯೋಗದ ಸಮಯದಲ್ಲಿ ಉಪವಾಸದ ಪ್ರಯೋಜನಗಳೇನು?
ಜ್ಯೋತಿಷ್ಯಶಾಸ್ತ್ರದ ಪ್ರಕಾರ ಜಯಂತಿ ಯೋಗದಲ್ಲಿ ಜನ್ಮಾಷ್ಟಮಿಯಂದು ಉಪವಾಸ ಮಾಡುವುದು ಮತ್ತು ಶ್ರೀ ಕೃಷ್ಣನನ್ನು ಪೂಜಿಸುವುದು ಮೂರು ಜನ್ಮಗಳ ಪಾಪಗಳಿಂದ ವ್ಯಕ್ತಿಯನ್ನು ಮುಕ್ತಗೊಳಿಸುತ್ತಂತೆ. ಅಷ್ಟಮಿ ತಿಥಿಯಂದು ರೋಹಿಣಿ ನಕ್ಷತ್ರ ಬಂದಾಗಲೆಲ್ಲ ಅದನ್ನು ಜಯಂತಿ ಯೋಗ ಎನ್ನುತ್ತಾರೆ.
ಜಯಂತಿ ಯೋಗದಲ್ಲಿ ಉಪವಾಸ ಮಾಡಿದ್ರೆ ಅನೇಕ ಪುಣ್ಯ-ಫಲಗಳನ್ನು ಪಡೆಯಲು ಸಾಧ್ಯವಾಗುತ್ತಂತೆ. ಇನ್ನೂ ಜನ್ಮಾಷ್ಟಮಿಯ ಎರಡನೇ ದಿನ ಪ್ರಸಾದವಾಗಿ ಕೆಲವು ಸಿಹಿತಿಂಡಿಗಳನ್ನು ವಿತರಿಸಿ. ಇದರ ಜೊತೆಗೆ ಬ್ರಾಹ್ಮಣರಿಗೆ ಅನ್ನಸಂತರ್ಪಣೆ ಮಾಡಿ. ಹೀಗೆ ಮಾಡುವುದರಿಂದ ಜನ್ಮಾಷ್ಟಮಿ ಹಬ್ಬದ ಪುಣ್ಯ ಖಂಡಿತಾ ಸಿಗುತ್ತದೆ ಎಂದು ನಂಬಲಾಗಿದೆ.



Click it and Unblock the Notifications
