Latest Updates
-
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್!
ಶ್ರೀ ಕೃಷ್ಣ ಜನ್ಮಾಷ್ಟಮಿ ದಿನ ಜಯಂತಿ ಯೋಗ! ಉಪಯೋಗಗಳೇನು?
ಈ ಬಾರಿಯ ಜನ್ಮಾಷ್ಟಮಿಯ ದಿನದಂದು ಜಯಂತಿ ಯೋಗ ಸೃಷ್ಟಿಯಾಗುತ್ತಿದೆ. ಹೀಗಾಗಿ ಈ ವರ್ಷದ ಜನ್ಮಾಷ್ಟಮಿ ಹಬ್ಬವೂ ಬಹಳ ಅಪರೂಪವೆಂಬಂತೆ ಪರಿಗಣಿಸಲಾಗುತ್ತಿದೆ. ಇನ್ನೂ ವಿಶೇಷವಾಗಿ ಈ ಬಾರಿ ಸೆಪ್ಟೆಂಬರ್ 6 ಮತ್ತು ಸೆಪ್ಟೆಂಬರ್ 7 ರಂದು ಜನ್ಮಾಷ್ಟಮಿ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ.

ಇದೇ ದಿನ ಜಯಂತಿ ಯೋಗ ಬಂದಿರೋದ್ರಿಂದ ತುಂಬಾನೇ ವಿಶೇಷವಾಗಿದೆ. ಅಷ್ಟಕ್ಕು ಜಯಂತಿ ಯೋಗ ಯಾವಾಗ ಮತ್ತು ಹೇಗೆ ರೂಪುಗೊಳ್ಳುತ್ತದೆ ಮತ್ತು ಅದರ ಪ್ರಯೋಜನಗಳೇನು ಎಂಬುದನ್ನು ತಿಳಿಯೋಣ.
ಜನ್ಮಾಷ್ಟಮಿಯಂದು ಅಪರೂಪದ ಕಾಕತಾಳೀಯವೇ ಜಯಂತಿ ಯೋಗ!
ಜ್ಯೋತಿಷ್ಯಶಾಸ್ತ್ರದ ಪ್ರಕಾರ ಈ ವರ್ಷ ಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ಹೆಚ್ಚಿನ ಕಡೆಗಳಲ್ಲಿ ಸೆಪ್ಟೆಂಬರ್ 6 ರಂದು ಆಚರಿಸಲಾಗುತ್ತದೆ. ಸೆಪ್ಟಂಬರ್ 6 ರಂದು ಮನೆಯವರು ಉಪವಾಸ ಮಾಡಿದರೆ ತುಂಬಾ ಒಳ್ಳೆಯದು ಅಂತ ಹೇಳಲಾಗುತ್ತದೆ.
ಈ ಬಾರಿ ಸೆಪ್ಟೆಂಬರ್ 6 ರಂದು ಎಲ್ಲಾ ಆರು ಅಂಶಗಳ ಭದ್ರ ಕೃಷ್ಣ ಪಕ್ಷ, ಮಧ್ಯರಾತ್ರಿ, ಅಷ್ಟಮಿ ತಿಥಿ, ರೋಹಿಣಿ ನಕ್ಷತ್ರ ಮತ್ತು ಈ ದಿನ ಚಂದ್ರನು ವೃಷಭ ರಾಶಿಯಲ್ಲಿ ಸಾಗುತ್ತಾನೆ. ಹಾಗೆಯೇ ಜನ್ಮಾಷ್ಟಮಿ ಬುಧವಾರ ಮತ್ತು ಸೋಮವಾರ ಸಂಭವಿಸಿದರೆ ಬಹಳ ಮಂಗಳಕರವೆಂದು ಪರಿಗಣಿಸಲಾಗುತ್ತದೆ.
ಈ ಬಾರಿ ಸೆಪ್ಟೆಂಬರ್ 6 ರಂದು ಅಪರೂಪದ ಕಾಕತಾಳೀಯವೆಂಬಂತೆ ಜನ್ಮಾಷ್ಟಮಿ ಸಂಭವಿಸುತ್ತಿದೆ. ಈ ರೀತಿ ಕಾಕತಾಳೀಯವಾದಾಗಲೆಲ್ಲ ಅದನ್ನು ಜಯಂತಿ ಯೋಗ ಎನ್ನುತ್ತಾರೆ. ಅದಕ್ಕಾಗಿಯೇ ಸೆಪ್ಟೆಂಬರ್ 6 ರಂದು ಜನ್ಮಾಷ್ಟಮಿಯಂದು ಮನೆಯವರು ಉಪವಾಸ ಮಾಡುವುದು ಮಂಗಳಕರವಾಗಿರುತ್ತದೆ. ಋಷಿಮುನಿಗಳು ಮತ್ತು ಸಂತರು ಸೆಪ್ಟೆಂಬರ್ 7 ರಂದು ಜನ್ಮಾಷ್ಟಮಿಯಂದು ಉಪವಾಸ ಮಾಡುತ್ತಾರೆ.
ಜಯಂತಿ ಯೋಗದ ಸಮಯದಲ್ಲಿ ಉಪವಾಸದ ಪ್ರಯೋಜನಗಳೇನು?
ಜ್ಯೋತಿಷ್ಯಶಾಸ್ತ್ರದ ಪ್ರಕಾರ ಜಯಂತಿ ಯೋಗದಲ್ಲಿ ಜನ್ಮಾಷ್ಟಮಿಯಂದು ಉಪವಾಸ ಮಾಡುವುದು ಮತ್ತು ಶ್ರೀ ಕೃಷ್ಣನನ್ನು ಪೂಜಿಸುವುದು ಮೂರು ಜನ್ಮಗಳ ಪಾಪಗಳಿಂದ ವ್ಯಕ್ತಿಯನ್ನು ಮುಕ್ತಗೊಳಿಸುತ್ತಂತೆ. ಅಷ್ಟಮಿ ತಿಥಿಯಂದು ರೋಹಿಣಿ ನಕ್ಷತ್ರ ಬಂದಾಗಲೆಲ್ಲ ಅದನ್ನು ಜಯಂತಿ ಯೋಗ ಎನ್ನುತ್ತಾರೆ.
ಜಯಂತಿ ಯೋಗದಲ್ಲಿ ಉಪವಾಸ ಮಾಡಿದ್ರೆ ಅನೇಕ ಪುಣ್ಯ-ಫಲಗಳನ್ನು ಪಡೆಯಲು ಸಾಧ್ಯವಾಗುತ್ತಂತೆ. ಇನ್ನೂ ಜನ್ಮಾಷ್ಟಮಿಯ ಎರಡನೇ ದಿನ ಪ್ರಸಾದವಾಗಿ ಕೆಲವು ಸಿಹಿತಿಂಡಿಗಳನ್ನು ವಿತರಿಸಿ. ಇದರ ಜೊತೆಗೆ ಬ್ರಾಹ್ಮಣರಿಗೆ ಅನ್ನಸಂತರ್ಪಣೆ ಮಾಡಿ. ಹೀಗೆ ಮಾಡುವುದರಿಂದ ಜನ್ಮಾಷ್ಟಮಿ ಹಬ್ಬದ ಪುಣ್ಯ ಖಂಡಿತಾ ಸಿಗುತ್ತದೆ ಎಂದು ನಂಬಲಾಗಿದೆ.



Click it and Unblock the Notifications