Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಶ್ರೀ ಕೃಷ್ಣ ಜನ್ಮಾಷ್ಟಮಿ ದಿನ ಜಯಂತಿ ಯೋಗ! ಉಪಯೋಗಗಳೇನು?
ಈ ಬಾರಿಯ ಜನ್ಮಾಷ್ಟಮಿಯ ದಿನದಂದು ಜಯಂತಿ ಯೋಗ ಸೃಷ್ಟಿಯಾಗುತ್ತಿದೆ. ಹೀಗಾಗಿ ಈ ವರ್ಷದ ಜನ್ಮಾಷ್ಟಮಿ ಹಬ್ಬವೂ ಬಹಳ ಅಪರೂಪವೆಂಬಂತೆ ಪರಿಗಣಿಸಲಾಗುತ್ತಿದೆ. ಇನ್ನೂ ವಿಶೇಷವಾಗಿ ಈ ಬಾರಿ ಸೆಪ್ಟೆಂಬರ್ 6 ಮತ್ತು ಸೆಪ್ಟೆಂಬರ್ 7 ರಂದು ಜನ್ಮಾಷ್ಟಮಿ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ.

ಇದೇ ದಿನ ಜಯಂತಿ ಯೋಗ ಬಂದಿರೋದ್ರಿಂದ ತುಂಬಾನೇ ವಿಶೇಷವಾಗಿದೆ. ಅಷ್ಟಕ್ಕು ಜಯಂತಿ ಯೋಗ ಯಾವಾಗ ಮತ್ತು ಹೇಗೆ ರೂಪುಗೊಳ್ಳುತ್ತದೆ ಮತ್ತು ಅದರ ಪ್ರಯೋಜನಗಳೇನು ಎಂಬುದನ್ನು ತಿಳಿಯೋಣ.
ಜನ್ಮಾಷ್ಟಮಿಯಂದು ಅಪರೂಪದ ಕಾಕತಾಳೀಯವೇ ಜಯಂತಿ ಯೋಗ!
ಜ್ಯೋತಿಷ್ಯಶಾಸ್ತ್ರದ ಪ್ರಕಾರ ಈ ವರ್ಷ ಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ಹೆಚ್ಚಿನ ಕಡೆಗಳಲ್ಲಿ ಸೆಪ್ಟೆಂಬರ್ 6 ರಂದು ಆಚರಿಸಲಾಗುತ್ತದೆ. ಸೆಪ್ಟಂಬರ್ 6 ರಂದು ಮನೆಯವರು ಉಪವಾಸ ಮಾಡಿದರೆ ತುಂಬಾ ಒಳ್ಳೆಯದು ಅಂತ ಹೇಳಲಾಗುತ್ತದೆ.
ಈ ಬಾರಿ ಸೆಪ್ಟೆಂಬರ್ 6 ರಂದು ಎಲ್ಲಾ ಆರು ಅಂಶಗಳ ಭದ್ರ ಕೃಷ್ಣ ಪಕ್ಷ, ಮಧ್ಯರಾತ್ರಿ, ಅಷ್ಟಮಿ ತಿಥಿ, ರೋಹಿಣಿ ನಕ್ಷತ್ರ ಮತ್ತು ಈ ದಿನ ಚಂದ್ರನು ವೃಷಭ ರಾಶಿಯಲ್ಲಿ ಸಾಗುತ್ತಾನೆ. ಹಾಗೆಯೇ ಜನ್ಮಾಷ್ಟಮಿ ಬುಧವಾರ ಮತ್ತು ಸೋಮವಾರ ಸಂಭವಿಸಿದರೆ ಬಹಳ ಮಂಗಳಕರವೆಂದು ಪರಿಗಣಿಸಲಾಗುತ್ತದೆ.
ಈ ಬಾರಿ ಸೆಪ್ಟೆಂಬರ್ 6 ರಂದು ಅಪರೂಪದ ಕಾಕತಾಳೀಯವೆಂಬಂತೆ ಜನ್ಮಾಷ್ಟಮಿ ಸಂಭವಿಸುತ್ತಿದೆ. ಈ ರೀತಿ ಕಾಕತಾಳೀಯವಾದಾಗಲೆಲ್ಲ ಅದನ್ನು ಜಯಂತಿ ಯೋಗ ಎನ್ನುತ್ತಾರೆ. ಅದಕ್ಕಾಗಿಯೇ ಸೆಪ್ಟೆಂಬರ್ 6 ರಂದು ಜನ್ಮಾಷ್ಟಮಿಯಂದು ಮನೆಯವರು ಉಪವಾಸ ಮಾಡುವುದು ಮಂಗಳಕರವಾಗಿರುತ್ತದೆ. ಋಷಿಮುನಿಗಳು ಮತ್ತು ಸಂತರು ಸೆಪ್ಟೆಂಬರ್ 7 ರಂದು ಜನ್ಮಾಷ್ಟಮಿಯಂದು ಉಪವಾಸ ಮಾಡುತ್ತಾರೆ.
ಜಯಂತಿ ಯೋಗದ ಸಮಯದಲ್ಲಿ ಉಪವಾಸದ ಪ್ರಯೋಜನಗಳೇನು?
ಜ್ಯೋತಿಷ್ಯಶಾಸ್ತ್ರದ ಪ್ರಕಾರ ಜಯಂತಿ ಯೋಗದಲ್ಲಿ ಜನ್ಮಾಷ್ಟಮಿಯಂದು ಉಪವಾಸ ಮಾಡುವುದು ಮತ್ತು ಶ್ರೀ ಕೃಷ್ಣನನ್ನು ಪೂಜಿಸುವುದು ಮೂರು ಜನ್ಮಗಳ ಪಾಪಗಳಿಂದ ವ್ಯಕ್ತಿಯನ್ನು ಮುಕ್ತಗೊಳಿಸುತ್ತಂತೆ. ಅಷ್ಟಮಿ ತಿಥಿಯಂದು ರೋಹಿಣಿ ನಕ್ಷತ್ರ ಬಂದಾಗಲೆಲ್ಲ ಅದನ್ನು ಜಯಂತಿ ಯೋಗ ಎನ್ನುತ್ತಾರೆ.
ಜಯಂತಿ ಯೋಗದಲ್ಲಿ ಉಪವಾಸ ಮಾಡಿದ್ರೆ ಅನೇಕ ಪುಣ್ಯ-ಫಲಗಳನ್ನು ಪಡೆಯಲು ಸಾಧ್ಯವಾಗುತ್ತಂತೆ. ಇನ್ನೂ ಜನ್ಮಾಷ್ಟಮಿಯ ಎರಡನೇ ದಿನ ಪ್ರಸಾದವಾಗಿ ಕೆಲವು ಸಿಹಿತಿಂಡಿಗಳನ್ನು ವಿತರಿಸಿ. ಇದರ ಜೊತೆಗೆ ಬ್ರಾಹ್ಮಣರಿಗೆ ಅನ್ನಸಂತರ್ಪಣೆ ಮಾಡಿ. ಹೀಗೆ ಮಾಡುವುದರಿಂದ ಜನ್ಮಾಷ್ಟಮಿ ಹಬ್ಬದ ಪುಣ್ಯ ಖಂಡಿತಾ ಸಿಗುತ್ತದೆ ಎಂದು ನಂಬಲಾಗಿದೆ.



Click it and Unblock the Notifications