Latest Updates
-
ವಿಶ್ವ ಸೈಕಲ್ ದಿನ: ಫಿಟ್ನೆಸ್ ಕಾಯ್ದುಕೊಳ್ಳಲು ಮತ್ತು ಸುರಕ್ಷಿತ ಸೈಕ್ಲಿಂಗ್ಗೆ ಇಲ್ಲಿದೆ ಬೆಸ್ಟ್ ಟಿಪ್ಸ್ -
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ!
ರೈಲು ಹಳಿಗೆ ಬಿದ್ದ ಅಂಧ ತಾಯಿಯ ಕಂದಮ್ಮ, ಆಕೆ ಪಾಲಿಗೆ ದೇವರಾದ ಆ ವ್ಯಕ್ತಿ!
ಒಂದು ಕ್ಷಣ ತಡವಾಗಿದ್ದರೂ ಎಂಥ ಘನಘೋರ ಘಟನೆ ನಡೆಯುತ್ತಿತ್ತು ಎಂದು ಊಹಿಸಲೂ ಭಯವಾಗುತ್ತೆ. ಅಂಧ ತಾಯಿಯ ಕೈಹಿಡಿದು ಬರುತ್ತಿದ್ದ ಮಗು ರೈಲ್ವೆ ಹಳಿಗೆ ಬಿದ್ದು ಬಿಡುತ್ತೆ, ಅಲ್ಲಿಂದ ಟ್ರೈನ್ ಬರ್ತಾ ಇರುತ್ತದೆ, ಅಲ್ಲಿಗೆ ಮಿಂಚಿನ ವೇಗದಲ್ಲಿ ಓಡಿ ಬರುವ ರೈಲ್ವೆ ಸಿಬ್ಬಂದಿ ಆ ಮಗು-ತಾಯಿಯ ಪಾಲಿಗೆ ಸಾಕ್ಷಾತ್ ದೇವರಾಗಿದ್ದಾರೆ.
ಆಕೆ ಅಂಧೆ, ಪುಟ್ಟ ಮಗನಿದ್ದಾನೆ, ಆ ಮಗನೇ ಆಕೆಯ ಬದುಕಿನ ಕಣ್ಣುಗಳು, ಪೆನ್ನು ಮಾರಿ ಬದುಕಿ ಜೀವನ ಸಾಗಿಸುವ ಜೀವಗಳು, ರೈಲ್ವೆ ಫ್ಲಾಟ್ಫಾರಂನ ಮಗನ ಕೈಹಿಡಿದು ನಡೆಯುತ್ತಿದ್ದಳು. ಮಗನಿಗೆ 4-5 ವರ್ಷವಿರಬಹುದು. ಅವನ ಕೈ ಹಿಡಿದು ಎಲ್ಲಾ ಕಡೆ ಸಾಗುತ್ತಿದ್ದಳು, ಮಗ ಸ್ವಲ್ಪ ದೊಡ್ಡವನಾದ ಮೇಲೆ ಎಲ್ಲಾ ಕಡೆ ಹೋಗುವಾಗ ಮಗನ ಕೈ ಹಿಡದೇ ಹೋಗುತ್ತಿದ್ದಳು. ಅವನು ನನ್ನ ನಡೆಸಿಕೊಂಡು ಹೋಗುತ್ತಾನೆ ಎಂಬ ಧೈರ್ಯದಲ್ಲಿ ಹೋಗುತ್ತಿದ್ದಳು.

ಹೀಗೆ ರೈಲ್ವೆಫ್ಲಾಟ್ಫಾರಂ ಬಳಿ ನಡೆಯುವಾಗ ಮಗ ಅಚಾನಕ್ಕಾಗಿ ಸ್ಲಿಪ್ ಆಗಿ ಕೆಳಗೆ ಬೀಳುತ್ತಾನೆ. ತಾಯಿ ಮಗನಿಗಾಗಿ ತಡಕಾಡುತ್ತಿರುತ್ತಾಳೆ, ಅತ್ತ ಕಡೆಯಿಂದ ವೇಗವಾಗಿ ಟ್ರೈನ್ ಬರ್ತಾ ಇದೆ, ಮಗು ಬಿದ್ದಿದ್ದನ್ನು ನೋಡಿದ ರೈಲ್ವೆ ಸಿಬ್ಬಂದಿ ಓಡೋಡಿ ಬಂದಿ ಆ ಮಗುವನ್ನು ಎತ್ತಿ ಫ್ಲಾಟ್ಫಾರಂ ಬಿಟ್ಟು ತಾವೂ ಹತ್ತುತ್ತಾರೆ, ಇವೆಲ್ಲಾ ಕ್ಷಣಾರ್ಧದಲ್ಲಿ ನಡೆಯುತ್ತದೆ. ಒಂದು ಕ್ಷಣ ತಡವಾಗಿದ್ದರೂ ಮಗುವಿನ ಪ್ರಾಣ ಹೋಗುತ್ತಿತ್ತು, ಜೊತೆಗೆ ಆ ವ್ಯಕ್ತಿಯ ಪ್ರಾಣವೂ ಹೋಗುತ್ತಿತ್ತು, ಆದರೆ ಕಣ್ಣಿಲ್ಲದ ಆ ತಾಯಿ ಪಾಲಿಗೆ ದೇವರಾಗಿ ಬಂದು ಮಗುವಿನ ರಕ್ಷಣೆ ಮಾಡಿದ್ದಾರೆ ಆ ವ್ಯಕ್ತಿ.
ಮಗುವಿನ ಪ್ರಾಣವನ್ನು ರಕ್ಷಿಸಿದ ಆ ವ್ಯಕ್ತಿ ಹೆಸರು ಮಯೂರ್ ಶೆಲ್ಕೆ. ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ಧೈರ್ಯ ಮಾಡಿ ಮಗುವಿನ ರಕ್ಷಣೆ ಮಾಡಿದ್ದಕ್ಕೆ ಸೆಂಟ್ರಲ್ ರೈಲ್ವೆ ಮಯೂರ್ ಶೆಲ್ಕೆಯವರಿಗ 50 ಸಾವಿರ ಬಹುಮಾನ ನೀಡಿ ಗೌರವಿಸಲಾಯಿತು. ಅಲ್ಲಿಯೂ ಆ ವ್ಯಕ್ತಿ ದೊಡ್ಡ ಮನಸ್ಸು ಮಾಡಿದ್ದಾರೆ. ಆ 50 ಸಾವಿರ ರುಪಾಯಿಯನ್ನು ಕೂಡ ಆ ಗುವಿನ ಶಿಕ್ಷಣಕ್ಕೆ ಅಂತ ಆ ಅಂಧ ತಾಯಿಗೆ ನೀಡಿದ್ದಾರೆ. ದೇವರು ಯಾವುದೋ ಒಂದು ರೂಪದಲ್ಲಿ ಬರುತ್ತಾರೆ ಎಂದು ಹೇಳಲಾಗುವುದು. ಆ ಅಂಧ ಮಹಿಳೆಯ ಪಾಲಿಗೆ ಮಯೂರ್ ಶೆಲ್ಕೆ ದೇವರಾಗಿದ್ದಾರೆ.
ತಾನು ಇಷ್ಟೆಲ್ಲಾ ಸಾಹಸ ಮಾಡಿ ಮಗುವಿನ ಪ್ರಾಣ ಉಳಿಸಿ, ತನಗೆ ಬಂದ ರಿವಾರ್ಡ್ ಅನ್ನು ಕೂಡ ಆ ಮಗುವಿಗೆ ನೀಡಿದ ಮಯೂರ್ ಶೆಲ್ಕ್ ತಮ್ಮ ಪಾಡಿಗೆ ತಾವಿದ್ದರು. ಮನೆಗೆ ಹೋಗಿ ತಾನು ಮಾಡಿದ ಕೆಲಸವನ್ನು ಕೊಚ್ಚಿಕೊಳ್ಳಲಿಲ್ಲ, ಈ ವೀಡಿಯೋ ವೈರಲ್ ಆದ ಮೇಲಷ್ಟೇ ಅವರ ಕುಟುಂಬಕ್ಕೆ ಈ ವಿಷಯ ತಿಳಿಯಿತು. ಮಾನವೀಯತೆ ಗುಣದಿಂದಾಗಿ ಎಲ್ಲರ ಮನಗೆದ್ದಿದ್ದಾರೆ ಮಯೂರ್ ಶೆಲ್ಕ್.
ಇದು 2021ರಲ್ಲಿ ನಡೆದ ಘಟನೆ, ಈ ವೀಡಿಯೋ ಇದೀಗ ಮತ್ತೆ ವೈರಲ್ ಆಗುತ್ತಿದೆ.



Click it and Unblock the Notifications